AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೃಥ್ವಿರಾಜ್ ಸಿಂಗ್ ಓಬೇರಾಯ್ ನಿಧನ; ಓಬೇರಾಯ್ ಹೋಟೆಲ್​ಗಳಿಗೆ ಹೊಸ ಎತ್ತರ ಕಲ್ಪಿಸಿದ ಧೀಮಂತ

Prithvi Raj Singh Oberoi Death: ಪೃಥ್ವಿರಾಜ್ ಸಿಂಗ್ ಓಬೇರಾಯ್ ಇಂದು ಮಂಗಳವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಸೇರಿದಂತೆ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿರುವುದು ತಿಳಿದುಬಂದಿದೆ. ಓಬೇರಾಯ್ ಗ್ರೂಪ್​ನ ಲಕ್ಷುರಿ ಹೋಟೆಲ್ ಮತ್ತು ರೆಸಾರ್ಟ್​ಗಳ ವ್ಯವಹಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶ್ರೇಯಸ್ಸು ಪೃಥ್ವಿರಾಜ್ ಅವರಿಗೆ ಸಲ್ಲಬೇಕು.

ಪೃಥ್ವಿರಾಜ್ ಸಿಂಗ್ ಓಬೇರಾಯ್ ನಿಧನ; ಓಬೇರಾಯ್ ಹೋಟೆಲ್​ಗಳಿಗೆ ಹೊಸ ಎತ್ತರ ಕಲ್ಪಿಸಿದ ಧೀಮಂತ
ಪೃಥ್ವಿರಾಜ್ ಒಬೇರಾಯ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Nov 14, 2023 | 10:53 AM

Share

ನವದೆಹಲಿ, ನವೆಂಬರ್ 14: ಖ್ಯಾತ ಓಬೇರಾಯ್ ಹೋಟೆಲ್ಸ್ ಸಂಸ್ಥೆಯ ಗೌರವಾಧ್ಯಕ್ಷರಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ (Prithvi Raj Singh Oberoi) ಇಂದು ಮಂಗಳವಾರ ನಿಧನರಾಗಿದ್ದಾರೆ. ಇಬ್ಬರು ಪುತ್ರಿಯರು ಸೇರಿದಂತೆ ಅವರು ಮೂವರು ಮಕ್ಕಳನ್ನು ಅಗಲಿದ್ದಾರೆ. ಅವರಿಗೆ 94 ವರ್ಷ ವಯಸ್ಸಾಗಿತ್ತು. ವಯೋಸಹಜ ಅನಾರೋಗ್ಯ ಸಮಸ್ಯೆಯಿಂದ ಅವರು ಸಾವನ್ನಪ್ಪಿರುವುದು ತಿಳಿದುಬಂದಿದೆ.

ಪೃಥ್ವಿರಾಜ್ ಒಬೇರಾಯ್ ಅವರು ಕೆಲ ವರ್ಷಗಳಿಂದ ಸಂಸ್ಥೆಯ ಗೌರವಾಧ್ಯಕ್ಷರಾಗಿದ್ದರು. ಓಬೇರಾಯ್ ಗ್ರೂಪ್​ನ ಮಾಲೀಕ ಸಂಸ್ಥೆಯಾದ ಇಐಎಚ್ (ಈಸ್ಟ್ ಇಂಡಿಯಾ ಹೋಟೆಲ್ಸ್) ಲಿ ಸಂಸ್ಥೆಗೆ ಅವರು 2002ರಿಂದ 2013ರವರೆಗೂ ಛೇರ್ಮನ್ ಆಗಿ ಕಾರ್ಯನಿರ್ವಹಿಸಿದ್ದರು. ಓಬೇರಾಯ್ ಗ್ರೂಪ್​ನ ಲಕ್ಷುರಿ ಹೋಟೆಲ್ ಮತ್ತು ರೆಸಾರ್ಟ್​ಗಳ ವ್ಯವಹಾರವನ್ನು ಹೊಸ ಎತ್ತರಕ್ಕೆ ಕೊಂಡೊಯ್ದ ಶ್ರೇಯಸ್ಸು ಪೃಥ್ವಿರಾಜ್ ಅವರಿಗೆ ಸಲ್ಲಬೇಕು.

ಓಬೇರಾಯ್ ಗ್ರೂಪ್​ನ ಸಂಸ್ಥಾಪಕ ಅಧ್ಯಕ್ಷ ಮೋಹನ್ ಸಿಂಗ್ ಒಬೇರಾಯ್ ಅವರ ಮಗನಾದ ಪೃಥ್ವಿರಾಜ್ ಸಿಂಗ್ ಓಬೇರಾಯ್ ಅವರಿಗೆ ಸರ್ಕಾರ 2008ರಲ್ಲಿ ಪದ್ಮವಿಭೂಷಣ ಪ್ರಶಸ್ತಿ ನೀಡಿ ಗೌರವಿಸಿತ್ತು. 2013ರಲ್ಲಿ ಸಂಸ್ಥೆಯ ಛೇರ್ಮನ್ ಸ್ಥಾನ ತ್ಯಜಿಸಿ ಗೌರವಾಧ್ಯಕ್ಷರಾಗಿದ್ದರು. ಅವರ ಮಗ ವಿಕ್ರಮ್ ಎಸ್ ಓಬೇರಾಯ್ ಅವರು ಈಸ್ಟ್ ಇಂಡಿಯಾ ಹೋಟೆಲ್ಸ್ ಸಂಸ್ಥೆಯ ಸಿಇಒ ಮತ್ತು ಎಂಡಿಯಾಗಿದ್ದಾರೆ.

ಇದನ್ನೂ ಓದಿ: ರೇಮಂಡ್ ಸಂಸ್ಥೆ ಛೇರ್ಮನ್ ಗೌತಮ್ ಸಿಂಘಾನಿಯಾ, ನವಾಜ್ ಮೋದಿ 32 ವರ್ಷದ ದಾಂಪತ್ಯ ಅಂತ್ಯ; ನಮ್ಮಿಬ್ಬರದ್ದೀಗ ಬೇರೆ ದಾರಿ ಎಂದ ಸಿಂಘಾನಿಯಾ

ಉತ್ತರಾಖಂಡ್​ನ ದಾರ್ಜೀಲಿಂಗ್​ನಲ್ಲಿ ಶಾಲಾ ಶಿಕ್ಷಣ ಪಡೆದಿದ್ದ ಪೃಥ್ವಿರಾಜ್ ಸಿಂಗ್ ಒಬೇರಾಯ್ ಅವರು ಬ್ರಿಟನ್ ಮತ್ತು ಸ್ವಿಟ್ಜರ್​ಲ್ಯಾಂಡ್​ನಲ್ಲಿ ವೃತ್ತಿಪರ ಮತ್ತು ಉನ್ನತ ಶಿಕ್ಷಣ ಪಡೆದಿದ್ದರು. ಸ್ವಿಟ್ಜರ್​ಲ್ಯಾಂಡ್​ನ ಲೌಸಾನೆಯಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ಶಿಕ್ಷಣ ಕೂಡ ಪಡೆದಿದ್ದ ಅವರು 2004ರಿಂದ ಜೆಟ್ ಏರ್ವೇಸ್​ನ ನಿರ್ದೇಶಕರಾಗಿಯೂ ಸೇವೆ ಸಲ್ಲಿಸಿದ್ದರು. ಜಾಗತಿಕ ಹೋಟೆಲ್ ಉದ್ಯಮದಲ್ಲಿ 100 ಅತಿ ಪ್ರಬಲ ವ್ಯಕ್ತಿಗಳಲ್ಲಿ ಪೃಥ್ವಿರಾಜ್ ಓಬೇರಾಯ್ ಕೂಡ ಒಬ್ಬರೆಂದು ಇಂಟರ್ನ್ಯಾಷನಲ್ ಹಾಸ್ಪಿಟಾಲಿಟಿ ಇನ್ಸ್​ಟಿಟ್ಯೂಟ್ ಪರಿಗಣಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:49 am, Tue, 14 November 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​