AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ; ಹೊಸ ಕ್ರೆಡಿಟ್ ಕಾರ್ಡ್ ನೀಡುವಂತಿಲ್ಲ, ಆನ್ಲೈನ್ ಮೂಲಕ ಹೊಸ ಗ್ರಾಹಕರು ಬರುವಂತಿಲ್ಲ

RBI Bars Kotak Mahindra Bank from Issuing New Credit Cards: ಭಾರತೀಯ ರಿಸರ್ವ್ ಬ್ಯಾಂಕ್ ಇಂದು ಬುಧವಾರ ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ನಿರ್ಬಂಧಗಳನ್ನು ವಿಧಿಸಿದೆ. ಅಸಮರ್ಪಕ ಐಟಿ ಭದ್ರತೆ ಹಿನ್ನೆಲೆಯಲ್ಲಿ ಆರ್​ಬಿಐ ಈ ಕ್ರಮ ಕೈಗೊಂಡಿದೆ. ಈ ಬ್ಯಾಂಕ್ ತನ್ನ ಆನ್ಲೈನ್ ಮತ್ತು ಮೊಬೈಲ್ ಬ್ಯಾಂಕಿಂಗ್ ಪ್ಲಾಟ್​ಫಾರ್ಮ್​​ನಲ್ಲಿ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವಂತಿಲ್ಲ. ಹೊಸ ಕ್ರೆಡಿಟ್ ಕಾರ್ಡ್ ವಿತರಿಸುವಂತಿಲ್ಲ ಎಂದು ಆರ್​ಬಿಐ ಹೇಳಿದೆ. ಈ ನಿರ್ಬಂಧ ಎಷ್ಟು ದಿನಗಳವರೆಗೆ ಎಂಬುದು ಗೊತ್ತಾಗಿಲ್ಲ. ಬ್ಯಾಂಕ್ ಗ್ರಾಹಕರ ಹಿತದೃಷ್ಟಿಯಿಂದ ಈ ಕ್ರಮ ಕೈಗೊಂಡಿರುವುದು ತಿಳಿದುಬಂದಿದೆ.

ಕೋಟಕ್ ಮಹೀಂದ್ರ ಬ್ಯಾಂಕ್ ಮೇಲೆ ಆರ್​ಬಿಐ ನಿರ್ಬಂಧ; ಹೊಸ ಕ್ರೆಡಿಟ್ ಕಾರ್ಡ್ ನೀಡುವಂತಿಲ್ಲ, ಆನ್ಲೈನ್ ಮೂಲಕ ಹೊಸ ಗ್ರಾಹಕರು ಬರುವಂತಿಲ್ಲ
ಕೋಟಕ್ ಮಹೀಂದ್ರ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 24, 2024 | 5:23 PM

Share

ನವದೆಹಲಿ, ಏಪ್ರಿಲ್ 24: ಕೋಟಕ್ ಮಹೀಂದ್ರ ಬ್ಯಾಂಕ್​ನ ಆನ್ಲೈನ್ ಸೆಕ್ಯೂರಿಟಿ ವ್ಯವಸ್ಥೆ ಅಸಮರ್ಪಕವಾಗಿರುವ ಹಿನ್ನೆಲೆಯಲ್ಲಿ ಅದರ ಮೇಲೆ ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರ್ಬಂಧ ಹಾಕಿದೆ. ಅದರ ಆನ್ಲೈನ್ ಪ್ಲಾಟ್​ಫಾರ್ಮ್ ಮತ್ತು ಮೊಬೈಲ್ ಬ್ಯಾಂಕಿಂಗ್ ಪ್ಲಾಟ್​ಫಾರ್ಮ್​ನಿಂದ ಹೊಸ ಗ್ರಾಹಕರನ್ನು ಸೇರಿಸಿಕೊಳ್ಳುವಂತಿಲ್ಲ. ಹೊಸ ಕ್ರೆಡಿಟ್ ಕಾರ್ಡ್​ಗಳನ್ನು ನೀಡುವಂತಿಲ್ಲ ಎಂದು ಕೋಟಕ್ ಮಹೀಂದ್ರ ಬ್ಯಾಂಕ್​ಗೆ (Kotak Mahindra Bank) ಆರ್​ಬಿಐ ಆದೇಶಿಸಿದೆ. ಈಗಿರುವ ಬ್ಯಾಂಕ್ ಗ್ರಾಹಕರಿಗೆ ಯಥಾ ಪ್ರಕಾರ ಸೇವೆ ಲಭ್ಯ ಇರುತ್ತದೆ. ಈ ಬ್ಯಾಂಕ್​ನ ಕ್ರೆಡಿಟ್ ಕಾರ್ಡ್ ಹೊಂದಿರುವವರೂ ಕೂಡ ಕಾರ್ಡ್ ಬಳಕೆ ಮುಂದುವರಿಸಲು ಯಾವ ಅಡ್ಡಿಯೂ ಇಲ್ಲ. ಏನಿದ್ದರೂ ಹೊಸ ಕ್ರೆಡಿಟ್ ಕಾರ್ಡ್ ನೀಡುವುದು ಸದ್ಯಕ್ಕೆ ಬಂದ್ ಆಗುತ್ತದೆ.

ಕಳೆದ ಎರಡು ವರ್ಷದಲ್ಲಿ, ಅಂದರೆ 2022 ಮತ್ತು 2023ರಲ್ಲಿ ಬ್ಯಾಂಕ್​ನ ಐಟಿ ಪರಿಶೀಲನೆ ನಡೆಸಲಾಗಿತ್ತು. ಈ ವೇಳೆ ಸಮಸ್ಯೆಗಳನ್ನು ಸರಿಪಡಿಸಲಾಗಿಲ್ಲದಿರುವುದು ಆರ್​ಬಿಐ ಗಮನಕ್ಕೆ ಬಂದಿದೆ. ಹೀಗಾಗಿ, ಭಾರತದ ಸೆಂಟ್ರಲ್ ಬ್ಯಾಂಕ್ ಈ ಕಠಿಣ ನಿರ್ಧಾರ ತೆಗೆದುಕೊಂಡಿದೆ.

‘ಸತತ ಎರಡು ವರ್ಷ ಕಾಲ ನಿಯಮಾನುಸಾರ ಕೋಟಕ್ ಮಹೀಂದ್ರ ಬ್ಯಾಂಕ್​ನ ಐಟಿ ಅಪಾಯ ಮತ್ತು ಮಾಹಿತಿ ಭದ್ರತಾ ಆಡಳಿತದಲ್ಲಿ (IT Risk and Information Security Governance) ದೋಷ ಕಂಡು ಬಂದಿದೆ’ ಎಂದು ಆರ್​ಬಿಐ ತನ್ನ ಹೇಳಿಕೆಯಲ್ಲಿ ತಿಳಿಸಿದೆ.

ಇದನ್ನೂ ಓದಿ: ವೈಯಕ್ತಿಕ ಆಸ್ತಿಯಲ್ಲಿ ಸರ್ಕಾರಕ್ಕೆ ಶೇ. 55 ಪಾಲು: ಅಮೆರಿಕದ ಟ್ಯಾಕ್ಸ್ ವ್ಯವಸ್ಥೆ ಪ್ರಸ್ತಾಪಿಸಿದ ಸ್ಯಾಮ್ ಪಿತ್ರೋಡಾ

ಐಟಿ ಇನ್ವೆಂಟರಿ ಮ್ಯಾನೇಜ್ಮೆಂಟ್, ಯೂಸರ್ ಅಕ್ಸೆಸ್ ಮ್ಯಾನೇಜ್ಮೆಂಟ್, ಪ್ಯಾಂಚ್ ಅಂಡ್ ಚೇಂಜ್ ಮ್ಯಾನೇಜ್ಮೆಂಟ್, ಡಾಟಾ ಸೆಕ್ಯೂರಿಟಿ ತಂತ್ರ, ಡಾಟಾ ಸೋರಿಕೆ ನಿಯಂತ್ರಣ ತಂತ್ರ, ವೆಂಡರ್ ರಿಸ್ಕ್ ಮ್ಯಾನೇಜ್ಮೆಂಟ್ ಮೊದಲಾದ ವಿಚಾರಗಳ್ಲಲಿ ಆರ್​ಬಿಐ ನಿಯಮಗಳಿಗೆ ಬ್ಯಾಂಕ್ ಬದ್ಧವಾಗಿಲ್ಲದಿರುವುದು ತಿಳಿದುಬಂದಿದೆ.

‘ಪಕ್ವವಾದ ಐಟಿ ಸೌಕರ್ಯ ಮತ್ತು ಐಟಿ ಅಪಾಯ ನಿರ್ವಹಣೆ ವ್ಯವಸ್ಥೆ ಇಲ್ಲದಿರುವುದರಿಂದ ಬ್ಯಾಂಕ್​ನ ಕೋರ್ ಬ್ಯಾಂಕಿಂಗ್ ಸಿಸ್ಟಮ್ ಹಾಗು ಅದರ ಆನ್ಲೈನ್ ಮತ್ತು ಡಿಜಿಟಲ್ ಬ್ಯಾಂಕಿಂಗ್ ಪ್ಲಾಟ್​ಫಾರ್ಮ್​ಗಳು ಕಳೆದ ಎರಡು ವರ್ಷದಲ್ಲಿ ಆಗಾಗ್ಗೆ ಕುಗ್ಗಿವೆ. ಇತ್ತೀಚೆಗೆ ಏಪ್ರಿಲ್ 15ರಂದು ಸೇವೆಯಲ್ಲಿ ವ್ಯತ್ಯಯವಾಗಿತ್ತು. ಇದರಿಂದ ಗ್ರಾಹಕರಿಗೆ ಗಂಭೀರ ರೀತಿಯಲ್ಲಿ ಅನನುಕೂಲವಾಗುತ್ತಿದೆ,’ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: ಮದ್ಯದೊರೆಯ ಮಗಳು; ಫ್ಯಾಷನ್ ಜಗತ್ತಿನಲ್ಲಿ ಲೈಲಾ ಓ ಲೈಲಾ..! ಯಶಸ್ಸು ಕಂಡ ಲೈಲಾ ಮಲ್ಯ

ಕೋಟಕ್ ಮಹೀಂದ್ರ ಬ್ಯಾಂಕ್​ನ ಗ್ರಾಹಕರ ಹಿತದೃಷ್ಟಿಯಿಂದ ಆರ್​ಬಿಐ ಈ ನಿರ್ಬಂಧಗಳನ್ನು ಹೇರಿದೆ. ಬ್ಯಾಂಕ್​ನ ಅಸಮರ್ಪಕ ಐಟಿ ಭದ್ರತೆ ಇಲ್ಲದೇ ಇರುವುದು ಗೊತ್ತಾಗಿ ಆರ್​ಬಿಐ ಕಳೆದ 2 ವರ್ಷದಿಂದಲೂ ಬ್ಯಾಂಕ್ ಜೊತೆ ನಿಕಟ ಸಂಪರ್ಕದಲ್ಲಿತ್ತು. ಆದರೆ, ವ್ಯವಸ್ಥೆಯಲ್ಲಿ ಯಾವ ಸುಧಾರಣೆಯೂ ಆಗಿಲ್ಲ. ಗ್ರಾಹಕರಿಗೆ ಯಾವ ತೃಪ್ತಿಯೂ ಆಗಿಲ್ಲ. ಇತ್ತೀಚಿನ ದಿನಗಳಲ್ಲಿ ಬ್ಯಾಂಕ್​ನ ಡಿಜಿಟಲ್ ವಹಿವಾಟು ಪ್ರಮಾಣ ಬಹಳ ವೇಗವಾಗಿ ಹೆಚ್ಚಾಗಿತ್ತು. ಇದು ಬ್ಯಾಂಕ್​ನ ಐಟಿ ಸಿಸ್ಟಂಗಳ ಮೇಲೆ ಇನ್ನಷ್ಟು ಹೊರೆ ತಂದಿದೆ ಎಂದೂ ಆರ್​ಬಿಐ ಅಭಿಪ್ರಾಯಪಟ್ಟಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಪ್ರಜಾಕೀಯ ಜೊತೆ ಜೊತೆಗೆ ರಾಜ್ಯ ರಾಜಕಾರಣದ ಬಗ್ಗೆ ಉಪ್ಪಿ ಮಾತು
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ