AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hotel Business: ರಾಮೇಶ್ವರಂ ಕೆಫೆ- ಬೆಂಗಳೂರಿನ ಗ್ರಾಹಕ ಪ್ರಿಯವಾದ ಈ ಹೋಟೆಲಿಗೆ ಆ ಹೆಸರು ಬಂದಿದ್ದು ಹೇಗೆ ಗೊತ್ತಾ?

Bangalore's Rameshwaram Cafe: ತುಪ್ಪದ ಪುಡಿ ಇಡ್ಲಿ, ತುಪ್ಪದ ಪುಡಿ ಮಸಾಲೆ ದೋಸೆ, ಬಟನ್ ಇಡ್ಲಿ ಸಾಂಬಾರ್, ಪೊಂಗಲ್, ಬೆಳ್ಳುಳ್ಳಿ ರೋಸ್ಟ್ ದೋಸೆಗಳು ಬೆಂಗಳೂರಿನ ರಾಮೇಶ್ವರಂ ಕೆಫೆಯ ಮೇರು ಭಕ್ಷ್ಯಗಳಾಗಿವೆ.

Hotel Business:  ರಾಮೇಶ್ವರಂ ಕೆಫೆ- ಬೆಂಗಳೂರಿನ ಗ್ರಾಹಕ ಪ್ರಿಯವಾದ ಈ ಹೋಟೆಲಿಗೆ ಆ ಹೆಸರು ಬಂದಿದ್ದು ಹೇಗೆ ಗೊತ್ತಾ?
ರಾಮೇಶ್ವರಂ ಕೆಫೆ- ಬೆಂಗಳೂರಿನ ಈ ಹೋಟೆಲಿಗೆ ಆ ಹೆಸರು ಬಂದಿದ್ದು ಹೇಗೆ ಗೊತ್ತಾ?
ಸುಗ್ಗನಹಳ್ಳಿ ವಿಜಯಸಾರಥಿ
| Edited By: |

Updated on:May 14, 2023 | 6:14 PM

Share

ಬೆಂಗಳೂರು: ಬೆಂಗಳೂರಿಗರ ಜಿಹ್ವಾ ಚಾಪಲ್ಯ ತಣಿಸುವ ಅಸಂಖ್ಯಾತ ಹೋಟೆಲ್​ಗಳಿವೆ. ಫುಟ್​ಪಾತ್​ನಲ್ಲಿರುವ ಒಂದು ಸಣ್ಣ ಗೂಡಂಗಡಿ ಹೋಟೆಲ್​ನಿಂದ ಹಿಡಿದು ಫೈವ್ ಸ್ಟಾರ್ ಹೋಟೆಲ್​ವರೆಗೂ ವಿವಿಧ ಸ್ತರಗಳ ಜನರ ಬಜೆಟ್​ಗಳಿಗೆ, ಅಭಿರುಚಿಗಳಿಗೆ ಅನುಗುಣವಾದ ಆಹಾರ ಆಯ್ಕೆಗಳಿವೆ. ಆದರೂ ಬೆಂಗಳೂರಿನ ಹೋಟೆಲ್ ಎಂದರೆ ತತ್​ಕ್ಷಣ ನೆನಪಿಗೆ ಬರುವುದು ವಿದ್ಯಾರ್ಥಿ ಭವನ್, ಎಂಟಿಅರ್, ವೀಣಾ ಸ್ಟೋರ್ಸ್, ಅಯ್ಯರ್ಸ್ ಮೆಸ್ ಇತ್ಯಾದಿ. ಸಣ್ಣ ಜಾಗದಲ್ಲಿ ಸ್ಥಾಪನೆಯಾಗಿ ಇವು ದಿನವೂ ನೂರಾರು ಸಾವಿರಾರು ಮಂದಿ ಗ್ರಾಹಕರನ್ನು ಸೆಳೆಯುತ್ತವೆ.

ಇಂದಿರಾ ನಗರ, ಜೆಪಿ ನಗರ ಇತ್ಯಾದಿ ಕಡೆ ಇರುವ ರಾಮೇಶ್ವರಂ ಕೆಫೆ ಇಂತಹ ಒಂದು ಹೋಟೆಲ್. ರಾಮೇಶ್ವರಂ ಕೆಫೆಯು (Rameshwaram Cafe) ಬೆಂಗಳೂರಿನಲ್ಲಿರುವ ಪ್ರೀಮಿಯಂ ದಕ್ಷಿಣ ಭಾರತೀಯ ವೆಜ್ ಕೆಫೆಯಾಗಿದೆ. ಈ ಕೆಫೆಯು ಭಾರತದ ಹೆಮ್ಮೆಯ ಪುತ್ರ, ಮಿಸೈಲ್ ಮ್ಯಾನ್ ಮತ್ತು ದೇಶದ ಮಾಜಿ ರಾಷ್ಟ್ರಪತಿ ಡಾ ಎಪಿಜೆ ಅಬ್ದುಲ್ ಕಲಾಂ (Dr APJ Abdul Kalam) ಅವರಿಂದ ಸ್ಫೂರ್ತಿ ಪಡೆದು ಮತ್ತು ಅವರಿಗೆ ಸಮರ್ಪಿತವಾದ ಹೋಟೆಲ್​ ಆಗಿದೆ. ಏಕೆಂದರೆ ರಾಮೇಶ್ವರಂ (Rameshwaram) ಎಂಬುದು ಅಬ್ದುಲ್ ಕಲಾಂ ಅವರ ಜನ್ಮಸ್ಥಳ. ಹಾಗಾಗಿಯೇ ಆ ಮಹಾನ್​ ಚೇತನದಿಂದ ಸ್ಫೂರ್ತಿ ಪಡೆದು ನಮ್ಮ ಹೋಟೆಲಿಗೆ ರಾಮೇಶ್ವರಂ ಕೆಫೆ ಎಂದು ಹೆಸರು ಇಟ್ಟೆವು ಎಂದು ಸ್ಥಾಪಕರಾದ ದಿವ್ಯಾ ಮತ್ತು ರಾಘವೇಂದ್ರ ರಾವ್ ಹೆಮ್ಮೆಯಿಂದ ಹೇಳುತ್ತಾರೆ. ರಾಮೇಶ್ವರಂ ಕೆಫೆಯು ಎಲ್ಲಾ ರೀತಿಯ ಜನರಿಗೆ ಮುಂಜಾನೆ 5 ರಿಂದ ಮಧ್ಯರಾತ್ರಿ 1 ಗಂಟೆಯವರೆಗೆ ಸೇವೆ ಸಲ್ಲಿಸುವ ಬೆಂಗಳೂರಿನಲ್ಲಿರುವ ಏಕೈಕ ರೆಸ್ಟೋರೆಂಟ್ ಇದಾಗಿದೆ.

ಇದನ್ನೂ ಓದಿ: Apple Phones: ಆ್ಯಪಲ್ ಫೋನ್ ಫ್ಯಾಕ್ಟರಿಗಾಗಿ ಬೆಂಗಳೂರಿನಲ್ಲಿ 303 ಕೋಟಿ ರೂ.ಗೆ ಭೂಮಿ ಖರೀದಿಸಿದ ಫಾಕ್ಸ್​ಕಾನ್

ದಿವ್ಯಾ ಮತ್ತು ರಾಘವೇಂದ್ರ ರಾವ್ ಸ್ಥಾಪಿಸಿರುವ ರಾಮೇಶ್ವರಂ ಕೆಫೆ ಈಗ ಬೆಂಗಳೂರಿನ ವಿವಿಧ ಭಾಗಗಳಲ್ಲಿ ಹರಡಿದೆ. ಎಲ್ಲಾ ಬ್ರ್ಯಾಂಚ್​ಗಳಲ್ಲೂ ಉತ್ತಮ ಬ್ಯುಸಿನೆಸ್ ಕಾಣುತ್ತಿದೆ. ಬೆಂಗಳೂರಿನ ಬ್ರಾಹ್ಮಿಣ್ಸ್, ಅಯ್ಯಂಗಾರ್ ಬ್ರ್ಯಾಂಡ್​ನ ಹೋಟೆಲ್​ಗಳಲ್ಲಿರುವಂತೆ ರಾಮೇಶ್ವರಂ ಕೆಫೆಯಲ್ಲಿ ಸ್ವಾದಿಷ್ಟಕರ ಆಹಾರಗಳ ಆಯ್ಕೆ ಇದೆ. ಅಪ್ಪಟ ಸಸ್ಯಾಹಾರದ ಖಾದ್ಯಗಳ ಮೆನು ಇಲ್ಲಿದೆ. ಇಡ್ಲಿ ವಡೆ, ದೋಸೆ, ರೈಸ್​ಬಾತ್ ಇತ್ಯಾದಿ ಮಾಮೂಲಿಯ ಆಹಾರವೇ ಆದರೂ ರುಚಿಯಲ್ಲಿ ಒಂದು ಹಂತ ಮೇಲಿದೆ. ಹೀಗಾಗಿ, ಈ ಹೋಟೆಲ್​ ಸದಾ ಜನರಿಂದ ತುಂಬಿರುತ್ತದೆ. ತುಪ್ಪದ ಪುಡಿ ಇಡ್ಲಿ, ತುಪ್ಪದ ಪುಡಿ ಮಸಾಲೆ ದೋಸೆ, ಬಟನ್ ಇಡ್ಲಿ ಸಾಂಬಾರ್, ಪೊಂಗಲ್, ಬೆಳ್ಳುಳ್ಳಿ ರೋಸ್ಟ್ ದೋಸೆಗಳು ನಮ್ಮ ಮೇರು ಭಕ್ಷ್ಯಗಳಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 3:43 pm, Sun, 14 May 23

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ