AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಅದಾನಿ ಪ್ರಕರಣದ ಬಗ್ಗೆ ಏನಂದ್ರು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್? ಇಲ್ಲಿದೆ ನೋಡಿ

ಆರ್​ಬಿಐ ಹಣಕಾಸು ನೀತಿ ಪ್ರಕಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಬ್ಯಾಂಕ್​​ಗಳು ಯಾವುದೇ ಕಂಪನಿಗೆ ಸಾಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Adani Row: ಅದಾನಿ ಪ್ರಕರಣದ ಬಗ್ಗೆ ಏನಂದ್ರು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್? ಇಲ್ಲಿದೆ ನೋಡಿ
ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್Image Credit source: PTI
ಗಣಪತಿ ಶರ್ಮಾ
|

Updated on: Feb 08, 2023 | 3:38 PM

Share

ಮುಂಬೈ: ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ (NBFCs) ಸೇರಿದಂತೆ ದೇಶದ ಬ್ಯಾಂಕಿಂಗ್ ವಲಯ (Indian banking sector) ಬಲಿಷ್ಠವಾಗಿದೆ. ಯಾವುದೋ ಒಂದು ಘಟನೆ ಅಥವಾ ಪ್ರಕರಣದಿಂದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಪರಿಣಾಮವಾಗದು ಎಂದು ಆರ್​​ಬಿಐ (RBI) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ಸದ್ಯ ಎದುರಿಸುತ್ತಿರುವ ವಿವಾದಕ್ಕೆ ಸಂಬಂಧಿಸಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಶಕ್ತಿಕಾಂತ ದಾಸ್ ಅವರು ಎಲ್ಲಿಯೂ ಅದಾನಿ ಸಮೂಹದ ಹೆಸರನ್ನು ಪ್ರಸ್ತಾಪಿಸಿಲ್ಲ. ಅದಾನಿ ಸಮೂಹಕ್ಕೆ ಬ್ಯಾಂಕ್​ಗಳು ನೀಡಿರುವ ಸಾಲದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಆರ್​​ಬಿಐ ಮೌಲ್ಯಮಾಪನ ನಡೆಸಿದೆ. ದೊಡ್ಡ ಪ್ರಮಾಣದ ಸಾಲ ನೀಡಿಕೆ ವಿಚಾರವಾಗಿ ಆರ್​​ಬಿಐ ಮಾರ್ಗಸೂಚಿಯನ್ನು ಎಲ್ಲ ಬ್ಯಾಂಕ್​​ಗಳು ಅನುಸರಿಸಿವೆ ಎಂದು ತಿಳಿಸಿದ್ದಾರೆ.

ಆರ್​ಬಿಐ ಹಣಕಾಸು ನೀತಿ ಪ್ರಕಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಬ್ಯಾಂಕ್​​ಗಳು ಯಾವುದೇ ಕಂಪನಿಗೆ ಸಾಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬ್ಯಾಂಕ್​​​ಗಳು ಯಾವುದೇ ಕಂಪನಿಯ ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಸಾಲ ನೀಡುವುದಿಲ್ಲ. ಕಂಪನಿಯ ಸಾಮರ್ಥ್ಯ, ಮೂಲಭೂತ ಅಂಶಗಳು, ನಗದು ಹರಿವು ಹಾಗೂ ಇತರ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Repo Rate Hike; ಆರ್​ಬಿಐ ರೆಪೊ ದರ ಮತ್ತೆ 25 ಮೂಲಾಂಶ ಹೆಚ್ಚಳ; ಹೆಚ್ಚಾಗಲಿದೆ ಇಎಂಐ ಮೊತ್ತ

ಅಮೆರಿಕದ ಹಿಂಡನ್​​​ಬರ್ಗ್​ ರಿಸರ್ಚ್ ಆರೋಪ ಮಾಡಿದ ಬಳಿಕ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ ಗಣನೀಯ ಕುಸಿತ ದಾಖಲಿಸಿದ್ದವು. ಕಂಪನಿಯ ಸಂಪತ್ತು ವೇಗವಾಗಿ ಕರಗಲು ಆರಂಭವಾಗಿತ್ತು. ಇದು ದೇಶದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಸರ್ಕಾರಿ ಸ್ವಾಮ್ಯದ ಎಲ್​​ಐಸಿ ಹೂಡಿಕೆ ಮಾಡಿರುವ ಹಾಗೂ ಸಾಲ ನೀಡಿರುವ ಕಾರಣಕ್ಕೆ ಅದಾನಿ ಪ್ರಕರಣ ಮತ್ತಷ್ಟು ಹೆಚ್ಚಿನ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹಕ್ಕೆ ನೀಡಿರುವ ಸಾಲದ ಬಗ್ಗೆ ಬ್ಯಾಂಕ್​​ಗಳಿಂದ ಆರ್​ಬಿಐ ವಿವರ ಕೋರಿತ್ತು. ಅದಾನಿ ಸಮೂಹಕ್ಕೆ ನೀಡಿರುವ ಸಾಲ ಆರ್​ಬಿಐ ಮಾರ್ಗಸೂಚಿಯಲ್ಲಿ ಹೇಳಿರುವ ಮಿತಿಯಲ್ಲಿಯೇ ಇದೆ ಎಂದು ಎಸ್​ಬಿಐ ಸ್ಪಷ್ಟನೆ ನೀಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ದರ್ಶನ್ ಕರೆದರೆ ಮರುದಿನವೇ ಸಿನಿಮಾ ಮಾಡಲು ರೆಡಿ: ತರುಣ್ ಸುಧೀರ್
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಶೆಟ್ಟಿ ಗ್ಯಾಂಗ್ ಮೆರೆತ ರಶ್ಮಿಕಾ ಮಂದಣ್ಣ: ಬಂದಿಲ್ಲ ಮದುವೆ ಆಹ್ವಾನ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ