AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿರಾಜ್ ಸಿಂಗ್ ಓಬೇರಾಯ್ ನಿಧನ; ಓಬೇರಾಯ್ ಹೋಟೆಲ್​ಗಳಿಗೆ ಹೊಸ ಎತ್ತರ ಕಲ್ಪಿಸಿದ ಧೀಮಂತ

Prithvi Raj Singh Oberoi Death: ಪೃಥ್ವಿರಾಜ್ ಸಿಂಗ್ ಓಬೇರಾಯ್ ಇಂದು ಮಂಗಳವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಸೇರಿದಂತೆ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿರುವುದು ತಿಳಿದುಬಂದಿದೆ. ಓಬೇರಾಯ್ ಗ್ರೂಪ್​ನ ಲಕ್ಷುರಿ ಹೋಟೆಲ್ ಮತ್ತು ರೆಸಾರ್ಟ್​ಗಳ ವ್ಯವಹಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶ್ರೇಯಸ್ಸು ಪೃಥ್ವಿರಾಜ್ ಅವರಿಗೆ ಸಲ್ಲಬೇಕು.

ಪೃಥ್ವಿರಾಜ್ ಸಿಂಗ್ ಓಬೇರಾಯ್ ನಿಧನ; ಓಬೇರಾಯ್ ಹೋಟೆಲ್​ಗಳಿಗೆ ಹೊಸ ಎತ್ತರ ಕಲ್ಪಿಸಿದ ಧೀಮಂತ
ಪೃಥ್ವಿರಾಜ್ ಒಬೇರಾಯ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 14, 2023 | 10:53 AM

Share

ನವದೆಹಲಿ, ನವೆಂಬರ್ 14: ಖ್ಯಾತ ಓಬೇರಾಯ್ ಹೋಟೆಲ್ಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ (Prithvi Raj Singh Oberoi) ಇಂದು ಮಂಗಳವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಸೇರಿದಂತೆ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿರುವುದು ತಿಳಿದುಬಂದಿದೆ.

ಪೃಥ್ವಿರಾಜ್ ಒಬೇರಾಯ್ ಅವರು ಕೆಲ ವರ್ಷಗಳಿಂದ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದರು. ಓಬೇರಾಯ್ ಗ್ರೂಪ್​ನ ಮಾಲೀಕ ಸಂಸ್ಥೆಯಾದ ಇಐಎಚ್ (ಈಸ್ಟ್ ಇಂಡಿಯಾ ಹೋಟೆಲ್ಸ್) ಲಿ ಸಂಸ್ಥೆಗೆ ಅವರು 2002ರಿಂದ 2013ರವರೆಗೂ ಛೇರ್ಮನ್ ಆಗಿ ಕಾರ್ಯನಿರ್ವಹಿಸಿದ್ದರು. ಓಬೇರಾಯ್ ಗ್ರೂಪ್​ನ ಲಕ್ಷುರಿ ಹೋಟೆಲ್ ಮತ್ತು ರೆಸಾರ್ಟ್​ಗಳ ವ್ಯವಹಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶ್ರೇಯಸ್ಸು ಪೃಥ್ವಿರಾಜ್ ಅವರಿಗೆ ಸಲ್ಲಬೇಕು.

ಓಬೇರಾಯ್ ಗ್ರೂಪ್​ನ ಸಂಸ್ಥಾಪಕ ಅಧ್ಯಕ್ಷ ಮೋಹನ್ ಸಿಂಗ್ ಒಬೇರಾಯ್ ಅವರ ಮಗನಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ ಅವರಿಗೆ ಸರ್ಕಾರ 2008ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 2013ರಲ್ಲಿ ಸಂಸ್ಥೆಯ ಛೇರ್ಮನ್ ಸ್ಥಾನ ತ್ಯಜಿಸಿ ಗೌರವಾಧ್ಯಕ್ಷರಾಗಿದ್ದರು. ಅವರ ಮಗ ವಿಕ್ರಮ್ ಎಸ್ ಓಬೇರಾಯ್ ಅವರು ಈಸ್ಟ್ ಇಂಡಿಯಾ ಹೋಟೆಲ್ಸ್ ಸಂಸ್ಥೆಯ ಸಿಇಒ ಮತ್ತು ಎಂಡಿಯಾಗಿದ್ದಾರೆ.

ಇದನ್ನೂ ಓದಿ: ರೇಮಂಡ್ ಸಂಸ್ಥೆ ಛೇರ್ಮನ್ ಗೌತಮ್ ಸಿಂಘಾನಿಯಾ, ನವಾಜ್ ಮೋದಿ 32 ವರ್ಷದ ದಾಂಪತ್ಯ ಅಂತ್ಯ; ನಮ್ಮಿಬ್ಬರದ್ದೀಗ ಬೇರೆ ದಾರಿ ಎಂದ ಸಿಂಘಾನಿಯಾ

ಉತ್ತರಾಖಂಡ್​ನ ದಾರ್ಜೀಲಿಂಗ್​ನಲ್ಲಿ ಶಾಲಾ ಶಿಕ್ಷಣ ಪಡೆದಿದ್ದ ಪೃಥ್ವಿರಾಜ್ ಸಿಂಗ್ ಒಬೇರಾಯ್ ಅವರು ಬ್ರಿಟನ್ ಮತ್ತು ಸ್ವಿಟ್ಜರ್​ಲ್ಯಾಂಡ್​ನಲ್ಲಿ ವೃತ್ತಿಪರ ಮತ್ತು ಉನ್ನತ ಶಿಕ್ಷಣ ಪಡೆದಿದ್ದರು. ಸ್ವಿಟ್ಜರ್​ಲ್ಯಾಂಡ್​ನ ಲೌಸಾನೆಯಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಶಿಕ್ಷಣ ಕೂಡ ಪಡೆದಿದ್ದ ಅವರು 2004ರಿಂದ ಜೆಟ್ ಏರ್ವೇಸ್​ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಜಾಗತಿಕ ಹೋಟೆಲ್ ಉದ್ಯಮದಲ್ಲಿ 100 ಅತಿ ಪ್ರಬಲ ವ್ಯಕ್ತಿಗಳಲ್ಲಿ ಪೃಥ್ವಿರಾಜ್ ಓಬೇರಾಯ್ ಕೂಡ ಒಬ್ಬರೆಂದು ಇಂಟರ್ನ್ಯಾಷನಲ್ ಹಾಸ್ಪಿಟಾಲಿಟಿ ಇನ್ಸ್​ಟಿಟ್ಯೂಟ್ ಪರಿಗಣಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:49 am, Tue, 14 November 23

ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ