AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Rashmika Mandanna: ಮೆಕ್​ಡೊನಾಲ್ಡ್ ಇಂಡಿಯಾ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕವಾದ ರಶ್ಮಿಕಾ ಮಂದಣ್ಣ

ಮೆಕ್​ಡೊನಾಲ್ಡ್ ಇಂಡಿಯಾದ (ಪಶ್ಚಿಮ ಮತ್ತು ದಕ್ಷಿಣ) ಬ್ರ್ಯಾಂಡ್ ಅಂಬಾಸಡರ್ ಆಗಿ ಕನ್ನಡತಿ- ಕಿರಿಕ್ ಪಾರ್ಟಿ ಬೆಡಗಿ ರಶ್ಮಿಕಾ ಮಂದಣ್ಣ ಅವರನ್ನು ನೇಮಕ ಮಾಡಲಾಗಿದೆ ಎಂದು ಶುಕ್ರವಾರ ಘೋಷಣೆ ಮಾಡಲಾಗಿದೆ.

Rashmika Mandanna: ಮೆಕ್​ಡೊನಾಲ್ಡ್ ಇಂಡಿಯಾ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕವಾದ ರಶ್ಮಿಕಾ ಮಂದಣ್ಣ
ರಶ್ಮಿಕಾ ಮಂದಣ್ಣ (ಸಂಗ್ರಹ ಚಿತ್ರ)
Follow us
Srinivas Mata
|

Updated on: Apr 16, 2021 | 8:19 PM

ಮೆಕ್​ಡೊನಾಲ್ಡ್ ಇಂಡಿಯಾ (ಪಶ್ಚಿಮ ಮತ್ತು ದಕ್ಷಿಣ) ಶುಕ್ರವಾರ ಹೇಳಿರುವ ಪ್ರಕಾರ, ನಟಿ ರಶ್ಮಿಕಾ ಮಂದಣ್ಣ ಅವರನ್ನು ತನ್ನ ಬ್ರ್ಯಾಂಡ್ ಅಂಬಾಸಡರ್ ಆಗಿ ನೇಮಕ ಮಾಡಿದೆ. ಪಶ್ಚಿಮ ಮತ್ತು ದಕ್ಷಿಣ ಭಾರತದಲ್ಲಿ ಮೆಕ್​ಡೊನಾಲ್ಡ್ ರೆಸ್ಟುರಾಂಟ್​ಗಳನ್ನು ಪೂರ್ಣ ಪ್ರಮಾಣದಲ್ಲಿ ಮಾಲೀಕತ್ವ ಇರುವ ವೆಸ್ಟ್​ಲೈಫ್ ಡೆವ್​ಲಪ್​ಮೆಂಟ್ ಲಿಮಿಟೆಡ್ ಮೂಲಕ ಅದು ನಿರ್ವಹಣೆ ಮಾಡುತ್ತದೆ. ರಶ್ಮಿಕಾ ಮಂದಣ್ಣ ಅವರು ಈ ಬ್ರ್ಯಾಂಡ್​ನ ಪ್ರಮುಖ ಅಭಿಯಾನಗಳಲ್ಲಿ ಭಾಗಿ ಆಗಲಿದ್ದಾರೆ. ಪ್ರಮುಖ ಮಾರುಕಟ್ಟೆಯಲ್ಲಿ ಮತ್ತೆ ಬ್ರ್ಯಾಂಡ್ ನಾಯಕತ್ವಕ್ಕೆ ಪ್ರಯತ್ನಿಸುತ್ತಿರುವ ಮೆಕ್​ಡೊನಾಲ್ಡ್​ಗೆ ಇದು ಪ್ರಮುಖವಾದ ಒಪ್ಪಂದ ಆಗಲಿದೆ ಎಂದು ತಿಳಿಸಲಾಗಿದೆ.

“ಈ ಒಪ್ಪಂದದೊಂದಿಗೆ ನಮ್ಮ ಪ್ರಮುಖ ಮಾರುಕಟ್ಟೆಗಳಾದ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ ಮತ್ತು ತೆಲಂಗಾಣದಲ್ಲಿ ಯುವಜನರೊಂದಿಗಿನ ಬಾಂಧವ್ಯ ಇನ್ನಷ್ಟು ಗಟ್ಟಿಗೊಳಿಸಲು ಗುರಿ ಇರಿಸಿಕೊಂಡಿದ್ದೇವೆ,” ಎಂದು ಮೆಕ್​ಡೊನಾಲ್ಡ್ ಇಂಡಿಯಾದ (ಪಶ್ಚಿಮ ಮತ್ತು ದಕ್ಷಿಣ) ಮಾರುಕಟ್ಟೆ ಮತ್ತು ಸಂವಹನದ ನಿರ್ದೇಶಕ ಆರ್.ಪಿ. ಅರವಿಂದ್ ತಿಳಿಸಿದ್ದಾರೆ.

25 ವರ್ಷ ವಯಸ್ಸಿನ ರಶ್ಮಿಕಾ ಮಂದಣ್ಣ ಅವರ ಮೊದಲ ಸಿನಿಮಾ ಕನ್ನಡದ ಕಿರಿಕ್ ಪಾರ್ಟಿ. ಆ ನಂತರ ದಕ್ಷಿಣ ಭಾರತದ ಇತರ ಭಾಷೆಗಳಲ್ಲೂ ಅಭಿನಯಿಸಿದ್ದಾರೆ. ಚಲೋ, ಸರಿಲೇರು ನೀಕೆವ್ವರು, ಗೀತಗೋವಿಂದಂ ಮತ್ತು ಡಿಯರ್ ಕಾಮ್ರೆಡ್ ಸೇರಿದಂತೆ ಹಲವು ಸಿನಿಮಾಗಳಲ್ಲಿ ರಶ್ಮಿಕಾ ಅಭಿನಯಿಸಿದ್ದು, ದಕ್ಷಿಣ ಭಾರತದಲ್ಲಿ ಮನೆ ಮಾತಾಗಿದ್ದಾರೆ.

ಇನ್ನೇನು ಅಲ್ಲು ಅರ್ಜುನ್ ಜತೆಗೆ ಅಭಿನಯಿಸಿರುವ ಪುಷ್ಪ ಸಿನಿಮಾ ಬಿಡುಗಡೆ ಕಾಣಬೇಕಿದೆ. ಅದೇ ರೀತಿ ಒಂದರ ಹಿಂದೆ ಒಂದರಂತೆ ಎರಡು ಹಿಂದಿ ಚಿತ್ರಗಳಲ್ಲೂ ರಶ್ಮಿಕಾ ನಟಿಸುತ್ತಿದ್ದಾರೆ. ಇನ್ನು ರಶ್ಮಿಕಾಗೆ ಇನ್​ಸ್ಟಾಗ್ರಾಮ್​ನಲ್ಲಿ 1.5 ಕೋಟಿಗೂ ಹೆಚ್ಚು ಫಾಲೋವರ್ಸ್ ಮತ್ತು ಟ್ವಿಟ್ಟರ್​ನಲ್ಲಿ 26 ಲಕ್ಷ ಫಾಲೋವರ್ಸ್ ಇದ್ದಾರೆ.

ಇದನ್ನೂ ಓದಿ: ನಟಿ ರಶ್ಮಿಕಾ ಬಹಳಷ್ಟು ಜಾಹೀರಾತು ಬ್ರಾಂಡ್‌ಗಳೊಂದಿಗೆ ಒಪ್ಪಂದ ಮಾಡಿಕೊಂಡಿದ್ದಾರೆ

ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ರಾಜ್ಯಾದ್ಯಂತ ಅಭಿಮಾನಿಗಳ ಸಂಭ್ರಮಾಚರಣೆ
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಪಂಜಾಬ್ ವಿರುದ್ಧ RCBಗೆ ಗೆಲವು: ಈ ಸಲ ಕಪ್​ ನಮ್ದೇ...
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕೆಂಪೇಗೌಡ ಪ್ರಾಧಿಕಾರಕ್ಕೆ ಸರ್ಕಾರದಿಂದ ಸುಮನಹಳ್ಳಿ ಬಳಿ 5 ಎಕರೆ ಜಾಗ: DCM
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಕರ್ನಾಟಕದ ಜನರೇ ಕಮಲ್ ಹಾಸನ್​ಗೆ ಪಾಠ ಕಲಿಸಬೇಕು: ಯದುವೀರ್ ಒಡೆಯರ್
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ಇದು ಒಂದು ರಾಷ್ಟ್ರ, ಒಂದು ಪತಿ ಯೋಜನೆಯಾ? ಭಗವಂತ್ ಮಾನ್ ವಿವಾದಾತ್ಮಕ ಹೇಳಿಕೆ
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ರಷ್ಯಾಗೆ ಮತ್ತೊಂದು ಹೊಡೆತ; ಕ್ರಿಮಿಯನ್ ಸೇತುವೆ ಸ್ಫೋಟಗೊಳಿಸಿದ ಉಕ್ರೇನ್​
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಆರ್​ಸಿಬಿ ಗೆಲ್ಲುತ್ತೆ, ಬೈಕ್​ಗಳಲ್ಲಿ ಬೆಂಗಳೂರು ಸುತ್ತುತ್ತೇವೆ: ಯುವಕರು
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ಕಮಲ್ ಹಾಸನ್ ವಿವಾದ: ಕನ್ನಡಿಗರು ಕಾನೂನು ಕೈಗೆ ತೆಗೆದುಕೊಳ್ಳಬೇಡಿ: ಡಿಕೆಶಿ
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ವಿಶ್ವದ ಅತಿ ಎತ್ತರದ ಚೆನಾಬ್ ರೈಲ್ವೆ ಸೇತುವೆ ಮೋದಿಯಿಂದ ಉದ್ಘಾಟನೆಗೆ ಸಜ್ಜು
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!
ಇವತ್ತಿನ ಪಂದ್ಯ ನೋಡಲು ವಿದೇಶಗಳಿಂದಲೂ ಆಗಮಿಸಿರುವ ಭಾರತೀಯರು!