AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hotel Business: ರಾಮೇಶ್ವರಂ ಕೆಫೆ- ಬೆಂಗಳೂರಿನ ಗ್ರಾಹಕ ಪ್ರಿಯವಾದ ಈ ಹೋಟೆಲಿಗೆ ಆ ಹೆಸರು ಬಂದಿದ್ದು ಹೇಗೆ ಗೊತ್ತಾ?

Bangalore's Rameshwaram Cafe: ತುಪ್ಪದ ಪುಡಿ ಇಡ್ಲಿ, ತುಪ್ಪದ ಪುಡಿ ಮಸಾಲೆ ದೋಸೆ, ಬಟನ್ ಇಡ್ಲಿ ಸಾಂಬಾರ್, ಪೊಂಗಲ್, ಬೆಳ್ಳುಳ್ಳಿ ರೋಸ್ಟ್ ದೋಸೆಗಳು ಬೆಂಗಳೂರಿನ ರಾಮೇಶ್ವರಂ ಕೆಫೆಯ ಮೇರು ಭಕ್ಷ್ಯಗಳಾಗಿವೆ.

Hotel Business:  ರಾಮೇಶ್ವರಂ ಕೆಫೆ- ಬೆಂಗಳೂರಿನ ಗ್ರಾಹಕ ಪ್ರಿಯವಾದ ಈ ಹೋಟೆಲಿಗೆ ಆ ಹೆಸರು ಬಂದಿದ್ದು ಹೇಗೆ ಗೊತ್ತಾ?
ರಾಮೇಶ್ವರಂ ಕೆಫೆ- ಬೆಂಗಳೂರಿನ ಈ ಹೋಟೆಲಿಗೆ ಆ ಹೆಸರು ಬಂದಿದ್ದು ಹೇಗೆ ಗೊತ್ತಾ?
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:May 14, 2023 | 6:14 PM

Share

ಬೆಂಗಳೂರು: ಬೆಂಗಳೂರಿಗರ ಜಿಹ್ವಾ ಚಾಪಲ್ಯ ತಣಿಸುವ ಅಸಂಖ್ಯಾತ ಹೋಟೆಲ್​ಗಳಿವೆ. ಫುಟ್​ಪಾತ್​ನಲ್ಲಿರುವ ಒಂದು ಸಣ್ಣ ಗೂಡಂಗಡಿ ಹೋಟೆಲ್​ನಿಂದ ಹಿಡಿದು ಫೈವ್ ಸ್ಟಾರ್ ಹೋಟೆಲ್​ವರೆಗೂ ವಿವಿಧ ಸ್ತರಗಳ ಜನರ ಬಜೆಟ್​ಗಳಿಗೆ, ಅಭಿರುಚಿಗಳಿಗೆ ಅನುಗುಣವಾದ ಆಹಾರ ಆಯ್ಕೆಗಳಿವೆ. ಆದರೂ ಬೆಂಗಳೂರಿನ ಹೋಟೆಲ್ ಎಂದರೆ ತತ್​ಕ್ಷಣ ನೆನಪಿಗೆ ಬರುವುದು ವಿದ್ಯಾರ್ಥಿ ಭವನ್, ಎಂಟಿಅರ್, ವೀಣಾ ಸ್ಟೋರ್ಸ್, ಅಯ್ಯರ್ಸ್ ಮೆಸ್ ಇತ್ಯಾದಿ. ಸಣ್ಣ ಜಾಗದಲ್ಲಿ ಸ್ಥಾಪನೆಯಾಗಿ ಇವು ದಿನವೂ ನೂರಾರು ಸಾವಿರಾರು ಮಂದಿ ಗ್ರಾಹಕರನ್ನು ಸೆಳೆಯುತ್ತವೆ.

ಇಂದಿರಾ ನಗರ, ಜೆಪಿ ನಗರ ಇತ್ಯಾದಿ ಕಡೆ ಇರುವ ರಾಮೇಶ್ವರಂ ಕೆಫೆ ಇಂತಹ ಒಂದು ಹೋಟೆಲ್. ರಾಮೇಶ್ವರಂ ಕೆಫೆಯು (Rameshwaram Cafe) ಬೆಂಗಳೂರಿನಲ್ಲಿರುವ ಪ್ರೀಮಿಯಂ ದಕ್ಷಿಣ ಭಾರತೀಯ ವೆಜ್ ಕೆಫೆಯಾಗಿದೆ. ಈ ಕೆಫೆಯು ಭಾರತದ ಹೆಮ್ಮೆಯ ಪುತ್ರ, ಮಿಸೈಲ್ ಮ್ಯಾನ್ ಮತ್ತು ದೇಶದ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ (Dr APJ Abdul Kalam) ಅವರಿಂದ ಸ್ಫೂರ್ತಿ ಪಡೆದು ಮತ್ತು ಅವರಿಗೆ ಸಮರ್ಪಿತವಾದ ಹೋಟೆಲ್​ ಆಗಿದೆ. ಏಕೆಂದರೆ ರಾಮೇಶ್ವರಂ (Rameshwaram) ಎಂಬುದು ಅಬ್ದುಲ್ ಕಲಾಂ ಅವರ ಜನ್ಮಸ್ಥಳ. ಹಾಗಾಗಿಯೇ ಆ ಮಹಾನ್​ ಚೇತನದಿಂದ ಸ್ಫೂರ್ತಿ ಪಡೆದು ನಮ್ಮ ಹೋಟೆಲಿಗೆ ರಾಮೇಶ್ವರಂ ಕೆಫೆ ಎಂದು ಹೆಸರು ಇಟ್ಟೆವು ಎಂದು ಸ್ಥಾಪಕರಾದ ದಿವ್ಯಾ ಮತ್ತು ರಾಘವೇಂದ್ರ ರಾವ್ ಹೆಮ್ಮೆಯಿಂದ ಹೇಳುತ್ತಾರೆ. ರಾಮೇಶ್ವರಂ ಕೆಫೆಯು ಎಲ್ಲಾ ರೀತಿಯ ಜನರಿಗೆ ಮುಂಜಾನೆ 5 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಸೇವೆ ಸಲ್ಲಿಸುವ ಬೆಂಗಳೂರಿನಲ್ಲಿರುವ ಏಕೈಕ ರೆಸ್ಟೋರೆಂಟ್ ಇದಾಗಿದೆ.

ಇದನ್ನೂ ಓದಿ: Apple Phones: ಆ್ಯಪಲ್ ಫೋನ್ ಫ್ಯಾಕ್ಟರಿಗಾಗಿ ಬೆಂಗಳೂರಿನಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿಸಿದ ಫಾಕ್ಸ್​ಕಾನ್

ದಿವ್ಯಾ ಮತ್ತು ರಾಘವೇಂದ್ರ ರಾವ್ ಸ್ಥಾಪಿಸಿರುವ ರಾಮೇಶ್ವರಂ ಕೆಫೆ ಈಗ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹರಡಿದೆ. ಎಲ್ಲಾ ಬ್ರ್ಯಾಂಚ್​ಗಳಲ್ಲೂ ಉತ್ತಮ ಬ್ಯುಸಿನೆಸ್ ಕಾಣುತ್ತಿದೆ. ಬೆಂಗಳೂರಿನ ಬ್ರಾಹ್ಮಿಣ್ಸ್, ಅಯ್ಯಂಗಾರ್ ಬ್ರ್ಯಾಂಡ್​ನ ಹೋಟೆಲ್​ಗಳಲ್ಲಿರುವಂತೆ ರಾಮೇಶ್ವರಂ ಕೆಫೆಯಲ್ಲಿ ಸ್ವಾದಿಷ್ಟಕರ ಆಹಾರಗಳ ಆಯ್ಕೆ ಇದೆ. ಅಪ್ಪಟ ಸಸ್ಯಾಹಾರದ ಖಾದ್ಯಗಳ ಮೆನು ಇಲ್ಲಿದೆ. ಇಡ್ಲಿ ವಡೆ, ದೋಸೆ, ರೈಸ್​ಬಾತ್ ಇತ್ಯಾದಿ ಮಾಮೂಲಿಯ ಆಹಾರವೇ ಆದರೂ ರುಚಿಯಲ್ಲಿ ಒಂದು ಹಂತ ಮೇಲಿದೆ. ಹೀಗಾಗಿ, ಈ ಹೋಟೆಲ್​ ಸದಾ ಜನರಿಂದ ತುಂಬಿರುತ್ತದೆ. ತುಪ್ಪದ ಪುಡಿ ಇಡ್ಲಿ, ತುಪ್ಪದ ಪುಡಿ ಮಸಾಲೆ ದೋಸೆ, ಬಟನ್ ಇಡ್ಲಿ ಸಾಂಬಾರ್, ಪೊಂಗಲ್, ಬೆಳ್ಳುಳ್ಳಿ ರೋಸ್ಟ್ ದೋಸೆಗಳು ನಮ್ಮ ಮೇರು ಭಕ್ಷ್ಯಗಳಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Sun, 14 May 23

ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ಕೃಷ್ಣಭೈರೇಗೌಡ ವಿರುದ್ಧ ಭೂಕಬಳಿಕೆ ಆರೋಪ: ಆ ಭೂಮಿ ಎಲ್ಲಿ? ಹೇಗಿದೆ ನೋಡಿ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!