AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಯಿಬಾಬಾ ಸನ್ನಿಧಿಯಲ್ಲಿ ರಾಕೆಟ್ ಲಾಂಚರ್, ಡ್ರೋನ್ ಫ್ಯಾಕ್ಟರಿಗಳು; ಶಸ್ತ್ರಾಸ್ತ್ರ ರಫ್ತಿನಲ್ಲಿ ಭಾರತ ನಂ. 1 ಆಗಲಿದೆ ಎಂದ ರಾಜನಾಥ್

No power can stop India from becoming biggest exporter of arms: ನೈಬ್ ಗ್ರೂಪ್ ಸಂಸ್ಥೆ ಶಿರಡಿಯಲ್ಲಿ ಬೃಹತ್ತಾದ ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಸೌಲಭ್ಯವನ್ನು ಅನಾವರಣಗೊಳಿಸಿದೆ. ಇಲ್ಲಿ ರಾಕೆಟ್ ಲಾಂಚರ್ ಸಿಸ್ಟಂಗಳು, ಕಾಮಿಕಾಜೆ ಡ್ರೋನ್ ಮೊದಲಾದವನ್ನು ತಯಾರಿಸಲಾಗುತ್ತದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್ ಈ ನೈಬ್ ಡಿಫೆನ್ಸ್ ಘಟಕವನ್ನು ಉದ್ಘಾಟನೆ ಮಾಡಿದ್ದಾರೆ.

ಸಾಯಿಬಾಬಾ ಸನ್ನಿಧಿಯಲ್ಲಿ ರಾಕೆಟ್ ಲಾಂಚರ್, ಡ್ರೋನ್ ಫ್ಯಾಕ್ಟರಿಗಳು; ಶಸ್ತ್ರಾಸ್ತ್ರ ರಫ್ತಿನಲ್ಲಿ ಭಾರತ ನಂ. 1 ಆಗಲಿದೆ ಎಂದ ರಾಜನಾಥ್
ರಾಜನಾಥ್ ಸಿಂಗ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 25, 2026 | 4:51 PM

Share

ಮುಂಬೈ, ಮೇ 25: ಪುಣೆ ಮೂಲದ ನೈಬ್ ಗ್ರೂಪ್​ನ (NIBE group) ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್ ಘಟಕಗಳನ್ನು ಮಹಾರಾಷ್ಟ್ರದ ಶಿರಡಿಯಲ್ಲಿ ಸ್ಥಾಪನೆಯಾಗಿದ್ದು, ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ (Rajnath Singh) ಅವರು ಉದ್ಘಾಟನೆ ಮಾಡಿದ್ದಾರೆ. ನೈಬ್ ಘಟಕದಲ್ಲಿ ರಾಕೆಟ್ ಲಾಂಚರ್ ಸಿಸ್ಟಂಗಳು, ಕಾಮಿಕಾಜೆ ಡ್ರೋನ್ ಹಾಗೂ ಇತರ ದೇಶೀಯ ಮಿಲಿಟರಿ ಶಸ್ತ್ರಾಸ್ತ್ರಗಳನ್ನು ತಯಾರಿಸಲಾಗುತ್ತದೆ. ಉದ್ಘಾಟನೆ ವೇಳೆ ರಾಜನಾಥ್ ಸಿಂಗ್ ಅವರ ಜೊತೆ ಡಿಫೆನ್ಸ್ ಸ್ಟಾಫ್ ಮುಖ್ಯಸ್ಥ ಜನರಲ್ ಅನಿಲ್ ಚೌಹಾಣ್, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವಿಸ್ ಅವರೂ ಉಪಸ್ಥಿತರಿದ್ದರು.

ನೈಬ್ ಸಂಸ್ಥೆ ಬೆಂಗಳೂರು ಸೇರಿದಂತೆ ದೇಶದ ಕೆಲವೆಡೆ ಮ್ಯಾನುಫ್ಯಾಕ್ಚರಿಂಗ್ ಘಟಕಗಳನ್ನು ಹೊಂದಿದೆ. ಭಾರತೀಯ ಸೇನೆಗೆ ಸಾಕಷ್ಟು ಮಿಲಿಟರಿ ಶಸ್ತ್ರಾಸ್ತ್ರಗಳ ಪೂರೈಕೆ ಮಾಡುತ್ತದೆ. ಇತ್ತೀಚೆಗೆ ಅದು ಸೂರ್ಯಾಸ್ತ್ರ ಎನ್ನುವ ರಾಕೆಟ್ ಲಾಂಚರ್ ಸಿಸ್ಟಂ ಅನ್ನು ಅಭಿವೃದ್ಧಿಪಡಿಸಿದೆ. ಈ ಸೂರ್ಯಾಸ್ತ್ರ ಸಿಸ್ಟಂನಿಂದ 300 ಕಿಮೀ ದೂರದವರೆಗೆ ರಾಕೆಟ್​ಗಳನ್ನು ಹಾರಿಸಲು ಸಾಧ್ಯ. ಒಡಿಶಾದ ಚಂಡೀಪುರ್​ನಲ್ಲಿರುವ ಪರೀಕ್ಷಾ ಕೇಂದ್ರದಲ್ಲಿ (ಐಟಿಆರ್) ರಾಕೆಟ್ ಲಾಂಚರ್ ಸಿಸ್ಟಂ ಅನ್ನು ಪರೀಕ್ಷಿಸಲಾಯಿತು.

ಇದನ್ನೂ ಓದಿ: ವಾಯುಸೇನೆಗೆ ಭರ್ಜರಿ ಬಲ; ಫ್ರಾನ್ಸ್​ನಿಂದ ಇನ್ನೂ 114 ರಫೇಲ್ ಜೆಟ್ ಖರೀದಿಗೆ ಸಜ್ಜು; 90 ವಿಮಾನಗಳು ಭಾರತದಲ್ಲೇ ಜೋಡಣೆ

ಅಹಿಲ್ಯಾ ನಗರ್ ಜಿಲ್ಲೆಯಲ್ಲಿರುವ ಈ ನೈಬ್ ಘಟಕದಲ್ಲಿ ಸಮಗ್ರ ಉತ್ಪಾದನಾ ವ್ಯವಸ್ಥೆಯನ್ನು ನಿರ್ಮಿಲಾಗುತ್ತಿದೆ. ಮದ್ದುಗುಂಡುಗಳು, ಮಿಸೈಲ್ ಸಿಸ್ಟಂಗಳು, ಸುಧಾರಿತ ಡಿಫೆನ್ಸ್ ಟೆಕ್ನಾಲಜಿ, ಕ್ಲೀನ್ ಎನರ್ಜಿ ಇತ್ಯಾದಿಯನ್ನು ಒಂದೇ ಕಡೆ ನೆಲೆಗೊಳಿಸಲಾಗಿದೆ.

ಭಾರತ 25-30 ವರ್ಷದಲ್ಲಿ ಅತಿದೊಡ್ಡ ಮಿಲಿಟರಿ ರಫ್ತುದಾರ ದೇಶವಾಗಲಿದೆ: ರಾಜನಾಥ್

ಭಾರತವನ್ನು ಮುಂದಿನ 25-30 ವರ್ಷದಲ್ಲಿ ಅತಿದೊಡ್ಡ ಶಸ್ತ್ರಾಸ್ತ್ರ ರಫ್ತುದಾರ ದೇಶವಾಗಲು ಯಾವ ಶಕ್ತಿಗೂ ತಡೆಯಲು ಆಗದು ಎಂದು ಈ ವೇಳೆ ಡಿಫೆನ್ಸ್ ಮಿನಿಸ್ಟರ್ ರಾಜನಾಥ್ ಸಿಂಗ್ ಹೇಳಿದರು.

ಇದನ್ನೂ ಓದಿ: 30,000 ಅಡಿ ಎತ್ತರದಲ್ಲಿ ಹಾರುತ್ತಿದ್ದ ವಿಮಾನದ ಪೈಲಟ್‌ಗೆ ಹೃದಯಾಘಾತ; ಪ್ರಯಾಣಿಕರ ಕತೆ ಏನಾಯ್ತು?

ಇದೇ ವೇಳೆ ಅವರು ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್​ನಲ್ಲಿ ಖಾಸಗಿ ಸಂಸ್ಥೆಗಳ ಪಾತ್ರ ಹೆಚ್ಚುತ್ತಿರುವ ಕುರಿತು ಮಾತನಾಡಿದರು. ಕೆಲ ವರ್ಷಗಳ ಹಿಂದೆ ಡಿಫೆನ್ಸ್ ಮ್ಯಾನುಫ್ಯಾಕ್ಚರಿಂಗ್​ನಲ್ಲಿ ತೊಡಗಿದ್ದ ಖಾಸಗಿ ಕಂಪನಿಗಳ ಸಂಖ್ಯೆ ಬಹಳ ಕಡಿಮೆ ಇತ್ತು. ಈಗ ಶೇ. 25-30ಕ್ಕೆ ಏರಿದೆ. ಮುಂದಿನ ವರ್ಷಗಳಲ್ಲಿ ಸಂಖ್ಯೆ ಶೇ. 50ಕ್ಕೆ ಏರುವ ಗುರಿ ಇದೆ ಎಂದು ರಾಜನಾಥ್ ಸಿಂಗ್ ತಿಳಿಸಿದರು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಬ್ಯಾಂಕ್ ಆಫ್ ಬರೋಡಾದಲ್ಲಿ 8.70 ಕೋಟಿ ರೂ. ದರೋಡೆ
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಸಿಎಂಗೆ ಹೈಕಮಾಂಡ್​ ದಿಲ್ಲಿ ಬುಲಾವ್ ಬಗ್ಗೆ ಜಾರಕಿಹೊಳಿ ಶಾಕಿಂಗ್ ಮಾತು
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಮಂಡ್ಯ: ಜಿಂಕೆಯನ್ನು ನುಂಗಿದ್ದ 10 ಅಡಿ ಉದ್ದದ ಬೃಹತ್ ಹೆಬ್ಬಾವು ಸೆರೆ!
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಗೃಹಲಕ್ಷ್ಮಿ ಯೋಜನೆ ಹಣ ದುರ್ಬಳಕೆ ಆರೋಪ: ಡಿಕೆ ಶಿವಕುಮಾರ್ ಮಹತ್ವದ ಹೇಳಿಕೆ
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಬಕ್ರೀದ್ ಸ್ಪೆಷಲ್: ಪೆರೆಸಂದ್ರ ಸಂತೆಯಲ್ಲಿ ಕುರಿಗಳಿಗೆ ಭಾರೀ ಬೇಡಿಕೆ!
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಅಭಿಮಾನಿಗಳ ಬಳಿ ವಿಶೇಷ ಮನವಿ ಇಟ್ಟ ಅಶ್ವಿನಿ ಗೌಡ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಕಳ್ಳನಾಯಿ: ಬೈಕ್​ನಿಂದ 1 ಲಕ್ಷ ರೂ.ಇದ್ದ ಹಣದ ಬ್ಯಾಗ್ ಕದ್ದೊಯ್ದ ನಾಯಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ಭಟ್ಕಳ ಮೂರಿನ್ ಕಟ್ಟೆ ವಿವಾದ: ಅಸಲಿಗೆ ಆಗಿದ್ದೇನೆಂಬ ಮಾಹಿತಿ ಕೊಟ್ಟ ಎಸ್ಪಿ
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ವಿದೇಶಿ ಪ್ರವಾಸ ಕೈಬಿಟ್ಟು ಸ್ವದೇಶಿ ಪ್ರವಾಸಕ್ಕೆ ಆದ್ಯತೆ ನೀಡಿ!
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು
ಭಟ್ಕಳ ದುರಂತ: ಮನಕಲಕುವಂತಿದೆ ಜಲಸಮಾಧಿಯಾದ 11 ಮಂದಿಯ ಕುಟುಂಬದ ಕಥೆಗಳು