RBI Circular: ಎಐಎಫ್ ಮೇಲೆ ಹೂಡಿಕೆ ಮಾಡಲು ಬ್ಯಾಂಕುಗಳಿಗೆ ಆರ್​ಬಿಐ ನಿರ್ಬಂಧ; ಸಾಲ ತೀರಿಕೆಗೆ ಸಾಲ ಸಿಗುವುದು ಇನ್ಮುಂದೆ ಕಷ್ಟ

Alternative Investment Funds: ಆಲ್ಟರ್ನೇಟಿವ್ ಇನ್ವೆಸ್ಟ್​ಮೆಂಟ್ ಫಂಡ್​ಗಳ ಸ್ಕೀಮ್​ಗಳಲ್ಲಿ ಹೂಡಿಕೆ ಮಾಡಲು ಬ್ಯಾಂಕುಗಳಿಗೆ ಆರ್​ಬಿಐ ನಿರ್ಬಂಧ ಹೇರಿದೆ. ಬ್ಯಾಂಕ್​ನಲ್ಲಿ ಸಾಲ ಹೊಂದಿರುವ ಸಂಸ್ಥೆಗಳ ಮೇಲೆ ಹೂಡಿಕೆ ಮಾಡಿರುವ ಎಐಎಫ್​ಗಳಲ್ಲಿ ಬ್ಯಾಂಕುಗಳು ಹಣ ಇನ್ವೆಟ್​ಮೆಂಟ್ ಮಾಡುವಂತಿಲ್ಲ. ಈಗಾಗಲೇ ಇಂಥ ಎಐಎಫ್​ಗಳಲ್ಲಿ ಬ್ಯಾಂಕು ಅಥವಾ ಎನ್​ಬಿಎಫ್​ಸಿ ಹೂಡಿಕೆ ಮಾಡಿದ್ದರೆ 30 ದಿನದಲ್ಲಿ ಹಿಂಪಡೆಯಬೇಕು ಎಂದಿದೆ ಆರ್​ಬಿಐ.

RBI Circular: ಎಐಎಫ್ ಮೇಲೆ ಹೂಡಿಕೆ ಮಾಡಲು ಬ್ಯಾಂಕುಗಳಿಗೆ ಆರ್​ಬಿಐ ನಿರ್ಬಂಧ; ಸಾಲ ತೀರಿಕೆಗೆ ಸಾಲ ಸಿಗುವುದು ಇನ್ಮುಂದೆ ಕಷ್ಟ
ಆರ್​ಬಿಐ
Follow us
|

Updated on: Dec 20, 2023 | 12:11 PM

ನವದೆಹಲಿ, ಡಿಸೆಂಬರ್ 20: ಬಹಳಷ್ಟು ಸಂಸ್ಥೆಗಳು ಬ್ಯಾಂಕ್​ನಲ್ಲಿ ಪಡೆದ ಸಾಲವನ್ನು ತೀರಿಸಲು ಅದೇ ಬ್ಯಾಂಕಿನಲ್ಲಿ ಹೊಸ ಸಾಲ ಮಾಡುತ್ತವೆ. ಅದು ವರ್ತುಲದಂತೆ ಮರುಕಳಿಸುತ್ತಲೇ (evergreening of loans) ಇರುತ್ತದೆ. ಇಂಥದ್ದನ್ನು ತಪ್ಪಿಸಲು ಆರ್​ಬಿಐ ಕ್ರಮ ಕೈಗೊಳ್ಳಲು ಯತ್ನಿಸಿದೆ. ಬ್ಯಾಂಕ್​ನಲ್ಲಿ ಸಾಲ ಇರುವ ಸಂಸ್ಥೆಯಲ್ಲಿ ಹೂಡಿಕೆ ಮಾಡಿರುವ ಆಲ್ಟರ್ನೇಟಿವ್ ಇನ್ವೆಸ್ಟ್​ಮೆಂಟ್ ಫಂಡ್ಸ್​ನ (AIF- Alternative investment fund) ಸ್ಕೀಮ್​ನಲ್ಲಿ ಬ್ಯಾಂಕ್ ಆಗಲೀ ಎನ್​ಬಿಎಫ್​ಸಿಗಳಾಗಲೀ ಹೂಡಿಕೆ ಮಾಡುವಂತಿಲ್ಲ ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿನ್ನೆ (ಡಿ. 19) ಅಪ್ಪಣೆ ಮಾಡಿದೆ.

ಆಲ್ಟರ್ನೇಟಿವ್ ಇನ್ವೆಸ್ಟ್​ಮೆಂಟ್ ಫಂಡ್ ಎಂಬುದು ಸೆಬಿ ಇತ್ಯಾದಿ ಯಾವುದೇ ಪ್ರಾಧಿಕಾರ ಸಂಸ್ಥೆಯ ನಿಯಂತ್ರಣಕ್ಕೆ ಒಳಪಡದ ಸಂಪೂರ್ಣ ಖಾಸಗಿ ಹೂಡಿಕೆ (privately pooled funds) ನಿಧಿಯಾಗಿದೆ. ವೆಂಚರ್ ಕ್ಯಾಪಿಟಲ್ ಫಂಡ್, ಏಂಜಲ್ ಫಂಡ್, ಇನ್​ಫ್ರಾಸ್ಟ್ರಕ್ಚರ್ ಫಂಡ್, ಪ್ರೈವೇಟ್ ಈಕ್ವಿಟಿ ಫಂಡ್, ಹೆಡ್ಜ್ ಫಂಡ್ ಮೊದಲಾದವು ಇದಕ್ಕೆ ಉದಾಹರಣೆ. ಬ್ಯಾಂಕುಗಳು ತಮ್ಮಲ್ಲಿರುವ ಹಣವನ್ನು ಇಂಥ ಫಂಡ್​ಗಳ ಮೇಲೆ ಹೂಡಿಕೆ ಮಾಡುವುದು ಸಾಮಾನ್ಯ. ಆದರೆ, ಈ ಫಂಡ್​ಗಳು ಹೂಡಿಕೆ ಮಾಡಿರುವ ಸಂಸ್ಥೆಗಳು ಕಳೆದ 12 ತಿಂಗಳಲ್ಲಿ ಬ್ಯಾಂಕಿನಲ್ಲಿ ಸಾಲ ಪಡೆದುಕೊಂಡಿದ್ದರೆ, ಅಂಥ ಫಂಡ್​ಗಳ ಸ್ಕೀಮ್​ನಲ್ಲಿ ಬ್ಯಾಂಕು ಯಾವ ಹೂಡಿಕೆಯನ್ನೂ ಮಾಡಬಾರದು ಎಂಬುದು ಆರ್​ಬಿಐ ಈಗ ವಿಧಿಸಿರುವ ನಿರ್ಬಂಧವಾಗಿದೆ.

ಇದನ್ನೂ ಓದಿ: ಪೇಟೆಂಟ್ ವ್ಯಾಜ್ಯ; ಆ್ಯಪಲ್​ನ ಸ್ಮಾರ್ಟ್​ವಾಚ್​ಗಳಿಗೆ ಅಮೆರಿಕದಲ್ಲಿ ನಿಷೇಧ ಸಾಧ್ಯತೆ; ಏನಿದು ಬಿಕ್ಕಟ್ಟು?

‘ಕಾನೂನು ಸಮಸ್ಯೆ ತರುವ ಎಐಎಫ್​ಗಳೊಂದಿಗೆ ಬ್ಯಾಂಕ್, ಎನ್​ಬಿಎಫ್​ಸಿ ಮೊದಲಾದ ಪ್ರಾಧಿಕಾರ ನಿಯಂತ್ರಿತ ಸಂಸ್ಥೆಗಳು (Regulated Entities) ನಡೆಸಿರುವ ಕೆಲ ವ್ಯವಹಾರವು ನಮ್ಮ ಗಮನಕ್ಕೆ ಬಂದಿದೆ. ಎಐಎಫ್​ಗಳಲ್ಲಿ ಹೂಡಿಕೆ ಮಾಡುವ ಮೂಲಕ ಬ್ಯಾಂಕುಗಳು ಪರೋಕ್ಷವಾಗಿ ಸಾಲ ಕೊಡುತ್ತಿವೆ,’ ಎಂದು ಆರ್​ಬಿಐ ಹೊರಡಿಸಿದ ಸುತ್ತೋಲೆಯಲ್ಲಿ ಎಚ್ಚರಿಸಲಾಗಿದೆ.

ಹಾಗೆಯೇ, ಈಗಾಗಲೇ ಇಂಥ ಹೂಡಿಕೆಗಳನ್ನು ಮಾಡಿರುವ ಹಣಕಾಸು ಸಂಸ್ಥೆಗಳು 30 ದಿನದೊಳಗೆ ಅದನ್ನು ಹಿಂಪಡೆಯಬೇಕು ಎಂದೂ ಆರ್​ಬಿಐ ನಿರ್ದೇಶನ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
ಮಂಗಳೂರಿನ ಕಾಲೇಜಿನಲ್ಲಿ ಓಣಂ ಸಂಭ್ರಮ; ಕುಣಿದು ಕುಪ್ಪಳಿಸಿದ ವಿದ್ಯಾರ್ಥಿಗಳು
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
 ‘ಸತ್ಯ ಹೊರಕ್ಕೆ ಬರುತ್ತದೆ’; ಬಿಗ್​ ಬಾಸ್​ನಲ್ಲಿ ಹೊರ ಬರುತ್ತಾ ನಿಜ ವಿಚಾರ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಇಲ್ಲಿ ಪರ್ಸಂಟೇಜ್ ಲೆಕ್ಕ ಹಾಕ್ಬಾರ್ದು; ಶಿವಣ್ಣ ಹೀಗೆ ಹೇಳಿದ್ದೇಕೆ?
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
ಸೆಪ್ಟೆಂಬರ್​​ 30 ರಿಂದ ಅಕ್ಟೋಬರ್​ 6ರವರೆಗಿನ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
Nithya Bhavishya: ಈ ರಾಶಿಯವರು ಕೆಲವು ಸಾಲಬಾಧೆಯಿಂದ ಮುಕ್ತಿಪಡೆಯುವಿರಿ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ನೀವು ಏನಾದರೂ ಅಂದುಕೊಳ್ರಿ ನಾನಿರೋದು ಹೀಗೆ: ಶಿವಣ್ಣ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ತುಂಬಿ ಹರಿಯುವ ಹೊಳೆಯಲ್ಲೇ ಗರ್ಭಿಣಿ ಹೆಂಡತಿಯನ್ನು ಹೊತ್ತು ನಡೆದ ಗಂಡ
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ನಾಳೆ ಹಮ್ಮಿಕೊಂಡಿದ್ದ ಚಾಮುಂಡಿ ಚಲೋ ರದ್ದು: ಪ್ರತಾಪ್ ಸಿಂಹ ಹೇಳಿದ್ದಿಷ್ಟು
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಮಧ್ಯಪ್ರದೇಶದ ಶಾಜಾಪುರದಲ್ಲಿ ಭೀಕರ ಅಪಘಾತ; ಶಾಲಾ ಬಸ್ ಪಲ್ಟಿ, ಮಕ್ಕಳಿಗೆ ಗಾಯ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ
ಗ್ಯಾರಂಟಿ ಯೋಜನೆಗಳು, ಬಡವರ ಸುರಕ್ಷತೆ, ಕಲ್ಯಾಣ ಕೃತಿ ಬಿಡುಗಡೆ ಮಾಡಿದ ಸಿಎಂ