AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜಿಯೋ ಫೈನಾನ್ಷಿಯಲ್ ಸರ್ವಿಸಸ್ ನಿರ್ದೇಶಕರಾಗಿ ಇಶಾ ಅಂಬಾನಿ ಸೇರಿದಂತೆ ಮೂವರ ನೇಮಕಕ್ಕೆ ಆರ್​ಬಿಐ ಸಮ್ಮತಿ

RBI Approves Appointment of Isha Ambani: ಇಶಾ ಅಂಬಾನಿ, ಅಂಶುಮಾನ್ ಠಾಕೂರ್ ಮತ್ತು ಹಿತೇಶ್ ಕುಮಾರ್ ಸೇಥಿಯಾ ಅವರನ್ನು ಜೆಎಫ್​ಎಸ್​ಎಲ್​ನ ನಿರ್ದೇಶಕರನ್ನಾಗಿ ನೇಮಕ ಮಾಡುವ ಪ್ರಸ್ತಾಪಕ್ಕೆ ಆರ್​ಬಿಐ ಅನುಮತಿ ನೀಡಿದೆ. ಆರ್​ಬಿಐನ ಈ ಅನುಮೋದನೆ 6 ತಿಂಗಳವರೆಗೆ ಮಾನ್ಯವಾಗಿರುತ್ತದೆ. ಅಷ್ಟರೊಳಗೆ ಜೆಎಫ್​ಎಸ್​ಎಲ್ ಸಂಸ್ಥೆ ಈ ಮೂವರನ್ನು ನಿರ್ದೇಶಕರನ್ನಾಗಿ ನೇಮಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸಬೇಕು.

ಜಿಯೋ ಫೈನಾನ್ಷಿಯಲ್ ಸರ್ವಿಸಸ್ ನಿರ್ದೇಶಕರಾಗಿ ಇಶಾ ಅಂಬಾನಿ ಸೇರಿದಂತೆ ಮೂವರ ನೇಮಕಕ್ಕೆ ಆರ್​ಬಿಐ ಸಮ್ಮತಿ
ಇಶಾ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Nov 16, 2023 | 6:09 PM

Share

ನವದೆಹಲಿ, ನವೆಂಬರ್ 16: ರಿಲಾಯನ್ಸ್ ಸಾಮ್ರಾಜ್ಯದ ಯುವರಾಣಿ ಇಶಾ ಅಂಬಾನಿ (Isha Ambani) ಸೇರಿದಂತೆ ಮೂವರನ್ನು ಜಿಯೋ ಫೈನಾನ್ಷಿಯಲ್ ಸರ್ವಿಸಸ್​ನ ನಿರ್ದೇಶಕರನ್ನಾಗಿ ನೇಮಕ ಮಾಡುವುದಕ್ಕೆ ಆರ್​ಬಿಐ ನಿನ್ನೆ (ನ. 15) ಅನುಮೋದನೆ ನೀಡಿದೆ. ಇಶಾ ಅಂಬಾನಿ, ಅಂಶುಮಾನ್ ಠಾಕೂರ್ ಮತ್ತು ಹಿತೇಶ್ ಕುಮಾರ್ ಸೇಥಿಯಾ ಅವರನ್ನು ಜೆಎಫ್​ಎಸ್​ಎಲ್​ನ (Jio Financial Services) ನಿರ್ದೇಶಕರನ್ನಾಗಿ ನೇಮಕ ಮಾಡುವ ಪ್ರಸ್ತಾಪಕ್ಕೆ ಆರ್​ಬಿಐ ನೀಡಿರುವ ಅನುಮತಿ ಇದು. ಆರ್​ಬಿಐನ ಈ ಅನುಮತಿ 6 ತಿಂಗಳವರೆಗೆ ಮಾನ್ಯವಾಗಿರುತ್ತದೆ. ಅಷ್ಟರೊಳಗೆ ಜೆಎಫ್​ಎಸ್​ಎಲ್ ಸಂಸ್ಥೆ ಈ ಮೂವರನ್ನು ನಿರ್ದೇಶಕರನ್ನಾಗಿ ನೇಮಿಸಿಕೊಳ್ಳುವ ಪ್ರಕ್ರಿಯೆ ಪೂರ್ಣಗೊಳಿಸಬೇಕು. ಇಲ್ಲವಾದರೆ, ಯಾಕೆ ನೇಮಕಾತಿ ಆಗಿಲ್ಲ ಎಂದು ಕಾರಣ ತಿಳಿಸಿ ಮತ್ತೊಮ್ಮೆ ಅನುಮೋದನೆಗೆ ಅರ್ಜಿ ಸಲ್ಲಿಸಬೇಕು ಎಂದು ಆರ್​ಬಿಐ ತನ್ನ ಪತ್ರದಲ್ಲಿ ತಿಳಿಸಿದೆ.

ಇಶಾ ಅಂಬಾನಿ ಅವರು ಮುಕೇಶ್ ಅಂಬಾನಿಯ ಹಿರಿಯ ಮಗಳು. 32 ವರ್ಷದ ಅವರು ಮತ್ತು ಆಕಾಶ್ ಅಂಬಾನಿ ಇಬ್ಬರೂ ಕೂಡ ಅವಳಿಜವಳಿ. ಅನಂತ್ ಅಂಬಾನಿ ಮೂರನೇ ಮಗ. ಈ ಮೂವರೂ ಕೂಡ ಕಳೆದ ತಿಂಗಳು ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಮಂಡಳಿ ಸದಸ್ಯರಾಗಿ ನೇಮಕವಾಗಿದ್ದರು.

ಇದನ್ನೂ ಓದಿ: ಅಂಬಾನಿ ಮಕ್ಕಳಿಗೆ ಸಂಬಳ ಬೇಡ; ಮಂಡಳಿ ಸಭೆಯಲ್ಲಿ ಪಾಲ್ಗೊಂಡರೆ ಸಂಭಾವನೆ: ಆರ್​ಐಎಲ್ ನಿರ್ಣಯ

ಆಕಾಶ್ ಅಂಬಾನಿ ಅವರು ಜಿಯೋ ಇನ್ಫೋಕಾಮ್​ನ ಛೇರ್ಮನ್ ಆಗಿ ಜವಾಬ್ದಾರಿ ಪಡೆದಿದ್ದಾರೆ. ಇಶಾ ಅಂಬಾನಿ ರಿಲಾಯನ್ಸ್ ರೀಟೇಲ್ ಸಂಸ್ಥೆಯ ಚುಕ್ಕಾಣಿ ಹಿಡಿದಿದ್ದಾರೆ.

ಪಿರಾಮಲ್ ಕುಟುಂಬದ ಸೊಸೆಯಾಗಿರುವ ಇಶಾ ಅಂಬಾನಿ ಅಮೆರಿಕದ ಯಾಲೆ ಯೂನಿವರ್ಸಿಟಿ ಮತ್ತು ಸ್ಟಾನ್​ಫೋರ್ಡ್ ಯೂನಿವರ್ಸಿಟಿಯಲ್ಲಿ ಓದಿದವರು. 2016ರಲ್ಲಿ ಭಾರತದ ಟೆಲಿಕಾಂ ವಲಯದಲ್ಲಿ ಸಂಚಲನ ಸೃಷ್ಟಿಸಿದ್ದ ಜಿಯೋದ ಪೂರ್ಣ ಕಾರ್ಯತಂತ್ರವನ್ನು ಇಶಾ ಅಂಬಾನಿ ರೂಪಿಸಿದ್ದರು ಎನ್ನಲಾಗುತ್ತಿದೆ. ಇದೀಗ ರಿಲಾಯನ್ಸ್ ರೀಟೇಲ್ ಸಂಸ್ಥೆಗೆ ಅವರು ಹೊಸ ಕಾಯಕಲ್ಪ ತರುವ ಪ್ರಯತ್ನದಲ್ಲಿದ್ದಾರೆ.

ಇದನ್ನೂ ಓದಿ: ಇಟಲಿಗೆ ಅಡಿ ಇಟ್ಟ ಅಂಬಾನಿ ಮಾಲಕತ್ವದ ಹ್ಯಾಮ್ಲೀಸ್; ಜಿಯೋಚಿ ಪ್ರೆಜಿಯೋಸಿ ಜೊತೆ ರಿಲಾಯನ್ಸ್ ಒಪ್ಪಂದ

ಇದೇ ವೇಳೆ, ಜಿಯೋ ಫೈನಾನ್ಷಿಯಲ್ ಸರ್ವಿಸಸ್ ಸಂಸ್ಥೆಯ ನಿರ್ದೇಶಕರಾಗಿರುವ ಇತರ ಇಬ್ಬರೆಂದರೆ ಅಂಶುಮಾನ್ ಠಾಕೂರ್ ಮತ್ತು ಹಿತೇಶ್ ಸೇಥಿಯಾ. ಅಂಶುಮಾನ್ ಠಾಕೂರ್ ಅವರು 2014ರಿಂದ ರಿಲಾಯನ್ಸ್ ಗ್ರೂಪ್​ನಲ್ಲಿದ್ದಾರೆ. ಅದಕ್ಕೆ ಮುನ್ನ ಅವರು ಮಾರ್ಗನ್ ಸ್ಟಾನ್ಲೀ, ಎರ್ನ್ಸ್ಟ್ ಅಂಡ್ ಯಂಗ್ ಮತ್ತು ಆರ್ಥರ್ ಆಂಡರ್ಸನ್ ಸಂಸ್ಥೆಗಳಲ್ಲಿ ಕೆಲಸ ಮಾಡಿದ್ದಾರೆ. ಒಟ್ಟು 24 ವರ್ಷದ ಕೆಲಸದ ಅನುಭವ ಹೊಂದಿದ್ದಾರೆ.

ಇನ್ನು, ಹಿತೇಶ್ ಸೇಠಿಯಾ ಅವರು ಸಿಎ ಓದಿದ್ದು ಹಾರ್ವರ್ಡ್ ಬಿಸಿನೆಸ್ ಸ್ಕೂಲ್​ನಲ್ಲೂ ಶಿಕ್ಷಣ ಪಡೆದಿದ್ದಾರೆ. ಐಸಿಐಸಿಐ ಬ್ಯಾಂಕ್​ನಲ್ಲಿ ಹೆಚ್ಚಿನ ಕೆಲಸದ ಅನುಭವ ಪಡೆದಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!