AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Record Dividend: ಸರ್ಕಾರಕ್ಕೆ ಆರ್​​ಬಿಐನಿಂದ 2.70 ಲಕ್ಷ ಕೋಟಿ ರೂ ಡಿವಿಡೆಂಡ್; ಇದು ಸಾರ್ವಕಾಲಿಕ ಗರಿಷ್ಠ ಮೊತ್ತ

RBI decides to give Rs 2.70 trillion as dividend to govt: ರಿಸರ್ವ್ ಬ್ಯಾಂಕ್ 2024-25ರ ಹಣಕಾಸು ವರ್ಷಕ್ಕೆ ಸರ್ಕಾರಕ್ಕೆ 2.70 ಲಕ್ಷ ಕೋಟಿ ರೂನಷ್ಟು ಡಿವಿಡೆಂಡ್ ನೀಡಲು ನಿರ್ಧರಿಸಿದೆ. 2023-24ರಲ್ಲಿ 2.1 ಲಕ್ಷ ಕೋಟಿ ರೂ ಡಿವಿಡೆಂಡ್ ನೀಡಲಾಗಿತ್ತು. ಆರ್​​ಬಿಐ ಒಂದು ವರ್ಷದಲ್ಲಿ ಎರಡು ಲಕ್ಷ ಕೋಟಿ ರೂ ಲಾಭಾಂಶ ನೀಡಿದ್ದು ಅದೇ ಮೊದಲು. ಈಗ ಸತತ ಎರಡನೇ ವರ್ಷ ಎರಡು ಲಕ್ಷ ಕೋಟಿಗೂ ಅಧಿಕ ಡಿವಿಡೆಂಡ್ ಅನ್ನು ಸರ್ಕಾರಕ್ಕೆ ನೀಡುತ್ತಿದೆ ಆರ್​​ಬಿಐ.

Record Dividend: ಸರ್ಕಾರಕ್ಕೆ ಆರ್​​ಬಿಐನಿಂದ 2.70 ಲಕ್ಷ ಕೋಟಿ ರೂ ಡಿವಿಡೆಂಡ್; ಇದು ಸಾರ್ವಕಾಲಿಕ ಗರಿಷ್ಠ ಮೊತ್ತ
ಆರ್​​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:May 23, 2025 | 6:45 PM

Share

ನವದೆಹಲಿ, ಮೇ 23: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ಈ ಬಾರಿ ಹೊಸ ದಾಖಲೆಯ ಮೊತ್ತದಷ್ಟು ಡಿವಿಡೆಂಡ್ (RBI dividend) ಅನ್ನು ಸರ್ಕಾರಕ್ಕೆ ನೀಡಲು ನಿರ್ಧರಿಸಿದೆ. ವರದಿ ಪ್ರಕಾರ, 2024-25ರ ಹಣಕಾಸು ವರ್ಷಕ್ಕೆ ಸರ್ಕಾರಕ್ಕೆ ಆರ್​​ಬಿಐ 2.69 ಲಕ್ಷ ಕೋಟಿ ರೂ ಲಾಭಾಂಶ ವರ್ಗಾಯಿಸಲಿದೆ. ಹಿಂದಿನ ವರ್ಷದಲ್ಲಿ (2023-24) 2.1 ಲಕ್ಷ ಕೋಟಿ ರೂ ಡಿವಿಡೆಂಡ್ ನೀಡಿತ್ತು. ಅದು ಹೊಸ ದಾಖಲೆ ಎನಿಸಿತ್ತು. ಆದರೆ, ಈ ಬಾರಿ ಡಿವಿಡೆಂಡ್ ಶೇ. 27ರಷ್ಟು ಹೆಚ್ಚಾಗಿದೆ. ಇದು ಆರ್​​ಬಿಐನಿಂದ ಸರ್ಕಾರಕ್ಕೆ ನೀಡಲಾಗುತ್ತಿರುವ ಗರಿಷ್ಠ ಡಿವಿಡೆಂಡ್ ಮೊತ್ತವಾಗಿದೆ. 2022-23ರಲ್ಲಿ ಆರ್​​ಬಿಐನಿಂದ ಸರ್ಕಾರಕ್ಕೆ ನೀಡಲಾಗಿದ್ದ ಡಿವಿಡೆಂಡ್ 87,416 ಕೋಟಿ ರೂ ಮಾತ್ರವೇ ಇತ್ತು.

ಸರ್ಕಾರಕ್ಕೆ ಬಹಳ ಅಗತ್ಯವಾದ ಸಂದರ್ಭದಲ್ಲಿ ಆರ್​​ಬಿಐ ಸಹಾಯ…

ಜಾಗತಿಕ ಅನಿಶ್ಚಿತ ಪರಿಸ್ಥಿತಿ, ಪಾಕಿಸ್ತಾನದೊಂದಿಗೆ ಗಡಿ ಸಂಘರ್ಷ ಇತ್ಯಾದಿ ಘಟನೆಗಳು ಭಾರತದ ಆರ್ಥಿಕ ಮುನ್ನಡೆಗೆ ತುಸು ತಡೆಯಾಗಿವೆ. ಈ ಹಂತದಲ್ಲಿ ಆರ್ಥಿಕ ಬೆಳವಣಿಗೆಗೆ ಚುರುಕು ಮೂಡಿಸಲು ಸರ್ಕಾರ ಈ ವರ್ಷ ಸಾಕಷ್ಟು ವೆಚ್ಚ ಮಾಡುವುದು ಅನಿವಾರ್ಯವಾಗಿದೆ. ಈ ಕಾರಣಕ್ಕೆ ಆರ್​​ಬಿಐನಿಂದ ಸಿಗಲಿರುವ 2.70 ಲಕ್ಷ ಕೋಟಿ ರೂ ಹಣವು ಸರ್ಕಾರಕ್ಕೆ ಸಹಾಯಕವಾಗಲಿದೆ.

ಇದನ್ನೂ ಓದಿ: ಭಾರತ ಮಾತ್ರವಲ್ಲ, ಅಮೆರಿಕ ಬಿಟ್ಟು ಬೇರೆಲ್ಲೇ ಐಫೋನ್ ತಯಾರಿಸಿದ್ರೂ ಶೇ. 25 ಸುಂಕ: ಆ್ಯಪಲ್​​ಗೆ ಟ್ರಂಪ್ ಬೆದರಿಕೆ

ಆರ್​ಬಿಐನ ಹೊಸ ಗವರ್ನರ್ ಸಂಜಯ್ ಮಲ್ಹೋತ್ರಾ ಅಧ್ಯಕ್ಷತೆಯಲ್ಲಿ ಮೇ 15ರಂದು ನಡೆದ ಆರ್​​ಬಿಐನ 616ನೇ ಕೇಂದ್ರೀಯ ನಿರ್ದೇಶಕರ ಮಂಡಳಿ ಸಭೆಯಲ್ಲಿ 2,68,590.07 ಕೋಟಿ ರೂ ಡಿವಿಡೆಂಡ್ ನೀಡುವ ನಿರ್ಧಾರ ಕೈಗೊಳ್ಳಲಾಯಿತು.

ಎಕನಾಮಿಕ್ ಕ್ಯಾಪಿಟಲ್ ಫ್ರೇಮ್​​ವರ್ಕ್ ಎನ್ನುವ ಸೂತ್ರದ ಆಧಾರದ ಮೇಲೆ ಡಿವಿಡೆಂಡ್ ಎಷ್ಟೆಂಬುದನ್ನು ನಿರ್ಧರಿಸಲಾಗುತ್ತದೆ. ಈ ಫ್ರೇಮ್​ವರ್ಕ್ ಪ್ರಕಾರ ಆದಾಯದ ಶೇ. 7.50ರಿಂದ 4.50ರಷ್ಟನ್ನು ಕಂಟಿಂಜೆಂಟ್ ರಿಸ್ಕ್ ಬಫರ್ ಎಂದು ಪರಿಗಣಿಸಲಾಗಿದೆ. ಈ ರಿಸ್ಕ್ ಬಫರ್ ಮೊತ್ತವನ್ನು ಉಳಿಸಿಕೊಂಡು ಉಳಿದವನ್ನು ಡಿವಿಡೆಂಡ್ ರೂಪದಲ್ಲಿ ಸರ್ಕಾರಕ್ಕೆ ನೀಡಲಾಗುತ್ತದೆ.

ಇದನ್ನೂ ಓದಿ: ಬ್ಯಾಂಕುಗಳನ್ನು ನಿಯಂತ್ರಿಸುವ ಆರ್​​ಬಿಐಗೆ ಆದಾಯ ಎಲ್ಲಿಂದ ಬರುತ್ತೆ? ಇಲ್ಲಿದೆ ಡೀಟೇಲ್ಸ್

ಆರ್​​ಬಿಐ ಪ್ರತೀ ವರ್ಷವೂ ಸರ್ಕಾರಕ್ಕೆ ಡಿವಿಡೆಂಡ್ ನೀಡುತ್ತದೆ. ಬಾಂಡ್​​ಗಳಿಂದ ಸಿಗುವ ಬಡ್ಡಿ, ಫೋರೆಕ್ಸ್ ರಿಸರ್ವ್ಸ್​ನಲ್ಲಿರುವ ಆಸ್ತಿಗಳ ಮೌಲ್ಯ ಹೆಚ್ಚಳದಿಂದ ಸಿಗುವ ಲಾಭ ಇತ್ಯಾದಿಯು ಆರ್​​​ಬಿಐಗೆ ಪ್ರಮುಖ ಆದಾಯ ಮೂಲವಾಗಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 5:50 pm, Fri, 23 May 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!