Indian Space Association: ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಅ. 11ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ

ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 11ನೇ ತಾರೀಕಿನ ಸೋಮವಾರದಂದು ಭಾರತೀಯ ಬಾಹ್ಕಾಶ ಒಕ್ಕೂಟಕ್ಕೆ ವಿಡಿಯೋ ಕಾನ್ಫರೆನ್ಸಿಂಗ್ ಮೂಲಕ ಚಾಲನೆ ನೀಡಲಿದ್ದಾರೆ.

Indian Space Association: ಭಾರತೀಯ ಬಾಹ್ಯಾಕಾಶ ಒಕ್ಕೂಟಕ್ಕೆ ಅ. 11ಕ್ಕೆ ಪ್ರಧಾನಿ ನರೇಂದ್ರ ಮೋದಿಯಿಂದ ಚಾಲನೆ
ಪ್ರಧಾನಿ ನರೇಂದ್ರ ಮೋದಿ (ಸಂಗ್ರಹ ಚಿತ್ರ)
Follow us
| Updated By: Srinivas Mata

Updated on:Oct 09, 2021 | 10:16 PM

ಭಾರತೀಯ ಬಾಹ್ಯಾಕಾಶ ವಲಯದ ಧ್ವನಿಯಾಗುವ ಉದ್ದೇಶದಿಂದ ಭಾರತೀಯ ಬಾಹ್ಯಾಕಾಶ ಒಕ್ಕೂಟ (ISpA)ಕ್ಕೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಕ್ಟೋಬರ್ 11ನೇ ತಾರೀಕಿನ ಸೋಮವಾರದಂದು ಚಾಲನೆ ನೀಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ (PMO) ಶನಿವಾರ ಹೇಳಿದೆ. ಈ ಸಂದರ್ಭದಲ್ಲಿ ಬಾಹ್ಯಾಕಾಶ ವಲಯದ ಪ್ರತಿನಿಧಿಗಳ ಜತೆಗೆ ಮೋದಿ ಸಂವಾದವನ್ನು ನಡೆಸಲಿದ್ದಾರೆ. ISpAನಿಂದ ನೀತಿ ನಿರೂಪಣೆ ಮತ್ತು ಸರ್ಕಾರ, ಅದರ ಏಜೆನ್ಸಿಗಳೂ ಸೇರಿದಂತೆ ಭಾರತೀಯ ಬಾಹ್ಯಾಕಾಶ ವ್ಯಾಪ್ತಿಯ ಎಲ್ಲ ಭಾಗೀದಾರರನ್ನು ಇದು ಒಳಗೊಳ್ಳುತ್ತದೆ. ಆತ್ಮನಿರ್ಭರ್ ಭಾರತ್​ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ದೃಷ್ಟಿಕೋನವನ್ನು ಬಿಂಬಿಸುವಂತೆ, ISpA ಮೂಲಕ ಭಾರತವು ಸ್ವಾವಲಂಬಿಯನ್ನಾಗಲು, ತಾಂತ್ರಿಕವಾಗಿ ಮುನ್ನಡೆಯಲು ಮತ್ತು ಬಾಹ್ಯಾಕಾಶ ವಲಯಕ್ಕೆ ಸಹಾಯ ಮಾಡುತ್ತದೆ ಎಂದು ಪ್ರಧಾನಮಂತ್ರಿ ಕಾರ್ಯಾಲಯ ಹೇಳಿದೆ.

ಬಾಹ್ಯಾಕಾಶ ಮತ್ತು ಉಪಗ್ರಹ ತಂತ್ರಜ್ಞಾನದಲ್ಲಿ ಮುಂದುವರಿದ ಸಾಮರ್ಥ್ಯ ಹೊಂದಿದ ಪ್ರಮುಖ ದೇಶೀಯ ಮತ್ತು ಜಾಗತಿಕ ಕಾರ್ಪೊರೇಷನ್​ನ ಪ್ರತಿನಿಧಿಗಳು ISpA ಪ್ರತಿನಿಧಿಸುತ್ತಾರೆ. ಸ್ಥಾಪಕ ಸದಸ್ಯರಾಗಿ ಲಾರ್ಸನ್ ಟೂಬ್ರೋ, ನೆಲ್ಕೋ (ಟಾಟಾ ಸಮೂಹ), ಒನ್ ವೆಬ್, ಭಾರ್ತಿ ಏರ್​ಟೆಲ್, ಮ್ಯಾಪ್​ಮೈಇಂಡಿಯಾ, ವಲ್​ಚಂದ್​ನಗರ್​ ಇಂಡಸ್ಟ್ರೀಸ್ ಮತ್ತು ಅನಂತ್ ಟೆಕ್ನಾಲಜಿ ಲಿಮಿಟೆಡ್ ಇದ್ದಾರೆ.

ಇತರ ಪ್ರಮುಖ ಸದಸ್ಯರಾಗಿ ಗೋದ್ರೆಜ್, Hughes India, ಅಝಿಸ್ಟಾ- BST ಏರೋಸ್ಪೇಸ್ ಪ್ರೈವೇಟ್ ಲಿಮಿಟೆಡ್, ಬಿಇಎಲ್, ಸೆಂಟ್ರಮ್ ಎಲೆಕ್ಟ್ರಾನಿಕ್ಸ್ ಅಂಡ್ ಮ್ಯಾಕ್ಸರ್ ಇಂಡಿಯಾ ಕೂಡ ಈ ಗುಂಪಿನಲ್ಲಿ ಇರಲಿವೆ ಎಂದು ಪ್ರಧಾನಮಂತ್ರಿ ಕಾರ್ಯಾಲವು ತಿಳಿಸಿದೆ.

ಇದನ್ನೂ ಓದಿ: ಬಾಹ್ಯಾಕಾಶ ವಿಜ್ಞಾನ ಮತ್ತು ತಂತ್ರಜ್ಞಾನದ ಕ್ಷೇತ್ರದಲ್ಲಿರುವವರನ್ನು ಪ್ರೇರೇಪಿಸಲು ಕಸ್ಟಮೈಸ್ಡ್ ಮರ್ಕಂಡೈಸ್ ಲಾಂಚ್ ಮಾಡಿದ ಇಸ್ರೋ

Published On - 10:14 pm, Sat, 9 October 21

ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
ರಾಜಕಾಲುವೆ ಮುಚ್ಚಿರುವ ಕಾರಣ ಐದಾರು ಮನೆಗಳಿಗೆ ನುಗ್ಗಿದ ಮಳೆ ನೀರು
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
‘ಬಿಗ್​ಬಾಸ್ ಅನ್ನು ಹಾಳು ಮಾಡಲು ನಿಮ್ಮಪ್ಪನಾಣೆ ಸಾಧ್ಯವಿಲ್ಲ‘
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಸಿದ್ದರಾಮಯ್ಯ ಪಾರ್ವತಿ ಅವರನ್ನು ಮದುವೆ ಆಗಿದ್ದೇ ತಪ್ಪಾ? ಸಿಎಂ ಇಬ್ರಾಹಿಂ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮಹಾರಾಷ್ಟ್ರದ ದೇವಸ್ಥಾನದಲ್ಲಿ ಡೋಲು ಬಾರಿಸಿದ ಪ್ರಧಾನಿ ಮೋದಿ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಮೈಸೂರು ದಸರಾದಲ್ಲಿ ಗಿಡ್ಡ ಕಾಲಿನ ಬಂಡೂರು ಕುರಿಯೇ ಆಕರ್ಷಣೆ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಲಾಯರ್ ಜಗದೀಶ್ ವಿಚಾರಣೆ ನಡೆಸುವ ಸುಳಿವು ಕೊಟ್ಟ ಕಿಚ್ಚ: ವಿಡಿಯೋ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ