AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇವಲ 699 ರುಪಾಯಿಗೆ 10 ಸಿನಿಮಾ ನೋಡಿ; ಪಿವಿಆರ್ ಐನಾಕ್ಸ್​ನಿಂದ ಆಕರ್ಷಕ ಸಬ್​ಸ್ಕ್ರಿಪ್ಷನ್ ಆಫರ್

PVR Inox Passport Plan: ಪಿವಿಆರ್ ಐನಾಕ್ಸ್ ಪಾಸ್​ಪೋರ್ಟ್ ಎಂದು ಕರೆಯಲಾಗುವ ಈ ಸಬ್​ಸ್ಕ್ರಿಪ್ಷನ್ ಪ್ಲಾನ್​ಗೆ ತಿಂಗಳಿಗೆ ಸದ್ಯ ಕೇವಲ 699 ರೂ ಮಾತ್ರವೇ ಶುಲ್ಕ ಇದೆ. ಇಂದಿನಿಂದಲೇ (ಅ. 16) ಈ ಸಬ್ಸ್​ಕ್ರಿಪ್ಷನ್ ಪ್ಲಾನ್ ಚಾಲನೆಗೆ ಬರುತ್ತದೆ. ಚಿತ್ರಗಳು ಬಿಡುಗಡೆ ಆಗುವ ದಿನವಾದ ಶುಕ್ರವಾರ ಹಾಗೂ ವಾರಾಂತ್ಯದ ಎರಡು ದಿನಗಳಾದ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಈ ಸಬ್​ಸ್ಕ್ರಿಪ್ಷನ್ ಪ್ಲಾನ್ ಪ್ರಕಾರ ಚಿತ್ರಗಳನ್ನು ನೋಡಬಹುದು.

ಕೇವಲ 699 ರುಪಾಯಿಗೆ 10 ಸಿನಿಮಾ ನೋಡಿ; ಪಿವಿಆರ್ ಐನಾಕ್ಸ್​ನಿಂದ ಆಕರ್ಷಕ ಸಬ್​ಸ್ಕ್ರಿಪ್ಷನ್ ಆಫರ್
ಪಿವಿಆರ್ ಐನಾಕ್ಸ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 16, 2023 | 3:00 PM

Share

ನವದೆಹಲಿ, ಅಕ್ಟೋಬರ್ 16: ಭಾರತದಲ್ಲಿ ವಾರಾಂತ್ಯದಲ್ಲಿ ಚಿತ್ರಮಂದಿರಗಳು ತುಂಬಿತುಳುಕುತ್ತಿರುತ್ತವೆ. ವಾರದ ದಿನಗಳಲ್ಲಿ ಹೆಚ್ಚು ಮಂದಿ ಜನರು ಥಿಯೇಟರ್ ಕಡೆಗೆ ಹೋಗುವುದಿಲ್ಲ. ಈ ಸಮಸ್ಯೆ ನಿವಾರಿಸಲು ಪಿವಿಆರ್ ಐನಾಕ್ಸ್ ಹೊಸ ಪ್ಲಾನ್ ಮಾಡಿದೆ. ಭಾರತದ ಅತಿದೊಡ್ಡ ಸಿನಿಮಾ ಪ್ರದರ್ಶಕ ಸಂಸ್ಥೆಯಾದ ಪಿವಿಆರ್ ಐನಾಕ್ಸ್ ಇದೀಗ ಮಾಸಿಕ ಸಬ್​ಸ್ಕ್ರಿಪ್ಷನ್ ಪ್ಲಾನ್ ಘೋಷಿಸಿದ್ದು, ನಿರ್ದಿಷ್ಟ ಶುಲ್ಕಕ್ಕೆ 10 ಸಿನಿಮಾಗಳನ್ನು ನೋಡುವ ಅವಕಾಶ ನೀಡಿದೆ. ಪಿವಿಆರ್ ಐನಾಕ್ಸ್ ಪಾಸ್​ಪೋರ್ಟ್ (PVR Inox Passport) ಎಂದು ಕರೆಯಲಾಗುವ ಈ ಸಬ್​ಸ್ಕ್ರಿಪ್ಷನ್ ಪ್ಲಾನ್​ಗೆ ತಿಂಗಳಿಗೆ ಸದ್ಯ ಕೇವಲ 699 ರೂ ಮಾತ್ರವೇ ಶುಲ್ಕ ಇದೆ. ಇಂದಿನಿಂದಲೇ (ಅ. 16) ಈ ಸಬ್ಸ್​ಕ್ರಿಪ್ಷನ್ ಪ್ಲಾನ್ ಚಾಲನೆಗೆ ಬರುತ್ತದೆ.

ಚಿತ್ರಗಳು ಬಿಡುಗಡೆ ಆಗುವ ದಿನವಾದ ಶುಕ್ರವಾರ ಹಾಗೂ ವಾರಾಂತ್ಯದ ಎರಡು ದಿನಗಳಾದ ಶನಿವಾರ ಮತ್ತು ಭಾನುವಾರ ಹೊರತುಪಡಿಸಿ ಉಳಿದ ದಿನಗಳಲ್ಲಿ ಈ ಸಬ್​ಸ್ಕ್ರಿಪ್ಷನ್ ಪ್ಲಾನ್ ಪ್ರಕಾರ ಚಿತ್ರಗಳನ್ನು ನೋಡಬಹುದು. ಅಂದರೆ, ಸೋಮವಾರದಿಂದ ಗುರುವಾರದವರೆಗೂ ವಾರದಲ್ಲಿ ನಾಲ್ಕು ದಿನಗಳ ಕಾಲ ಪಿವಿಆರ್ ಐನಾಕ್ಸ್ ಪಾಸ್​ಪೋರ್ಟ್ ಪ್ಲಾನ್ ಪ್ರಕಾರ ಸಿನಿಮಾ ನೋಡಬಹುದು. ಹಾಗೆಯೇ, ಐಮ್ಯಾಕ್ಸ್, ಗೋಲ್ಡ್, LUXE, ಡೈರೆಕ್ಟರ್ಸ್ ಕಟ್ ಇತ್ಯಾದಿ ಪ್ರೀಮಿಯಮ್ ವಿಭಾಗದ ಸೀಟುಗಳನ್ನು ಪಡೆಯಲು ಆಗುವುದಿಲ್ಲ.

ಇದನ್ನೂ ಓದಿ: ಬೇಡಿಕೆಯ ನಟ ಪೃಥ್ವಿರಾಜ್ ಸುಕುಮಾರನ್ ಒಟ್ಟೂ ಆಸ್ತಿ ಎಷ್ಟು ಗೊತ್ತಾ?

ಟಿಕೆಟ್ ದುಬಾರಿಯಾದ್ದರಿಂದ ಥಿಯೇಟರ್​ಗೆ ಜನರ ಬರೊಲ್ಲ

ಪಿವಿಆರ್ ಐನಾಕ್ಸ್ ಸಂಸ್ಥೆಯ ಸಹ-ಸಿಇಒ ಆಗಿರುವ ಗೌತಮ್ ದತ್ತ ಈ ಸಬ್​ಸ್ಕ್ರಿಪ್ಷನ್ ಪ್ಲಾನ್ ಜಾರಿ ಮಾಡುವ ಆಲೋಚನೆ ಹೇಗೆ ಬಂತು ಎಂಬುದಕ್ಕೆ ಕುತೂಹಲದ ಉತ್ತರ ಕೊಡುತ್ತಾರೆ. ಜನರು ದೊಡ್ಡ ಸ್ಟಾರ್​ಗಳ ಸಿನಿಮಾವನ್ನು ಥಿಯೆಟರ್​ನಲ್ಲಿ ನೋಡಲು ಇಷ್ಟಪಡುತ್ತಾರೆ. ಟಿಕೆಟ್ ಬೆಲೆ ದುಬಾರಿಯಾದ್ದರಿಂದ ಪ್ರತೀ ವಾರವೂ ಥಿಯೇಟರ್​ಗೆ ಜನರು ಬರುವುದಕ್ಕೆ ಹಿಂದೇಟು ಹಾಕುತ್ತಿರುವ ಸಂಗತಿ ಗೊತ್ತಾದ ಬಳಿಕ ಈ ಪ್ಲಾನ್ ಮಾಡಿದ್ದಾಗಿ ದತ್ತ ಹೇಳುತ್ತಾರೆ.

‘ಸಿನಿಮಾ ಅನುಭವ ಇಷ್ಟವಾಗುತ್ತದೆ. ಆದರೆ, ಎಲ್ಲವನ್ನೂ ನೋಡಲು ಆಗುವುದಿಲ್ಲ. ಈವೆಂಟ್ ಫಿಲಂಗಳು ಯಾವುವು, ಟಿವಿ, ಐಪ್ಯಾಡ್, ಮೊಬೈಲ್​ನಲ್ಲಿ ನೋಡಬಹುದಾದ ಸಿನಿಮಾಗಳು ಯಾವುವು ಎಂಬುದನ್ನು ಜನರು ಅವಲೋಕಿಸುತ್ತಿರುತ್ತಾರೆ. ಅವರಿಗೆ ಪಠಾಣ್, ಜವಾನ್, ಸಲಾರ್, ಲಿಯೋ ಇತ್ಯಾದಿ ದೊಡ್ಡ ಸಿನಿಮಾಗಳು. ಇನ್ನೂ ಕೆಲ ಸಿನಿಮಾಗಳನ್ನು ನೋಡಲು ಇಷ್ಟವಾದರೂ ಸುಮ್ಮನಾಗುತ್ತಾರೆ.

‘ನೀವ್ಯಾಕೆ ಪ್ರತೀ ವಾರ ಸಿನಿಮಾಗೆ ಬರಬಾರದು ಎಂದು ನಾವು ಅವರನ್ನು ಕೇಳಿದಾಗ, ಪ್ರತೀ ವಾರ ಥಿಯೇಟರ್​ಗೆ ಬರುವುದು ದುಬಾರಿ ಆಗಿಹೋಗುತ್ತದೆ ಎಂಬ ಉತ್ತರ ಬಂದಿತು. ಈ ರೀತಿಯ ಟ್ರೆಂಡ್ ನಮ್ಮ ಚಿತ್ರೋದ್ಯಮದ ಆರೋಗ್ಯಕ್ಕೆ ತರವಲ್ಲ. ಅದರಲ್ಲೂ ಮಧ್ಯಮ ಮತ್ತು ಸಣ್ಣ ಬಜೆಟ್​ನ ಚಿತ್ರಗಳಿಗೆ ಹೊಡೆತ ಬೀಳುತ್ತದೆ’ ಎಂದು ಗೌತಮ್ ದತ್ತ ವಿವರ ನೀಡಿದ್ದಾರೆ.

ಇದನ್ನೂ ಓದಿ: ಇಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್ ಜೊತೆ ಒಪ್ಪಂದ; ಈ ವಿಮಾನ ಪ್ರಯಾಣದಲ್ಲಿ 350 ಎಂಬಿಪಿಎಸ್ ವೇಗದ ವೈಫೈ ಸೌಲಭ್ಯ

ಪಿವಿಆರ್ ಐನಾಕ್ಸ್ ಸಂಸ್ಥೆ ಈ ರೀತಿ ಮಾಸಿಕ ಸಬ್​ಸ್ಕ್ರಿಪ್ಷನ್ ಮೂಲಕ ಟಿಕೆಟ್ ಬೆಲೆಗಳನ್ನು ಕಡಿಮೆ ಮಾಡಿರುವುದು ಗಮನಾರ್ಹ. ಆದರೆ, ಮಾಲ್​ಗಳಲ್ಲಿ ಟಿಕೆಟ್ ಬೆಲೆಗಳಿಗಿಂತ ತಿಂಡಿ ಬೆಲೆ ಹೆಚ್ಚು ಎಂಬ ಆಕ್ಷೇಪಗಳು ಬಹಳ ಇವೆ. ಇತ್ತೀಚೆಗಷ್ಟೇ ಪಿವಿಆರ್ ಸಂಸ್ಥೆ ತನ್ನ ಕೌಂಟರ್​​ಗಳಲ್ಲಿ ಮಾರಲಾಗುವ ತಿಂಡಿ ಮತ್ತು ಪಾನೀಯಗಳ ಬೆಲೆಗಳನ್ನು ಶೇ. 40ರಷ್ಟು ಇಳಿಕೆ ಮಾಡಿದೆ. ಸೋಮವಾರದಿಂದ ಗುರುವಾರದವರೆಗೂ ಬೆಳಗ್ಗೆ 9 ಗಂಟೆಯಿಂದ ಸಂಜೆ 6ರವರೆಗೂ ಅದರ ಫೂಡ್ ಕಾಂಬೋಗಳ ಬೆಲೆ 99 ರೂನಿಂದ ಆರಂಭವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!