ಬಂಡವಾಳ, ಲಾಭ ಇಲ್ಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಂದ್ ಮಾಡಿಸಿದ ಆರ್​ಬಿಐ

Mumbai's city co-operative bank's licence canceled: ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಪರವಾನಿಗೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಜೂನ್ 19ರಂದು ರದ್ದು ಮಾಡಿದೆ. ಬುಧವಾರ ದಿನಾಂತ್ಯದ ಬಳಿಕ ಬ್ಯಾಂಕ್ ಕಾರ್ಯನಿರ್ವಹಣೆ ಸ್ಥಗಿತಗೊಂಡಿದೆ. ಐದು ಲಕ್ಷ ರೂ ಒಳಗೆ ಬ್ಯಾಂಕ್​ನಲ್ಲಿ ಠೇವಣಿ ಇರಿಸಿದವರ ಹಣ ಸುರಕ್ಷಿತವಾಗಿ ಅವರಿಗೆ ಮರಳಲಿದೆ. ಆರ್​ಬಿಐ ಮಾಹಿತಿ ಪ್ರಕಾರ ಶೇ. 87ರಷ್ಟು ಗ್ರಾಹಕರಿಗೆ ಅವರ ಪೂರ್ಣ ಹಣ ಮರಳಲಿದೆ.

ಬಂಡವಾಳ, ಲಾಭ ಇಲ್ಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಂದ್ ಮಾಡಿಸಿದ ಆರ್​ಬಿಐ
ಸಿಟಿ ಕೋ ಆಪರೇಟಿವ್ ಬ್ಯಾಂಕ್​
Follow us
|

Updated on: Jun 20, 2024 | 11:02 AM

ಮುಂಬೈ, ಜೂನ್ 20: ಬಂಡವಾಳ ಮತ್ತು ಆದಾಯದ ಕೊರತೆ ಎದುರಿಸುತ್ತಿರುವ ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಲೈಸೆನ್ಸ್ ಅನ್ನು ಆರ್​ಬಿಐ ರದ್ದು ಮಾಡಿದೆ. ಆ ಬ್ಯಾಂಕ್ ಅನ್ನು ಮುಚ್ಚಲು ಮತ್ತು ಬರಖಾಸ್ತುದಾರರೊಬ್ಬರನ್ನು (Liquidator) ನೇಮಿಸಲು ಆದೇಶ ಹೊರಡಿಸುವಂತೆ ಮಹಾರಾಷ್ಟ್ರದ ಸಹಕಾರಿ ಸಂಸ್ಥೆಗಳ ರಿಜಿಸ್ಟ್ರಾರ್​ಗೆ (Commissioner for Cooperation and Registrar of Cooperative Societies) ಆರ್​ಬಿಐ ಸೂಚನೆ ನೀಡಿದೆ. ಆರ್​ಬಿಐ ಆದೇಶ ನಿನ್ನೆ ಬುಧವಾರ (ಜೂನ್ 19) ಹೊರಬಂದಿದೆ. ಇವತ್ತಿನಿಂದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಬೆಂಗಳೂರಿನಲ್ಲಿರುವ ಸಿಟಿ ಕೋ ಆಪರೇಟಿವ್ ಬ್ಯಾಂಕ್​ಗೂ ಇದಕ್ಕೂ ಸಂಬಂಧ ಇಲ್ಲ…

ಬೆಂಗಳೂರಿನಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕ್​ವೊಂದು ಇದೆ. ಆದರೆ, ಬ್ಯಾಂಕಿಂಗ್ ಲೈಸೆನ್ಸ್ ರದ್ದು ಮಾಡಲಾಗಿರುವುದು ಮುಂಬೈನ ಸಿಟಿ ಕೋ ಆಪರೇಟಿವ್ ಬ್ಯಾಂಕ್. ಬೆಂಗಳೂರಿನಲ್ಲಿರುವುದು ಬೆಂಗಳೂರು ಸಿಟಿ ಕೋ ಆಪರೇಟವ್ ಬ್ಯಾಂಕ್. ಎರಡೂ ಬೇರೆ ಬ್ಯಾಂಕ್​ಗಳು.

ಮುಂಬೈನ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಶಾಖೆಗಳು ಮುಂಬೈ ಮತ್ತು ಥಾಣೆ ನಗರಗಳಲ್ಲಿ ಇವೆ.

ಇದನ್ನೂ ಓದಿ: ಬಜೆಟ್​ಗೆ ಮುಂಚೆ ಪ್ರಮುಖ ಆರ್ಥಿಕ ತಜ್ಞರ ಜೊತೆ ನಿರ್ಮಲಾ ಸೀತಾರಾಮನ್ ಸಭೆ

ಬ್ಯಾಂಕ್​ನಲ್ಲಿ ಠೇವಣಿ ಇಟ್ಟವರ ಕಥೆ ಏನು?

ಮುಂಬೈ ಮೂಲ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಬಹಳ ಗ್ರಾಹಕರ ಠೇವಣಿಗಳಿವೆ. ಆರ್​ಬಿಐನಿದ ಮಾನ್ಯತೆ ಪಡೆದ ಯಾವುದೇ ಬ್ಯಾಂಕುಗಳಲ್ಲಿ ಠೇವಣಿದಾರರ ಐದು ಲಕ್ಷ ರೂವರೆಗಿನ ಹಣಕ್ಕೆ ಇನ್ಷೂರೆನ್ಸ್ ಗ್ಯಾರಂಟಿ ಇರುತ್ತದೆ. ವರದಿ ಪ್ರಕಾರ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಶೇ. 87ರಷ್ಟು ಗ್ರಾಹಕರ ಹಣವನ್ನು ಸಂಪೂರ್ಣವಾಗಿ ಮರಳಿಸಬಹುದು.

ಠೇವಣಿ ಹಣದ ಇನ್ಷೂರೆನ್ಸ್ ಕೊಟ್ಟಿರುವ ಡೆಪಾಸಿಟ್ ಇನ್ಷೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಸಂಸ್ಥೆಯು ಗ್ರಾಹಕರಿಗೆ ಆ ಹಣವನ್ನು ಕೊಡಲಿದೆ. ವರದಿ ಪ್ರಕಾರ ಬ್ಯಾಂಕ್​ನ ಗ್ರಾಹಕರ ಮನವಿ ಮೇರೆಗೆ ವಿಮೆಗೆ ಅರ್ಹವಾಗಿರುವ 230.99 ಕೋಟಿ ರೂ ಹಣವನ್ನು ಡಿಐಜಿಸಿಸಿ ಈಗಾಗಲೇ ಕೊಟ್ಟಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಜಿಎಸ್​ಟಿ ನೀತಿಯಲ್ಲಿ ಬದಲಾವಣೆ ನಿರೀಕ್ಷೆಯಲ್ಲಿ ಆನ್ಲೈನ್ ಗೇಮಿಂಗ್ ಕ್ಷೇತ್ರ; ಜೂನ್ 22ರ ಸಭೆಯಲ್ಲಿ ಏನಾಗಬಹುದು?

ಬ್ಯಾಂಕಿಂಗ್ ಲೈಸೆನ್ಸ್ ರದ್ದುಗೊಳಿಸಲು ಏನು ಕಾರಣ?

ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಳಿ ಸಾಕಷ್ಟು ಬಂಡವಾಳ ಇಲ್ಲ. ಹಾಗೆಯೇ ಹಣ ಗಳಿಸುವ ದಾರಿಯನ್ನೂ ಕಳೆದುಕೊಂಡಿದೆ. ಈಗಿರುವ ಠೇವಣಿದಾರರಿಗೆ ಪೂರ್ತಿಯಾಗಿ ಹಣ ಮರಳಿಸುವ ಮಟ್ಟಿಗೂ ಅದರ ಹಣಕಾಸು ಪರಿಸ್ಥಿತಿ ಇಲ್ಲ. ಈ ಬ್ಯಾಂಕ್​ಗೆ ಮುಂದುವರಿಸಲು ಅವಕಾಶ ಕೊಟ್ಟರೆ ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಅದನ್ನು ಬರಕಾಸ್ತುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ ಲೈವ್​
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್