ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ ಅನುದಾನ; ಕೇಂದ್ರ ಸಂಪುಟ ಒಪ್ಪಿಗೆ; ಒಂದು ಕೋಟಿ ಮನೆಗಳಿಗೆ ಸೋಲಾರ್ ಗುರಿ

PM Surya Ghar Rooftop Solar Scheme: ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಕೇಂದ್ರ ಸಂಪುಟ ಸಭೆಯಲ್ಲಿ ಅನುಮೋದನೆ ಸಿಕ್ಕಿದೆ. ಕೇಂದ್ರ ಸಚಿವ ಅನುರಾಗ್ ಠಾಕೂರ್ ಈ ವಿಷಯವನ್ನು ಮಾಧ್ಯಮಗಳಿಗೆ ಬಹಿರಂಗಪಡಿಸಿದ್ದಾರೆ. ಈ ಯೋಜನೆಯಲ್ಲಿ ಕೇಂದ್ರ ಸರ್ಕಾರ 75,000 ಕೋಟಿ ರೂ ಅನುದಾನ ಬಿಡುಗಡೆ ಮಾಡುತ್ತದೆ.

ಪಿಎಂ ಸೂರ್ಯಘರ್ ಯೋಜನೆಗೆ 75,000 ಕೋಟಿ ರೂ ಅನುದಾನ; ಕೇಂದ್ರ ಸಂಪುಟ ಒಪ್ಪಿಗೆ; ಒಂದು ಕೋಟಿ ಮನೆಗಳಿಗೆ ಸೋಲಾರ್ ಗುರಿ
ಪಿಎಂ ಸೂರ್ಯ ಘರ್ ಯೋಜನೆImage Credit source: Kashmir Observer
Follow us
| Updated By: ನಯನಾ ರಾಜೀವ್

Updated on:Mar 01, 2024 | 9:58 AM

ನವದೆಹಲಿ, ಫೆಬ್ರುವರಿ 29: ಮನೆಯ ಮೇಲ್ಛಾವಣಿ ಮೇಲೆ ಸೌರ ವ್ಯವಸ್ಥೆ ಅಳವಡಿಸುವ ಪಿಎಂ ಸೂರ್ಯಘರ್ ಯೋಜನೆಗೆ (PM Surya Ghar Rooftop solar scheme) ಸರ್ಕಾರದಿಂದ 75,000 ಕೋಟಿ ರೂ ಅನುದಾನ ಬಿಡುಗಡೆ ಮಾಡುವ ಪ್ರಸ್ತಾಪಕ್ಕೆ ಕೇಂದ್ರ ಸಂಪುಟ ಇಂದು ಅನುಮೋದನೆ ನೀಡಿದೆ. ಇದರೊಂದಿಗೆ, ಯೋಜನೆ ಅತಿಶೀಘ್ರದಲ್ಲೇ ಚಾಲನೆಗೆ ಬರುವುದು ಸನ್ನಿಹಿತವಾಗಿದೆ. ಪಿಎಂ ಸೂರ್ಯಘರ್ ಯೋಜನೆಯಲ್ಲಿ ಒಂದು ಮನೆಗೆ 300 ಯೂನಿಟ್​ಗಳವರೆಗೆ ಉಚಿತ ವಿದ್ಯುತ್ ಒದಗಿಸಲಾಗುತ್ತದೆ. ಒಂದು ಕೋಟಿ ಮನೆಗಳಿಗೆ ಸೋಲಾರ್ ಅಳವಡಿಸಲು ಈ ಯೋಜನೆಯಲ್ಲಿ ಗುರಿ ಹಾಕಲಾಗಿದೆ.

‘ಪಿಎಂ ಮೋದಿ ನೇತೃತ್ವದಲ್ಲಿ ಇವತ್ತು ಸಂಪುಟ ಸಭೆ ನಡೆಯಿತು. ಪಿಎಂ ಸೂರ್ಯ ಘರ್ ಉಚಿತ ವಿದ್ಯುತ್ ಯೋಜನೆಗೆ ಸಂಪುಟದ ಅನುಮೋದನೆ ಸಿಕ್ಕಿದೆ. ಈ ಯೋಜನೆ ಅಡಿಯಲ್ಲಿ ಒಂದು ಕೋಟಿ ಕುಟುಂಬಗಳು 300 ಯೂನಿಟ್​ಗಳಷ್ಟು ಉಚಿತ ವಿದ್ಯುತ್ ಪಡೆಯಲಿದ್ದಾರೆ,’ ಎಂದು ಅನುರಾಗ್ ಠಾಕೂರ್ ತಿಳಿಸಿದ್ದಾರೆ.

ಇದನ್ನೂ ಓದಿ: ಪಿಎಂ ಕಿಸಾನ್ ಹಣ ಈ ಬಾರಿ ಬಂದಿಲ್ಲವಾ? ಇಲ್ಲಿ ವಿಚಾರಿಸಿ

ಪ್ರಧಾನಿ ನರೇಂದ್ರ ಮೋದಿ 2024ರ ಫೆಬ್ರುವರಿ 13ರಂದು ಈ ಯೋಜನೆ ಘೋಷಿಸಿದ್ದರು. ಮನೆಯ ಮೇಲ್ಛಾವಣಿ ಮೇಲೆ ಸೋಲಾರ್ ಸಿಸ್ಟಂ ಅಳವಡಿಕೆ ಮಾಡುವ ಮನೆಗೆ ಸರ್ಕಾರದಿಂದ ಸಬ್ಸಿಡಿ ಸಿಗುತ್ತದೆ. ಒಂದು ಕಿವ್ಯಾ ಸೋಲಾರ್ ಸಿಸ್ಟಂಗೆ 30,000 ರೂ ಸಬ್ಸಿಡಿ ಸಿಗುತ್ತದೆ. 2 ಕಿ.ವ್ಯಾ. ಸೋಲಾರ್​ಗೆ 60,000 ರೂ, ಹಾಗೂ 3 ಕಿ.ವ್ಯಾ. ಮತ್ತದಕ್ಕಿಂತ ಹೆಚ್ಚಿನ ಶಕ್ತಿಯ ಸೋಲಾರ್​ಗೆ 78,000 ರೂ ಸಬ್ಸಿಡಿ ಸರ್ಕಾರದಿಂದ ಸಿಗುತ್ತದೆ.

ಪ್ರಧಾನಿ ನರೇಂದ್ರ ಮೋದಿ ಟ್ವೀಟ್​

ಪಿಎಂ ಸೂರ್ಯಘರ್ ಯೋಜನೆಗೆ ಅರ್ಜಿ ಸಲ್ಲಿಸುವುದು ಹೇಗೆ?

  • ಮೊದಲಿಗೆ ಪಿಎಂ ಸೂರ್ಯ ಘರ್ ಯೋಜನೆಯ ವೆಬ್​ಸೈಟ್​ಗೆ ಭೇಟಿ ನೀಡಿ: pmsuryaghar.gov.in
  • ಅಪ್ಲೈ ಫಾರ್ ರೂಫ್​ಟಾಪ್ ಸೋಲಾರ್​ ಅನ್ನು ಕ್ಲಿಕ್ ಮಾಡಿ
  • ಬಳಿಕ ರಾಜ್ಯದ ಹೆಸರು, ಡಿಸ್ಕಾಂ ಹೆಸರು, ನಿಮ್ಮ ಮನೆಯ ವಿದ್ಯುತ್ ಕನ್ಸೂಮರ್ ನಂಬರ್, ಮೊಬೈಲ್ ನಂಬರ್ ಮತ್ತು ಇಮೇಲ್ ಅನ್ನು ನಮೂದಿಸಿ ನೊಂದಾಯಿಸಿಕೊಳ್ಳಬೇಕು.
  • ನೊಂದಾವಣಿ ಆದ ಬಳಿಕ ಮೊಬೈಲ್ ನಂಬರ್ ಮೂಲಕ ಲಾಗಿನ್ ಆಗಬೇಕು.
  • ಈಗ ರೂಫ್​ಟಾಪ್ ಸ್ಕೀಮ್​ಗೆ ಅರ್ಜಿ ಸಲ್ಲಿಸಬಹುದು. ಬ್ಯಾಂಕ್ ಖಾತೆಯ ವಿವರವನ್ನು ನೀಡಬೇಕಾಗುತ್ತದೆ.
  • ನಿಮ್ಮ ಅರ್ಜಿಯನ್ನು ಪರಿಶೀಲಿಸಲಾಗಿ, ಅನುಮೋದನೆ ಆಗುವವರೆಗೂ ಕಾಯಬೇಕಾಗುತ್ತದೆ. ಅನುಮೋದನೆ ಸಿಕ್ಕ ಬಳಿಕ ನಿಮ್ಮ ಡಿಸ್ಕಾಮ್​ಗೆ ನೊಂದಾಯಿತವಾದ ಯಾವುದಾದರೂ ಸೋಲಾರ್ ಕಂಪನಿಯವರು ಬಂದು ಮನೆಗೆ ಸೋಲಾರ್ ಅಳವಡಿಸುತ್ತಾರೆ.

ಇದನ್ನೂ ಓದಿ: ಮೋದಿ 3.0 ಸರ್ಕಾರದ ಅವಧಿಯಲ್ಲಿ ಮುಂದುವರಿದ ದೇಶವನ್ನಾಗಿ ಮಾಡುವಂತಹ ಸುಧಾರಣೆಗಳನ್ನು ನಿರೀಕ್ಷಿಸಿ: ನಿರ್ಮಲಾ ಸೀತಾರಾಮನ್

  • ಈ ಸೋಲಾರ್​ಗೆ ನಿಮ್ಮ ಕೈಯಿಂದಲೆ ಹಣ ಕೊಡಬೇಕಾಗುತ್ತದೆ. ಸೋಲಾರ್ ಸ್ಥಾಪನೆಯಾದ ಬಳಿಕ ಅದರ ವಿವರವನ್ನು ಪಿಎಂ ಸೂರ್ಯ ಘರ್ ವೆಬ್​ಸೈಟ್​ಗೆ ಹೋಗಿ ಸಲ್ಲಿಸಬೇಕು, ಬಳಿಕ ನೆಟ್ ಮೀಟರ್​ಗೆ ಅರ್ಜಿ ಸಲ್ಲಿಸಬೇಕು.
  • ನೆಟ್ ಮೀಟರ್ ಇನ್ಸ್​ಟಾಲ್ ಆಗಿ ಡಿಸ್ಕಾಮ್​ನಿಂದ ಪರಿಶೀಲನೆ ಆದ ಬಳಿಕ ಕಮಿಷನಿಂಗ್ ಸರ್ಟಿಫಿಕೇಟ್ ಜನರೇಟ್ ಆಗುತ್ತದೆ.
  • ಕಮಿಷನಿಂಗ್ ರಿಪೋರ್ಟ್ ಸಿಕ್ಕ ಬಳಿಕ ಬ್ಯಾಂಕ್ ಅಕೌಂಟ್ ವಿವರ ಸಲ್ಲಿಸಬೇಕು. ಕ್ಯಾನ್ಸಲ್ ಚೆಕ್ ಅನ್ನೂ ಒದಗಿಸಬೇಕು.
  • ಇದಾಗಿ 30 ದಿನದೊಳಗೆ ನಿಮ್ಮ ಬ್ಯಾಂಕ್ ಖಾತೆಗೆ ಸಬ್ಸಿಡಿ ಸಿಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:25 pm, Thu, 29 February 24

Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
Vastu Tips: ಮನೆಯಲ್ಲಿ ಆಮೆ ಇಡುವುದರ ಹಿಂದಿನ ಮಹತ್ವವೇನು?
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಮೈಸೂರು: ಕಾದಾಡುತ್ತಾ ಅರಮನೆ ಆವರಣದಿಂದ ರಸ್ತೆಗೆ ಬಂದ ದಸರಾ ಆನೆಗಳು
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
ಇಂದು ಶಶ ರಾಜಯೋಗ, ಈ ರಾಶಿಯವರಿಗೆ ಶನಿದೇವನ ಕೃಪೆಯಿಂದ ಒಳಿತಾಗಲಿದೆ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
‘ಕೆಟ್ಟ ಕಾರಣಕ್ಕೆ ಕನ್ನಡ ಚಿತ್ರರಂಗ ಸುದ್ದಿ ಆಗುತ್ತಿದೆ, ಆದರೆ..’: ಕಿಚ್ಚ
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಕನ್ನಡದಲ್ಲಿ ಔಷಧಿ ಚೀಟಿ ಬರೆದು ಗಮನಸೆಳೆದ ಮತ್ತೋರ್ವ ಡಾಕ್ಟರ್
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಅಂತಿಂಥ ಕಳ್ಳಿ ನಾನಲ್ಲ; ಇವರು ಸೀರೆ ಕದಿಯೋದೇ ಗೊತ್ತಾಗಲ್ಲ!
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ಶಾಸಕ ಯತ್ನಾಳ್ ವಿರುದ್ಧ ಎಫ್​ಐಆರ್ ದಾಖಲು: ಬಾಗಲಕೋಟೆ ಎಸ್​ಪಿ ಹೇಳಿದ್ದಿಷ್ಟು
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ವಿಷ್ಣುವರ್ಧನ್ ಸಮಾಧಿ ಮುಂದೆ ಹೆಣ ಬೀಳುತ್ತೆ: ಅಭಿಮಾನಿ ಎಚ್ಚರಿಕೆ
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಹೆಗಲಿಗೆ ಬ್ಯಾಗ್, ಕೈಯಲ್ಲಿ ಚಪ್ಪಲಿ ಹಿಡಿದು ಕೆಸರಲ್ಲೇ ನಡೆಯಬೇಕು ಮಕ್ಕಳು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು
ಜಮ್ಮು ಕಾಶ್ಮೀರದಲ್ಲಿ ಬಸ್ ಅಪಘಾತ; 3 ಬಿಎಸ್‌ಎಫ್ ಯೋಧರು ಸಾವು