AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Price Hike: ಜಿಎಸ್​ಟಿ ಏರಿಕೆಯಿಂದಾಗಿ ಜನವರಿಯಲ್ಲಿ ಉಡುಪು, ಪಾದರಕ್ಷೆ, ಜವಳಿ ಬೆಲೆ ಹೆಚ್ಚಳ ಸಾಧ್ಯತೆ

ಹೊಸ ವರ್ಷದಿಂದ ಜಿಎಸ್​ಟಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಬಟ್ಟೆ, ಪಾದರಕ್ಷೆ, ಜವಳಿ ದರಗಳು ಏರಿಕೆ ಆಗುವ ನಿರೀಕ್ಷೆ ಇದ್ದು, ಆ ಬಗ್ಗೆ ಮಾಹಿತಿ ಇಲ್ಲಿದೆ.

Price Hike: ಜಿಎಸ್​ಟಿ ಏರಿಕೆಯಿಂದಾಗಿ ಜನವರಿಯಲ್ಲಿ ಉಡುಪು, ಪಾದರಕ್ಷೆ, ಜವಳಿ ಬೆಲೆ ಹೆಚ್ಚಳ ಸಾಧ್ಯತೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Nov 20, 2021 | 11:38 AM

Share

ಜವಳಿ, ಪಾದರಕ್ಷೆಗಳು, ಉಡುಪುಗಳ ಬೆಲೆ ಮುಂದಿನ ವರ್ಷದ ಆರಂಭದಿಂದ ಏರಿಕೆ ಆಗುವ ಎಲ್ಲ ಸಾಧ್ಯತೆ ಇದೆ. ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು (CBDT) ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರವನ್ನು ಶೇ 5ರಿಂದ ಶೇ 12ಕ್ಕೆ ಹೆಚ್ಚಿಸಿ, ಅಧಿಸೂಚನೆ ಹೊರಡಿಸಿರುವುದರಿಂದ ಈ ಬೆಳವಣಿಗೆ ಆಗಲಿದೆ. ಇವುಗಳ ಮೇಲೆ ಹೆಚ್ಚಿದ ಜಿಎಸ್​ಟಿ ದರವು ಜನವರಿ 1, 2022 ರಿಂದ ಅನ್ವಯವಾಗುತ್ತದೆ. ಆದರೂ ಕೆಲವು ಸಿಂಥೆಟಿಕ್ ಫೈಬರ್‌ಗಳು ಮತ್ತು ನೂಲುಗಳ ಮೇಲಿನ ಜಿಎಸ್‌ಟಿ ದರಗಳನ್ನು ಶೇ 18ರಿಂದ ಶೇ 12ಕ್ಕೆ ಇಳಿಸಲಾಗಿದ್ದು, ಇಡೀ ಜವಳಿ ವಲಯದಾದ್ಯಂತ ದರಗಳು ಏಕರೂಪವಾಗಿವೆ. ಸುಂಕ ರಚನೆಯು ಹೇಗಾಗಲಿದೆ ಅಂದರೆ, ಸಿದ್ಧಪಡಿಸಿದ ಉತ್ಪನ್ನದ ಮೇಲಿನ ತೆರಿಗೆಗಿಂತ ಇನ್​ಪುಟ್​ ತೆರಿಗೆ ದರವು ಹೆಚ್ಚಾಗಲಿದೆ ಎಂಬುದನ್ನು ಸೂಚಿಸುತ್ತದೆ.

ಜಿಎಸ್​ಟಿ ಸಮಿತಿಯು ತನ್ನ ಸೆಪ್ಟೆಂಬರ್ ಸಭೆಯಲ್ಲಿ ಜವಳಿ ಮತ್ತು ಪಾದರಕ್ಷೆಗಳಲ್ಲಿನ ಇನ್​ವರ್ಟೆಡ್ ಸುಂಕ ರಚನೆಯನ್ನು ಸರಿಪಡಿಸಲು ತೀರ್ಮಾನ ಮಾಡಿತು. ಇದು ಜನವರಿ 1, 2022ರಂದು ಜಾರಿಗೆ ಬರಲಿದೆ ಎಂದು ಹೇಳಿದೆ. ಆದರೆ ಆ ಸಮಯದಲ್ಲಿ ಪರಿಣಾಮಕಾರಿ ದರಗಳನ್ನು ನಿರ್ಧರಿಸಿರಲಿಲ್ಲ. ಜನವರಿ 1ರಿಂದ ಯಾವುದೇ ಮೌಲ್ಯದ ಉಡುಪುಗಳ ಮೇಲಿನ ಜಿಎಸ್​ಟಿ ದರವು ಶೇ 12 ಆಗಿರುತ್ತದೆ. ಮೊದಲು ಇದು 1000 ರೂಪಾಯಿಯೊಳಗೆ ಇರುವ ಬಟ್ಟೆ ಮೇಲೆ ಶೇ 5ರಷ್ಟು ತೆರಿಗೆ ಇತ್ತು.

ತಜ್ಞರು ಈ ಕ್ರಮವನ್ನು ಶ್ಲಾಘಿಸಿದರೂ ಇನ್​ವರ್ಟೆಡ್ (ತಲೆಕೆಳಗಾದ) ಸುಂಕ ರಚನೆಯು ಜನಸಂಖ್ಯೆಯ ಒಂದು ವರ್ಗದ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಬಟ್ಟೆಗಳ ಬಗ್ಗೆ ತೆಗೆದುಕೊಂಡಿರುವ ಕ್ರಮಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. “ಜಿಎಸ್‌ಟಿ ದರ ಬದಲಾವಣೆಯು ವ್ಯಾಲ್ಯೂ ಉದ್ದಕ್ಕೂ ಶೇ 12ರ ಏಕರೂಪದ ದರದ ಖಾತೆಯಲ್ಲಿ ಇನ್ವರ್ಟೆಡ್ ಸುಂಕ ರಚನೆಯ ಸಮಸ್ಯೆಗಳು ಅಂತ್ಯಗೊಳ್ಳುವುದನ್ನು ಖಚಿತಪಡಿಸುತ್ತದೆ,” ಎಂದು ಡೆಲಾಯ್ಟ್ ಇಂಡಿಯಾದ ಹಿರಿಯ ನಿರ್ದೇಶಕ ಎಂ.ಎಸ್. ಮಣಿ ಹೇಳಿದ್ದಾರೆ.

ಇದನ್ನೂ ಓದಿ: Price Hike: ಬಟ್ಟೆ, ಎಲೆಕ್ಟ್ರಾನಿಕ್ಸ್​ನಿಂದ ಮದ್ಯದ ತನಕ ಹೊಸ ವರ್ಷದಿಂದ ಶೇ 8ರಿಂದ 10ರಷ್ಟು ಬೆಲೆ ಏರಿಕೆಗೆ ಸಿದ್ಧರಾಗಿ!

Published On - 11:38 am, Sat, 20 November 21

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ