AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Xiaomi India: ಶವೋಮಿಗೆ ಮತ್ತಷ್ಟು ಸಂಕಷ್ಟ; ಮುಖ್ಯ ಉದ್ಯಮ ಅಧಿಕಾರಿ ಹುದ್ದೆಗೆ ರಘು ರೆಡ್ಡಿ ರಾಜೀನಾಮೆ

ಭಾರತದಲ್ಲಿ ಸ್ಮಾರ್ಟ್​​ಫೋನ್ ಹಾಗೂ ಸ್ಮಾರ್ಟ್ ಟಿವಿ ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಳ್ಳಲು ಕಂಪನಿಗೆ ನೆರವಾಗಿದ್ದ ಮುಖ್ಯ ಉದ್ಯಮ ಅಧಿಕಾರಿ ರಘು ರೆಡ್ಡಿ ರಾಜೀನಾಮೆ ನೀಡಿದ್ದಾರೆ ಎಂದು ಶವೋಮಿ ತಿಳಿಸಿದೆ.

Xiaomi India: ಶವೋಮಿಗೆ ಮತ್ತಷ್ಟು ಸಂಕಷ್ಟ; ಮುಖ್ಯ ಉದ್ಯಮ ಅಧಿಕಾರಿ ಹುದ್ದೆಗೆ ರಘು ರೆಡ್ಡಿ ರಾಜೀನಾಮೆ
ಶವೋಮಿImage Credit source: Reuters
TV9 Web
| Edited By: |

Updated on: Dec 07, 2022 | 6:00 PM

Share

ನವದೆಹಲಿ: ಚೀನಾದ (China) ಸ್ಮಾರ್ಟ್​ಫೋನ್ (Smartphone) ತಯಾರಿಕಾ ಕಂಪನಿ ಶವೋಮಿ(Xiaomi) ಭಾರತ ಘಟಕದ ಮುಖ್ಯ ಉದ್ಯಮ ಅಧಿಕಾರಿ ಹುದ್ದೆಗೆ ರಘು ರೆಡ್ಡಿ ರಾಜೀನಾಮೆ ನೀಡಿದ್ದಾರೆ. ಕಂಪನಿಯು ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಹಾಗೂ ಅಕ್ರಮ ಹಣ ವರ್ಗಾವಣೆಯ ಆರೋಪ ಎದುರಿಸುತ್ತಿರುವ ಸಂದರ್ಭದಲ್ಲೇ ಮುಖ್ಯ ಕಾರ್ಯನಿರ್ವಾಹಕರೊಬ್ಬರು ರಾಜೀನಾಮೆ ನೀಡಿದಂತಾಗಿದೆ. ನಿಯಮ ಉಲ್ಲಂಘನೆ ಆರೋಪ ಎದುರಿಸುತ್ತಿರುವ ಶವೋಮಿ ಮೇಲೆ ಸರ್ಕಾರದ ತನಿಖಾ ಸಂಸ್ಥೆಗಳು ನಿಗಾ ಇರಿಸಿವೆ.

ಭಾರತದಲ್ಲಿ ಸ್ಮಾರ್ಟ್​​ಫೋನ್ ಹಾಗೂ ಸ್ಮಾರ್ಟ್ ಟಿವಿ ಮಾರುಕಟ್ಟೆಯಲ್ಲಿ ಅಗ್ರ ಸ್ಥಾನದಲ್ಲಿ ಗುರುತಿಸಿಕೊಳ್ಳಲು ಕಂಪನಿಗೆ ನೆರವಾಗಿದ್ದ ಮುಖ್ಯ ಉದ್ಯಮ ಅಧಿಕಾರಿ ರಘು ರೆಡ್ಡಿ ರಾಜೀನಾಮೆ ನೀಡಿದ್ದಾರೆ ಎಂದು ಶವೋಮಿ ಪ್ರಕಟಣೆ ತಿಳಿಸಿದೆ. ಸದ್ಯ ನೊಟೀಸ್ ಅವಧಿಯಲ್ಲಿರುವ ರೆಡ್ಡಿ ಅವರು ರಾಜೀನಾಮೆ ಕುರಿತು ಪ್ರತಿಕ್ರಿಯೆ ನೀಡಿಲ್ಲ.

ಮುಖ್ಯ ಉದ್ಯಮ ಅಧಿಕಾರಿಯಾಗಿ ನೇಮಕಗೊಳ್ಳುವುದಕ್ಕೂ ಮುನ್ನ ರೆಡ್ಡಿ ಅವರು ಶವೋಮಿಯ ಆನ್​ಲೈನ್ ಮಾರಾಟ ವಿಭಾಗದಲ್ಲಿ ಕಾರ್ಯನಿರ್ವಹಿಸಿದ್ದರು. ಅದಕ್ಕೂ ಮುನ್ನ ಸಾಫ್ಟ್​​ಬ್ಯಾಂಕ್ ಗ್ರೂಪ್​ ಬೆಂಬಲಿತ ಸ್ನ್ಯಾಪ್​ಡೀಲ್​ನಲ್ಲಿ ಕಾರ್ಯನಿರ್ವಹಿಸಿದ್ದರು.

ಇದನ್ನೂ ಓದಿ: Vivo Smartphones: ವಿವೊ ಸ್ಮಾರ್ಟ್​​ಫೋನ್ ರಫ್ತಿಗೆ ಭಾರತ ತಡೆ; ಚೀನಾ ಕಂಪನಿಗೆ ಭಾರೀ ಹಿನ್ನಡೆ

ವಿದೇಶಿ ವಿನಿಮಯ ನಿಯಮ ಉಲ್ಲಂಘನೆ ಹಾಗೂ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿ ಕಳೆದ ಏಪ್ರಿಲ್​ನಲ್ಲಿ ಜಾರಿ ನಿರ್ದೇಶನಾಲಯವು ಶವೋಮಿ ಇಂಡಿಯಾದ 5,551 ಕೋಟಿ ರೂ.ಗಳನ್ನು ಮುಟ್ಟುಗೋಲು ಹಾಕಿಕೊಂಡಿತ್ತು. ಈ ಮಧ್ಯೆ, ಭಾರತದಲ್ಲಿ ಶವೋಮಿ ಕಾರ್ಪೊರೇಷನ್‌ ಹಣಕಾಸು ಸೇವೆಗಳ ವಹಿವಾಟನ್ನು ನಿಲ್ಲಿಸಿರುವುದಾಗಿ ಇತ್ತೀಚೆಗೆ ಶವೋಮಿ ಇಂಡಿಯಾ ತಿಳಿಸಿತ್ತು.

2020ರಲ್ಲಿ ಭಾರತ, ಚೀನಾ ಸೇನಾಪಡೆಗಳ ನಡುವೆ ಪೂರ್ವ ಲಡಾಖ್​ನ ಗಾಲ್ವನ್ ಕಣಿವೆಯಲ್ಲಿ ನಡೆದಿದ್ದ ಸಂಘರ್ಷದ ಬಳಿಕ ಕೇಂದ್ರ ಸರ್ಕಾರ ಚೀನಾ ಕಂಪನಿಗಳ ವಿರುದ್ಧ ಅನೇಕ ನಿರ್ಬಂಧಗಳನ್ನು ಹೇರಿತ್ತು. ನೂರಾರು ಚೀನೀ ಆ್ಯಪ್​ಗಳನ್ನು ನಿಷೇಧಿಸಿತ್ತು. ಶವೋಮಿಯ ಪ್ರತಿಸ್ಪರ್ಧಿ ಕಂಪನಿ ವಿವೊದ ಸ್ಮಾರ್ಟ್​ಫೋನ್​ಗಳ ರಫ್ತಿಗೆ ಬುಧವಾರ ಬೆಳಿಗ್ಗೆಯಷ್ಟೇ ಕೇಂದ್ರ ಸರ್ಕಾರ ತಡೆಯೊಡ್ಡಿತ್ತು. ಸ್ಮಾರ್ಟ್​​ಫೋನ್​ಗಳ ಮಾದರಿಗಳು ಮತ್ತು ಅವುಗಳ ಮೌಲ್ಯದ ಬಗ್ಗೆ ತಪ್ಪಾದ ವಿವರ ನೀಡಿದ್ದಕ್ಕಾಗಿ ಕಂದಾಯ ಗುಪ್ತಚರ ಘಟಕ ರಫ್ತಿಗೆ ತಡೆಯೊಡ್ಡಿದೆ ಎಂದು ಮೂಲಗಳು ಹೇಳಿದ್ದವು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ