AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ; ಹೊಸ ಕ್ರೆಡಿಟ್ ಕಾರ್ಡ್ ನೀಡುವಂತಿಲ್ಲ, ಆನ್ಲೈನ್ ಮೂಲಕ ಹೊಸ ಗ್ರಾಹಕರು ಬರುವಂತಿಲ್ಲ

RBI Bars Kotak Mahindra Bank from Issuing New Credit Cards: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಬುಧವಾರ ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ನಿರ್ಬಂಧಗಳನ್ನು ವಿಧಿಸಿದೆ. ಅಸಮರ್ಪಕ ಐಟಿ ಭದ್ರತೆ ಹಿನ್ನೆಲೆಯಲ್ಲಿ ಆರ್​ಬಿಐ ಈ ಕ್ರಮ ಕೈಗೊಂಡಿದೆ. ಈ ಬ್ಯಾಂಕ್ ತನ್ನ ಆನ್ಲೈನ್ ಮತ್ತು ಮೊಬೈಲ್ ಬ್ಯಾಂಕಿಂಗ್ ಪ್ಲಾಟ್​ಫಾರ್ಮ್​​ನಲ್ಲಿ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವಂತಿಲ್ಲ. ಹೊಸ ಕ್ರೆಡಿಟ್ ಕಾರ್ಡ್ ವಿತರಿಸುವಂತಿಲ್ಲ ಎಂದು ಆರ್​ಬಿಐ ಹೇಳಿದೆ. ಈ ನಿರ್ಬಂಧ ಎಷ್ಟು ದಿನಗಳವರೆಗೆ ಎಂಬುದು ಗೊತ್ತಾಗಿಲ್ಲ. ಬ್ಯಾಂಕ್ ಗ್ರಾಹಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದು ತಿಳಿದುಬಂದಿದೆ.

ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ; ಹೊಸ ಕ್ರೆಡಿಟ್ ಕಾರ್ಡ್ ನೀಡುವಂತಿಲ್ಲ, ಆನ್ಲೈನ್ ಮೂಲಕ ಹೊಸ ಗ್ರಾಹಕರು ಬರುವಂತಿಲ್ಲ
ಕೋಟಕ್ ಮಹೀಂದ್ರ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2024 | 5:23 PM

Share

ನವದೆಹಲಿ, ಏಪ್ರಿಲ್ 24: ಕೋಟಕ್ ಮಹೀಂದ್ರ ಬ್ಯಾಂಕ್​ನ ಆನ್ಲೈನ್ ಸೆಕ್ಯೂರಿಟಿ ವ್ಯವಸ್ಥೆ ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಅದರ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ಬಂಧ ಹಾಕಿದೆ. ಅದರ ಆನ್ಲೈನ್ ಪ್ಲಾಟ್​ಫಾರ್ಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಪ್ಲಾಟ್​ಫಾರ್ಮ್​ನಿಂದ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವಂತಿಲ್ಲ. ಹೊಸ ಕ್ರೆಡಿಟ್ ಕಾರ್ಡ್​ಗಳನ್ನು ನೀಡುವಂತಿಲ್ಲ ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ಗೆ (Kotak Mahindra Bank) ಆರ್​ಬಿಐ ಆದೇಶಿಸಿದೆ. ಈಗಿರುವ ಬ್ಯಾಂಕ್ ಗ್ರಾಹಕರಿಗೆ ಯಥಾ ಪ್ರಕಾರ ಸೇವೆ ಲಭ್ಯ ಇರುತ್ತದೆ. ಈ ಬ್ಯಾಂಕ್​ನ ಕ್ರೆಡಿಟ್ ಕಾರ್ಡ್ ಹೊಂದಿರುವವರೂ ಕೂಡ ಕಾರ್ಡ್ ಬಳಕೆ ಮುಂದುವರಿಸಲು ಯಾವ ಅಡ್ಡಿಯೂ ಇಲ್ಲ. ಏನಿದ್ದರೂ ಹೊಸ ಕ್ರೆಡಿಟ್ ಕಾರ್ಡ್ ನೀಡುವುದು ಸದ್ಯಕ್ಕೆ ಬಂದ್ ಆಗುತ್ತದೆ.

ಕಳೆದ ಎರಡು ವರ್ಷದಲ್ಲಿ, ಅಂದರೆ 2022 ಮತ್ತು 2023ರಲ್ಲಿ ಬ್ಯಾಂಕ್​ನ ಐಟಿ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಸಮಸ್ಯೆಗಳನ್ನು ಸರಿಪಡಿಸಲಾಗಿಲ್ಲದಿರುವುದು ಆರ್​ಬಿಐ ಗಮನಕ್ಕೆ ಬಂದಿದೆ. ಹೀಗಾಗಿ, ಭಾರತದ ಸೆಂಟ್ರಲ್ ಬ್ಯಾಂಕ್ ಈ ಕಠಿಣ ನಿರ್ಧಾರ ತೆಗೆದುಕೊಂಡಿದೆ.

‘ಸತತ ಎರಡು ವರ್ಷ ಕಾಲ ನಿಯಮಾನುಸಾರ ಕೋಟಕ್ ಮಹೀಂದ್ರ ಬ್ಯಾಂಕ್​ನ ಐಟಿ ಅಪಾಯ ಮತ್ತು ಮಾಹಿತಿ ಭದ್ರತಾ ಆಡಳಿತದಲ್ಲಿ (IT Risk and Information Security Governance) ದೋಷ ಕಂಡು ಬಂದಿದೆ’ ಎಂದು ಆರ್​ಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವೈಯಕ್ತಿಕ ಆಸ್ತಿಯಲ್ಲಿ ಸರ್ಕಾರಕ್ಕೆ ಶೇ. 55 ಪಾಲು: ಅಮೆರಿಕದ ಟ್ಯಾಕ್ಸ್ ವ್ಯವಸ್ಥೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ

ಐಟಿ ಇನ್ವೆಂಟರಿ ಮ್ಯಾನೇಜ್ಮೆಂಟ್, ಯೂಸರ್ ಅಕ್ಸೆಸ್ ಮ್ಯಾನೇಜ್ಮೆಂಟ್, ಪ್ಯಾಂಚ್ ಅಂಡ್ ಚೇಂಜ್ ಮ್ಯಾನೇಜ್ಮೆಂಟ್, ಡಾಟಾ ಸೆಕ್ಯೂರಿಟಿ ತಂತ್ರ, ಡಾಟಾ ಸೋರಿಕೆ ನಿಯಂತ್ರಣ ತಂತ್ರ, ವೆಂಡರ್ ರಿಸ್ಕ್ ಮ್ಯಾನೇಜ್ಮೆಂಟ್ ಮೊದಲಾದ ವಿಚಾರಗಳ್ಲಲಿ ಆರ್​ಬಿಐ ನಿಯಮಗಳಿಗೆ ಬ್ಯಾಂಕ್ ಬದ್ಧವಾಗಿಲ್ಲದಿರುವುದು ತಿಳಿದುಬಂದಿದೆ.

‘ಪಕ್ವವಾದ ಐಟಿ ಸೌಕರ್ಯ ಮತ್ತು ಐಟಿ ಅಪಾಯ ನಿರ್ವಹಣೆ ವ್ಯವಸ್ಥೆ ಇಲ್ಲದಿರುವುದರಿಂದ ಬ್ಯಾಂಕ್​ನ ಕೋರ್ ಬ್ಯಾಂಕಿಂಗ್ ಸಿಸ್ಟಮ್ ಹಾಗು ಅದರ ಆನ್ಲೈನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್​ಫಾರ್ಮ್​ಗಳು ಕಳೆದ ಎರಡು ವರ್ಷದಲ್ಲಿ ಆಗಾಗ್ಗೆ ಕುಗ್ಗಿವೆ. ಇತ್ತೀಚೆಗೆ ಏಪ್ರಿಲ್ 15ರಂದು ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇದರಿಂದ ಗ್ರಾಹಕರಿಗೆ ಗಂಭೀರ ರೀತಿಯಲ್ಲಿ ಅನನುಕೂಲವಾಗುತ್ತಿದೆ,’ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: ಮದ್ಯದೊರೆಯ ಮಗಳು; ಫ್ಯಾಷನ್ ಜಗತ್ತಿನಲ್ಲಿ ಲೈಲಾ ಓ ಲೈಲಾ..! ಯಶಸ್ಸು ಕಂಡ ಲೈಲಾ ಮಲ್ಯ

ಕೋಟಕ್ ಮಹೀಂದ್ರ ಬ್ಯಾಂಕ್​ನ ಗ್ರಾಹಕರ ಹಿತದೃಷ್ಟಿಯಿಂದ ಆರ್​ಬಿಐ ಈ ನಿರ್ಬಂಧಗಳನ್ನು ಹೇರಿದೆ. ಬ್ಯಾಂಕ್​ನ ಅಸಮರ್ಪಕ ಐಟಿ ಭದ್ರತೆ ಇಲ್ಲದೇ ಇರುವುದು ಗೊತ್ತಾಗಿ ಆರ್​ಬಿಐ ಕಳೆದ 2 ವರ್ಷದಿಂದಲೂ ಬ್ಯಾಂಕ್ ಜೊತೆ ನಿಕಟ ಸಂಪರ್ಕದಲ್ಲಿತ್ತು. ಆದರೆ, ವ್ಯವಸ್ಥೆಯಲ್ಲಿ ಯಾವ ಸುಧಾರಣೆಯೂ ಆಗಿಲ್ಲ. ಗ್ರಾಹಕರಿಗೆ ಯಾವ ತೃಪ್ತಿಯೂ ಆಗಿಲ್ಲ. ಇತ್ತೀಚಿನ ದಿನಗಳಲ್ಲಿ ಬ್ಯಾಂಕ್​ನ ಡಿಜಿಟಲ್ ವಹಿವಾಟು ಪ್ರಮಾಣ ಬಹಳ ವೇಗವಾಗಿ ಹೆಚ್ಚಾಗಿತ್ತು. ಇದು ಬ್ಯಾಂಕ್​ನ ಐಟಿ ಸಿಸ್ಟಂಗಳ ಮೇಲೆ ಇನ್ನಷ್ಟು ಹೊರೆ ತಂದಿದೆ ಎಂದೂ ಆರ್​ಬಿಐ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ