ಅಮೃತ್ ಭಾರತ್ ಸ್ಟೇಷನ್ ಯೋಜನೆ; ಗದಗ್ ಜಂಕ್ಷನ್ ಕಾಮಗಾರಿ ಫೋಟೋ ಹಾಕಿದ ರೈಲ್ವೆ ಇಲಾಖೆ

Amrit Bharat Station scheme, Gadag junction railway station development: ಅಮೃತ್ ಭಾರತ್ ನಿಲ್ದಾಣ ಯೋಜನೆ ಅಡಿ ದೇಶಾದ್ಯಂತ ಸಾವಿರಕ್ಕೂ ಹೆಚ್ಚು ರೈಲ್ವೆ ಸ್ಟೇಷನ್​ಗಳನ್ನು ಮರು ಅಭಿವೃದ್ಧಿ ಕಾರ್ಯ ಕೈಗೊಳ್ಳಲಾಗುತ್ತಿದೆ. ಪ್ರಯಾಣಿಕರಿಗೆ ಅನುಕೂಲವಾಗುವ ರೀತಿಯಲ್ಲಿ ನಿಲ್ದಾಣಗಳ ಸ್ವರೂಪ ಬದಲಿಸಲಾಗುತ್ತಿದೆ. ರೈಲ್ವೆ ಸಚಿವಾಲಯವು ಕರ್ನಾಟಕದ ಗದಗ್ ಜಂಕ್ಷನ್​ನಲ್ಲಿ ನಿಲ್ದಾಣದಲ್ಲಿ ನಡೆಯುತ್ತಿರುವ ಕಾಮಗಾರಿ ಎಲ್ಲಿಯವರೆಗೆ ಬಂದಿದೆ ಎನ್ನುವ ಅಪ್​ಡೇಟ್ಸ್ ನೀಡಿದೆ.

ಅಮೃತ್ ಭಾರತ್ ಸ್ಟೇಷನ್ ಯೋಜನೆ; ಗದಗ್ ಜಂಕ್ಷನ್ ಕಾಮಗಾರಿ ಫೋಟೋ ಹಾಕಿದ ರೈಲ್ವೆ ಇಲಾಖೆ
ಗದಗ್ ಜಂಕ್ಷನ್
Follow us
|

Updated on: Oct 18, 2024 | 5:45 PM

ನವದೆಹಲಿ, ಅಕ್ಟೋಬರ್ 18: ವರ್ಷದ ಹಿಂದೆ ಆರಂಭವಾದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿಯಲ್ಲಿ ದೇಶದ ವಿವಿಧೆಡೆ ಸಾವಿರಕ್ಕೂ ರೈಲು ನಿಲ್ದಾಣಗಳನ್ನು ಮೇಲ್ದರ್ಜೆಗೇರಿಸಲಾಗುತ್ತಿದೆ. ಇದರಲ್ಲಿ ಕರ್ನಾಟಕದ 55 ನಿಲ್ದಾಣಗಳೂ ಒಳಗೊಂಡಿವೆ. ಕರ್ನಾಟಕದ ಗದಗ್ ಜಂಕ್ಷನ್​ನ ರೈಲು ನಿಲ್ದಾಣದಲ್ಲಿನ ಮರು ಅಭಿವೃದ್ಧಿ ಕಾಮಗಾರಿ ಬಗ್ಗೆ ರೈಲ್ವೆ ಸಚಿವಾಲಯ ಇಂದು ಶುಕ್ರವಾರ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ಗದಗ್ ಜಂಕ್ಷನ್​ನಲ್ಲಿ ಹೊಸ ಸ್ಟೇಷನ್ ಬಿಲ್ಡಿಂಗ್ ನಿರ್ಮಿಸಲಾಗುತ್ತಿದ್ದು, ಮೊದಲ ಮಹಡಿಯ ನಿರ್ಮಾಣ ಮುಕ್ತಾಯವಾಗಿದೆ. ಕಾಲ್ಸೇತುವೆಗೆ ಸರಳುಗಳ ಚೌಕಟ್ಟು ಸ್ಥಾಪಿಸಲಾಗಿದೆ. ಲಿಫ್ಟ್, ಎಸ್ಕಲೇಟರ್​ನ ಫೌಂಡೇಶನ್ ಹಾಕಲಾಗಿದೆ. ಇವಿಷ್ಟೂ ಮುಕ್ತಾಯಗೊಂಡಿರುವ ಕಾಮಗಾರಿಗಳು.

ಇದನ್ನೂ ಓದಿ: ಗಮನಿಸಿ, ಮುಂಗಡ ರೈಲು ಟಿಕೆಟ್ ಬುಕಿಂಗ್ ಅವಧಿ ಈಗ 60 ದಿನ ಮಾತ್ರ; ಮೂರು ತಿಂಗಳ ಮುಂಚೆ ಬುಕಿಂಗ್ ಅಸಾಧ್ಯ

ನಿಲ್ದಾಣ ಕಟ್ಟಡ ಇನ್ನೂ ಪೂರ್ಣವಾಗಬೇಕಿದೆ. ಫ್ಲೋರಿಂಗ್ ಮತ್ತು ಸ್ಟೇರ್​ಕೇಸ್ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎನ್ನುವ ಮಾಹಿತಿಯನ್ನು ರೈಲ್ವೆ ಸಚಿವಾಲಯ ತಿಳಿಸಿದೆ.

ಏನಿದು ಅಮೃತ್ ಭಾರತ್ ನಿಲ್ದಾಣ ಯೋಜನೆ?

ಭಾರತೀಯ ರೈಲ್ವೆಯನ್ನು ಒಟ್ಟಾರೆಯಾಗಿ ಉನ್ನತ ಮಟ್ಟಕ್ಕೆ ಕೊಂಡೊಯ್ಯುವ ದೊಡ್ಡ ಯೋಜನೆಯ ಭಾಗವಾಗಿ ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಅನ್ನು ಸರ್ಕಾರ 2023ರಲ್ಲಿ ಆರಂಭಿಸಿದೆ. ದೇಶಾದ್ಯಂತ ರೈಲ್ವೆ ನಿಲ್ದಾಣಗಳನ್ನು ಮೇಲ್ದರ್ಜೆಗೆ ಏರಿಸುವುದು ಈ ಯೋಜನೆಯ ಉದ್ದೇಶ. ರೈಲ್ವೆ ನಿಲ್ದಾಣಗಳು ಆಧುನಿಕ ಸೌಲಭ್ಯ ಒಳಗೊಂಡಿರಬೇಕು, ಪ್ರಯಾಣಿಕ ಸ್ನೇಹಿಯಾಗಿರಬೇಕು ಎಂಬ ಗುರಿಯೊಂದಿಗೆ ನಿಲ್ದಾಣಗಳ ಮರು ಅಭಿವೃದ್ಧಿ ಕೈಗೊಳ್ಳಲಾಗುತ್ತಿದೆ.

ಇದನ್ನೂ ಓದಿ: ಕಲಬುರಗಿ ಬೆಂಗಳೂರು ನಡುವೆ 2 ವಿಶೇಷ ರೈಲು: ಹೊರಡುವ ಸಮಯ, ನಿಲುಗಡೆ ಇತ್ಯಾದಿ ಮಾಹಿತಿ ಇಲ್ಲಿದೆ

ವಂದೇ ಭಾರತ್ ಟ್ರೈನ್ ಮೂಲಕ ರೈಲು ಪ್ರಯಾಣದ ಗುಣಮಟ್ಟ ಹೆಚ್ಚುತ್ತಿದೆ. ರೈಲು ನೆಟ್ವರ್ಕ್ ಅನ್ನು ಹಂತ ಹಂತವಾಗಿ ಅಭಿವೃದ್ಧಿಪಡಿಸಲಾಗುತ್ತಿದೆ. ಅಮೃತ್ ಭಾರತ್ ಸ್ಟೇಷನ್ ಸ್ಕೀಮ್ ಮೂಲಕ ರೈಲು ನಿಲ್ದಾಣಗಳ ಮರು ಅಭಿವೃದ್ಧಿಯನ್ನೂ ಕೈಗೊಳ್ಳಲಾಗುತ್ತಿದೆ.

ಕರ್ನಾಟಕದಲ್ಲಿ ಬೆಂಗಳೂರು ರೈಲು ನಿಲ್ದಾಣದಿಂದ ಹಿಡಿದು ಯಾದಗಿರಿಯವರೆಗೆ 55 ರೈಲು ನಿಲ್ದಾಣಗಳನ್ನು ಅಮೃತ್ ಭಾರತ್ ಸ್ಟೇಷನ್ ಯೋಜನೆ ಅಡಿ ಅಭಿವೃದ್ಧಿಪಡಿಸಲಾಗುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ಶಿಗ್ಗಾವಿ ಮತ್ತು ಸಂಡೂರು ಜೆಡಿಎಸ್ ಮುಖಂಡರ ಜೊತೆ ನಾಳೆ ಮಾತುಕತೆ: ನಿಖಿಲ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ದೀಪಕ್ ಅರಸ್ ನಿಧನ: ಅಂತಿಮ ದರ್ಶನ ಪಡೆದು ಒಡನಾಟ ನೆನಪಿಸಿಕೊಂಡ ತರುಣ್ ಸುಧೀರ್
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಜೈಲಿಗೆ ಬಂದ ಸಹೋದರ, ಪತ್ನಿಯ ಭೇಟಿಗೆ ಬೇಸರದಲ್ಲೇ ಬಂದ ದರ್ಶನ್: ವಿಡಿಯೋ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಅತ್ಯಂತ ದುರದೃಷ್ಟಕರ ರೀತಿಯಲ್ಲಿ ಔಟಾದ ರೋಹಿತ್ ಶರ್ಮಾ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಈಡಿಗೆ ಬೇಕಿರುವ ಕಾಗದಪತ್ರಗಳನ್ನು ಮುಡಾ ಅಧಿಕಾರಿಗಳು ನೀಡುತ್ತಾರೆ: ಸಚಿವ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ಲೋಕಾಯುಕ್ತ ಅಧಿಕಾರಿಗಳಿಂದ ನಿಷ್ಪಕ್ಷ ತನಿಖೆ ಸಾಧ್ಯವಿಲ್ಲ: ಕುಮಾರಸ್ವಾಮಿ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
ನಿಧಾನ ಓಡಿಸಪ್ಪಾ ಎಂದಿದ್ದಕ್ಕೆ ಒಂದೇ ಏಟಿಗೆ ವೃದ್ಧನನ್ನು ಕೊಂದ ಬೈಕ್​ ಸವಾರ
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
‘ಬಿಗ್ ಬಾಸ್​ನ ಮಿಸ್ ಮಾಡಿಕೊಳ್ಳುತ್ತೇನೆ’; ಜಗದೀಶ್​ ಮೊದಲ ರಿಯಾಕ್ಷನ್​
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ಇಡಿ ವಿಚಾರಣೆ ಬೆನ್ನಲ್ಲೇ ದೇವರ ಮೊರೆ ಹೋದ ತಮನ್ನಾ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ
ರೆಡ್ಡಿ ಗೃಹಪ್ರವೇಶ ಕಾರ್ಯಕ್ರಮದಲ್ಲಿ ಸಹೋದರ ಸೋಮಶೇಖರ್ ರೆಡ್ಡಿ ಭಾಗಿ