AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMAY-G: ಪಿಎಂ ಗ್ರಾಮೀಣ ವಸತಿ ಯೋಜನೆ: 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ

PM Awas Yojana Grameen: ಪ್ರಧಾನಿ ನರೇಂದ್ರ ಮೋದಿ ಪಿಎಂ ಆವಾಸ್ ಗ್ರಾಮೀಣ ಯೋಜನೆಯ (ಪಿಎಂಎವೈ- ಜಿ) 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ಪ್ರಧಾನಿಗಳು ಪಿಎಂ ಜನಮಾನ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದ್ದಾರೆ. ಪಿಎಂ ಜನಮಾನ್ ಯೋಜನೆ ಬಹಳ ದುರ್ಬಲ ಸ್ಥಿತಿಯಲ್ಲಿರುವ ಬುಡಕಟ್ಟು ಜನರ ಶ್ರೇಯೋಭಿವೃದ್ಧಿಗೆ ರೂಪಿಸಿದ ಸ್ಕೀಮ್.

PMAY-G: ಪಿಎಂ ಗ್ರಾಮೀಣ ವಸತಿ ಯೋಜನೆ: 1 ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ
ಪ್ರಧಾನಿ ನರೇಂದ್ರ ಮೋದಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 16, 2024 | 10:23 AM

Share

ನವದೆಹಲಿ, ಜನವರಿ 16: ಪ್ರಧಾನಿ ನರೇಂದ್ರ ಮೋದಿ ಅವರು ಪಿಎಂ ಆವಾಸ್ ಗ್ರಾಮೀಣ ಯೋಜನೆಯ (PMAY- G) ಒಂದು ಲಕ್ಷ ಫಲಾನುಭವಿಗಳಿಗೆ ಮೊದಲ ಕಂತಿನ ಹಣ ಬಿಡುಗಡೆ ಮಾಡಿದ್ದಾರೆ. ಸಂಕ್ರಾಂತಿ ಹಬ್ಬದ ದಿನದಂದು ವಿಡಿಯೋ ಕಾನ್ಫೆರೆನ್ಸ್ ಮೂಲಕ ಹಣ ಬಿಡುಗಡೆಗೆ ಪ್ರಧಾನಿಗಳು ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಪ್ರಧಾನಿಗಳು ಪಿಎಂ ಜನಮಾನ್ ಯೋಜನೆಯ ಫಲಾನುಭವಿಗಳೊಂದಿಗೆ ಸಂವಾದ ನಡೆಸಿದರು.

ಏನಿದು ಪಿಎಂ ಜನಮಾನ್ ಯೋಜನೆ?

ಪ್ರಧಾನ ಮಂತ್ರಿ ಜನಜಾತಿ ಆದಿವಾಸಿ ನ್ಯಾಯ ಮಹಾ ಅಭಿಯಾನ್ ಯೋಜನೆ (PM JANMAN – Pradhan Mantri Janjati Adivasi Nyaya Maha Abhiyan) ಇದು. ಬಹಳ ದುರ್ಬಲ ಸ್ಥಿತಿಯಲ್ಲಿರುವ ಬುಡಕಟ್ಟು ಜನರ ಶ್ರೇಯೋಭಿವೃದ್ಧಿಗೆ ರೂಪಿಸಿದ ಸ್ಕೀಮ್ ಇದು. ಎರಡು ತಿಂಗಳ ಹಿಂದೆ 2023ರ ನವೆಂಬರ್ 15ರಂದು ಬುಡಕಟ್ಟು ಆತ್ಮಾಭಿಮಾನ ದಿನದಂದು (ಟ್ರೈಬಲ್ ಪ್ರೈಡ್ ಡೇ) ಪಿಎಂ ಜನಮಾನ್ ಯೋಜನೆಯನ್ನು ಆರಂಭಿಸಲಾಗಿತ್ತು. 24,000 ಕೋಟಿ ರೂನಷ್ಟು ಆರಂಭಿಕ ಬಜೆಟ್ ಅನ್ನು ಈ ಸ್ಕೀಮ್​ಗಾಗಿ ತೆಗೆದಿರಿಸಲಾಗಿದೆ.

ಬುಡಕಟ್ಟು ಸಮುದಾಯದವರ ಸಾಮಾಜಿಕ ಮತ್ತು ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಈ ಸ್ಕೀಮ್ ರೂಪಿಸಲಾಗಿದೆ. ಬಹಳ ಸೂಕ್ಷ್ಮ ಅಥವಾ ಅಸಹಾಯಕ ಪರಿಸ್ಥಿತಿಯಲ್ಲಿರುವ ಬುಡಕಟ್ಟು ಸಮುದಾಯಗಳನ್ನು (PVTG- Particularly Vulnerable Tribal Groups ಗುರುತಿಸಿ ಅವರನ್ನು ಮಾತ್ರ ಈ ಸ್ಕೀಮ್​​ನಲ್ಲಿ ಒಳಗೊಳ್ಳಲಾಗಿದೆ. ವಸತಿ, ಕುಡಿಯುವ ನೀರು, ಶೌಚ, ಶಿಕ್ಷಣ, ಆರೋಗ್ಯ, ಪೌಷ್ಟಿಕಾಂಶ ಲಭ್ಯತೆ, ವಿದ್ಯುತ್, ರಸ್ತೆ, ಟೆಲಿಕಾಂ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ಒದಗಿಸುವ ಗುರಿ ಇದೆ.

ಇದನ್ನೂ ಓದಿ: Green FDs: ಎಸ್​ಬಿಐನಿಂದ ಹೊಸ ಸ್ಪೆಷನ್ ಎಫ್​ಡಿ ಸ್ಕೀಮ್ ಆರಂಭ; ಗ್ರೀನ್ ರುಪೀ ಟರ್ಮ್ ಡೆಪಾಸಿಟ್ ಯೋಜನೆ ಬಗ್ಗೆ ತಿಳಿಯಿರಿ

2011ರ ಸೆನ್ಸಸ್ ಪ್ರಕಾರ ಭಾರತದಲ್ಲಿ ಪರಿಶಿಷ್ಟ ಪಂಗಡದ (ಎಸ್​ಟಿ- ಶ್ಕೆಡ್ಯೂಲ್ಡ್ ಟ್ರೈಬ್) ಜನಸಂಖ್ಯೆ 10.45 ಕೋಟಿಯಷ್ಟಿದೆ. ಅಂಡಮಾನ್ ಮತ್ತು ನಿಕೋಬಾರ್ ದ್ವೀಪದ ಸಮುದಾಯಗಳೂ ಸೇರಿದಂತೆ 19 ರಾಜ್ಯ ಹಾಗು ಕೇಂದ್ರಾಡಳಿತ ಪ್ರದೇಶಗಳಲ್ಲಿರುವ 75 ಸಮುದಾಯಗಳನ್ನು ಪಿವಿಟಿಜಿ ಎಂದು ವರ್ಗೀಕರಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ