AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Train Toilet Video: ರೈಲ್ವೆ ಟಾಯ್ಲೆಟ್ ಮೊದಲು ಹೇಗಿತ್ತು, ಈಗ ಹೇಗಿದೆ? ಸಚಿವರ ಟ್ವೀಟ್ ವೈರಲ್

Railway Minister Ashwini Vaishnav's Tweet: ಸಾಮಾನ್ಯ ರೈಲುಗಳ ಬೋಗಿಗಳಲ್ಲಿರುವ ಟಾಯ್ಲೆಟ್​ಗಳಿಗೆ ನಾವೀನ್ಯತೆಯ ಸ್ಪರ್ಶ ಕೊಡಲಾಗಿದೆ. ಸಚಿವರು ಖುದ್ದಾಗಿ ಟ್ರೈನುಗಳಿಗೆ ಹೋಗಿ ಶೌಚಾಲಯಗಳ ಪರಿಶೀಲನೆ ನಡೆಸಿದ್ದಾರೆ. ಇದರ ವಿಡಿಯೋವೊಂದನ್ನು ಸಚಿವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ.

Train Toilet Video: ರೈಲ್ವೆ ಟಾಯ್ಲೆಟ್ ಮೊದಲು ಹೇಗಿತ್ತು, ಈಗ ಹೇಗಿದೆ? ಸಚಿವರ ಟ್ವೀಟ್ ವೈರಲ್
ಅಶ್ವಿನಿ ವೈಷ್ಣವ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Feb 01, 2023 | 4:01 PM

Share

ನವದೆಹಲಿ: ಭಾರತೀಯ ರೈಲ್ವೆಯ ಟ್ರೈನುಗಳು (Indian Railway) ಯಾವ ರೀತಿಯಲ್ಲಿ ಸುಧಾರಣೆಗಳನ್ನು ಕಂಡಿವೆ ಎಂಬುದಕ್ಕೆ ನಿದರ್ಶನವಾಗಿ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ನಿನ್ನೆ ಮಾಡಿದ ಟ್ವೀಟ್ ಈಗ ವೈರಲ್ ಆಗಿದೆ. ಸಾಮಾನ್ಯ ರೈಲುಗಳ ಬೋಗಿಗಳಲ್ಲಿರುವ ಟಾಯ್ಲೆಟ್​ಗಳಿಗೆ (Railway Toilet) ನಾವೀನ್ಯತೆಯ ಸ್ಪರ್ಶ ಕೊಡಲಾಗಿದೆ. ಸಚಿವರು ಖುದ್ದಾಗಿ ಟ್ರೈನುಗಳಿಗೆ ಹೋಗಿ ಶೌಚಾಲಯಗಳ ಪರಿಶೀಲನೆ ನಡೆಸಿದ್ದಾರೆ. ಇದರ ವಿಡಿಯೋವೊಂದನ್ನು ಸಚಿವರೇ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಶೇರ್ ಮಾಡಿಕೊಂಡಿದ್ದಾರೆ. ಅವರ ಈ ವಿಡಿಯೋಗೆ ಸುಮಾರು 3 ಲಕ್ಷದಷ್ಟು ವೀಕ್ಷಣೆಗಳಾಗಿವೆ.

ಬಹಳಷ್ಟು ಜನರು ಸಚಿವ ಅಶ್ವಿನಿ ವೈಷ್ಣವ್ ಅವರ ಈ ಪೋಸ್ಟ್​ಗೆ ಪ್ರತಿಕ್ರಿಯಿಸಿದ್ದು, ರೈಲ್ವೆ ಸೌಲಭ್ಯಗಳಲ್ಲಿನ ಸುಧಾರಣೆಗಳನ್ನು ಸ್ವಾಗತಿಸಿದ್ದಾರೆ. ಇದು ಬಹಳ ದಿನಗಳ ಅಪೇಕ್ಷೆಯಾಗಿತ್ತು ಎಂದು ಹಲವರು ಹೇಳಿದರೆ, ಇದೇ ರೀತಿಯ ಸ್ವಚ್ಛತೆಯನ್ನು ಮುಂದಿನ ದಿನಗಳಲ್ಲೂ ಕಾಪಾಡಿಕೊಂಡು ಹೋಗುವುದು ಸವಾಲಿನ ಕೆಲಸ ಎಂದು ಕೆಲವರು ಎಚ್ಚರಿಸಿದ್ದಾರೆ.

ಇದನ್ನೂ ಓದಿ: Railway Budget 2023: ಬಜೆಟ್​ನಲ್ಲಿ ರೈಲ್ವೆ ಇಲಾಖೆಗೆ 2.4 ಲಕ್ಷ ಕೋಟಿ ರೂ; ಇತಿಹಾಸದಲ್ಲೇ ಹೆಚ್ಚು

ರೈಲಿನೊಳಗೆ ಸ್ವಚ್ಛತೆ ಉಳಿಸಿಕೊಳ್ಳಬೇಕಾದರೆ ರೈಲ್ವೆ ಸಿಬ್ಬಂದಿ ಜೊತೆಗೆ ಜನರೂ ಜವಾಬ್ದಾರಿಯುತವಾಗಿ ವರ್ತಿಸಬೇಕು. ತಮ್ಮ ಮನೆಗಳ ರೀತಿಯಲ್ಲೇ ರೈಲಿನಲ್ಲೂ ಸ್ವಚ್ಛತೆ ಕಾಪಾಡಿಕೊಳ್ಳುವುದು ಜನರ ಜವಾಬ್ದಾರಿ ಎಂಬ ಅಭಿಪ್ರಾಯವೂ ವ್ಯಕ್ತವಾಗಿದೆ.

ಇತ್ತೀಚೆಗೆ ವಂದೇ ಭಾರತ್ ರೈಲಿನ ಬೋಗಿಗಳಲ್ಲಿ ಕಸದ ರಾಶಿ ತುಂಬಿರುವ ದೃಶ್ಯದ ವಿಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿ ಬಹಳಷ್ಟು ಚರ್ಚೆಗೆ ಕಾರಣವಾಗಿತ್ತು.

ನಿನ್ನೆ ಸಚಿವ ಅಶ್ವಿನಿ ವೈಷ್ಣವ್ ಮಾಡಿದ ಪೋಸ್ಟ್​ನಲ್ಲೇ ವ್ಯಕ್ತಿಯೊಬ್ಬರು ಬೇರೆ ಕೆಲ ರೈಲುಗಳಲ್ಲಿರುವ ಅವ್ಯವಸ್ಥೆಯ ದೃಶ್ಯಗಳ ಫೋಟೋವನ್ನು ಹಾಕಿದ್ದಾರೆ. ಅದರಲ್ಲಿ ಹಳೆಯ ರೈಲುಗಳ ಗಲೀಜಿ ಎದ್ದು ಕಾಣುತ್ತದೆ. ಸಾಧಾರಣ ರೈಲು ಬೋಗಿಗಳಲ್ಲಿ ಹೆಚ್ಚೇನೂ ಬದಲಾವಣೆ ಆಗಿಲ್ಲ ಎನ್ನುವಂತೆ ಅವರು ಅಭಿಪ್ರಾಯಪಟ್ಟಿದ್ದಾರೆ.

Published On - 4:01 pm, Wed, 1 February 23

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ