AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Power Grid- Tata Case: ಲಂಚ ಪ್ರಕರಣದಲ್ಲಿ ಪವರ್​ ಗ್ರಿಡ್​ನ ಪ್ರಮುಖ ಅಧಿಕಾರಿ ಸೇರಿ ಇತರ ಐವರನ್ನು ಬಂಧಿಸಿದ ಸಿಬಿಐ

ಪವರ್​ ಗ್ರಿಡ್- ಟಾಟಾ ಪ್ರಾಜೆಕ್ಟ್ ಹಗರಣದಲ್ಲಿ ಪವರ್​ ಗ್ರಿಡ್​ನ ಕಾರ್ಯ ನಿರ್ವಾಹಕ ನಿರ್ದೇಶಕ ಬಿ.ಎಸ್​. ಝಾ ಸೇರಿದಂತೆ ಇತರ ಐವರನ್ನು ಸಿಬಿಐ ಬಂಧಿಸಿದೆ.

Power Grid- Tata Case: ಲಂಚ ಪ್ರಕರಣದಲ್ಲಿ ಪವರ್​ ಗ್ರಿಡ್​ನ ಪ್ರಮುಖ ಅಧಿಕಾರಿ ಸೇರಿ ಇತರ ಐವರನ್ನು ಬಂಧಿಸಿದ ಸಿಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 07, 2022 | 4:53 PM

Share

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾದ ಕಾರ್ಯ ನಿರ್ವಾಹಕ ನಿರ್ದೇಶಕರಾದ ಬಿ.ಎಸ್​.ಝಾ ಮತ್ತು ಟಾಟಾ ಪವರ್ ಪ್ರಾಜೆಕ್ಟ್​ನ ಐವರು ಅಧಿಕಾರಿಗಳನ್ನು ಕೇಂದ್ರೀಯ ತನಿಖಾ ದಳದಿಂದ (CBI) ಗುರುವಾರದಂದು ಬಂದಿಸಲಾಗಿದೆ. ಲಂಚದ ಪ್ರಕರಣದಲ್ಲಿ ಕಾರ್ಯ ನಿರ್ವಾಹಕ ಉಪಾಧ್ಯಕ್ಷ ದೇಶರಾಜ್ ಪಾಠಕ್ ಮತ್ತು ಸಹಾಯಕ ಉಪಾಧ್ಯಕ್ಷ ಆರ್​.ಎನ್. ಸಿಂಗ್​ ಅವರನ್ನು ಸಹ ಬಂಧನ ಮಾಡಲಾಗಿದೆ. ನಾರ್ಥ್ ಈಸ್ಟರ್ನ್ ರೀಜನಲ್ ಪವರ್ ಸಿಸ್ಟಮ್ ಇಂಪ್ರೂವ್​ಮೆಂಟ್ ಪ್ರಾಜೆಕ್ಟ್​ನಲ್ಲಿ ಪವರ್​ಗ್ರಿಡ್ ಭ್ರಷ್ಟಾಚಾರದ ಆರೋಪದ ಮೇಲೆ ಅಧಿಕಾರಿಗಳನ್ನು ಬಂಧಿಸಲಾಗಿದೆ. ನವದೆಹಲಿ, ಗುರುಗ್ರಾಮ್, ನೋಯ್ಡಾ ಮತ್ತು ಘಾಜಿಯಾಬಾದ್​​ನಲ್ಲಿ ಶೋಧ ಕಾರ್ಯಾಚರಣೆ ನಡೆದಿದೆ. ವರದಿಗಳ ಪ್ರಕಾರ, ಶೋಧ ಕಾರ್ಯಾಚರಣೆ ವೇಳೆಯಲ್ಲಿ ಬಿ.ಎಸ್​. ಝಾ ಅವರಿಗೆ ಸೇರಿದ ಸ್ಥಳದಿಂದ 93 ಲಕ್ಷ ರೂಪಾಯಿ ವಶಪಡಿಸಿಕೊಳ್ಳಲಾಗಿದೆ.

ಸದ್ಯಕ್ಕೆ ಝಾ ಅವರು ಇಟಾನಗರ್​ನಲ್ಲಿ ಪೋಸ್ಟಿಂಗ್​ನಲ್ಲಿದ್ದಾರೆ. ಅಕ್ರಮ ಪಾವತಿ ಪಡೆದಿದ್ದರ ಬದಲಿಯಾಗಿ ಝಾ ಅವರು ಟಾಟಾ ಪ್ರಾಜೆಕ್ಟ್​ಗಳಿಗೆ ವಿಶೇಷವಾಗಿ ಅನುಕೂಲ ಮಾಡಿಕೊಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ಆರೋಪದ ಮೇಲೆ ಬಂಧಿಸಲಾದ ಆರು ಆರೋಪಿಗಳನ್ನು ಗುರುವಾರದಂದು ಪಂಚಕುಲ ಕೋರ್ಟ್​ ಮುಂದೆ ಹಾಜರು ಮಾಡಲಾಗುವುದು.

ಪಿಟಿಐ ವರದಿ ಮಾಡಿರುವಂತೆ, ತನಿಖಾ ದಳವು ಝಾ ಅವರ ಮೇಲೆ ಕಣ್ಣಿರಿಸಿತ್ತು. ಅದಕ್ಕೂ ಮುನ್ನ ಸಿಕ್ಕ ವಿದ್ಯಮಾನದ ಪ್ರಕಾರ, ಟಾಟಾ ಪ್ರಾಜೆಕ್ಟ್ಸ್ ಮತ್ತು ಇತರ ಕಂಪೆನಿಗಳ ಅಧಿಕಾರಿಗಳಿಂದ ರುಷುವತ್ತು ಪಡೆದ ಝಾ, ವಿವಿಧ ಕೆಲಸಗಳಿಗೆ ಅನುಮತಿ ನೀಡುತ್ತಿದ್ದರು. ಎಲ್ಲೆಲ್ಲಿ ಅಕ್ರಮ ಪಾವತಿಯನ್ನು ಮಾಡಲಾಗಿತ್ತೋ ಅಲ್ಲೆಲ್ಲ ಕೇಂದ್ರೀಯ ತನಿಖಾ ದಳ ಬುಧವಾರದಂದು ಅಲ್ಲಿ ದಾಳಿ ಮಾಡಿ, ಆರೋಪಿಗಳನ್ನು ಬಂಧಿಸಿತ್ತು.

ಇದನ್ನೂ ಓದಿ: 34,615 ಕೋಟಿ ರೂಪಾಯಿ ವಂಚನೆ: ಡಿಎಚ್​ಎಫ್​ಎಲ್​, ಕಪಿಲ್- ಧೀರಜ್ ವಾಧ್ವಾನ್ ವಿರುದ್ಧ ಸಿಬಿಐ ಪ್ರಕರಣ

Published On - 4:53 pm, Thu, 7 July 22

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!