AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಿಎಂ ಸ್ವನಿಧಿ ಯೋಜನೆಯ ಲಾಭ ಪಡೆದವರಲ್ಲಿ ಸಾಮಾನ್ಯೇತರ ವರ್ಗದವರು, ಮಹಿಳೆಯರೇ ಹೆಚ್ಚು, ಎಸ್​​ಬಿಐ ಸಂಶೋಧನಾ ವರದಿ: ಮೋದಿ ಮೆಚ್ಚುಗೆ

PM SVANidhi Scheme, SBI research: ಎಸ್​​ಸಿ, ಎಸ್​​ಟಿ ವರ್ಗದ ಶೇ 22ರಷ್ಟು ಮಂದಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಯೋಜನೆಯ ಒಟ್ಟು ಫಲಾನುಭವಿಗಳ ಪೈಕಿ ಶೇ 43ರಷ್ಟು ಮಂದಿ ಮಹಿಳೆಯರು ಎಂದು ವರದಿ ತಿಳಿಸಿದೆ. ‘ಪಿಎಂ ಸ್ವನಿಧಿ ಯೋಜನೆ’ ಬಗ್ಗೆ ಎಸ್​ಬಿಐ ಸಿದ್ಧಪಡಿಸಿರುವ ಸಂಶೋಧನಾ ವರದಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಿಎಂ ಸ್ವನಿಧಿ ಯೋಜನೆಯ ಲಾಭ ಪಡೆದವರಲ್ಲಿ ಸಾಮಾನ್ಯೇತರ ವರ್ಗದವರು, ಮಹಿಳೆಯರೇ ಹೆಚ್ಚು, ಎಸ್​​ಬಿಐ ಸಂಶೋಧನಾ ವರದಿ: ಮೋದಿ ಮೆಚ್ಚುಗೆ
ಸಾಂದರ್ಭಿಕ ಚಿತ್ರ
Ganapathi Sharma
|

Updated on: Oct 24, 2023 | 8:01 PM

Share

ನವದೆಹಲಿ, ಅಕ್ಟೋಬರ್ 24: ಬೀದಿ ಬದಿ ವ್ಯಾಪಾರಿಗಳ ಉದ್ಯಮಶೀಲತೆ ಪ್ರೋತ್ಸಾಹಿಸುವುದಕ್ಕಾಗಿ ಕೇಂದ್ರ ಸರ್ಕಾರ ಆರಂಭಿಸಿದ್ದ ಮೈಕ್ರೋ ಕ್ರೆಡಿಟ್ ಸ್ಕೀಮ್​ ‘ಪಿಎಂ ಸ್ಟ್ರೀಟ್ ವೆಂಡರ್ಸ್ ಆತ್ಮನಿರ್ಭರ್ ನಿಧಿ’ ಅಥವಾ ‘ಪಿಎಂ ಸ್ವನಿಧಿ ಯೋಜನೆ (PM SVANidhi)’ಯ ಪ್ರಯೋಜನ ಪಡೆದವರಲ್ಲಿ ಶೇ 75ರಷ್ಟು ಮಂದಿ ಸಾಮಾನ್ಯೇತರ ವರ್ಗದವರು (Non-General Category) ಎಂಬುದು ಸಂಶೋಧನಾ ವರದಿಯಿಂದ ತಿಳಿದುಬಂದಿದೆ. ಯೋಜನೆಯ ಪ್ರಯೋಜನ ಪಡೆದವರಲ್ಲಿ ಶೇ 75ರಷ್ಟು ಮಂದಿ ಸಾಮಾನ್ಯ ವರ್ಗೇತರರು ಇದ್ದಾರೆ. ಒಬಿಸಿ ವರ್ಗದ ಶೇ 44 ರಷ್ಟು ಮಂದಿ ಪ್ರಯೋಜನ ಪಡೆದಿದ್ದಾರೆ ಎಂಬುದು ಎಸ್​​ಬಿಐ ಸಂಶೋಧನಾ ವರದಿಯಿಂದ (An SBI research report) ಬಹಿರಂಗಗೊಂಡಿದೆ.

ಎಸ್​​ಸಿ, ಎಸ್​​ಟಿ ವರ್ಗದ ಶೇ 22ರಷ್ಟು ಮಂದಿ ಯೋಜನೆಯ ಪ್ರಯೋಜನ ಪಡೆದಿದ್ದಾರೆ. ಯೋಜನೆಯ ಒಟ್ಟು ಫಲಾನುಭವಿಗಳ ಪೈಕಿ ಶೇ 43ರಷ್ಟು ಮಂದಿ ಮಹಿಳೆಯರು ಎಂದು ವರದಿ ತಿಳಿಸಿದೆ.

ಫಲಾನುಭವಿಗಳಲ್ಲಿ ಮಹಿಳೆಯರ ಪಾಲು ನಗರ ಪ್ರದೇಶದ ಮಹಿಳೆಯರ ಉದ್ಯಮಶೀಲತಾ ಸಾಮರ್ಥ್ಯಗಳ ಸಬಲೀಕರಣವನ್ನು ಸೂಚಿಸುತ್ತದೆ ಎಂದು ವರದಿ ಹೇಳಿದೆ.

ಸಂಶೋಧನಾ ವರದಿಗೆ ಪ್ರಧಾನಿ ಮೋದಿ ಮೆಚ್ಚುಗೆ

‘ಪಿಎಂ ಸ್ವನಿಧಿ ಯೋಜನೆ’ ಬಗ್ಗೆ ಎಸ್​ಬಿಐ ಸಿದ್ಧಪಡಿಸಿರುವ ಸಂಶೋಧನಾ ವರದಿಗೆ ಖುದ್ದು ಪ್ರಧಾನಿ ನರೇಂದ್ರ ಮೋದಿ ಅವರೇ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಈ ವಿಚಾರವಾಗಿ ಸಾಮಾಜಿಕ ಮಾಧ್ಯಮ ಎಕ್ಸ್​ನಲ್ಲಿ ಸಂದೇಶ ಪ್ರಕಟಿಸಿರುವ ಅವರು, ಎಸ್​​ಬಿಐನ ಸೌಮ್ಯಾ ಕಾಂತಿ ಘೋಷ್ ಅವರು ಸಿದ್ಧಪಡಿಸಿರುವ ವಿಸ್ತೃತ ಸಂಶೋಧನಾ ವರದಿಯು ಪಿಎಂ ಸ್ವನಿಧಿ ಯೋಜನೆಯ ಪರಿಣಾಮದ ಬಗ್ಗೆ ಸ್ಪಷ್ಟ ಚಿತ್ರಣ ನೀಡಿದೆ. ಇದು ಈ ಯೋಜನೆಯ ಅಂತರ್ಗತ ಸ್ವರೂಪವನ್ನು ಗಮನಿಸುವುದರ ಜತೆಗೆ ಅದು ಹೇಗೆ ಆರ್ಥಿಕ ಸಬಲೀಕರಣಕ್ಕೆ ಕಾರಣವಾಗಿದೆ ಎಂಬುದನ್ನು ಎತ್ತಿ ತೋರಿಸಿದೆ ಎಂದು ಉಲ್ಲೇಖಿಸಿದ್ದಾರೆ.

ಏನಿದು ಪಿಎಂ ಸ್ವನಿಧಿ ಯೋಜನೆ?

ನರೇಂದ್ರ ಮೋದಿ ಸರ್ಕಾರವು 2020 ರಲ್ಲಿ ಪ್ರಾರಂಭಿಸಿದ ಪಿಎಂ ಸ್ವನಿಧಿ ಯೋಜನೆಯು ನಗರ ಪ್ರದೇಶಗಳ ಬೀದಿ ವ್ಯಾಪಾರಿಗಳಿಗೆ ಕಿರುಸಾಲ ನೀಡುವ ಯೋಜನೆಯಾಗಿದೆ. ಇದರ ಅಡಿಯಲ್ಲಿ 50,000 ರೂ. ವರೆಗೆ ಮೇಲಾಧಾರ-ಮುಕ್ತ ಸಾಲವನ್ನು ನೀಡಲಾಗುತ್ತದೆ.

ಇದನ್ನೂ ಓದಿ: PM SVANIdhi: ಸರ್ಕಾರದ ಪಿಎಂ ಸ್ವನಿಧಿ ಯೋಜನೆ ಬಗ್ಗೆ ಗೊತ್ತಿರಬೇಕಾದ ಸಂಗತಿಗಳಿವು

ಈ ಯೋಜನೆಯಡಿ ಈವರೆಗೆ ಸುಮಾರು 70 ಲಕ್ಷ ಸಾಲವನ್ನು (ಒಟ್ಟು 9,100 ಕೋಟಿ ರೂಪಾಯಿಗೂ ಹೆಚ್ಚು) ಮೂರು ಹಂತಗಳಲ್ಲಿ ವಿತರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ
VIDEO: ಸಿಕ್ಸ್ ಹಿಟ್... ಕ್ಯಾಮೆರಾಮ್ಯಾನ್ ಕ್ಷಮೆಯಾಚಿಸಿದ ಹಾರ್ದಿಕ್ ಪಾಂಡ್ಯ