AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Cybercrimes: ಬೆಂಗಳೂರಿನಲ್ಲಿ ಹೆಚ್ಚಾಯ್ತು ಕ್ಯೂಆರ್ ಕೋಡ್ ಸ್ಕ್ಯಾಮ್; ಹೇಗೆಲ್ಲಾ ಯಾಮಾರಿಸ್ತಾರೆ ನೋಡಿ..!

QR Code Scams In Bengaluru: ಬೆಂಗಳೂರಿನಲ್ಲಿ ಕಳೆದ ಐದಾರು ವರ್ಷಗಳಲ್ಲಿ ಸೈಬರ್ ಕ್ರೈಮ್ ಘಟನೆಗಳು ಗಣನೀಯವಾಗಿ ಹೆಚ್ಚಿದೆ. ಕಾರ್ಡ್, ಒಟಿಪಿ, ಕ್ಯೂಆರ್ ಕೋಡ್ ಸಂಬಂಧಿತ ಅಪರಾಧ ಘಟನೆಗಳೇ ಹೆಚ್ಚು. ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್​ನ ಪ್ರೊಫೆಸರ್​ವೊಬ್ಬರು ಇಂಥ ಕ್ಯುಆರ್ ಕೋಡ್ ಸ್ಕ್ಯಾಮ್​ವೊಂದಕ್ಕೆ ಬಲಿಯಾಗಿ ಹಣ ಕಳೆದುಕೊಂಡ ಘಟನೆಯೂ ಇದರಲ್ಲಿದೆ.

Cybercrimes: ಬೆಂಗಳೂರಿನಲ್ಲಿ ಹೆಚ್ಚಾಯ್ತು ಕ್ಯೂಆರ್ ಕೋಡ್ ಸ್ಕ್ಯಾಮ್; ಹೇಗೆಲ್ಲಾ ಯಾಮಾರಿಸ್ತಾರೆ ನೋಡಿ..!
ಕ್ಯೂಆರ್ ಕೋಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 23, 2023 | 11:20 AM

Share

ಬೆಂಗಳೂರು, ಆಗಸ್ಟ್ 23: ತಂತ್ರಜ್ಞಾನ ಉನ್ನತಿಗೊಂಡಂತೆಲ್ಲಾ ಅಪರಾಧಗಳ ಮಟ್ಟವೂ ಮೇಲೇರುತ್ತಿದೆ. ಬಹುತೇಕ ಚಟುವಟಕೆ ಆನ್​ಲೈನ್ ಆಗಿರುವುದರಿಂದ ಸೈಬರ್ ಅಪರಾಧಗಳ ಪ್ರಮಾಣ ಮತ್ತು ವ್ಯಾಪ್ತಿ ಹೆಚ್ಚುತ್ತಲೇ ಇದೆ. ಸಿಲಿಕಾನ್ ಸಿಟಿಯಲ್ಲಿ ಹೊಸ ಹೊಸ ರೀತಿಯ ಸೈಬರ್ ಕ್ರೈಮ್​ಗಳು ಜರುಗುತ್ತಿರುವುದು ಬೆಳಕಿಗೆ ಬರುತ್ತಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ಕ್ಯುಆರ್ ಕೋಡ್ ಸಂಬಂಧಿತ ಸೈಬರ್ ಕ್ರೈಮ್ ಪ್ರಕರಣಗಳು (QR Code Related Crimes) ಹೆಚ್ಚು ನಡೆದಿರುವುದು ಪೊಲೀಸರಿಗೆ (Bangalore Police) ತಲೆನೋವು ತರಿಸಿದೆ. ಪೊಲೀಸರೇ ಬಿಡುಗಡೆ ಮಾಡಿದ ಅಂಕಿ ಅಂಶಗಳ ಪ್ರಕಾರ ಬೆಂಗಳೂರಿನಲ್ಲಿ 2017ರಿಂದ ಈಚೆಗೆ 50,000 ಸೈಬರ್ ಅಪರಾಧ ಘಟನೆಗಳು ದಾಖಲಾಗಿವೆ. ಈ ಪೈಕಿ 20,662 ಪ್ರಕರಣಗಳು ಕ್ಯುಆರ್ ಕೋಡ್ ಸ್ಕ್ಯಾಮ್​ಗಳು, ಡೆಬಿಟ್ ಕಾರ್ಡ್ ದುರುಪಯೋಗ, ವಂಚಕ ಲಿಂಕ್ ಇತ್ಯಾದಿ ಮೂಲಕ ಹಣ ಲಪಟಾಯಿಸುವ ಪ್ರಕರಣಗಳೇ ಆಗಿವೆ. ಅಂದರೆ ಸೈಬರ್ ಕೇಸ್​ಗಳಲ್ಲಿ ಶೇ. 40ಕ್ಕಿಂತ ಹೆಚ್ಚು ಇಂಥ ಪ್ರಕರಣಗಳೇ ಇವೆ.

ಬೆಂಗಳೂರು ಪೊಲೀಸರ ವಾರದ ಸಭೆಗಳಲ್ಲಿ ಕ್ಯೂಆರ್ ಕೋಡ್ ಹಗರಣಗಳ ಬಗ್ಗೆಯೇ ಹೆಚ್ಚು ಚರ್ಚೆಯಾಗುತ್ತದಂತೆ. ಅಂತೆಯೇ ನಗರದ ಪೊಲೀಸರು ಸೈಬರ್ ಅಪರಾಧಗಳ ಬಗ್ಗೆ ಆಗಾಗ್ಗೆ ಸೋಷಿಯಲ್ ಮೀಡಿಯಾಗಳ ಮೂಲಕ ಜಾಗೃತಿ ಮೂಡಿಸುವ ಕೆಲಸ ಮಾಡುತ್ತಿದ್ದಾರೆ. ನಿನ್ನೆ ಕೂಡ (ಆಗಸ್ಟ್ 22) ಬೆಂಗಳೂರು ನಗರ ಪೊಲೀಸರು ಒಟಿಪಿ ಇತ್ಯಾದಿಯನ್ನು ಮೊಬೈಲ್​ಗಳಲ್ಲಿ ಶೇರ್ ಮಾಡದಿರಿ ಎಂದು ಟ್ವಿಟ್ಟರ್​ನಲ್ಲಿ ಪೋಸ್ಟ್ ಹಾಕಿದ್ದಾರೆ.

ಏನಿದು ಕ್ಯುಆರ್ ಕೋಡ್ ಸ್ಕ್ಯಾಮ್?

ದುಷ್ಕರ್ಮಿಗಳು ನಿಮ್ಮೊಂದಿಗೆ ಹಣದ ವಹಿವಾಟು ನಡೆಸುವ ನೆವದಲ್ಲಿ ಕ್ಯೂಆರ್ ಕೋಡ್ ಕಳುಹಿಸುತ್ತಾರೆ. ಅದನ್ನು ಸ್ಕ್ಯಾನ್ ಮಾಡಿದರೆ ನಿಮ್ಮ ಖಾತೆಯಿಂದ ಹಣವನ್ನು ಎಗರಿಸುತ್ತಾರೆ ಈ ಅಪರಾಧಿಗಳು.

ಇದನ್ನೂ ಓದಿ: Aadhaar Updates: ಇಮೇಲ್, ವಾಟ್ಸಾಪ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಲು ದಾಖಲೆ ಕಳುಹಿಸದಿರಿ: ಯುಐಡಿಎಐ ಎಚ್ಚರ

ಐಐಎಸ್​ಸಿ ಪ್ರೊಫೆಸರ್ ಕ್ಯುಆರ್ ಕೋಡ್ ಸ್ಕ್ಯಾಮ್​ಗೆ ಬಲಿಯಾಗಿದ್ದು ಹೇಗೆ?

ಇಂಡಿಯನ್ ಇನ್ಸ್​ಟಿಟ್ಯೂಟ್ ಆಫ್ ಸೈನ್ಸ್ ಸಂಸ್ಥೆಯಲ್ಲಿ ಪ್ರೊಫೆಸರ್ ಆಗಿರುವ 30 ವರ್ಷದ ವ್ಯಕ್ತಿಯೊಬ್ಬರು ಇಂಥ ಕ್ಯುಆರ್ ಕೋಡ್ ಸ್ಕ್ಯಾಮ್​​ಗೆ 63,000 ರೂ ಕಳೆದುಕೊಂಡಿದ್ದಾರೆ. ಆಗಸ್ಟ್ 11ರಂದು ಅವರು ಆನ್​ಲೈನ್ ಪ್ಲಾಟ್​ಫಾರ್ಮ್​ವೊಂದರಲ್ಲಿ ತಮ್ಮ ಹಳೆಯ ವಾಷಿಂಗ್ ಮೆಷಿನ್ ಅನ್ನು ಮಾರಲು ಯತ್ನಿಸಿದ್ದರು. ವ್ಯಕ್ತಿಯೊಬ್ಬ ಇದನ್ನು ಖರೀದಿಸಲು ಮುಂದೆ ಬಂದಿದ್ದ. ತತ್​ಕ್ಷಣವೇ ಹಣ ಪಾವತಿಸುವುದಾಗಿ ಹೇಳಿ ಕ್ಯುಆರ್ ಕೋಡ್ ಕಳುಹಿಸಿ ಅದನ್ನು ಸ್ಕ್ಯಾನ್ ಮಾಡಲು ತಿಳಿಸಿದ್ದ. ವಂಚನೆಯ ಅರಿವಿಲ್ಲದೇ ಪ್ರೊಫೆಸರ್ ಕ್ಯೂಆರ್ ಕೋಡ್ ಸ್ಕ್ಯಾನ್ ಮಾಡುತ್ತಾರೆ. ದುಷ್ಕರ್ಮಿಗಳು ಬಹಳ ಬೇಗನೇ ಹಣವನ್ನು ಎಗರಿಸುತ್ತಾರೆ.

ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹ್ಯಾಚ್ ಬ್ಯಾಕ್ ಕಾರುಗಳ ಮೇಲೆ ಭರ್ಜರಿ ದೀಪಾವಳಿ ಆಫರ್ ಘೋಷಣೆ
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳ್ಕರ್ ಮೈದಾನದಲ್ಲಿ ಯಾರ ಬ್ಯಾಟ್ ಹೆಚ್ಚು ಸದ್ದು ಮಾಡಿದೆ ಗೊತ್ತಾ?
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ
ಹೋಳಿಗೆ ಮಾಡೋದು ಕಲಿತ ಬಿಗ್ ಬಾಸ್ ಸುಂದರಿ ಮೋಕ್ಷಿತಾ ಪೈ

ಹಾಗೆಯೇ, 30 ವರ್ಷದ ಗೃಹಿಣಿಯೊಬ್ಬರೂ ಕೂಡ ಆನ್​ಲೈನ್ ಪ್ಲಾಟ್​ಫಾರ್ಮ್​ನಲ್ಲಿ ತಮ್ಮ ವೀಣೆಯನ್ನು ಮಾರಲು ಇಟ್ಟಿರುತ್ತಾರೆ. ವೀಣೆ ಖರೀದಿಸುವ ಆಸಕ್ತಿ ತೋರಿದ ವ್ಯಕ್ತಿಯೊಬ್ಬ ಆಕೆಯ ಮೊಬೈಲ್ ನಂಬರ್​ಗೆ ಒಂದು ಲಿಂಕ್ ಕಳುಹಿಸುತ್ತಾನೆ. ಹಣ ಪಾವತಿಯಾಗುತ್ತದೆ ಎಂದು ನಂಬಿ ಆಕೆ ಆ ಲಿಂಕ್ ಕ್ಲಿಕ್ ಮಾಡುತ್ತಾರೆ. ನೋಡನೋಡುತ್ತಿದ್ದಂತೆಯೇ ಆಕೆಯ ಖಾತೆಯಿಂದ 20,000 ರೂ ಮಾಯವಾಗಿಹೋಗಿರುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:19 am, Wed, 23 August 23

ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ