AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

PMGKAY: ಸೆಪ್ಟೆಂಬರ್​ ನಂತರ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆ ಕೊನೆ? ಏನೆನ್ನುತ್ತದೆ ಹಣಕಾಸು ಸಚಿವಾಲಯ

ಪ್ರಧಾನಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನಾ ಸೆಪ್ಟೆಂಬರ್ ಹೊತ್ತಿಗೆ ಕೊನೆ ಆಗಬಹುದು. ಅದು ಏಕೆ, ಏನು, ಎತ್ತ ಎಂಬ ವಿವರಣೆ ಇಲ್ಲಿದೆ.

PMGKAY: ಸೆಪ್ಟೆಂಬರ್​ ನಂತರ ಉಚಿತ ಆಹಾರ ಧಾನ್ಯ ವಿತರಣೆ ಯೋಜನೆ ಕೊನೆ? ಏನೆನ್ನುತ್ತದೆ ಹಣಕಾಸು ಸಚಿವಾಲಯ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 24, 2022 | 6:17 PM

Share

ಭಾರತ ಸರ್ಕಾರವು ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ್ ಅನ್ನ ಯೋಜನೆ (PMGKAY) ಅಥವಾ ಉಚಿತ ಆಹಾರ ಧಾನ್ಯ ಯೋಜನೆಯನ್ನು 2022ರ ಮಾರ್ಚ್​ನಲ್ಲಿ ಆರು ತಿಂಗಳವರೆಗೆ ಸೆಪ್ಟೆಂಬರ್​ವರೆಗೆ ವಿಸ್ತರಿಸಿದೆ. ಈ ಯೋಜನೆಯು ಮೂಲತಃ ಕೊವಿಡ್-19 ಸಾಂಕ್ರಾಮಿಕ ಸಮಯದಲ್ಲಿ ಪ್ರಾರಂಭವಾಗಿದ್ದು, 80 ಕೋಟಿಗೂ ಹೆಚ್ಚು ಜನರಿಗೆ ತಿಂಗಳಿಗೆ 5 ಕೇಜಿ ಉಚಿತ ಅಕ್ಕಿ ಅಥವಾ ಗೋಧಿ ಮತ್ತು 1 ಕೇಜಿ ಸಂಪೂರ್ಣ ಕಡಲೇಕಾಳು ಒದಗಿಸುತ್ತದೆ. ಇದು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯಡಿ ಸಬ್ಸಿಡಿ ಪಡಿತರಕ್ಕೆ ಹೆಚ್ಚುವರಿಯಾಗಿದೆ.

ಆದರೆ, ಹಣಕಾಸು ಸಚಿವಾಲಯವು ಭಾರತ ಸರ್ಕಾರಕ್ಕೆ ಇದು ಸಾಧ್ಯವಿಲ್ಲ ಎಂದಿದೆ. ಎಕನಾಮಿಕ್ ಟೈಮ್ಸ್‌ನ ವರದಿಯ ಪ್ರಕಾರ, ಸರ್ಕಾರದ ಹಣಕಾಸಿನ ಸ್ಥಿತಿಯನ್ನು ಸ್ಥಿರಗೊಳಿಸಲು ಸೆಪ್ಟೆಂಬರ್‌ನಲ್ಲಿ ಯೋಜನೆಯನ್ನು ನಿಲ್ಲಿಸಲು ಅಥವಾ ಪ್ರಮುಖ ತೆರಿಗೆ ಕಡಿತಗಳನ್ನು ಮಾಡಲು ವೆಚ್ಚ ಇಲಾಖೆಯು ಸಚಿವಾಲಯವನ್ನು ಕೇಳಿದೆ. 2022ರ ಬಜೆಟ್ ಭಾಷಣದ ಸಮಯದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು, ಹಣಕಾಸು ವರ್ಷ 2023ರ ಆಹಾರ ಸಬ್ಸಿಡಿ ಬಿಲ್ ಅನ್ನು ಕಳೆದ ವರ್ಷ 2.86 ಲಕ್ಷ ಕೋಟಿಗಳಿಂದ 2.07 ಲಕ್ಷ ಕೋಟಿ ರೂಪಾಯಿಗಳಿಗೆ ಇಳಿಸಿದರು. ಸೆಪ್ಟೆಂಬರ್​ವರೆಗೆ ಭಾರತದ ಸಬ್ಸಿಡಿ ಬಿಲ್ 2.87 ಲಕ್ಷ ಕೋಟಿ ರೂಪಾಯಿಗಳನ್ನು ತಲುಪುವ ನಿರೀಕ್ಷೆಯಿದ್ದು, ಇದು ಬಜೆಟ್ ಅನ್ನು ಮೀರಿಸುತ್ತದೆ. ಇನ್ನೂ 6 ತಿಂಗಳು ಹೋದರೆ ಬಿಲ್ 3.7 ಲಕ್ಷ ಕೋಟಿಗೆ ಏರಬಹುದು ಎಂದು ಎಕನಾಮಿಕ್ ಟೈಮ್ಸ್ ಹೇಳಿದೆ.

ಗಂಭೀರ ಹಣಕಾಸಿನ ಪರಿಸ್ಥಿತಿ

ಮಾಧ್ಯಮದ ಪ್ರಕಾರ, ದೇಶದಲ್ಲಿ ಹಣದುಬ್ಬರವನ್ನು ತಗ್ಗಿಸಲು ಕೈಗೊಂಡಿರುವ ವಿವಿಧ ಕ್ರಮಗಳು ಸರ್ಕಾರದ ಹಣಕಾಸಿನ ನೀತಿಯ ಮೇಲೆ ಹೆಚ್ಚಿನ ಒತ್ತಡಕ್ಕೆ ಕಾರಣವಾಗಿವೆ. ಇದರಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ತೆರಿಗೆ ಕಡಿತ, ರಸಗೊಬ್ಬರ ಸಬ್ಸಿಡಿ ಹೆಚ್ಚಳ, ಖಾದ್ಯ ತೈಲದ ಮೇಲಿನ ಕಸ್ಟಮ್ಸ್ ಸುಂಕ ಕಡಿತ ಮತ್ತು ಅಡುಗೆ ಅನಿಲದ ಮೇಲಿನ ಸಬ್ಸಿಡಿ ಸೇರಿವೆ. ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತದಿಂದ ಸರ್ಕಾರಕ್ಕೆ ಸುಮಾರು 1 ಸಾವಿರ ಕೋಟಿ ರೂಪಾಯಿ ಹೊರೆ ಇದೆ.

ಇದನ್ನೂ ಓದಿ: ಎಲ್​ಪಿಜಿ ಸಬ್ಸಿಡಿ ರದ್ದುಪಡಿಸಿದ ಕೇಂದ್ರ ಸರ್ಕಾರ: ಉಜ್ವಲಾ ಯೋಜನೆ ಫಲಾನುಭವಿಗಳಿಗೆ ಮಾತ್ರ ಸಹಾಯಧನ

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ