AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Ratan Tata: ಹಿರಿಯ ನಾಗರಿಕರಿಗೆ ಕಂಪಾನಿಯನ್ ನೀಡುವ ಸಂಸ್ಥೆಗೆ ಟಾಟಾ ಹೂಡಿಕೆ

ಹಿರಿಯ ನಾಗರಿಕರಿಗರಿಗೆಂದೇ ಆರಂಭಿಸಿರುವ "ಗುಡ್ ಫೆಲ್ಲೋಸ್" ಸಂಸ್ಥೆಯ ನೆರವಿಗೆ ಉದ್ಯಮಿ ರತನ್ ಟಾಟಾ ನಿಂತಿದ್ದಾರೆ. ಮಾದರಿ ಸಾಮಾಜಿಕ ಕೆಲಸದ ಮೂಲಕವೇ ಖ್ಯಾತಿ ಗಳಿಸಿಕೊಂಡಿರುವ ಟಾಟಾ ಮತ್ತೊಂದು ಮಾದರಿ ಹೆಜ್ಜೆ ಇಟ್ಟಿದ್ದಾರೆ.

Ratan Tata: ಹಿರಿಯ ನಾಗರಿಕರಿಗೆ ಕಂಪಾನಿಯನ್ ನೀಡುವ  ಸಂಸ್ಥೆಗೆ ಟಾಟಾ ಹೂಡಿಕೆ
Ratan Tata
TV9 Web
| Edited By: |

Updated on:Aug 18, 2022 | 11:06 AM

Share

ಮುಂಬೈ: ಹಿರಿಯ ನಾಗರಿಕರಿಗರಿಗೆಂದೇ ಆರಂಭಿಸಿರುವ “ಗುಡ್ ಫೆಲ್ಲೋಸ್” ಸಂಸ್ಥೆಯ ನೆರವಿಗೆ ಉದ್ಯಮಿ ರತನ್ ಟಾಟಾ ನಿಂತಿದ್ದಾರೆ. ಮಾದರಿ ಸಾಮಾಜಿಕ ಕೆಲಸದ ಮೂಲಕವೇ ಖ್ಯಾತಿ ಗಳಿಸಿಕೊಂಡಿರುವ ಟಾಟಾ ಮತ್ತೊಂದು ಮಾದರಿ ಹೆಜ್ಜೆ ಇಟ್ಟಿದ್ದಾರೆ. ಸಂಧ್ಯಾಕಾಲದಲ್ಲಿರುವ ಹಿರಿಯ ನಾಗರಿಕರಿಕಗೆ ಈ ಸಂಸ್ಥೆ ಕಂಪಾನಿಯನ್ ಗಳನ್ನು ನೀಡುತ್ತದೆ. ಅಂದರೆ ಅವರಿಗೆ ಆತ್ಮೀಯರನ್ನು ನೇಮಿಸಿಕೊಡಲಾಗುತ್ತದೆ.

ಈ ಯುವಕರ ತಂಡ ಹಿರಿಯ ನಾಗರಿಕರನ್ನು ವಾರಕ್ಕೆ ಮೂರು ಸಾರಿ ಭೇಟಿ ಮಾಡುತ್ತಾರೆ. ಪ್ರತಿ ಸಾರಿ ಭೇಟಿಯಾದಾಗ 4 ಗಂಟೆ ಕಳೆಯುತ್ತಾರೆ. ಹಿರಿಯರ ನೋವು ಆಲಿಸುವುದು. ಅವರೊಂದಿಗೆ ಮಾತು-ಕತೆ, ಆಟ ಆಡುವುವುದು, ಸಾಂತ್ವನ ಹೇಳುವ ಕೆಲಸ ಈ ಸಮಯದಲ್ಲಿ ಮಾಡುತ್ತಾರೆ.

ಟಾಟಾ ಸಂಸ್ಥೆಯಲ್ಲಿ ಜನರಲ್ ಮ್ಯಾನೇಜರ್ ಆಗಿರುವ 25 ವರ್ಷದ ಶಂತನು ನಾಯ್ಡು ಸ್ಥಾಪನೆ ಮಾಡಿರುವ ಸಂಸ್ಥೆಗೆ ಟಾಟಾ ಸಂಸ್ಥೆ ಹಣ ಹೂಡಿದೆ. ರತನ್ ಟಾಟಾ ಅವರ ಕಚೇರಿಯಲ್ಲಿ 2018 ರಿಂದ ಕಾರ್ಯನಿರ್ವಹಿಸುತ್ತಿರುವ ಶಂತನು ಹೊಸ ಆಲೋಚನೆಗೆ ಟಾಟಾ ಬೆಂಬಲ ನೀಡಿದ್ದಾರೆ. ಶಂತನು ಟಾಟಾ ಗ್ರೂಪ್ ನ ಜನರಲ್ ಮ್ಯಾನೇಜರ್ ಆಗಿದ್ದು ರತನ್ ಟಾಟಾ ಅವರೊಂದಿಗೆ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ.

50 ಮಿಲಿಯನ್ ಗೂ ಅಧಿಕ ಹಿರಿಯರು ಒಬ್ಬಂಟಿಯಾಗಿ ಜೀವನ ಕಳೆಯುವಂತಹ ಸ್ಥಿತಿ ಇದೆ. ಇದೆ ಮಾಹಿತಿ ಆಧಾರವಾಗಿಟ್ಟುಕೊಂಡು ಸಂಸ್ಥೆ ಹುಟ್ಟುಹಾಕಿದ್ದೇನೆ ಎಂದು ಶಂತನು ತಿಳಿಸಿದ್ದಾರೆ.

ವಯಸ್ಸಾದ ಮೇಲೆ ಒಬ್ಬಂಟಿಯಾಗಿರುವುದು ಎಷ್ಟು ಕಷ್ಟವೆಂದು ಹೇಳಲಾಗದು. ಹಾಗಾಗಿ ಇದರಲ್ಲಿ ಹೂಡಿಕೆ ಮಾಡಿದ್ದೇನೆ ಎಂದು ರತನ್ ಟಾಟಾ ತಿಳಿಸಿದರು. ಗುಡ್‌ಫೆಲೋಸ್ ಸಂಸ್ಥೆ ಎರಡು ತಲೆಮಾರುಗಳನ್ನು ಒಂದು ಮಾಡುತ್ತಿದೆ. ಆಧುನಿಕ ಜಗತ್ತಿನ ಪರಿಣಾಮ ಹುಟ್ಟಿಕೊಂಡ ಸಾಮಾಜಿಕ ಸಮಸ್ಯೆಯ ಪರಿಹಾರಕ್ಕೆ ಇದು ನೆರವಾಗಬಲ್ಲದು. ಅಂಗವೈಕಲ್ಯ ಇರುವ ಜನರ ನೆರವಿಗೂ ಮುಂದಿನ ದಿನಗಳಲ್ಲಿ ನಿಲ್ಲಲಿದ್ದೇವೆ ಎಂದು ಟಾಟಾ ಇದೇ ಸಂದರ್ಭದಲ್ಲಿ ಹೇಳಿದರು.

Published On - 11:05 am, Thu, 18 August 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ಪರಿಷತ್ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ