AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Vishwakarma scheme Loan: ಕರಕುಶಲಕರ್ಮಿಗಳಿಗೆ 1 ಲಕ್ಷ ರೂವರೆಗೆ ಸಾಲ: ಕೇಂದ್ರ ಅನುಮೋದನೆ

CCEA Approves PM Vishwakarma Scheme: ಅಕ್ಕಸಾಲಿಗರು, ಶಿಲ್ಪಿಗಳು, ಚಮ್ಮಾರ, ಕುಂಬಾರ, ಕಮ್ಮಾರ ಇತ್ಯಾದಿ ಹಲವು ಕರಕುಶಲಕರ್ಮಿ ಸಮುದಾಯದವರಿಗೆ ವೃತ್ತಿಯಲ್ಲಿ ಸಹಾಯವಾಗಿ ಕೇಂದ್ರ ಸರ್ಕಾರ 1 ಲಕ್ಷ ರೂವರೆಗೂ ಸಾಲಸೌಲಭ್ಯ ಒದಗಿಸುವ ಯೋಜನೆ ರೂಪಿಸಿದೆ.

Vishwakarma scheme Loan: ಕರಕುಶಲಕರ್ಮಿಗಳಿಗೆ 1 ಲಕ್ಷ ರೂವರೆಗೆ ಸಾಲ: ಕೇಂದ್ರ ಅನುಮೋದನೆ
ಕರಕುಶಲಕರ್ಮಿಗಳು
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 16, 2023 | 4:37 PM

Share

ನವದೆಹಲಿ, ಆಗಸ್ಟ್ 16: ಪ್ರಧಾನಿ ನರೇಂದ್ರ ಮೋದಿ ಅವರು ಸ್ವಾತಂತ್ರ್ಯೋತ್ಸವ ಭಾಷಣದ ವೇಳೆ ಘೋಷಿಸಿದ್ದ ಪಿಎಂ ವಿಶ್ವಕರ್ಮ ಯೋಜನೆಗೆ (PM Vishwakarma Scheme) ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ (CCEA- Central Committee on Economic Affairs) ಆಗಸ್ಟ್ 16, ಬುಧವಾರ ಅನುಮೋದನೆ ನೀಡಿದೆ. ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ (Union Minister Ashwini Vaishnaw) ಈ ವಿಷಯವನ್ನು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಪಿಎಂ ವಿಶ್ವಕರ್ಮ ಯೋಜನೆಯಿಂದ ದೇಶದ 30 ಲಕ್ಷ ಕರಕುಶಲಕರ್ಮಿಗಳಿಗೆ ಲಾಭವಾಗಲಿದೆ. ಇವರಿಗೆ ಕೇವಲ 5 ಪರ್ಸೆಂಟ್ ವಾರ್ಷಿಕ ಬಡ್ಡಿದರದಲ್ಲಿ 1 ಲಕ್ಷ ರೂವರೆಗೂ ಮೊದಲ ಹಂತದ ಸಾಲ ಕೊಡುವ ಯೋಜನೆ ಇದು. ಮುಂದಿನ 5 ವರ್ಷಗಳಿಗೆ ಈ ಯೋಜನೆಗೆಂದು ಸರ್ಕಾರ 13,000 ಕೋಟಿ ರೂ ಹಣ ಮಿಸಲಿಟ್ಟಿದೆ.

ಪಿಎಂ ವಿಶ್ವಕರ್ಮ ಸ್ಕೀಮ್​ ಯಾರಿಗೆಲ್ಲಾ ಲಭ್ಯ ಇದೆ?

ಪಿಎಂ ವಿಶ್ವಕರ್ಮ ಯೋಜನೆಯು ಕೇವಲ ವಿಶ್ವಕರ್ಮ ಸಮುದಾಯಕ್ಕೆ ಮಾತ್ರವಲ್ಲ, ಕರಕುಶಲ ವಸ್ತುಗಳ ತಯಾರಿಕೆಯಲ್ಲಿ ತೊಡಗಿರುವ ಮಂದಿಗೆ ಅನ್ವಯ ಆಗುತ್ತದೆ. ಸದ್ಯ 18 ಸಾಂಪ್ರದಾಯಿಕ ಕರಕುಶಲ ಕೆಲಸಗಳನ್ನು ಇದರಲ್ಲಿ ಒಳಗೊಳ್ಳಲಾಗಿದೆ. ಈ ಕೆಲಸ ಮಾಡುವ ಕುಶಲಕರ್ಮಿಗಳಿಗೆ ಐಡಿ ಕಾರ್ಡ್, ಪಿಎಂ ವಿಶ್ವಕರ್ಮ ಪ್ರಮಾಣಪತ್ರಗಳನ್ನು ಒದಗಿಸಲಾಗುತ್ತದೆ.

ಮೊದಲ ಹಂತದಲ್ಲಿ 1 ಲಕ್ಷ ರೂ ಹಾಗೂ ಎರಡನೇ ಹಂತದಲ್ಲಿ 2 ಲಕ್ಷ ರೂನಷ್ಟು ಸಾಲ ಒದಗಿಸಲಾಗುತ್ತದೆ. ವಾರ್ಷಿಕ ಬಡ್ಡಿದರ ಶೇ. 5 ಇರಲಿದೆ. ಜೊತೆಗೆ, ಕೌಶಲ್ಯ ಅಭಿವೃದ್ಧಿ, ಟೂಲ್​ಕಿಟ್, ಡಿಜಿಟಲ್ ವಹಿವಾಟು, ಮಾರ್ಕೆಟಿಂಗ್ ಇತ್ಯಾದಿ ಪ್ರೋತ್ಸಾಹಗಳನ್ನು ಕರಕುಶಲಕರ್ಮಿಗಳಿಗೆ ಒದಗಿಸಲಾಗುವುದು.

ಇದನ್ನೂ ಓದಿ: Income Tax Rules for X Users: ಟ್ವಿಟ್ಟರ್​ನಿಂದ ಆದಾಯ ಬರುತ್ತಿದ್ದರೆ ತೆರಿಗೆ ಎಷ್ಟು ಪಾವತಿಸಬೇಕು?

ಶಿಲ್ಪಿಗಳು, ಅಕ್ಕಸಾಲಿಗರು, ಚಮ್ಮಾರರು, ಮರಗೆಲಸದವರು, ದೋಣಿ ತಯಾರಕರು, ಬೀಗ ತಯಾರಕರು, ಕಮ್ಮಾರರು, ಕುಂಬಾರರು, ಗಾರೆ ಕೆಲಸದವರು ಮೊದಲಾದವರು ಪಿಎಂ ವಿಶ್ವಕರ್ಮ ಯೋಜನೆಗೆ ಫಲಾನುಭವಿಗಳಾಗಲು ಅರ್ಹರಿರುತ್ತಾರೆ.

ಹ್ಯಾಂಡ್ಸಮ್ ಹಂಕ್ ಆದ ವಿಕ್ಕಿ ಕೌಶಲ್
ಹ್ಯಾಂಡ್ಸಮ್ ಹಂಕ್ ಆದ ವಿಕ್ಕಿ ಕೌಶಲ್
ಹ್ಯಾಂಡ್​​​ಬ್ಯಾಗ್ ಖರೀದಿಸುವ ಮುನ್ನ ಈ ಸಿಂಪಲ್​​​ ಟಿಪ್ಸ್​​ ನೆನಪಿನಲ್ಲಿಟ್ಟುಕೊಳ್ಳಿ
ಹ್ಯಾಂಡ್​​​ಬ್ಯಾಗ್ ಖರೀದಿಸುವ ಮುನ್ನ ಈ ಸಿಂಪಲ್​​​ ಟಿಪ್ಸ್​​ ನೆನಪಿನಲ್ಲಿಟ್ಟುಕೊಳ್ಳಿ

ಪಿಎಂ ಇ ಬಸ್ ಸೇವಾ ಯೋಜನೆ

ಇದೇ ವೇಳೆ, ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿಯು ಪಿಎಂ ಇಬಸ್ ಸೇವಾ ಯೋಜನೆಗೂ ಹಸಿರು ನಿಶಾನೆ ತೋರಿದೆ. ಈ ಯೋಜನೆ ಅಡಿ ದೇಶಾದ್ಯಂತ 10,000 ಎಲೆಕ್ಟ್ರಿಕ್ ಬಸ್ಸುಗಳು ರಸ್ತೆಗೆ ಇಳಿಯಲಿವೆ.

ಇದನ್ನೂ ಓದಿ: PM Narendra Modi: ಸ್ವಂತ ಸೂರು ಬೇಕೆನ್ನುವವರಿಗೆ ಸರ್ಕಾರದಿಂದ ಹೊಸ ಸ್ಕೀಮ್; ಕಡಿಮೆ ಬಡ್ಡಿದರದಲ್ಲಿ ಸಾಲಸೌಲಭ್ಯ

ಕೇಂದ್ರ ಸಚಿವ ಅನುರಾಗ್ ಠಾಕೂರ್ ನೀಡಿದ ಮಾಹಿತಿ ಪ್ರಕಾರ 169 ನಗರಗಳಲ್ಲಿ ಈ 10,000 ಇ ಬಸ್ಸುಗಳ ನಿಯೋಜನೆ ಆಗಲಿದೆ. ಖಾಸಗಿ ಮತ್ತು ಸರ್ಕಾರ ಸಹಭಾಗಿತ್ವ ಮಾದರಿಯಲ್ಲಿ ಜಾರಿಯಾಗುವ ಈ ಯೋಜನೆಯ ಅಂದಾಜು ವೆಚ್ಚ 57,613 ಕೋಟಿ ರೂ ಆಗಿದೆ. ಇದಕ್ಕೆ ಕೇಂದ್ರ ಸರ್ಕಾರ 20,000 ಕೋಟಿ ರೂ ಧನಸಹಾಯ ಒದಗಿಸಲಿದೆ.

ಇಬಸ್ ಯೋಜನೆಯಿಂದ 45ರಿಂದ 55 ಸಾವಿರ ನೇರ ಉದ್ಯೋಗಗಳು ಸೃಷ್ಟಿಯಾಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 4:31 pm, Wed, 16 August 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ