ಸೆ. 11ರಿಂದ 13ರವರೆಗೆ ದೆಹಲಿ ಬಳಿ ಸೆಮಿಕಾನ್ ಇಂಡಿಯಾ 2024 ಸಮಾವೇಶ; ಪ್ರಧಾನಿಯಿಂದ ಉದ್ಘಾಟನೆ

PM Narendra Modi to inaugurate Semicon India 2024 conference: ಉತ್ತರಪ್ರದೇಶಕ್ಕೆ ಸೇರಿದ ಗ್ರೇಟರ್ ನೋಯ್ಡಾದಲ್ಲಿ ಸೆ. 11ರಂದು ಸೆಮಿಕಾನ್ ಇಂಡಿಯಾ 2024 ಕಾನ್ಫೆರೆನ್ಸ್ ನಡೆಯಲಿದೆ. ಮೂರು ದಿನಗಳ ಕಾಲ ನಡೆಯುವ ಈ ಸಮಾವೇಶಕ್ಕೆ ಪ್ರಧಾನಿ ನರೇಂದ್ರ ಮೋದಿ ಬುಧವಾರ ಚಾಲನೆ ನೀಡಲಿದ್ದಾರೆ. ಭಾರತವನ್ನು ಸೆಮಿಕಂಡಕ್ಟರ್ ಅಡ್ಡೆಯಾಗಿಸುವ ನಿಟ್ಟಿನಲ್ಲಿ ವಿವಿಧ ನೀತಿ ಮತ್ತು ಕಾರ್ಯತಂತ್ರಗಳು ಸಮಾವೇಶದಲ್ಲಿ ಅನಾವರಣಗೊಳ್ಳುವುದನ್ನು ಕಾಣಬಹುದು.

ಸೆ. 11ರಿಂದ 13ರವರೆಗೆ ದೆಹಲಿ ಬಳಿ ಸೆಮಿಕಾನ್ ಇಂಡಿಯಾ 2024 ಸಮಾವೇಶ; ಪ್ರಧಾನಿಯಿಂದ ಉದ್ಘಾಟನೆ
ಸೆಮಿಕಂಡಕ್ಟರ್
Follow us
|

Updated on: Sep 10, 2024 | 11:44 AM

ನವದೆಹಲಿ, ಸೆಪ್ಟೆಂಬರ್ 10: ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ ಬುಧವಾರ ಬೆಳಗ್ಗೆ 10:30ಕ್ಕೆ ಸೆಮಿಕಾನ್ ಇಂಡಿಯಾ 2024 ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ರಾಷ್ಟ್ರ ರಾಜಧಾನಿ ನಗರಿ ಸಮೀಪದ ಗ್ರೇಟರ್ ನೋಯ್ಡಾದಲ್ಲಿರುವ ಇಂಡಿಯಾ ಎಕ್ಸ್​ಪೋ ಮಾರ್ಟ್​ನಲ್ಲಿ ನಡೆಯಲಿರುವ ಸೆಮಿಕಾನ್ ಇಂಡಿಯಾ 2024 ಸಮಾವೇಶ ಮೂರು ದಿನಗಳ ಕಾಲ ನಡೆಯಲಿದೆ.

ಸೆಮಿಕಂಡಕ್ಟರ್ ಡಿಸೈನ್, ಮ್ಯಾನುಫ್ಯಾಕ್ಚರಿಂಗ್ ಮತ್ತು ಟೆಕ್ನಾಲಜಿಗೆ ಭಾರತವು ಜಾಗತಿಕ ಕೇಂದ್ರವಾಗಬೇಕು ಎನ್ನುವುದು ಪ್ರಧಾನಿಗಳ ಆಶಯವಾಗಿದೆ. ಈ ನಿಟ್ಟಿನಲ್ಲಿ ಈ ಬಾರಿಯ ಸೆಮಿಕಾನ್ ಸಮಾವೇಶದಲ್ಲಿ ಇದಕ್ಕೆ ಪೂರಕವಾದ ಥೀಮ್ ಇಟ್ಟುಕೊಳ್ಳಲಾಗಿದೆ. ನಿನ್ನೆ ಪಿಎಂಒ ಕಚೇರಿಯಿಂದ ಬಿಡುಗಡೆ ಆದ ಪತ್ರಿಕಾ ಪ್ರಕಟಣೆ ಪ್ರಕಾರ ಸೆಮಿಕಾನ್ ಇಂಡಿಯಾ 2024 ಸಮಾವೇಶದ ಥೀಮ್ ‘ಸೆಮಿಕಂಡ್ಟರ್ ಭವಿಷ್ಯ ರೂಪಿಸುವುದು’.

ಸೆಪ್ಟೆಂಬರ್ 11ರಿಂದ 13ರವರೆಗೆ ಮೂರು ದಿನ ಕಾಲ ನಡೆಯಲಿರುವ ಸಮಾವೇಶದಲ್ಲಿ, ಭಾರತವನ್ನು ಜಾಗತಿಕ ಸೆಮಿಕಂಡಕ್ಟರ್ ಹಬ್ ಆಗಿ ರೂಪಿಸಲು ಅಗತ್ಯ ಇರುವ ಸೆಮಿಕಂಡ್ಟರ್ ಕಾರ್ಯತಂತ್ರ ಮತ್ತು ನೀತಿಗಳನ್ನು ಪ್ರಸ್ತುತಪಡಿಸಲಾಗುತ್ತದೆ. ಜಾಗತಿಕ ಸೆಮಿಕಂಡಕ್ಟರ್ ದೈತ್ಯ ಸಂಸ್ಥೆಗಳ ಮುಂದಾಳುಗಳು ಈ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ. ಸೆಮಿಕಂಡಕ್ಟರ್ ಕ್ಷೇತ್ರದ ದೊಡ್ಡ ಕಂಪನಿಗಳು, ಪರಿಣಿತರು, ಜಾಗತಿಕ ನಾಯಕರು ಈ ಸಮಾವೇಶದ ಮೂಲಕ ಒಂದೆಡೆ ಸೇರಲಿದ್ದಾರೆ.

ಇದನ್ನೂ ಓದಿ: ಚಂದ್ರನಲ್ಲಿ ಪರಮಾಣು ಶಕ್ತಿ ಸ್ಥಾವರ ನಿರ್ಮಿಸಲು ರಷ್ಯಾ, ಚೀನಾ ಕೈಜೋಡಿಸಲಿರುವ ಭಾರತ

ಮಾಹಿತಿ ಪ್ರಕಾರ, ಮೂರು ದಿನಗಳ ಸೆಮಿಕಾನ್ ಇಂಡಿಯಾ 2024 ಸಮಾವೇಶದಲ್ಲಿ 150 ಜನರು ವಿಚಾರ ಮಂಡನೆ ಮಾಡಲಿದ್ದಾರೆ. 250ಕ್ಕೂ ಹೆಚ್ಚು ಪ್ರದರ್ಶಕರು ಪಾಲ್ಗೊಳ್ಳಲಿದ್ದಾರೆ.

ಗುಜರಾತ್​ನಲ್ಲಿ ಸೆ. 16ರಂದು ಜಾಗತಿಕ ಮರು ಹೂಡಿಕೆ ಸಮಾವೇಶಕ್ಕೆ ಪ್ರಧಾನಿ ಮೋದಿ ಚಾಲನೆ

ಇದೇ ವೇಳೆ, 4ನೇ ಜಾಗತಿಕ ಮರು ಹೂಡಿಕೆ ಮತ್ತು ಮರುಬಳಕೆ ಇಂಧನ ಹೂಡಿಕೆದಾರರ ಸಮಾವೇಶ ಮತ್ತು ಎಕ್ಸ್‌ಪೋ-2024 ಗುಜರಾತ್​ನ ಗಾಂಧಿನಗರದ ಮಹಾತ್ಮಾ ಮಂದಿರದಲ್ಲಿ ಸೆ.16 ರಿಂದ 18 ರವರೆಗೆ ನಡೆಯಲಿದೆ. ತಮ್ಮ ತವರು ರಾಜ್ಯವಾದ ಗುಜರಾತ್‌ಗೆ ಭೇಟಿ ನೀಡಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಎಕ್ಸ್‌ಪೋವನ್ನು ಉದ್ಘಾಟಿಸಲಿದ್ದಾರೆ. ಗಾಂಧಿನಗರದಲ್ಲಿ 3 ದಿನಗಳ ಸಭೆಯನ್ನು ಕೇಂದ್ರ ಹೊಸ ಮತ್ತು ನವೀಕರಿಸಬಹುದಾದ ಇಂಧನ ಸಚಿವಾಲಯ ಆಯೋಜಿಸಿದೆ. ಇದು ಅಂತಾರಾಷ್ಟ್ರೀಯ ಸಹಕಾರವನ್ನು ಉತ್ತೇಜಿಸುವ ಮತ್ತು ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ನಾವೀನ್ಯತೆಯನ್ನು ಉತ್ತೇಜಿಸುವ ಗುರಿ ಹೊಂದಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ಧರ್ಮಸ್ಥಳ ಸಂಘದ ಬಗ್ಗೆ ಕಾಂಗ್ರೆಸ್ ಶಾಸಕ ನರೇಂದ್ರಸ್ವಾಮಿ ಆಘಾತಕಾರಿ ಹೇಳಿಕೆ
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
ನಾವು ಸೇಡು ತೀರಿಸಿಕೊಂಡರೆ ಬಿಜೆಪಿಗೆ ಜೈಲುಗಳು ಸಾಕಾಗಲ್ಲ: ಹೆಬ್ಬಾಳ್ಕರ್
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
‘ಕನ್ನಡ ಚಿತ್ರರಂಗಕ್ಕೆ ಸಮಿತಿ ಬೇಡ, ಇದರಿಂದ ಚಿತ್ರರಂಗಕ್ಕೆ ನಷ್ಟ’; ಗೋವಿಂದು
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ತಿರುಮಲ ದೇವಾಲಯದಲ್ಲಿನ ವಿಮಾನ ವೆಂಕಟೇಶ್ವರನ ಮಹತ್ವ ತಿಳಿಯಿರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಈ ರಾಶಿಯವರು ಆಸ್ತಿಯ ವಿಚಾರವಾಗಿ ಕಾನೂನು ಹೋರಾಟ ಮಾಡಲಿದ್ದೀರಿ
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಮುನಿರತ್ನರನ್ನು ದಿಢೀರ್​ ಜಯದೇವ ಆಸ್ಪತ್ರೆಗೆ ಕರೆದುಕೊಂಡು ಹೋದ ಪೊಲೀಸರು
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಗ್ಯಾರಂಟಿ ಯೋಜನೆ ಜಾರಿ ನಂತರ ನನ್ನನ್ನು ಮುಗಿಸಲು ಷಡ್ಯಂತ್ರ; ಸಿದ್ದರಾಮಯ್ಯ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ಪ್ರವಾಹದಲ್ಲಿ ಸಿಲುಕಿದ 11 ಪ್ರವಾಸಿಗರ ಪ್ರಾಣ ಉಳಿಸಿದ ರಕ್ಷಣಾ ಪಡೆ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
ನಡುರಸ್ತೆಯಲ್ಲಿ ಡೀಸೆಲ್‌ ಟ್ಯಾಂಕರ್‌ಗೆ ಬೆಂಕಿ; ತಪ್ಪಿದ ಭಾರೀ ಅನಾಹುತ
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು
‘ನನಗೂ ಕೆಟ್ಟ ಅನುಭವ ಆಗಿದೆ’; ನೀತು ಶೆಟ್ಟಿ ನೇರ ಮಾತು