AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡವಾಳ, ಲಾಭ ಇಲ್ಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಂದ್ ಮಾಡಿಸಿದ ಆರ್​ಬಿಐ

Mumbai's city co-operative bank's licence canceled: ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಪರವಾನಿಗೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್ ಜೂನ್ 19ರಂದು ರದ್ದು ಮಾಡಿದೆ. ಬುಧವಾರ ದಿನಾಂತ್ಯದ ಬಳಿಕ ಬ್ಯಾಂಕ್ ಕಾರ್ಯನಿರ್ವಹಣೆ ಸ್ಥಗಿತಗೊಂಡಿದೆ. ಐದು ಲಕ್ಷ ರೂ ಒಳಗೆ ಬ್ಯಾಂಕ್​ನಲ್ಲಿ ಠೇವಣಿ ಇರಿಸಿದವರ ಹಣ ಸುರಕ್ಷಿತವಾಗಿ ಅವರಿಗೆ ಮರಳಲಿದೆ. ಆರ್​ಬಿಐ ಮಾಹಿತಿ ಪ್ರಕಾರ ಶೇ. 87ರಷ್ಟು ಗ್ರಾಹಕರಿಗೆ ಅವರ ಪೂರ್ಣ ಹಣ ಮರಳಲಿದೆ.

ಬಂಡವಾಳ, ಲಾಭ ಇಲ್ಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಂದ್ ಮಾಡಿಸಿದ ಆರ್​ಬಿಐ
ಸಿಟಿ ಕೋ ಆಪರೇಟಿವ್ ಬ್ಯಾಂಕ್​
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 20, 2024 | 11:02 AM

Share

ಮುಂಬೈ, ಜೂನ್ 20: ಬಂಡವಾಳ ಮತ್ತು ಆದಾಯದ ಕೊರತೆ ಎದುರಿಸುತ್ತಿರುವ ಮುಂಬೈ ಮೂಲದ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಲೈಸೆನ್ಸ್ ಅನ್ನು ಆರ್​ಬಿಐ ರದ್ದು ಮಾಡಿದೆ. ಆ ಬ್ಯಾಂಕ್ ಅನ್ನು ಮುಚ್ಚಲು ಮತ್ತು ಬರಖಾಸ್ತುದಾರರೊಬ್ಬರನ್ನು (Liquidator) ನೇಮಿಸಲು ಆದೇಶ ಹೊರಡಿಸುವಂತೆ ಮಹಾರಾಷ್ಟ್ರದ ಸಹಕಾರಿ ಸಂಸ್ಥೆಗಳ ರಿಜಿಸ್ಟ್ರಾರ್​ಗೆ (Commissioner for Cooperation and Registrar of Cooperative Societies) ಆರ್​ಬಿಐ ಸೂಚನೆ ನೀಡಿದೆ. ಆರ್​ಬಿಐ ಆದೇಶ ನಿನ್ನೆ ಬುಧವಾರ (ಜೂನ್ 19) ಹೊರಬಂದಿದೆ. ಇವತ್ತಿನಿಂದ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಕಾರ್ಯ ನಿರ್ವಹಿಸುವುದಿಲ್ಲ.

ಬೆಂಗಳೂರಿನಲ್ಲಿರುವ ಸಿಟಿ ಕೋ ಆಪರೇಟಿವ್ ಬ್ಯಾಂಕ್​ಗೂ ಇದಕ್ಕೂ ಸಂಬಂಧ ಇಲ್ಲ…

ಬೆಂಗಳೂರಿನಲ್ಲಿ ಸಿಟಿ ಕೋ ಆಪರೇಟಿವ್ ಬ್ಯಾಂಕ್​ವೊಂದು ಇದೆ. ಆದರೆ, ಬ್ಯಾಂಕಿಂಗ್ ಲೈಸೆನ್ಸ್ ರದ್ದು ಮಾಡಲಾಗಿರುವುದು ಮುಂಬೈನ ಸಿಟಿ ಕೋ ಆಪರೇಟಿವ್ ಬ್ಯಾಂಕ್. ಬೆಂಗಳೂರಿನಲ್ಲಿರುವುದು ಬೆಂಗಳೂರು ಸಿಟಿ ಕೋ ಆಪರೇಟವ್ ಬ್ಯಾಂಕ್. ಎರಡೂ ಬೇರೆ ಬ್ಯಾಂಕ್​ಗಳು.

ಮುಂಬೈನ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಶಾಖೆಗಳು ಮುಂಬೈ ಮತ್ತು ಥಾಣೆ ನಗರಗಳಲ್ಲಿ ಇವೆ.

ಇದನ್ನೂ ಓದಿ: ಬಜೆಟ್​ಗೆ ಮುಂಚೆ ಪ್ರಮುಖ ಆರ್ಥಿಕ ತಜ್ಞರ ಜೊತೆ ನಿರ್ಮಲಾ ಸೀತಾರಾಮನ್ ಸಭೆ

ಬ್ಯಾಂಕ್​ನಲ್ಲಿ ಠೇವಣಿ ಇಟ್ಟವರ ಕಥೆ ಏನು?

ಮುಂಬೈ ಮೂಲ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನಲ್ಲಿ ಬಹಳ ಗ್ರಾಹಕರ ಠೇವಣಿಗಳಿವೆ. ಆರ್​ಬಿಐನಿದ ಮಾನ್ಯತೆ ಪಡೆದ ಯಾವುದೇ ಬ್ಯಾಂಕುಗಳಲ್ಲಿ ಠೇವಣಿದಾರರ ಐದು ಲಕ್ಷ ರೂವರೆಗಿನ ಹಣಕ್ಕೆ ಇನ್ಷೂರೆನ್ಸ್ ಗ್ಯಾರಂಟಿ ಇರುತ್ತದೆ. ವರದಿ ಪ್ರಕಾರ ಸಿಟಿ ಕೋ ಆಪರೇಟಿವ್ ಬ್ಯಾಂಕ್​ನ ಶೇ. 87ರಷ್ಟು ಗ್ರಾಹಕರ ಹಣವನ್ನು ಸಂಪೂರ್ಣವಾಗಿ ಮರಳಿಸಬಹುದು.

ಠೇವಣಿ ಹಣದ ಇನ್ಷೂರೆನ್ಸ್ ಕೊಟ್ಟಿರುವ ಡೆಪಾಸಿಟ್ ಇನ್ಷೂರೆನ್ಸ್ ಮತ್ತು ಕ್ರೆಡಿಟ್ ಗ್ಯಾರಂಟಿ ಕಾರ್ಪೊರೇಶನ್ (ಡಿಐಸಿಜಿಸಿ) ಸಂಸ್ಥೆಯು ಗ್ರಾಹಕರಿಗೆ ಆ ಹಣವನ್ನು ಕೊಡಲಿದೆ. ವರದಿ ಪ್ರಕಾರ ಬ್ಯಾಂಕ್​ನ ಗ್ರಾಹಕರ ಮನವಿ ಮೇರೆಗೆ ವಿಮೆಗೆ ಅರ್ಹವಾಗಿರುವ 230.99 ಕೋಟಿ ರೂ ಹಣವನ್ನು ಡಿಐಜಿಸಿಸಿ ಈಗಾಗಲೇ ಕೊಟ್ಟಿರುವುದು ತಿಳಿದುಬಂದಿದೆ.

ಇದನ್ನೂ ಓದಿ: ಜಿಎಸ್​ಟಿ ನೀತಿಯಲ್ಲಿ ಬದಲಾವಣೆ ನಿರೀಕ್ಷೆಯಲ್ಲಿ ಆನ್ಲೈನ್ ಗೇಮಿಂಗ್ ಕ್ಷೇತ್ರ; ಜೂನ್ 22ರ ಸಭೆಯಲ್ಲಿ ಏನಾಗಬಹುದು?

ಬ್ಯಾಂಕಿಂಗ್ ಲೈಸೆನ್ಸ್ ರದ್ದುಗೊಳಿಸಲು ಏನು ಕಾರಣ?

ಆರ್​ಬಿಐ ನೀಡಿರುವ ಮಾಹಿತಿ ಪ್ರಕಾರ ಸಿಟಿ ಕೋ ಆಪರೇಟಿವ್ ಬ್ಯಾಂಕ್ ಬಳಿ ಸಾಕಷ್ಟು ಬಂಡವಾಳ ಇಲ್ಲ. ಹಾಗೆಯೇ ಹಣ ಗಳಿಸುವ ದಾರಿಯನ್ನೂ ಕಳೆದುಕೊಂಡಿದೆ. ಈಗಿರುವ ಠೇವಣಿದಾರರಿಗೆ ಪೂರ್ತಿಯಾಗಿ ಹಣ ಮರಳಿಸುವ ಮಟ್ಟಿಗೂ ಅದರ ಹಣಕಾಸು ಪರಿಸ್ಥಿತಿ ಇಲ್ಲ. ಈ ಬ್ಯಾಂಕ್​ಗೆ ಮುಂದುವರಿಸಲು ಅವಕಾಶ ಕೊಟ್ಟರೆ ಸಮಸ್ಯೆಯಾಗಬಹುದು ಎಂಬ ಕಾರಣಕ್ಕೆ ಅದನ್ನು ಬರಕಾಸ್ತುಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ರಣರೋಚಕ ಘಟ್ಟದಲ್ಲಿ ಆಸ್ಟ್ರೇಲಿಯಾ vs ಇಂಗ್ಲೆಂಡ್ ಟೆಸ್ಟ್ ಪಂದ್ಯ
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಯಾವುದೇ ಕಾರ್ಯಗಳಲ್ಲಿ ಶಂಕುಸ್ಥಾಪನೆ ಮಾಡುವುದು ಯಾಕೆ?
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಇಂದು ಈ ರಾಶಿಯವರಿಗೆ ಖರ್ಚು ಜಾಸ್ತಿ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ಡಿಕೆ ಶಿವಕುಮಾರ್​ ಹಾಗೂ ಕೆಎನ್​​ ರಾಜಣ್ಣ ಭೇಟಿ: ಕುತೂಹಲ ಮೂಡಿಸಿದ ನಾಯಕರ ನಡ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ವಿಶಾಖಪಟ್ಟಣದಲ್ಲಿ ರಸ್ತೆ ಕಾಮಗಾರಿ ವೇಳೆ ಶ್ರೀರಾಮನ ಪ್ರಾಚೀನ ವಿಗ್ರಹ ಪತ್ತೆ
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಊಟಿಯಲ್ಲಿ ದಾಖಲೆಯ ಚಳಿ; ಪ್ರವಾಸಿಗರನ್ನು ಸೆಳೆಯುತ್ತಿವೆ ಹಿಮಾವೃತ ಹೂಗಳು
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
ಚಿಕ್ಕಬಳ್ಳಾಪುರದಲ್ಲಿ ಕಾರು-ಸ್ಕೂಟಿ ನಡುವೆ ಭೀಕರ ಅಪಘಾತ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ