Sign In

By signing in or creating an account, you agree with Associated Broadcasting Company's Terms & Conditions and Privacy Policy.

Raksha Bandhan: ಆಗಸ್ಟ್ 30, 31- ಎರಡು ದಿನ ರಕ್ಷಾಬಂಧನ; ಯಾವತ್ತು ಬ್ಯಾಂಕಿಗೆ ರಜೆ?; ಇಲ್ಲಿದೆ ಡೀಟೇಲ್ಸ್

Bank Holidays on August 30 and 31st: ರಕ್ಷಾ ಬಂಧನ್ ಹಬ್ಬ ಆಗಸ್ಟ್ 30 ಮತ್ತು 31ರಂದು ಇದೆ. ದೇಶದ ಕೆಲವೆಡೆ 30ಕ್ಕೆ, ಇನ್ನೂ ಕೆಲವೆಡೆ 31ಕ್ಕೆ ರಕ್ಷಾಬಂಧನ್ ಆಚರಿಸಲಾಗುತ್ತದೆ. ವಿವಿಧ ಪ್ರದೇಶಗಳಲ್ಲಿ ಇವೆರಡು ದಿನಗಳು ಬ್ಯಾಂಕುಗಳಿಗೆ ರಜೆ ಇರುತ್ತದೆ. ಕರ್ನಾಟಕದಲ್ಲಿ ಇವ್ಯಾವ ದಿನದಲ್ಲೂ ಬ್ಯಾಂಕ್ ರಜೆ ಇಲ್ಲ. ಸೆಪ್ಟೆಂಬರ್ ತಿಂಗಳಲ್ಲಿ ವಿನಾಯಕ ಚತುರ್ಥಿ ಮತ್ತು ಈದ್ ಮಿಲಾದ್ ಸೇರಿ ಬೆಂಗಳೂರಿನಲ್ಲಿ ಬ್ಯಾಂಕುಗಳಿಗೆ 8 ದಿನ ರಜೆ ಇರುತ್ತದೆ.

Raksha Bandhan: ಆಗಸ್ಟ್ 30, 31- ಎರಡು ದಿನ ರಕ್ಷಾಬಂಧನ; ಯಾವತ್ತು ಬ್ಯಾಂಕಿಗೆ ರಜೆ?; ಇಲ್ಲಿದೆ ಡೀಟೇಲ್ಸ್
ರಕ್ಷಾ ಬಂಧನ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 30, 2023 | 10:36 AM

ನವದೆಹಲಿ, ಆಗಸ್ಟ್ 30: ಅಣ್ಣ ತಂಗಿಯರ ಬಾಂಧವ್ಯದ ಸಂಕೇತವಾಗಿ ರಕ್ಷಾ ಬಂಧನ ಹಬ್ಬವನ್ನು (Raksha Bandhan Festival) ದೇಶಾದ್ಯಂತ ಆಚರಿಸಲಾಗುತ್ತದೆ. ಈ ವರ್ಷ ಆಗಸ್ಟ್ 30 ಮತ್ತು 31ರಂದು ರಕ್ಷಾ ಬಂಧನ್ ಇದೆ. ಇವತ್ತು ಕೆಲ ನಗರಗಳಲ್ಲಿ ಆಚರಿಸಿದರೆ, ನಾಳೆ ಬೇರೆ ಕೆಲ ನಗರಗಳಲ್ಲಿ ರಕ್ಷಾ ಬಂಧನ್ ಹಬ್ಬ ಇದೆ. ಆರ್​ಬಿಐ ಕ್ಯಾಲೆಂಡರ್​ನ ಆಗಸ್ಟ್ ತಿಂಗಳ ರಜಾ ದಿನಗಳ ಪಟ್ಟಿಯಲ್ಲಿ (Bank holidays list) 30 ಮತ್ತು 31ನೇ ತಾರೀಖು ರಕ್ಷಾ ಬಂಧನ ಇದೆ. ಕೆಲ ನಗರಗಳಲ್ಲಿ ಬ್ಯಾಂಕುಗಳಿಗೆ ಆಗಸ್ಟ್ 30ರಂದು ರಜೆ ಇದ್ದರೆ, ಇನ್ನೂ ಕೆಲ ಬ್ಯಾಂಕುಗಳಲ್ಲಿ ಆಗಸ್ಟ್ 31ರಂದು ರಜೆ ಇದೆ.

ರಕ್ಷಾ ಬಂಧನ ಪ್ರಯುಕ್ತ ಬ್ಯಾಂಕುಗಳು ರಜೆ ಇರುವ ನಗರಗಳಿವು:

ಆಗಸ್ಟ್ 30: ಶ್ರೀನಗರ್ (ಜಮ್ಮು ಮತ್ತು ಕಾಶ್ಮೀರ) ಮತ್ತು ಜೈಪುರ್ (ರಾಜಸ್ಥಾನ).

ಆಗಸ್ಟ್ 31: ತಿರುವನಂತಪುರಂ, ಕೊಚ್ಚಿ (ಕೇರಳ), ಗ್ಯಾಂಗ್​ಟಕ್ (ಸಿಕ್ಕಿಂ), ಲಕ್ನೋ, ಕಾನಪುರ್ (ಉತ್ತರ ಪ್ರದೇಶ), ಡೆಹ್ರಾಡೂನ್ (ಉತ್ತರಾಖಂಡ್) ನಗರಗಳಲ್ಲಿ ರಜೆ ಇದೆ.

ಇದನ್ನೂ ಓದಿ: ಎರಡು ವರ್ಷದಿಂದ ವಹಿವಾಟು ಕಾಣದೆ ನಿಷ್ಕ್ರಿಯಗೊಂಡ ಬ್ಯಾಂಕ್ ಖಾತೆಗಳೆಷ್ಟು? ಜನ್ ಧನ್ ಖಾತೆಗಳೆಷ್ಟು? ಇಲ್ಲಿದೆ ಡೀಟೇಲ್ಸ್

ಕರ್ನಾಟಕದಲ್ಲಿ ರಕ್ಷಾ ಬಂಧನ್ ಹಬ್ಬಕ್ಕೆ ರಜೆ ಇಲ್ಲ

ಬೆಂಗಳೂರು ಸೇರಿದಂತೆ ಕರ್ನಾಟಕ ಯಾವ ಕಡೆಯೂ ರಕ್ಷಾ ಬಂಧನ್ ಹಬ್ಬದ ಪ್ರಯುಕ್ತ ರಜೆಗಳಿಲ್ಲ. ಆಗಸ್ಟ್ 30 ಆಗಲೀ, 31ರಲ್ಲಾಗಲೀ ರಾಜ್ಯದ ಬ್ಯಾಂಕುಗಳಿಗೆ ರಜೆ ಇರುವುದಿಲ್ಲ. ಯಥಾ ರೀತಿಯಲ್ಲಿ ಕಾರ್ಯನಿರ್ವಹಿಸುತ್ತವೆ.

ಸೆಪ್ಟೆಂಬರ್ ತಿಂಗಳಲ್ಲಿ ಬ್ಯಾಂಕುಗಳಿಗೆ ಯಾವ್ಯಾವತ್ತು ರಜೆ?

ಆರ್​ಬಿಐ ಕ್ಯಾಲೆಂಡರ್ ಪ್ರಕಾರ ಭಾರತದಾದ್ಯಂತ ಸೆಪ್ಟಂಬರ್ ತಿಂಗಳಲ್ಲಿ 16 ದಿನ ರಜೆ ಇದೆ. ಭಾನುವಾರ ಮತ್ತು ಶನಿವಾರದ ರಜೆಗಳೂ ಇದರಲ್ಲಿ ಸೇರಿವೆ. ಈದ್ ಮಿಲಾದ್, ಕೃಷ್ಣ ಜನ್ಮಾಷ್ಟಮಿ, ವಿನಾಯಕ ಚತುರ್ಥಿ ಮೊದಲಾದ ಹಬ್ಬಗಳ ರಜೆಯೂ ಇದರಲ್ಲಿ ಒಳಗೊಂಡಿದೆ. ಈ ಪೈಕಿ ಕರ್ನಾಟಕದಲ್ಲಿ 8 ದಿನ ರಜೆ ಇದೆ. ಗಣೇಶ ಹಬ್ಬ ಮತ್ತು ಈದ್ ಮಿಲಾದ್ ಬಿಟ್ಟರೆ ಉಳಿದವರು ಭಾನುವಾರ ಮತ್ತು ಶನಿವಾರದ ರಜೆಗಳಾಗಿವೆ.

ಇದನ್ನೂ ಓದಿ: ಸೆಪ್ಟೆಂಬರ್​ನಲ್ಲಿ ಬ್ಯಾಂಕುಗಳಿಗೆ 16 ದಿನ ರಜೆ; ಕರ್ನಾಟಕದಲ್ಲಿ ಯಾವ್ಯಾವತ್ತು ರಜೆ ಇದೆ, ಇದಲ್ಲಿದೆ ಪಟ್ಟಿ

ಬೆಂಗಳೂರಿನಲ್ಲಿ 2023ರ ಸೆಪ್ಟೆಂಬರ್​ನಲ್ಲಿ ಬ್ಯಾಂಕ್ ರಜೆಗಳ ಪಟ್ಟಿ

  1. ಸೆಪ್ಟೆಂಬರ್ 3: ಭಾನುವಾರ
  2. ಸೆಪ್ಟೆಂಬರ್ 9: ಎರಡನೇ ಶನಿವಾರ
  3. ಸೆಪ್ಟೆಂಬರ್ 10: ಭಾನುವಾರ
  4. ಸೆಪ್ಟೆಂಬರ್ 17: ಭಾನುವಾರ
  5. ಸೆಪ್ಟೆಂಬರ್ 18: ವಿನಾಯಕ ಚತುರ್ಥಿ
  6. ಸೆಪ್ಟೆಂಬರ್ 23: ನಾಲ್ಕನೇ ಶನಿವಾರ
  7. ಸೆಪ್ಟೆಂಬರ್ 24: ಭಾನುವಾರ
  8. ಸೆಪ್ಟೆಂಬರ್ 28: ಈದ್ ಮಿಲಾದ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ನಂದಿನಿ ಹಾಲಿನ ದರ ಹೆಚ್ಚಳ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾ ನಾಯ್ಕ್ ಸ್ಪಷ್ಟನೆ
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಜಿಲ್ಲಾ, ತಾಲೂಕು ಪಂಚಾಯ್ತಿ ಎಲೆಕ್ಷನ್​ ಬಗ್ಗೆ ಆಯುಕ್ತ ಹೇಳಿದ್ದಿಷ್ಟು!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಕರ್ನಾಟಕದ ಐದು ಮಹಾ ನಗರ ಪಾಲಿಕೆ ಚುನಾವಣೆಗೆ ಮುಹೂರ್ತ ಫಿಕ್ಸ್..!
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಬುರ್ಖಾ ಧಾರಣೆ ಕುರಿತು ವಿದ್ಯಾರ್ಥಿನಿಯ ವಿಡಿಯೋ ಬಗ್ಗೆ ಬಿಇಒ ಸ್ಪಷ್ಟನೆ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
ಸಿಟಿ ರವಿ ಮತ್ತು ತಮ್ಮಯ್ಯ ನಡುವೆ ಮುಂದುವರಿದ ರಾಜಕೀಯ ಕಿತ್ತಾಟ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
700 ಸಂಚಿಕೆ ಪೂರೈಸಿದ ಶ್ರೀರಸ್ತು ಶುಭಮಸ್ತು ಸೀರಿಯಲ್: ಸುಧಾರಾಣಿ ಸಡಗರ ನೋಡಿ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಕಮ್ರಾ ವಿವಾದಾತ್ಮಕ ಶೋ ಬಳಿಕ ಮುಂಬೈ ಕಾಮಿಡಿ ಕ್ಲಬ್‌ ಧ್ವಂಸ ಕಾರ್ಯಾಚರಣೆ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಸ್ಪೀಕರ್ ಖಾದರ್ ನಿರ್ಣಯ ಪುನರ್ ಪರಿಶೀಲಿಸಿ ವಾಪಸ್ಸು ಪಡೆಯಬೇಕು: ಕಾಗೇರಿ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಬಸನಗೌಡ ಯತ್ನಾಳ್ ಒಬ್ಬ ನಕಲಿ ಹಿಂದೂತ್ವವಾದಿ: ರೇಣುಕಾಚಾರ್ಯ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ
ಜವಾಬ್ದಾರಿಯುತ ಸ್ಥಾನದಲ್ಲಿರುವ ಶಿವಕುಮಾರ್ ವಿರುದ್ಧ ಆರೋಪ ಸರಿಯಲ್ಲ: ಶಾಸಕ