AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

LIC: ಇಂಡಸ್​ಇಂಡ್ ಬ್ಯಾಂಕ್​ನಲ್ಲಿ ಷೇರಿನ ಪ್ರಮಾಣ ಹೆಚ್ಚಿಸಲು ಎಲ್​ಐಸಿಗೆ ಅನುಮತಿಸಿದ ಆರ್​ಬಿಐ

ಇಂಡಸ್​ಇಂಡ್​ ಬ್ಯಾಂಕ್​ನಲ್ಲಿ ಷೇರಿನ ಪ್ರಮಾಣವನ್ನು ಹೆಚ್ಚಿಸುವುದಕ್ಕೆ ಜೀವ ವಿಮಾ ನಿಗಮಕ್ಕೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಅನುಮತಿ ನೀಡಿದೆ.

LIC: ಇಂಡಸ್​ಇಂಡ್ ಬ್ಯಾಂಕ್​ನಲ್ಲಿ ಷೇರಿನ ಪ್ರಮಾಣ ಹೆಚ್ಚಿಸಲು ಎಲ್​ಐಸಿಗೆ ಅನುಮತಿಸಿದ ಆರ್​ಬಿಐ
ಪ್ರಾತಿನಿಧಿಕ ಚಿತ್ರ
TV9 Web
| Updated By: Srinivas Mata|

Updated on: Dec 11, 2021 | 8:25 AM

Share

ಇಂಡಸ್​ಇಂಡ್ ಬ್ಯಾಂಕ್​ ಶುಕ್ರವಾರದಂದು ಹೇಳಿರುವ ಪ್ರಕಾರ, ಬ್ಯಾಂಕ್‌ನಲ್ಲಿನ ಷೇರುಗಳ ಪ್ರಮಾಣವನ್ನು ಸುಮಾರು ಶೇ 10ಕ್ಕೆ ಹೆಚ್ಚಿಸಲು ಜೀವ ವಿಮಾ ನಿಗಮಕ್ಕೆ (LIC) ಆರ್‌ಬಿಐ ಅನುಮೋದನೆ ನೀಡಿದೆ. ಖಾಸಗಿ ಬ್ಯಾಂಕ್ ಡಿಸೆಂಬರ್ 9, 2021ರಂದು ಆರ್‌ಬಿಐನಿಂದ ಸೂಚನೆಯನ್ನು ಸ್ವೀಕರಿಸಿದೆ. ಇದು ಬ್ಯಾಂಕ್​ನ ಷೇರುದಾರ ಲೈಫ್ ಇನ್ಷೂರೆನ್ಸ್ ಕಾರ್ಪೊರೇಷನ್ (ಎಲ್‌ಐಸಿ)ಗೆ ತನ್ನ ಅನುಮೋದನೆಯನ್ನು ನೀಡಿದ್ದು, ಒಟ್ಟು ನೀಡಲಾದ ಮತ್ತು ಪಾವತಿಸಿದ ಬಂಡವಾಳದ ಶೇ 9.99ರ ವರೆಗೆ ಸ್ವಾಧೀನಪಡಿಸಿಕೊಳ್ಳಲು ಅನುಮತಿ ನೀಡಿದೆ. ವಿನಿಮಯ ಕೇಂದ್ರದ ಫೈಲಿಂಗ್​ನಲ್ಲಿ ತಿಳಿಸಿದೆ.

ಅನುಮೋದನೆಯು ಒಂದು ವರ್ಷಕ್ಕೆ ಮಾನ್ಯವಾಗಿರುತ್ತದೆ ಇಂಡಸ್​ಇಂಡ್ ಬ್ಯಾಂಕ್‌ನ ಒಟ್ಟು ವಿತರಿಸಿದ ಮತ್ತು ಪಾವತಿಸಿದ ಬಂಡವಾಳದ ಶೇ 4.95ರಷ್ಟನ್ನು ಸರ್ಕಾರಿ ಸ್ವಾಮ್ಯದ ವಿಮಾ ಕಂಪೆನಿಯು ಹೊಂದಿದೆ. ಆರ್‌ಬಿಐನಿಂದ ಅನುಮೋದನೆಯು ‘ಷೇರುಗಳನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಖಾಸಗಿ ವಲಯದ ಬ್ಯಾಂಕ್‌ಗಳ ಸ್ವಾಧೀನಕ್ಕೆ ಪೂರ್ವ ಅನುಮೋದನೆ’ ಹಾಗೂ ಸೆಬಿಯ ನಿಯಮಗಳು ಮತ್ತು ಯಾವುದೇ ಮಾರ್ಗಸೂಚಿಗಳು ಅಥವಾ ನಿಯಮಾವಳಿಗಳ ನಿರ್ದೇಶನಕ್ಕೆ ಒಳಪಟ್ಟಿರುತ್ತದೆ.

ಮೊದಲ ಐದು ವರ್ಷಗಳ ಕಾರ್ಯಾಚರಣೆಗಳಲ್ಲಿ ಅನಿಯಂತ್ರಿತ ಪ್ರವರ್ತಕ ಷೇರುಗಳನ್ನು ಅನುಮತಿಸುವ ಮೂಲಕ ರಿಸರ್ವ್ ಬ್ಯಾಂಕ್ ಕಳೆದ ತಿಂಗಳು ಖಾಸಗಿ ವಲಯದ ಬ್ಯಾಂಕ್‌ಗಳ ಕಾರ್ಪೊರೇಟ್ ಮಾಲೀಕತ್ವದ ಬಗ್ಗೆ ತನ್ನ ಕಾರ್ಯನಿರತ ಗುಂಪಿನ ಹೆಚ್ಚಿನ ಶಿಫಾರಸುಗಳನ್ನು ಸ್ವೀಕರಿಸಿದೆ. 15 ವರ್ಷಗಳ ನಂತರ ಶೇ 15ರಷ್ಟು ಮತ್ತು ಹೊಸ ಬಂಡವಾಳದ ಅಗತ್ಯಗಳನ್ನು ಶೇ 26ಕ್ಕೆ ಏರಿಸಲು ಶಿಫಾರಸು ಮಾಡಿದೆ.

ಕೊಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಇಂಡಸ್‌ಇಂಡ್ ಬ್ಯಾಂಕ್‌ನಂತಹ ಬ್ಯಾಂಕ್‌ಗಳಿಗೆ ಇದು ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಈ ಅನುಮೋದನೆಯು ಡಿಸೆಂಬರ್ 8, 2022 ರವರೆಗಿನ ಒಂದು ವರ್ಷದ ಅವಧಿಗೆ ಮಾನ್ಯವಾಗಿರುತ್ತದೆ ಎಂದು ಬ್ಯಾಂಕ್ ಹೇಳಿದೆ. ಇಂಡಸ್‌ಇಂಡ್ ಬ್ಯಾಂಕ್ ಷೇರುಗಳು ಮಧ್ಯಾಹ್ನದ ವಹಿವಾಟಿನಲ್ಲಿ ಬಿಎಸ್‌ಇಯಲ್ಲಿ 947 ರೂಪಾಯಿ ಇತ್ತು.

ಇದನ್ನೂ ಓದಿ: LIC Policyholders: ಐಪಿಒಗಾಗಿ ಪಾಲಿಸಿ ಜತೆಗೆ ಆಧಾರ್ ಜೋಡಣೆ ಮಾಡಲು ಪಾಲಿಸಿದಾರರಿಗೆ ಎಲ್​ಐಸಿ ಸೂಚನೆ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ