AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡವಾಳ, ಲಾಭ ಇಲ್ಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಂದ್ ಮಾಡಿಸಿದ ಆರ್​ಬಿಐ

Mumbai's city co-operative bank's licence canceled: ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಪರವಾನಿಗೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಜೂನ್ 19ರಂದು ರದ್ದು ಮಾಡಿದೆ. ಬುಧವಾರ ದಿನಾಂತ್ಯದ ಬಳಿಕ ಬ್ಯಾಂಕ್ ಕಾರ್ಯನಿರ್ವಹಣೆ ಸ್ಥಗಿತಗೊಂಡಿದೆ. ಐದು ಲಕ್ಷ ರೂ ಒಳಗೆ ಬ್ಯಾಂಕ್​ನಲ್ಲಿ ಠೇವಣಿ ಇರಿಸಿದವರ ಹಣ ಸುರಕ್ಷಿತವಾಗಿ ಅವರಿಗೆ ಮರಳಲಿದೆ. ಆರ್​ಬಿಐ ಮಾಹಿತಿ ಪ್ರಕಾರ ಶೇ. 87ರಷ್ಟು ಗ್ರಾಹಕರಿಗೆ ಅವರ ಪೂರ್ಣ ಹಣ ಮರಳಲಿದೆ.

ಬಂಡವಾಳ, ಲಾಭ ಇಲ್ಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಂದ್ ಮಾಡಿಸಿದ ಆರ್​ಬಿಐ
ಸಿಟಿ ಕೋ ಆಪರೇಟಿವ್ ಬ್ಯಾಂಕ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 20, 2024 | 11:02 AM

Share

ಮುಂಬೈ, ಜೂನ್ 20: ಬಂಡವಾಳ ಮತ್ತು ಆದಾಯದ ಕೊರತೆ ಎದುರಿಸುತ್ತಿರುವ ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಲೈಸೆನ್ಸ್ ಅನ್ನು ಆರ್​ಬಿಐ ರದ್ದು ಮಾಡಿದೆ. ಆ ಬ್ಯಾಂಕ್ ಅನ್ನು ಮುಚ್ಚಲು ಮತ್ತು ಬರಖಾಸ್ತುದಾರರೊಬ್ಬರನ್ನು (Liquidator) ನೇಮಿಸಲು ಆದೇಶ ಹೊರಡಿಸುವಂತೆ ಮಹಾರಾಷ್ಟ್ರದ ಸಹಕಾರಿ ಸಂಸ್ಥೆಗಳ ರಿಜಿಸ್ಟ್ರಾರ್​ಗೆ (Commissioner for Cooperation and Registrar of Cooperative Societies) ಆರ್​ಬಿಐ ಸೂಚನೆ ನೀಡಿದೆ. ಆರ್​ಬಿಐ ಆದೇಶ ನಿನ್ನೆ ಬುಧವಾರ (ಜೂನ್ 19) ಹೊರಬಂದಿದೆ. ಇವತ್ತಿನಿಂದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಬೆಂಗಳೂರಿನಲ್ಲಿರುವ ಸಿಟಿ ಕೋ ಆಪರೇಟಿವ್ ಬ್ಯಾಂಕ್​ಗೂ ಇದಕ್ಕೂ ಸಂಬಂಧ ಇಲ್ಲ…

ಬೆಂಗಳೂರಿನಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕ್​ವೊಂದು ಇದೆ. ಆದರೆ, ಬ್ಯಾಂಕಿಂಗ್ ಲೈಸೆನ್ಸ್ ರದ್ದು ಮಾಡಲಾಗಿರುವುದು ಮುಂಬೈನ ಸಿಟಿ ಕೋ ಆಪರೇಟಿವ್ ಬ್ಯಾಂಕ್. ಬೆಂಗಳೂರಿನಲ್ಲಿರುವುದು ಬೆಂಗಳೂರು ಸಿಟಿ ಕೋ ಆಪರೇಟವ್ ಬ್ಯಾಂಕ್. ಎರಡೂ ಬೇರೆ ಬ್ಯಾಂಕ್​ಗಳು.

ಮುಂಬೈನ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಶಾಖೆಗಳು ಮುಂಬೈ ಮತ್ತು ಥಾಣೆ ನಗರಗಳಲ್ಲಿ ಇವೆ.

ಇದನ್ನೂ ಓದಿ: ಬಜೆಟ್​ಗೆ ಮುಂಚೆ ಪ್ರಮುಖ ಆರ್ಥಿಕ ತಜ್ಞರ ಜೊತೆ ನಿರ್ಮಲಾ ಸೀತಾರಾಮನ್ ಸಭೆ

ಬ್ಯಾಂಕ್​ನಲ್ಲಿ ಠೇವಣಿ ಇಟ್ಟವರ ಕಥೆ ಏನು?

ಮುಂಬೈ ಮೂಲ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಬಹಳ ಗ್ರಾಹಕರ ಠೇವಣಿಗಳಿವೆ. ಆರ್​ಬಿಐನಿದ ಮಾನ್ಯತೆ ಪಡೆದ ಯಾವುದೇ ಬ್ಯಾಂಕುಗಳಲ್ಲಿ ಠೇವಣಿದಾರರ ಐದು ಲಕ್ಷ ರೂವರೆಗಿನ ಹಣಕ್ಕೆ ಇನ್ಷೂರೆನ್ಸ್ ಗ್ಯಾರಂಟಿ ಇರುತ್ತದೆ. ವರದಿ ಪ್ರಕಾರ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಶೇ. 87ರಷ್ಟು ಗ್ರಾಹಕರ ಹಣವನ್ನು ಸಂಪೂರ್ಣವಾಗಿ ಮರಳಿಸಬಹುದು.

ಠೇವಣಿ ಹಣದ ಇನ್ಷೂರೆನ್ಸ್ ಕೊಟ್ಟಿರುವ ಡೆಪಾಸಿಟ್ ಇನ್ಷೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಸಂಸ್ಥೆಯು ಗ್ರಾಹಕರಿಗೆ ಆ ಹಣವನ್ನು ಕೊಡಲಿದೆ. ವರದಿ ಪ್ರಕಾರ ಬ್ಯಾಂಕ್​ನ ಗ್ರಾಹಕರ ಮನವಿ ಮೇರೆಗೆ ವಿಮೆಗೆ ಅರ್ಹವಾಗಿರುವ 230.99 ಕೋಟಿ ರೂ ಹಣವನ್ನು ಡಿಐಜಿಸಿಸಿ ಈಗಾಗಲೇ ಕೊಟ್ಟಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಜಿಎಸ್​ಟಿ ನೀತಿಯಲ್ಲಿ ಬದಲಾವಣೆ ನಿರೀಕ್ಷೆಯಲ್ಲಿ ಆನ್ಲೈನ್ ಗೇಮಿಂಗ್ ಕ್ಷೇತ್ರ; ಜೂನ್ 22ರ ಸಭೆಯಲ್ಲಿ ಏನಾಗಬಹುದು?

ಬ್ಯಾಂಕಿಂಗ್ ಲೈಸೆನ್ಸ್ ರದ್ದುಗೊಳಿಸಲು ಏನು ಕಾರಣ?

ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಳಿ ಸಾಕಷ್ಟು ಬಂಡವಾಳ ಇಲ್ಲ. ಹಾಗೆಯೇ ಹಣ ಗಳಿಸುವ ದಾರಿಯನ್ನೂ ಕಳೆದುಕೊಂಡಿದೆ. ಈಗಿರುವ ಠೇವಣಿದಾರರಿಗೆ ಪೂರ್ತಿಯಾಗಿ ಹಣ ಮರಳಿಸುವ ಮಟ್ಟಿಗೂ ಅದರ ಹಣಕಾಸು ಪರಿಸ್ಥಿತಿ ಇಲ್ಲ. ಈ ಬ್ಯಾಂಕ್​ಗೆ ಮುಂದುವರಿಸಲು ಅವಕಾಶ ಕೊಟ್ಟರೆ ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಅದನ್ನು ಬರಕಾಸ್ತುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ