AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Price Hike: ಜಿಎಸ್​ಟಿ ಏರಿಕೆಯಿಂದಾಗಿ ಜನವರಿಯಲ್ಲಿ ಉಡುಪು, ಪಾದರಕ್ಷೆ, ಜವಳಿ ಬೆಲೆ ಹೆಚ್ಚಳ ಸಾಧ್ಯತೆ

ಹೊಸ ವರ್ಷದಿಂದ ಜಿಎಸ್​ಟಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಬಟ್ಟೆ, ಪಾದರಕ್ಷೆ, ಜವಳಿ ದರಗಳು ಏರಿಕೆ ಆಗುವ ನಿರೀಕ್ಷೆ ಇದ್ದು, ಆ ಬಗ್ಗೆ ಮಾಹಿತಿ ಇಲ್ಲಿದೆ.

Price Hike: ಜಿಎಸ್​ಟಿ ಏರಿಕೆಯಿಂದಾಗಿ ಜನವರಿಯಲ್ಲಿ ಉಡುಪು, ಪಾದರಕ್ಷೆ, ಜವಳಿ ಬೆಲೆ ಹೆಚ್ಚಳ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 20, 2021 | 11:38 AM

Share

ಜವಳಿ, ಪಾದರಕ್ಷೆಗಳು, ಉಡುಪುಗಳ ಬೆಲೆ ಮುಂದಿನ ವರ್ಷದ ಆರಂಭದಿಂದ ಏರಿಕೆ ಆಗುವ ಎಲ್ಲ ಸಾಧ್ಯತೆ ಇದೆ. ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು (CBDT) ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರವನ್ನು ಶೇ 5ರಿಂದ ಶೇ 12ಕ್ಕೆ ಹೆಚ್ಚಿಸಿ, ಅಧಿಸೂಚನೆ ಹೊರಡಿಸಿರುವುದರಿಂದ ಈ ಬೆಳವಣಿಗೆ ಆಗಲಿದೆ. ಇವುಗಳ ಮೇಲೆ ಹೆಚ್ಚಿದ ಜಿಎಸ್​ಟಿ ದರವು ಜನವರಿ 1, 2022 ರಿಂದ ಅನ್ವಯವಾಗುತ್ತದೆ. ಆದರೂ ಕೆಲವು ಸಿಂಥೆಟಿಕ್ ಫೈಬರ್‌ಗಳು ಮತ್ತು ನೂಲುಗಳ ಮೇಲಿನ ಜಿಎಸ್‌ಟಿ ದರಗಳನ್ನು ಶೇ 18ರಿಂದ ಶೇ 12ಕ್ಕೆ ಇಳಿಸಲಾಗಿದ್ದು, ಇಡೀ ಜವಳಿ ವಲಯದಾದ್ಯಂತ ದರಗಳು ಏಕರೂಪವಾಗಿವೆ. ಸುಂಕ ರಚನೆಯು ಹೇಗಾಗಲಿದೆ ಅಂದರೆ, ಸಿದ್ಧಪಡಿಸಿದ ಉತ್ಪನ್ನದ ಮೇಲಿನ ತೆರಿಗೆಗಿಂತ ಇನ್​ಪುಟ್​ ತೆರಿಗೆ ದರವು ಹೆಚ್ಚಾಗಲಿದೆ ಎಂಬುದನ್ನು ಸೂಚಿಸುತ್ತದೆ.

ಜಿಎಸ್​ಟಿ ಸಮಿತಿಯು ತನ್ನ ಸೆಪ್ಟೆಂಬರ್ ಸಭೆಯಲ್ಲಿ ಜವಳಿ ಮತ್ತು ಪಾದರಕ್ಷೆಗಳಲ್ಲಿನ ಇನ್​ವರ್ಟೆಡ್ ಸುಂಕ ರಚನೆಯನ್ನು ಸರಿಪಡಿಸಲು ತೀರ್ಮಾನ ಮಾಡಿತು. ಇದು ಜನವರಿ 1, 2022ರಂದು ಜಾರಿಗೆ ಬರಲಿದೆ ಎಂದು ಹೇಳಿದೆ. ಆದರೆ ಆ ಸಮಯದಲ್ಲಿ ಪರಿಣಾಮಕಾರಿ ದರಗಳನ್ನು ನಿರ್ಧರಿಸಿರಲಿಲ್ಲ. ಜನವರಿ 1ರಿಂದ ಯಾವುದೇ ಮೌಲ್ಯದ ಉಡುಪುಗಳ ಮೇಲಿನ ಜಿಎಸ್​ಟಿ ದರವು ಶೇ 12 ಆಗಿರುತ್ತದೆ. ಮೊದಲು ಇದು 1000 ರೂಪಾಯಿಯೊಳಗೆ ಇರುವ ಬಟ್ಟೆ ಮೇಲೆ ಶೇ 5ರಷ್ಟು ತೆರಿಗೆ ಇತ್ತು.

ತಜ್ಞರು ಈ ಕ್ರಮವನ್ನು ಶ್ಲಾಘಿಸಿದರೂ ಇನ್​ವರ್ಟೆಡ್ (ತಲೆಕೆಳಗಾದ) ಸುಂಕ ರಚನೆಯು ಜನಸಂಖ್ಯೆಯ ಒಂದು ವರ್ಗದ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಬಟ್ಟೆಗಳ ಬಗ್ಗೆ ತೆಗೆದುಕೊಂಡಿರುವ ಕ್ರಮಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. “ಜಿಎಸ್‌ಟಿ ದರ ಬದಲಾವಣೆಯು ವ್ಯಾಲ್ಯೂ ಉದ್ದಕ್ಕೂ ಶೇ 12ರ ಏಕರೂಪದ ದರದ ಖಾತೆಯಲ್ಲಿ ಇನ್ವರ್ಟೆಡ್ ಸುಂಕ ರಚನೆಯ ಸಮಸ್ಯೆಗಳು ಅಂತ್ಯಗೊಳ್ಳುವುದನ್ನು ಖಚಿತಪಡಿಸುತ್ತದೆ,” ಎಂದು ಡೆಲಾಯ್ಟ್ ಇಂಡಿಯಾದ ಹಿರಿಯ ನಿರ್ದೇಶಕ ಎಂ.ಎಸ್. ಮಣಿ ಹೇಳಿದ್ದಾರೆ.

ಇದನ್ನೂ ಓದಿ: Price Hike: ಬಟ್ಟೆ, ಎಲೆಕ್ಟ್ರಾನಿಕ್ಸ್​ನಿಂದ ಮದ್ಯದ ತನಕ ಹೊಸ ವರ್ಷದಿಂದ ಶೇ 8ರಿಂದ 10ರಷ್ಟು ಬೆಲೆ ಏರಿಕೆಗೆ ಸಿದ್ಧರಾಗಿ!

Published On - 11:38 am, Sat, 20 November 21

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ