Price Hike: ಜಿಎಸ್​ಟಿ ಏರಿಕೆಯಿಂದಾಗಿ ಜನವರಿಯಲ್ಲಿ ಉಡುಪು, ಪಾದರಕ್ಷೆ, ಜವಳಿ ಬೆಲೆ ಹೆಚ್ಚಳ ಸಾಧ್ಯತೆ

ಹೊಸ ವರ್ಷದಿಂದ ಜಿಎಸ್​ಟಿ ದರ ಹೆಚ್ಚಳದ ಹಿನ್ನೆಲೆಯಲ್ಲಿ ಬಟ್ಟೆ, ಪಾದರಕ್ಷೆ, ಜವಳಿ ದರಗಳು ಏರಿಕೆ ಆಗುವ ನಿರೀಕ್ಷೆ ಇದ್ದು, ಆ ಬಗ್ಗೆ ಮಾಹಿತಿ ಇಲ್ಲಿದೆ.

Price Hike: ಜಿಎಸ್​ಟಿ ಏರಿಕೆಯಿಂದಾಗಿ ಜನವರಿಯಲ್ಲಿ ಉಡುಪು, ಪಾದರಕ್ಷೆ, ಜವಳಿ ಬೆಲೆ ಹೆಚ್ಚಳ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
| Updated By: Srinivas Mata

Updated on:Nov 20, 2021 | 11:38 AM

ಜವಳಿ, ಪಾದರಕ್ಷೆಗಳು, ಉಡುಪುಗಳ ಬೆಲೆ ಮುಂದಿನ ವರ್ಷದ ಆರಂಭದಿಂದ ಏರಿಕೆ ಆಗುವ ಎಲ್ಲ ಸಾಧ್ಯತೆ ಇದೆ. ಕೇಂದ್ರೀಯ ಪರೋಕ್ಷ ತೆರಿಗೆಗಳ ಮಂಡಳಿಯು (CBDT) ಸರಕು ಮತ್ತು ಸೇವಾ ತೆರಿಗೆ (ಜಿಎಸ್‌ಟಿ) ದರವನ್ನು ಶೇ 5ರಿಂದ ಶೇ 12ಕ್ಕೆ ಹೆಚ್ಚಿಸಿ, ಅಧಿಸೂಚನೆ ಹೊರಡಿಸಿರುವುದರಿಂದ ಈ ಬೆಳವಣಿಗೆ ಆಗಲಿದೆ. ಇವುಗಳ ಮೇಲೆ ಹೆಚ್ಚಿದ ಜಿಎಸ್​ಟಿ ದರವು ಜನವರಿ 1, 2022 ರಿಂದ ಅನ್ವಯವಾಗುತ್ತದೆ. ಆದರೂ ಕೆಲವು ಸಿಂಥೆಟಿಕ್ ಫೈಬರ್‌ಗಳು ಮತ್ತು ನೂಲುಗಳ ಮೇಲಿನ ಜಿಎಸ್‌ಟಿ ದರಗಳನ್ನು ಶೇ 18ರಿಂದ ಶೇ 12ಕ್ಕೆ ಇಳಿಸಲಾಗಿದ್ದು, ಇಡೀ ಜವಳಿ ವಲಯದಾದ್ಯಂತ ದರಗಳು ಏಕರೂಪವಾಗಿವೆ. ಸುಂಕ ರಚನೆಯು ಹೇಗಾಗಲಿದೆ ಅಂದರೆ, ಸಿದ್ಧಪಡಿಸಿದ ಉತ್ಪನ್ನದ ಮೇಲಿನ ತೆರಿಗೆಗಿಂತ ಇನ್​ಪುಟ್​ ತೆರಿಗೆ ದರವು ಹೆಚ್ಚಾಗಲಿದೆ ಎಂಬುದನ್ನು ಸೂಚಿಸುತ್ತದೆ.

ಜಿಎಸ್​ಟಿ ಸಮಿತಿಯು ತನ್ನ ಸೆಪ್ಟೆಂಬರ್ ಸಭೆಯಲ್ಲಿ ಜವಳಿ ಮತ್ತು ಪಾದರಕ್ಷೆಗಳಲ್ಲಿನ ಇನ್​ವರ್ಟೆಡ್ ಸುಂಕ ರಚನೆಯನ್ನು ಸರಿಪಡಿಸಲು ತೀರ್ಮಾನ ಮಾಡಿತು. ಇದು ಜನವರಿ 1, 2022ರಂದು ಜಾರಿಗೆ ಬರಲಿದೆ ಎಂದು ಹೇಳಿದೆ. ಆದರೆ ಆ ಸಮಯದಲ್ಲಿ ಪರಿಣಾಮಕಾರಿ ದರಗಳನ್ನು ನಿರ್ಧರಿಸಿರಲಿಲ್ಲ. ಜನವರಿ 1ರಿಂದ ಯಾವುದೇ ಮೌಲ್ಯದ ಉಡುಪುಗಳ ಮೇಲಿನ ಜಿಎಸ್​ಟಿ ದರವು ಶೇ 12 ಆಗಿರುತ್ತದೆ. ಮೊದಲು ಇದು 1000 ರೂಪಾಯಿಯೊಳಗೆ ಇರುವ ಬಟ್ಟೆ ಮೇಲೆ ಶೇ 5ರಷ್ಟು ತೆರಿಗೆ ಇತ್ತು.

ತಜ್ಞರು ಈ ಕ್ರಮವನ್ನು ಶ್ಲಾಘಿಸಿದರೂ ಇನ್​ವರ್ಟೆಡ್ (ತಲೆಕೆಳಗಾದ) ಸುಂಕ ರಚನೆಯು ಜನಸಂಖ್ಯೆಯ ಒಂದು ವರ್ಗದ ಮೇಲೆ ಮಾತ್ರ ಪರಿಣಾಮ ಬೀರುತ್ತದೆ ಎಂದು ಬಟ್ಟೆಗಳ ಬಗ್ಗೆ ತೆಗೆದುಕೊಂಡಿರುವ ಕ್ರಮಕ್ಕೆ ಅಸಮಾಧಾನವನ್ನು ವ್ಯಕ್ತಪಡಿಸಿದ್ದಾರೆ. “ಜಿಎಸ್‌ಟಿ ದರ ಬದಲಾವಣೆಯು ವ್ಯಾಲ್ಯೂ ಉದ್ದಕ್ಕೂ ಶೇ 12ರ ಏಕರೂಪದ ದರದ ಖಾತೆಯಲ್ಲಿ ಇನ್ವರ್ಟೆಡ್ ಸುಂಕ ರಚನೆಯ ಸಮಸ್ಯೆಗಳು ಅಂತ್ಯಗೊಳ್ಳುವುದನ್ನು ಖಚಿತಪಡಿಸುತ್ತದೆ,” ಎಂದು ಡೆಲಾಯ್ಟ್ ಇಂಡಿಯಾದ ಹಿರಿಯ ನಿರ್ದೇಶಕ ಎಂ.ಎಸ್. ಮಣಿ ಹೇಳಿದ್ದಾರೆ.

ಇದನ್ನೂ ಓದಿ: Price Hike: ಬಟ್ಟೆ, ಎಲೆಕ್ಟ್ರಾನಿಕ್ಸ್​ನಿಂದ ಮದ್ಯದ ತನಕ ಹೊಸ ವರ್ಷದಿಂದ ಶೇ 8ರಿಂದ 10ರಷ್ಟು ಬೆಲೆ ಏರಿಕೆಗೆ ಸಿದ್ಧರಾಗಿ!

Published On - 11:38 am, Sat, 20 November 21

ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ನವರಾತ್ರಿ ಉತ್ಸವದಲ್ಲಿ ಕಣ್ಮನ ಸೆಳೆದ ಕಾಂತಾರ ಚಿತ್ರದ ಪಂಜುರ್ಲಿ ನೃತ್ಯ
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ಇದು ಮೌನವಾಗಿರುವ ಕಾಲ: ಜೈಲಿಂದ ಹೊರಬಂದ ಮುರುಘಾಶ್ರೀ ಮೊದಲ ಮಾತು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ನರಕದ ನೋವು ಹೆಚ್ಚಲು ಕಾರಣವಾದ ಚೈತ್ರಾ ಕುಂದಾಪುರ? ಎಲ್ಲ ಮುಗಿದ ಬಳಿಕ ಅಳು
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಒಳ ಉಡುಪಿನ ವಿಷಯ ಪ್ರಸ್ತಾಪಿಸಿ ಮಹಿಳಾ ಸ್ಪರ್ಧಿಗಳಿಗೆ ಮುಜುಗರ ತಂದ ಜಗದೀಶ್
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ಬೆಂಗಳೂರು: ನಿಂತಿದ್ದ ಮಹಿಳೆ ಮೇಲೆ ವಿದ್ಯುತ್ ಲೈನ್ ಬಿದ್ದು ಸಾವು
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ರೋಹಿತ್ ಶರ್ಮಾ ಸ್ಟೈಲ್​ನಲ್ಲಿ ಟ್ರೋಫಿ ಎತ್ತಿ ಹಿಡಿದ ಫಾಫ್ ಡುಪ್ಲೆಸಿಸ್
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ದರ್ಶನ್​ಗೆ ಬೆನ್ನು ನೋವು; ಪತಿಯನ್ನು ನೋಡಲು ಜೈಲಿಗೆ ಬಂದ ವಿಜಯಲಕ್ಷ್ಮೀ  
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಉಡುಪಿ ಹೆಬ್ರಿಯಲ್ಲಿ ಮೇಘ ಸ್ಫೋಟ: ಮನೆ, ಕೃಷಿ ಜಮೀನಿಗೆ ನೀರು ನುಗ್ಗಿ ಅವಾಂತರ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಬಿಗ್ ಬಾಸ್​ನಲ್ಲಿ ಮಸಿ ಬಳಿಯೋ ಟಾಸ್ಕ್; ಮತ್ತದೇ ಕಿರುಚಾಟ, ಕಿತ್ತಾಟ
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು
ಚೆನ್ನೈ ಏರ್​ ಶೋ, ಉಸಿರುಗಟ್ಟಿ 5 ಮಂದಿ ಸಾವು