ಸೆ. 17, ವಿಶ್ವಕರ್ಮ ಜಯಂತಿಯಂದು ಪಿಎಂ ವಿಶ್ವಕರ್ಮ ಯೋಜನೆ ಲೋಕಾರ್ಪಣೆ; ಏನಿದು ಸ್ಕೀಮ್?

PM Vishwakarma Scheme: ಭಾರತದ ಸಾಂಪ್ರದಾಯಿಕ ಕರಕುಶಲ ಕಲೆ ಹಾಗೂ ಕುಶಲಕರ್ಮಿಗಳಿಗೆ ಪ್ರೋತ್ಸಾಹ ನೀಡಲು ಕೇಂದ್ರ ಸರ್ಕಾರ ವಿಶ್ವಕರ್ಮ ಯೋಜನೆ ರೂಪಿಸಿದೆ. ವಿಶ್ವಕರ್ಮ ಜಯಂತಿ ದಿನವಾದ ಸೆಪ್ಟಂಬರ್ 17ರಂದು ಈ ಯೋಜನೆಯನ್ನು ಪ್ರಧಾನಿ ನರೇಂದ್ರ ಮೋದಿ ಲೋಕಾರ್ಪಣೆ ಮಾಡಲಿದ್ದಾರೆ. ಈ ಸ್ಕೀಮ್​ನಲ್ಲಿ 18 ಭಾರತೀಯ ಸಾಂಪ್ರದಾಯಿಕ ಕಲೆಗಳಲ್ಲಿ ತೊಡಗಿಸಿಕೊಂಡವರು ಫಲಾನುಭವಿಗಳಾಗಲು ಅರ್ಹರಾಗಿದ್ದಾರೆ. ಯಾವ್ಯಾವ ಕರಕುಶಲ ಸೇವೆಗಳು ಈ ಸ್ಕೀಮ್​ನಲ್ಲಿವೆ ಎಂಬ ವಿವರ ಇಲ್ಲಿದೆ...

ಸೆ. 17, ವಿಶ್ವಕರ್ಮ ಜಯಂತಿಯಂದು ಪಿಎಂ ವಿಶ್ವಕರ್ಮ ಯೋಜನೆ ಲೋಕಾರ್ಪಣೆ; ಏನಿದು ಸ್ಕೀಮ್?
ಕುಂಬಾರರು
Follow us
|

Updated on: Sep 15, 2023 | 2:39 PM

ನವದೆಹಲಿ, ಸೆಪ್ಟೆಂಬರ್ 15: ವಿಶ್ವಕರ್ಮ ಜಯಂತಿ ದಿನವಾದ ಸೆಪ್ಟೆಂಬರ್ 17ರಂದು ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ವಿಶ್ವಕರ್ಮ ಯೋಜನೆಯನ್ನು (PM Vishwakarama Scheme) ಬಿಡುಗಡೆ ಮಾಡಲಿದ್ದಾರೆ. ರಾಷ್ಟ್ರರಾಜಧಾನಿಯ ದ್ವಾರಕಾ ಪ್ರದೇಶದಲ್ಲಿ ಭಾನುವಾರ ಬೆಳಗ್ಗೆ 11 ಗಂಟೆಗೆ ಈ ಯೋಜನೆ ಲೋಕಾರ್ಪಣೆಗೊಳ್ಳಲಿದೆ. ಭಾರತದ ವಿವಿಧ ಕರಕುಶಲಕರ್ಮಿಗಳಿಗೆ (Artisans) ಪ್ರೋತ್ಸಾಹವಾಗಿ ರೂಪಿಸಲಾಗಿರುವ ಈ ಯೋಜನೆಗೆ ಕೇಂದ್ರ ಸರ್ಕಾರ 13,000 ಕೋಟಿ ರೂ ಮೀಸಲಿರಿಸಿದೆ. ಫಲಾನುಭವಿಗಳಿಗೆ ಧನಸಹಾಯದ ಜೊತೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ, ಕೌಶಲ್ಯ ಅಭಿವೃದ್ಧಿಗೆ (Skill Upgradation) ತರಬೇತಿ ಇತ್ಯಾದಿ ಹಲವು ರೀತಿಯ ನೆರವುಗಳನ್ನು ಸರ್ಕಾರ ಒದಗಿಸಲಿದೆ.

ಒಟ್ಟು 18 ವಿವಿಧ ಕರಕುಶಲ ಕರ್ಮಿಗಳನ್ನು ಈ ಸ್ಕೀಮ್​ನ ವ್ಯಾಪ್ತಿಗೆ ಸೇರಿಸಲಾಗಿದೆ. ಇದರಲ್ಲಿ ಮೇಸ್ತ್ರಿಗಳು, ಚಮ್ಮಾರ, ಕುಂಬಾರ, ಕಮ್ಮಾರ, ಅಕ್ಕಸಾಲಿಗ, ದರ್ಜಿ, ಕ್ಷೌರಿಕರೂ ಒಳಗೊಂಡಿದ್ದಾರೆ. ಕುಟುಂಬ ಮೂಲದಿಂದ ಬಂದ ಸಾಂಪ್ರದಾಯಿಕ ಕಲೆಗಳಿಗೆ ಉತ್ತೇಜನ ಕೊಡಲು ಮತ್ತು ಅವುಗಳ ದೇಶೀಯ ಹಾಗೂ ಜಾಗತಿಕ ಸರಬರಾಜು ಸರಪಳಿ ವ್ಯವಸ್ಥೆಯನ್ನು ಬಲಪಡಿಸಲು ಸರ್ಕಾರ ಈ ಯೋಜನೆ ಹಮ್ಮಿಕೊಂಡಿದೆ.

ಇದನ್ನೂ ಓದಿ: TIME: 2023ರಲ್ಲಿ ವಿಶ್ವದ ಅತ್ಯುತ್ತಮ ಕಂಪನಿಗಳು; ಟಾಪ್ 100 ಪಟ್ಟಿಯಲ್ಲಿ ಇನ್ಫೋಸಿಸ್; ಚೀನಾದ ಒಂದೂ ಇಲ್ಲ; ಇಲ್ಲಿದೆ ಲಿಸ್ಟ್

ಪಿಎಂ ವಿಶ್ವಕರ್ಮ ಯೋಜನೆಯಲ್ಲಿ ಒಳಗೊಂಡಿರುವ ಕುಶಲಕರ್ಮಿಗಳಿವರು

  1. ಮರಗೆಲಸ (ಕಾರ್ಪೆಂಟರ್)
  2. ದೋಣಿ ತಯಾರಕ
  3. ಶಸ್ತ್ರಕಾರ (ಮದ್ದುಗುಂಡು ತಯಾರಿಸುವವರು)
  4. ಕಮ್ಮಾರ
  5. ಸುತ್ತಿಗೆ ಇತ್ಯಾದಿ ತಯಾರಿಸುವವರು
  6. ಬೀಗ ಮತ್ತು ಕೀಲಿ ತಯಾರಿಸುವವರು
  7. ಅಕ್ಕಸಾಲಿಗರು (ಚಿನ್ನದ ಕುಸುರಿ)
  8. ಕುಂಬಾರರು (ಮಡಿಕೆ ತಯಾರಿಸುವವರು)
  9. ಶಿಲ್ಪಿಗಳು, ಕಲ್ಲು ಒಡೆಯುವವರು
  10. ಚಮ್ಮಾರರು (ಪಾದರಕ್ಷೆ ತಯಾರಿಸುವವರು)
  11. ಮೇಸ್ತ್ರಿಗಳು
  12. ಬುಟ್ಟಿ ಹೆಣೆಯುವವರು
  13. ಬೊಂಬೆ ತಯಾರಿಸುವವರು
  14. ಕ್ಷೌರಿಕರು
  15. ಹೂಮಾಲೆ ತಯಾರಕರು
  16. ಡೋಬಿ (ಬಟ್ಟೆ ಒಗೆಯುವವರು)
  17. ದರ್ಜಿಗಳು (ಟೈಲರ್)
  18. ಮೀನಿನ ಬಲೆ ತಯಾರಕರು

ಇದನ್ನೂ ಓದಿ: ಮೇಲಿನ ಹಂತದ ಎನ್​ಬಿಎಫ್​ಸಿಗಳ ಪಟ್ಟಿ ಬಿಡುಗಡೆ; ಈ ಸಂಸ್ಥೆಗಳಿಗೆ ಆರ್​ಬಿಐನ ಉನ್ನತ ಕಟ್ಟುಪಾಡುಗಳು ಅನ್ವಯ

ಈ ಯೋಜನೆಯ ಫಲಾನುಭವಿಗಳಿಗೆ ಏನು ಲಾಭ?

ಮೇಲೆ ತಿಳಿಸಿದ ಅರ್ಹ ಕುಶಲಕರ್ಮಿಗಳು ಪಿಎಂ ವಿಶ್ವಕರ್ಮ ಪೋರ್ಟಲ್​ನಲ್ಲಿ ಹೆಸರು ನೊಂದಾಯಿಸಬೇಕು. ಸಾಮಾನ್ಯ ಸೇವಾ ಕೇಂದ್ರಗಳಲ್ಲಿ ಬಯೋಮೆಟ್ರಿಕ್ ಮೂಲಕ ಪೋರ್ಟಲ್​ನಲ್ಲಿ ಉಚಿತವಾಗಿ ಹೆಸರು ನೊಂದಾಯಿಸಬಹುದು.

  • ಎಲ್ಲಾ ನೊಂದಾಯಿತರಿಗೂ ಪಿಎಂ ವಿಶ್ವಕರ್ಮ ಪ್ರಮಾಣಪತ್ರ ಮತ್ತು ಗುರುತಿನ ಕಾರ್ಡ್ ಕೊಡಲಾಗುತ್ತದೆ.
  • ಕೌಶಲ್ಯ ಅಭಿವೃದ್ಧಿಗೆ ಉನ್ನತ ಮಟ್ಟದವರೆಗೂ ತರಬೇತಿ ವ್ಯವಸ್ಥೆ ಮಾಡಲಾಗುತ್ತದೆ.
  • 15,000 ರೂ ಮೊತ್ತದ ಟೂಲ್​ಕಿಟ್ ಇನ್ಸೆಂಟಿವ್
  • ವರ್ಷಕ್ಕೆ ಕೇವಲ ಶೇ. 5ರಷ್ಟು ಬಡ್ಡಿದರದಲ್ಲಿ 2 ಲಕ್ಷ ರೂವರೆಗೆ ಸಾಲ
  • ಡಿಜಿಟಲ್ ವಹಿವಾಟುಗಳಿಗೆ ಪ್ರೋತ್ಸಾಹಕ ಧನ
  • ಮಾರ್ಕೆಟಿಂಗ್ ನೆರವು

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ದರ್ಶನ್ ಇರುವ ಜೈಲಲ್ಲಿ ಗಣೇಶೋತ್ಸವ, ದರ್ಶನ್​ಗೆ ಸಿಗಲಿಲ್ಲ ವಿನಾಯಕನ ದರ್ಶನ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಹುಬ್ಬಳ್ಳಿ ಈದ್ಗಾ ಗಣಪನಿಗೆ ಗಂಗಾ ಆರತಿ ಮಾದರಿಯಲ್ಲಿ ಆರತಿ; ವಿಡಿಯೋ ನೋಡಿ
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
ಚಿಕ್ಕೋಡಿಯಲ್ಲಿ ಎರಡು ಗಣಪತಿ ಮಂಡಳಿ ಯುವಕರ ನಡುವೆ ಗಲಾಟೆ; ವಿಡಿಯೋ ವೈರಲ್​
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
‘ಆರ್​​ಸಿಬಿ ಕ್ಯಾಪ್ಟನ್ ಕೆಎಲ್ ರಾಹುಲ್’: ಚಿನ್ನಸ್ವಾಮಿಯಲ್ಲಿ ಮೊಳಗಿದ ಘೋಷಣೆ
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಒಂದೇ ಓವರ್​ನಲ್ಲಿ 5 ಬೌಂಡರಿ ಚಚ್ಚಿದ ಸರ್ಫರಾಜ್
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಮಸೀದಿ ಆವರಣದಲ್ಲಿ ಗಣೇಶ ಪ್ರತಿಷ್ಠಾಪನೆ: ಭಾವೈಕ್ಯತೆಗೆ ಸಾಕ್ಷಿಯಾದ ಗಣೇಶಹಬ್ಬ
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಸ್ಫೋಟಕ ಅರ್ಧಶತಕ ಸಿಡಿಸಿ ಹಳೆ ಲಯಕ್ಕೆ ಮರಳಿದ ಪಂತ್
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ಉಡುಪಿಯಲ್ಲಿ ವಿಶಿಷ್ಟ ಗಣಪ; ಕೋಲಾರದಲ್ಲಿ 15 ಅಡಿ ಎತ್ತರದ ಕರಿಗಡಬು ಗಣೇಶ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ದಸರಾ ಗಜಪಡೆಗೆ ಅರಮನೆ ಆವರಣದಲ್ಲಿ ಗಣೇಶ ಹಬ್ಬದ ವಿಶೇಷ ಪೂಜೆ
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್
ವಿವೋ ಸ್ಮಾರ್ಟ್​​ಫೋನ್​ 6,500mAh ಬ್ಯಾಟರಿ 80W ಫಾಸ್ಟ್ ಚಾರ್ಜಿಂಗ್