AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Global Investors Summit: ಉತ್ತರಾಖಂಡದಲ್ಲಿ ಇಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ, ಪ್ರಧಾನಿ ಮೋದಿ ಉದ್ಘಾಟನೆ

ಇಂದು ಉತ್ತರಾಖಂಡ(Uttarakhand)ದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ(Global Investors Summit) ನಡೆಯಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಶೃಂಗಸಭೆಯ ಗುರಿಯಾಗಿದೆ. ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಿ ಮೋದಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

Global Investors Summit: ಉತ್ತರಾಖಂಡದಲ್ಲಿ ಇಂದು ಜಾಗತಿಕ ಹೂಡಿಕೆದಾರರ ಶೃಂಗಸಭೆ, ಪ್ರಧಾನಿ ಮೋದಿ ಉದ್ಘಾಟನೆ
ನರೇಂದ್ರ ಮೋದಿImage Credit source: ABP Live
ನಯನಾ ರಾಜೀವ್
|

Updated on: Dec 08, 2023 | 8:36 AM

Share

ಇಂದು ಉತ್ತರಾಖಂಡ(Uttarakhand)ದಲ್ಲಿ ಜಾಗತಿಕ ಹೂಡಿಕೆದಾರರ ಶೃಂಗಸಭೆ(Global Investors Summit) ನಡೆಯಲಿದ್ದು, ಪ್ರಧಾನಿ ಮೋದಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವುದು ಶೃಂಗಸಭೆಯ ಗುರಿಯಾಗಿದೆ. ಡೆಹ್ರಾಡೂನ್‌ನ ಅರಣ್ಯ ಸಂಶೋಧನಾ ಸಂಸ್ಥೆಯಲ್ಲಿ ಬೆಳಗ್ಗೆ 10:30ರ ಸುಮಾರಿಗೆ ಪ್ರಧಾನಿ ಮೋದಿ ಸಮ್ಮೇಳನವನ್ನು ಉದ್ಘಾಟಿಸಲಿದ್ದಾರೆ.

ಇದೇ ಸಂದರ್ಭದಲ್ಲಿ ಪ್ರಧಾನಿಯವರು ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಉತ್ತರಾಖಂಡ ಜಾಗತಿಕ ಹೂಡಿಕೆದಾರರ ಶೃಂಗಸಭೆ 2023 ಉತ್ತರಾಖಂಡವನ್ನು ಹೂಡಿಕೆಯ ಹೊಸ ಕೇಂದ್ರವಾಗಿ ಸ್ಥಾಪಿಸುವ ನಿಟ್ಟಿನಲ್ಲಿ ಒಂದು ಹೆಜ್ಜೆಯಾಗಿದೆ.

ಎರಡು ದಿನಗಳ ಶೃಂಗಸಭೆಯು ಡಿಸೆಂಬರ್ 8 ಮತ್ತು 9 ರಂದು ಶಾಂತಿಯಿಂದ ಸಮೃದ್ಧಿಯೆಡೆಗೆ ಎಂಬ ವಿಷಯದೊಂದಿಗೆ ನಡೆಯಲಿದೆ. ಪ್ರಪಂಚದಾದ್ಯಂತದ ಸಾವಿರಾರು ಹೂಡಿಕೆದಾರರು ಮತ್ತು ಪ್ರತಿನಿಧಿಗಳು ಈ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ. ಇದರಲ್ಲಿ ಕೇಂದ್ರ ಸಚಿವರು, ವಿವಿಧ ದೇಶಗಳ ರಾಯಭಾರಿಗಳು ಹಾಗೂ ಪ್ರಮುಖ ಕೈಗಾರಿಕೋದ್ಯಮಿಗಳು ಮತ್ತಿತರರು ಪಾಲ್ಗೊಳ್ಳಲಿದ್ದಾರೆ.

ಉತ್ತರಾಖಂಡದ ಜಾನಪದ ಕಲಾವಿದರು ಸುಮಾರು ಒಂದು ಕಿಲೋಮೀಟರ್ ವರೆಗೆ 1,000 ಜನರ ಮಾನವ ಸರಪಳಿಯ ನಡುವೆ ಸಾಂಸ್ಕೃತಿಕ ಪ್ರಸ್ತುತಿಗಳ ಮೂಲಕ ಪ್ರಧಾನಿ ಮೋದಿಯವರನ್ನು ಸ್ವಾಗತಿಸಲಿದ್ದಾರೆ. ದೇಶದ ದೊಡ್ಡ ಕೈಗಾರಿಕೋದ್ಯಮಿಗಳಾದ ಮುಕೇಶ್ ಅಂಬಾನಿ, ಗೌತಮ್ ಅದಾನಿ, ಸಂಜೀವ್ ಪುರಿ, ಸಜ್ಜನ್ ಜಿಂದಾಲ್, ಬಾಬಾ ರಾಮ್‌ದೇವ್, ಬನ್ಮಾಲಿ ಅಗರ್ವಾಲ್ ಮತ್ತು ಚರಂಜಿತ್ ಬ್ಯಾನರ್ಜಿ ಸಮ್ಮೇಳನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕಾರ್ಯಕ್ರಮದಲ್ಲಿ ಸಶಕ್ತ್ ಉತ್ತರಾಖಂಡ ಪುಸ್ತಕ ಬಿಡುಗಡೆ ಮತ್ತು ಹೌಸ್ ಆಫ್ ಹಿಮಾಲಯಸ್ ಬ್ರಾಂಡ್ ಅನ್ನು ಬಿಡುಗಡೆ ಮಾಡಲಾಗುವುದು.

ಮತ್ತಷ್ಟು ಓದಿ: ಕೊಪ್ಪಳ, ಉಡುಪಿ ಜೆಲ್ಲೆಗಳಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ; ಇಲ್ಲಿದೆ ವಿವರ

ಶೃಂಗಸಭೆಗೆ ಬರುವ ಕೈಗಾರಿಕೋದ್ಯಮಿಗಳಿಗೆ ಅಲ್ಟ್ರಾಲಕ್ಸುರಿ ಕಾರುಗಳ ವ್ಯವಸ್ಥೆ ಮಾಡಲಾಗಿದೆ. ಬುಧವಾರ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಸ್ಥಳ ಪರಿಶೀಲನೆ ನಡೆಸಿದರು. ಈ ವೇಳೆ ವಿವಿಧ ವ್ಯವಸ್ಥೆಗಳ ಬಗ್ಗೆ ಮಾಹಿತಿ ಪಡೆದು ಅಗತ್ಯ ಮಾರ್ಗಸೂಚಿಗಳನ್ನು ನೀಡಿದರು.

ವಾಣಿಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!