AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Privatise all PSBs: ಎಸ್​ಬಿಐ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಶಿಫಾರಸು

‘ಕೇಂದ್ರ ಸರ್ಕಾರವು ಈಗಾಗಲೇ ಎರಡು ಬ್ಯಾಂಕ್​ಗಳ ಖಾಸಗೀಕರಣಕ್ಕೆ ಒಲವು ತೋರಿದೆ’ ಎಂದು ರಾಷ್ಟ್ರೀಯ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ.

Privatise all PSBs: ಎಸ್​ಬಿಐ ಹೊರತುಪಡಿಸಿ ಉಳಿದೆಲ್ಲ ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣಕ್ಕೆ ಶಿಫಾರಸು
ಸಾಂದರ್ಭಿಕ ಚಿತ್ರ
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Jul 13, 2022 | 11:19 AM

ಮುಂಬೈ: ಕೇಂದ್ರ ಸರ್ಕಾರವು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (State Bank of India – SBI) ಹೊರತುಪಡಿಸಿ ಉಳಿದೆಲ್ಲಾ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್​ಗಳನ್ನು (Public Sector Banks – PSBs) ಖಾಸಗೀಕರಣ ಮಾಡಬೇಕು ಎಂದು ರಾಷ್ಟ್ರೀಯ ಆನ್ವಯಿಕ ಅರ್ಥಶಾಸ್ತ್ರ ಸಂಶೋಧನಾ ಮಂಡಳಿಯ (National Council of Applied Economic Research – NCAER) ಪ್ರಧಾನ ನಿರ್ದೇಶಕ ಮತ್ತು ಪ್ರಧಾನಿಯ ಆರ್ಥಿಕ ಸಲಹಾ ಮಂಡಳಿಯ ಸದಸ್ಯ ಪೂನಮ್ ಗುಪ್ತ ಹಾಗೂ ನೀತಿ ಆಯೋಗದ ಮಾಜಿ ಉಪಾಧ್ಯಕ್ಷ ಹಾಗೂ ಕೊಲಂಬಿಯಾ ವಿವಿ ಪ್ರಾಧ್ಯಾಪಕ ಅರವಿಂದ್ ಪನಗರಿಯಾ ಶಿಫಾರಸು ಮಾಡಿದ್ದಾರೆ.

‘ಸಾರ್ವಜನಿಕ ಸ್ವಾಮ್ಯದ ಎಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಆದರೆ ಭಾರತದ ಆರ್ಥಿಕತೆಯ ವಿಶೇಷ ಅಗತ್ಯಗಳು ಮತ್ತು ರಾಜಕೀಯ ಸಿದ್ಧಾಂತಗಳ ಹಿನ್ನೆಲೆಯಲ್ಲಿ ಸರ್ಕಾರವು ಒಂದಾದರೂ ಬ್ಯಾಂಕ್ ತನ್ನ ಸುಪರ್ದಿಯಲ್ಲಿ ಇರಬೇಕೆಂದು ಬಯಸುವುದು ಸಹಜವಾಗಿದೆ. ತನ್ನ ಗಾತ್ರ, ಕಾರ್ಯಕ್ಷಮತೆಯ ದೃಷ್ಟಿಯಿಂದ ಗಮನಾರ್ಹ ಎನಿಸಿರುವ ಎಸ್​ಬಿಐ ಒಂದನ್ನು ಸರ್ಕಾರ ಸದ್ಯದ ಮಟ್ಟಿಗೆ ತನ್ನ ಮಾಲೀಕತ್ವದಲ್ಲಿ ಉಳಿಸಿಕೊಂಡು, ಉಳಿದೆಲ್ಲ ಬ್ಯಾಂಕ್​ಗಳನ್ನು ಖಾಸಗೀಕರಣ ಮಾಡಬೇಕು ಎಂದು ನಾವು ಪ್ರಸ್ತಾಪಿಸುತ್ತೇವೆ’ ಎಂದು ಅವರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ. ಈ ವರದಿಗೆ ‘ಭಾರತದ ಸರ್ಕಾರಿ ಬ್ಯಾಂಕ್​ಗಳ ಖಾಸಗೀಕರಣ ಏಕೆ, ಹೇಗೆ ಮತ್ತು ಎಷ್ಟರಮಟ್ಟಿಗೆ’ (Privatization of Public Sector Banks in India Why, How and How Far) ಎಂದು ಶೀರ್ಷಿಕೆ ಕೊಡಲಾಗಿದೆ.

‘ಬ್ಯಾಂಕ್​ಗಳ ಖಾಸಗೀಕರಣ ಪ್ರಕ್ರಿಯೆಯನ್ನು ಸರ್ಕಾರವು ಎರಡು ಪ್ರಬಲ ಬ್ಯಾಂಕ್​ಗಳ ಮೂಲಕ ಆರಂಭಿಸಬೇಕು. ಪ್ರಸ್ತುತ ಭಾರತದಲ್ಲಿ 11 ಸರ್ಕಾರಿ ಬ್ಯಾಂಕ್​ಗಳು ಕಾರ್ಯನಿರ್ವಹಿಸುತ್ತಿವೆ. ಈ ಎಲ್ಲವನ್ನೂ ಖಾಸಗೀಕರಣ ಮಾಡಬೇಕು ಎಂದು ನಾವು ಶಿಫಾರಸು ಮಾಡುತ್ತೇವೆ. ಆದರೆ ಖಾಸಗೀಕರಣ ಪ್ರಕ್ರಿಯೆಗೆ ಆಯ್ಕೆ ಮಾಡಿಕೊಳ್ಳುವ ಮೊದಲ ಎರಡು ಬ್ಯಾಂಕ್​ಗಳಿಗೆ ಉದ್ಯಮಿಗಳಿಂದ ಸಿಗುವ ಸ್ಪಂದನೆಯು ಮುಂದಿನ ದಿನಗಳಲ್ಲಿ ಇತರ ಬ್ಯಾಂಕ್​ಗಳ ಖಾಸಗೀಕರಣ ಪ್ರಕ್ರಿಯೆಯ ಭವಿಷ್ಯ ನಿರ್ಣಯಿಸುತ್ತದೆ’ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

‘ಕಳೆದ ಐದು ವರ್ಷಗಳ ಲೆಕ್ಕಾಚಾರದಲ್ಲಿ ಅತಿಹೆಚ್ಚು ಲಾಭ ಗಳಿಸಿರುವ, ಉತ್ತಮ ಗುಣಮಟ್ಟದ ಆಸ್ತಿ, ಷೇರುಮೌಲ್ಯ ಹೊಂದಿರುವ ಹಾಗೂ ಅತಿಕಡಿಮೆ ಎನ್​ಪಿಎ (ವಸೂಲಾಗದ ಸಾಲ) ಪ್ರಮಾಣ ಹೊಂದಿರುವ ಎರಡು ಬ್ಯಾಂಕ್​ಗಳನ್ನು ಖಾಸಗೀಕರಣ ಪ್ರಕ್ರಿಯೆಗೆ ಮೊದಲ ಹಂತದಲ್ಲಿ ಆಯ್ಕೆ ಮಾಡಿಕೊಳ್ಳಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗಿದೆ.

‘ಕೇಂದ್ರ ಸರ್ಕಾರವು ಈಗಾಗಲೇ ಎರಡು ಬ್ಯಾಂಕ್​ಗಳ ಖಾಸಗೀಕರಣಕ್ಕೆ ಒಲವು ತೋರಿದೆ’ ಎಂದು ಮೂಲಗಳನ್ನು ಉಲ್ಲೇಖಿಸಿ ‘ಇಂಡಿಯನ್ ಎಕ್ಸ್​ಪ್ರೆಸ್’ ಜಾಲತಾಣವು ವರದಿ ಮಾಡಿದೆ.

ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಗಂಗಾ ನದಿಯಲ್ಲಿ ಮುಳುಗುತ್ತಿದ್ದ ವ್ಯಕ್ತಿ ಅದೃಷ್ಟವಶಾತ್ ಪಾರಾದ ವಿಡಿಯೋ ನೋಡಿ
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಒಂದೇ ದಿನ ಪ್ರೇಮಿ ಮತ್ತು ವಿಲನ್ ಆದ ಶ್ರೀನಗರ ಕಿಟ್ಟಿ; ಹೇಗಿದೆ ರೆಸ್ಪಾನ್ಸ್?
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಹೊಂಡದಲ್ಲಿ ಬಿದ್ದ ತನ್ನನ್ನು ರಕ್ಷಿಸಿದವರಿಗೆ ಥ್ಯಾಂಕ್ಸ್ ಹೇಳಿದ ಆನೆ ಮರಿ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
ಪೊಲೀಸರನ್ನು ಎಡೆಬಿಡದೆ ದುಡಿಸಿಕೊಳ್ಳುವುದು ಅಪರಾಧಿಕ ಮನೋಭಾವ: ಶಾಸಕ
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
‘ಸಂಜು ವೆಡ್ಸ್ ಗೀತಾ 2’ ಸಿನಿಮಾದಲ್ಲಿ ಅಪ್ಪು ಅಭಿಮಾನಿಗಳಿಗೆ ಸರ್ಪ್ರೈಸ್
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ನನ್ನ ಮೇಲೆ ಮೂರು ಜನ ಬಿದ್ದಿದ್ದರು, ಮೂರ್ಛೆ ಹೋಗಿದ್ದೆ: ಬದುಕುಳಿದ ವ್ಯಕ್ತಿ
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಜನಸಾಮಾನ್ಯರ ಹಿತದೃಷ್ಟಿ ಗಮನದಲ್ಲಿಟ್ಟುಕೊಂಡೇ ನಿರ್ಧಾರಗಳು: ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ಕಾಲ್ತುಳಿತ ದುರ್ಘಟನೆಗೆ ನಾನು ಹೇಗೆ ಜವಾಬ್ದಾರನಾಗುತ್ತೇನೆ? ಶಿವಕುಮಾರ್
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಶಾಲಾ ಮಕ್ಕಳ ಜೊತೆ ಪ್ರಯಾಣಿಸಿದ ಪ್ರಧಾನಿ
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್
‘ಸಂಜು ವೆಡ್ಸ್ ಗೀತಾ 2’ ಮೊದಲ ರಿಲೀಸ್ ಇದು: ನಾಗಶೇಖರ್