AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rana Talwar Passes Away: ರಾಣಾ ತಲ್ವಾರ್ ನಿಧನ; ಜಾಗತಿಕ ಬ್ಯಾಂಕೊಂದರ ಮುಖ್ಯಸ್ಥರಾದ ಮೊದಲ ಭಾರತೀಯ ಇವರು

first Indian to Head Global Bank: ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ನ ಮಾಜಿ ಛೇರ್ಮನ್ ರಾಣಾ ತಲ್ವಾರ್ ಜನವರಿ 27ರಂದು ನಿಧನರಾಗಿದ್ದಾರೆ. ಪತ್ನಿ ರೇಣುಕಾ ಮತ್ತು ಮಗ ರಾಹುಲ್ ಅವರನ್ನು ಅಗಲಿದ್ದಾರೆ. 76 ವರ್ಷ ರಾಣಾ ತಲ್ವಾರ್ ಕೆಲ ಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದರೆನ್ನಲಾಗಿದೆ.

Rana Talwar Passes Away: ರಾಣಾ ತಲ್ವಾರ್ ನಿಧನ; ಜಾಗತಿಕ ಬ್ಯಾಂಕೊಂದರ ಮುಖ್ಯಸ್ಥರಾದ ಮೊದಲ ಭಾರತೀಯ ಇವರು
ರಾಣಾ ತಲ್ವಾರ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 28, 2024 | 11:33 AM

Share

ನವದೆಹಲಿ, ಜನವರಿ 28: ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ನ ಮುಖ್ಯಸ್ಥರಾಗಿದ್ದ ರಾಣಾ ತಲ್ವಾರ್ (Rana Talwar) ಶನಿವಾರ (ಜ. 27) ಮೃತಪಟ್ಟಿರುವ ಸುದ್ದಿ ಟೈಮ್ಸ್ ಆಫ್ ಇಂಡಿಯಾ ಪತ್ರಿಕೆಯಲ್ಲಿ ವರದಿಯಾಗಿದೆ. ರಾಣಾ ಅವರಿಗೆ 76 ವರ್ಷ ವಯಸ್ಸಾಗಿದ್ದು, ಪತ್ನಿ ರೇಣುಕಾ ಹಾಗೂ ಮಗ ರಾಹುಲ್ ಅವರನ್ನು ಅಗಲಿದ್ದಾರೆ. ಕೆಲ ಕಾಲದಿಂದ ರಾಣಾ ತಲ್ವಾರ್ ಅನಾರೋಗ್ಯದಿಂದ ಬಾಧಿತರಾಗಿದ್ದರು ಎನ್ನಲಾಗಿದೆ. ವರದಿ ಪ್ರಕಾರ ಇಂದು ಭಾನುವಾರ ದೆಹಲಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ.

ರಾಣಾ ತಲ್ವಾರ್ ಅವರ ಪತ್ನಿ ರೇಣುಕಾ ಖ್ಯಾತ ಉದ್ಯಮಿ ಕೆಪಿ ಸಿಂಗ್ ಅವರ ಪುತ್ರಿ. ಕೆಪಿ ಸಿಂಗ್ ಅವರು ಡಿಎಲ್​ಎಫ್ ಗ್ರೂಪ್​ನ ಮಾಜಿ ಮುಖ್ಯಸ್ಥರೂ ಹೌದು. ಇನ್ನು, ತಲ್ವಾರ್ ಅವರ ಮಗ ರಾಹುಲ್ ಡಿಎಲ್​ಎಫ್ ಸಂಸ್ಥೆಯಲ್ಲಿ ಪ್ರಮುಖ ಹುದ್ದೆಯಲ್ಲಿದ್ದಾರೆ. ರಾಣಾ ತಲ್ವಾರ್ ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ಗೆ ಮುನ್ನ ಸಿಟಿ ಬ್ಯಾಂಕ್​ನಲ್ಲಿ ಕೆಲಸ ಮಾಡಿದ್ದರು. ಸೇಬರ್ ಕ್ಯಾಪಿಟಲ್ ಎಂಬ ಕಂಪನಿಯ ಸಂಸ್ಥಾಪಕ ಛೇರ್ಮನ್ ಮತ್ತು ಮ್ಯಾನೇಜಿಂಗ್ ಪಾರ್ಟ್ನರ್ ಕೂಡ ಆಗಿದ್ದರು.

ಇದನ್ನೂ ಓದಿ: Krutrim Record: ಒಂದು ಬಿಲಿಯನ್ ಡಾಲರ್ ಮೌಲ್ಯದ ಭಾರತದ ಮೊದಲ ಎಐ ಕಂಪನಿ; ಓಲಾ ಸ್ಥಾಪಕರ ಹೊಸ ಸಾಹಸಕ್ಕೆ ಫಲಶೃತಿ

ರಾಣಾ ತಲ್ವಾರ್ ದೆಹಲಿಯಲ್ಲಿ ಎಕನಾಮಿಕ್ಸ್ ಪದವೀಧರರಾಗಿದ್ದಾರೆ. ಬಳಿಕ ಅವರು ಬ್ಯಾಂಕಿಂಗ್ ಕ್ಷೇತ್ರದಲ್ಲಿ ಕೆಲಸ ಆರಂಭಿಸಿದ್ದರು. 1969ರಲ್ಲಿ ಸಿಟಿ ಬ್ಯಾಂಕ್ ಮೂಲಕ ಅವರ ವೃತ್ತಿಜೀವನ ಆರಂಭವಾಯಿತು. ಸಿಟಿ ಬ್ಯಾಂಕ್​ನಲ್ಲಿ ಹಂತ ಹಂತವಾಗಿ ಬಡ್ತಿ ಪಡೆದು ಮೇಲೇರಿದ ಅವರು ಆ ಬ್ಯಾಂಕ್​ನ ಏಷ್ಯಾ ಪೆಸಿಫಿಕ್, ಮಿಡಲ್ ಈಸ್ಟ್, ಯೂರೋಪ್ ಮತ್ತು ಉತ್ತರ ಅಮೆರಿಕದ ರೀಟೇಲ್ ಬಿಸಿನೆಸ್​ನ ಮುಖ್ಯಸ್ಥರಾಗುವ ಹಂತಕ್ಕೆ ಹೋಗಿದ್ದು ವಿಶೇಷ.

ಸಿಟಿ ಕಾರ್ಪ್ ಮತ್ತು ಸಿಟಿ ಬ್ಯಾಂಕ್​ನಲ್ಲಿ ಎಕ್ಸಿಕ್ಯೂಟಿವ್ ವೈಸ್​ ಪ್ರೆಸಿಡೆಂಟ್ ಹಾಗೂ ಪಾಲಿಸಿ ಕಮಿಟಿ ಸದಸ್ಯರೂ ಆಗಿದ್ದರು.

ಇದನ್ನೂ ಓದಿ: Union Budget 2024: ಬಜೆಟ್ ಮಂಡನೆ ಬಳಿಕ ನಿರ್ಮಲಾ ಸೀತಾರಾಮನ್ ಪಾಲಾಗಲಿವೆ ಹಲವು ದಾಖಲೆಗಳು, ಇಲ್ಲಿದೆ ವಿವರ

1997ರಲ್ಲಿ ಅವರು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್ ಸೇರಿ, ಬಳಿಕ ಸಿಇಒ ಆದರು. ಭಾರತದಂತಹ ಉದಯೋನ್ಮುಖ ಮಾರುಕಟ್ಟೆಗಳಲ್ಲಿ ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ನ ವ್ಯವಹಾರ ವೃದ್ಧಿಯಾಗಲು ರಾಣಾ ಪಾತ್ರ ಬಹಳ ಇತ್ತು. ಯುಬಿಎಸ್, ಗ್ರಿಂಡ್​ಲೇಸ್ ಬ್ಯಾಂಕ್, ಎಎನ್​​ಝಡ್ ಕಂಪನಿಗಳ ಕೆಲ ಹಣಕಾಸು ವ್ಯವಹಾರಗಳು ಸ್ಟ್ಯಾಂಡರ್ಡ್ ಚಾರ್ಟರ್ಡ್ ಬ್ಯಾಂಕ್​ನಲ್ಲಿ ವಿಲೀನಗೊಳ್ಳುವ ಕಾರ್ಯಗಳಾಗಿದ್ದು ರಾಣಾ ತಲ್ವಾರ್ ಕಾಲದಲ್ಲೇ. ಹಾಂಕಾಂಗ್​ನ ಚೇಸ್ ಮನ್​ಹಟ್ಟನ್​ನಿಂದ ಕ್ರೆಡಿಟ್ ಕಾರ್ಡ್ ಬಿಸಿನೆಸ್ ಅನ್ನೂ ಖರೀದಿಸಲಾಗಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ಹೊಸ ಶಾಪಿಂಗ್ ಸಂಕೀರ್ಣಕ್ಕಾಗಿ ನೂರಾರು ಮರಗಳ ಮಾರಣಹೋಮ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ನೀಟ್ ಹಗರಣದ ವಿರುದ್ಧ ಬೀದಿಗಿಳಿದ ಸಾವಿರಾರು ಹಸ್ತ ಪಡೆ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ಭಕ್ತರು ಮತ್ತು ಭಗವಂತನ ನಡುವೆ ವ್ಯವಹಾರದ ಸ್ಥಳ ದೇವಾಲಯ: ಡಿಕೆಶಿ
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ರಾತ್ರಿ ಹೊತ್ತು ಮನೆಯಲ್ಲಿರಲಾಗದೆ ಗೋಳು ತೋಡಿಕೊಂಡ ನಿವಾಸಿಗಳು
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್
ನಟಿ ಶ್ರುತಿ ಪ್ರಕಾಶ್‌ಗೆ ಡೈಮಂಡ್ ಉಂಗುರ ತೊಡಿಸಿ ಪ್ರಪೋಸ್ ಮಾಡಿದ ಕರಣ್