AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Provident Fund: ತೆರಿಗೆ ಲೆಕ್ಕಾಚಾರದ ಸಲುವಾಗಿ ಏ.1ರಿಂದ ಪಿಎಫ್ ಖಾತೆ ಎರಡು ಭಾಗವಾಗಿ ವಿಂಗಡಿಸುವ ಸಾಧ್ಯತೆ​

ಪ್ರಾವಿಡೆಂಟ್​ ಫಂಡ್ ಖಾತೆಯನ್ನು ಇದೇ ಏಪ್ರಿಲ್​ 1ರಿಂದ ಎರಡು ಖಾತೆಗಳಾಗಿ ವಿಭಜಿಸಬಹುದಾಗಿದೆ. ಏಕಾಗಿ ಈ ನಿರ್ಧಾರ ಮಾಡಲಾಗಿದೆ ಎಂಬುದನ್ನು ಐದು ಅಂಶಗಳಲ್ಲಿ ವಿವರಿಸಲಾಗಿದೆ.

Provident Fund: ತೆರಿಗೆ ಲೆಕ್ಕಾಚಾರದ ಸಲುವಾಗಿ ಏ.1ರಿಂದ ಪಿಎಫ್ ಖಾತೆ ಎರಡು ಭಾಗವಾಗಿ ವಿಂಗಡಿಸುವ ಸಾಧ್ಯತೆ​
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Feb 05, 2022 | 12:40 PM

Share

ಇದೇ ಏಪ್ರಿಲ್ 1ನೇ ತಾರೀಕಿನಿಂದ ಅನ್ವಯ ಆಗುವಂತೆ ಈಗ ಅಸ್ತಿತ್ವದಲ್ಲಿರುವ ಭವಿಷ್ಯ ನಿಧಿ (Provident Fund) ಖಾತೆಗಳನ್ನು ಎರಡು ಭಾಗಗಳಾಗಿ ವಿಂಗಡಿಸುವ ಸಾಧ್ಯತೆ ಇದೆ. ಕಳೆದ ವರ್ಷ ಸೆಪ್ಟೆಂಬರ್‌ನಲ್ಲಿ ಸರ್ಕಾರವು ಹೊಸ ಆದಾಯ ತೆರಿಗೆ (Income Tax) ನಿಯಮಗಳನ್ನು ಪ್ರಕಟಿಸಿತ್ತು. ಅದರ ಅಡಿಯಲ್ಲಿ ಪಿಎಫ್ ಖಾತೆಗಳನ್ನು ಎರಡು ಭಾಗಗಳಾಗಿ ವಿಭಜಿಸಲಾಗುತ್ತದೆ. ಈ ಕ್ರಮವು ವಾರ್ಷಿಕವಾಗಿ ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗಿ ಕೊಡುಗೆಗಳ (Employee contribution) ಪಿಎಫ್​ ಆದಾಯದ ಮೇಲೆ ತೆರಿಗೆ ವಿಧಿಸಲು ಕೇಂದ್ರಕ್ಕೆ ಅವಕಾಶ ನೀಡುತ್ತದೆ. ಹೊಸ ನಿಯಮಗಳ ಮೂಲಕ, ಹೆಚ್ಚು ಆದಾಯ ಗಳಿಸುವ ಜನರು ಸರ್ಕಾರದ ವಿವಿಧ ಕಲ್ಯಾಣ ಯೋಜನೆಗಳ ಲಾಭವನ್ನು ಪಡೆಯುವುದನ್ನು ತಡೆಯುವ ಗುರಿಯನ್ನು ಕೇಂದ್ರ ಸರ್ಕಾರವು ಹೊಂದಿದೆ.

ಟಾಪ್ ಐದು ಅಂಶಗಳು ಇಲ್ಲಿವೆ:

1) ಅಸ್ತಿತ್ವದಲ್ಲಿರುವ ಎಲ್ಲ ಪ್ರಾವಿಡೆಂಟ್ ಖಾತೆಗಳನ್ನು ತೆರಿಗೆ ಮತ್ತು ತೆರಿಗೆಗೆ ಒಳಪಡದ ಕೊಡುಗೆ ಖಾತೆಗಳಾಗಿ ವಿಂಗಡಿಸಲಾಗಿದೆ.

2) ಮಾರ್ಚ್ 31, 2021ರಂದು ಇದ್ದಂತೆ ತೆರಿಗೆಗೆ ಒಳಪಡದ ಖಾತೆಗಳು ತಮ್ಮ ಮುಕ್ತಾಯದ ಖಾತೆಯನ್ನು (Closing Account) ಒಳಗೊಂಡಿರುತ್ತವೆ ಎಂದು ನೇರ ತೆರಿಗೆಗಳ ಕೇಂದ್ರೀಯ ಮಂಡಳಿ (CBDT) ಹೇಳಿದೆ. CBDTಯು ಆದಾಯ ತೆರಿಗೆ ಇಲಾಖೆಗೆ ನೀತಿ ರೂಪಿಸುತ್ತದೆ.

3) ಅಧಿಕೃತ ಮೂಲಗಳ ಪ್ರಕಾರ, ನಿಯಮಗಳು ಮುಂದಿನ ಹಣಕಾಸು ವರ್ಷದಿಂದ ಅಂದರೆ ಏಪ್ರಿಲ್ 1, 2022ರಿಂದ ಜಾರಿಗೆ ಬರಬಹುದು.

4) ವಾರ್ಷಿಕ ರೂ. 2.5 ಲಕ್ಷಕ್ಕಿಂತ ಹೆಚ್ಚಿನ ಉದ್ಯೋಗಿಗಳ ಕೊಡುಗೆಗಳಿಂದ ಪ್ರಾವಿಡೆಂಟ್ ಫಂಡ್​ ಆದಾಯದ ಮೇಲೆ ಹೊಸ ತೆರಿಗೆಯನ್ನು ಜಾರಿಗೆ ತರಲು, ಆದಾಯ ತೆರಿಗೆ ನಿಯಮಗಳ ಅಡಿಯಲ್ಲಿ ಹೊಸ ಸೆಕ್ಷನ್ 9D ಅನ್ನು ಸೇರಿಸಲಾಗಿದೆ.

5) ತೆರಿಗೆಗೆ ಒಳಪಡುವ ಮತ್ತು ತೆರಿಗೆಗೆ ಒಳಪಡದ ಕೊಡುಗೆಯನ್ನು ನಿರ್ಣಯಿಸಲು ತೆರಿಗೆ ವಿಧಿಸಬಹುದಾದ ಬಡ್ಡಿ ಲೆಕ್ಕಾಚಾರಕ್ಕಾಗಿ ಇತ್ತೀಚೆಗೆ ಮುಕ್ತಾಯಗೊಂಡ ಹಣಕಾಸು ವರ್ಷದಲ್ಲಿ ಮತ್ತು ಹಿಂದಿನ ಎಲ್ಲ ವರ್ಷಗಳಲ್ಲಿ ಅಸ್ತಿತ್ವದಲ್ಲಿರುವ ಪ್ರಾವಿಡೆಂಟ್ ಫಂಡ್ ಖಾತೆಯೊಳಗೆ ಎರಡು ಪ್ರತ್ಯೇಕ ಖಾತೆಗಳನ್ನು ನಿರ್ವಹಿಸಲಾಗುತ್ತದೆ.

ಇದನ್ನೂ ಓದಿ: PF Transfer: 6 ಹಂತಗಳಲ್ಲಿ ಆನ್​ಲೈನ್​ನಲ್ಲಿ ಪಿಎಫ್ ವರ್ಗಾವಣೆ ಮಾಡುವುದರ ಮಾಹಿತಿ ಇಲ್ಲಿದೆ

ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ವೆನೆಜುವೆಲಾ ಮೇಲೆ ಅಮೆರಿಕದಿಂದ ವೈಮಾನಿಕ ದಾಳಿ; ತುರ್ತು ಪರಿಸ್ಥಿತಿ ಘೋಷಣೆ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬಳ್ಳಾರಿ ಗಲಭೆ: ರೆಡ್ಡಿ, ಶ್ರೀರಾಮುಲುಗೆ ಫೋನ್​ ಮಾಡಿ ಧೈರ್ಯ ಹೇಳಿದ ದೇವೇಗೌಡ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
ಬೇಜವಾಬ್ದಾರಿ, ಅಹಂಕಾರ, ಪಕ್ಷಪಾತ: ಗಿಲ್ಲಿ ವಿರುದ್ಧ ದೂರಿನ ಸರಮಾಲೆ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
4ನೇ ಶತಕ.. ದೇಶಿ ಅಂಗಳದಲ್ಲಿ ಕನ್ನಡಿಗನ ಪಾರುಪತ್ಯ; ವಿಡಿಯೋ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಗಾಂಜಾ ಪೆಡ್ಲರ್ ಜತೆ ಕಾಂಗ್ರೆಸ್ ಶಾಸಕ ಭರತ್ ರೆಡ್ಡಿ: ಜನಾರ್ದನ ರೆಡ್ಡಿ ಆರೋಪ
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಬಳ್ಳಾರಿ ಗಲಭೆ: ಸಸ್ಪೆಂಡ್ ಬೆನ್ನಲ್ಲೇ ಆತ್ಮಹತ್ಯೆಗೆ ಯತ್ನಿಸಿದ್ರಾ ಪವನ್?
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಟೈರ್ ಸ್ಪೋಟಗೊಂಡು ಮನೆಯ ಆವರಣಕ್ಕೆ ಹಾರಿ ಬಂದು ಬಿದ್ದ ಕಾರು
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ಗವಿ ಮಠದ ಜಾತ್ರೆಗೆ ರೆಡಿಯಾಗ್ತಿದೆ 10 ಲಕ್ಷ ರೂ. ವೆಚ್ಚದಲ್ಲಿ ಮೈಸೂರ್ ಪಾಕ್
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ರಾಯಚೂರು: ಗೃಹಲಕ್ಷ್ಮಿ ಹಣದಲ್ಲಿ ಫ್ರಿಡ್ಜ್ ಖರೀದಿಸಿದ ಮಹಿಳೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ
ಡಿಕೆಶಿ ನಿವಾಸಕ್ಕೆ ದಿಢೀರ್ ರೇಣುಕಾಚಾರ್ಯ: 20 ನಿಮಿಷ ಮಾತುತೆ