AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಅದಾನಿ ಪ್ರಕರಣದ ಬಗ್ಗೆ ಏನಂದ್ರು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್? ಇಲ್ಲಿದೆ ನೋಡಿ

ಆರ್​ಬಿಐ ಹಣಕಾಸು ನೀತಿ ಪ್ರಕಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಬ್ಯಾಂಕ್​​ಗಳು ಯಾವುದೇ ಕಂಪನಿಗೆ ಸಾಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Adani Row: ಅದಾನಿ ಪ್ರಕರಣದ ಬಗ್ಗೆ ಏನಂದ್ರು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್? ಇಲ್ಲಿದೆ ನೋಡಿ
ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್Image Credit source: PTI
ಗಣಪತಿ ಶರ್ಮಾ
|

Updated on: Feb 08, 2023 | 3:38 PM

Share

ಮುಂಬೈ: ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ (NBFCs) ಸೇರಿದಂತೆ ದೇಶದ ಬ್ಯಾಂಕಿಂಗ್ ವಲಯ (Indian banking sector) ಬಲಿಷ್ಠವಾಗಿದೆ. ಯಾವುದೋ ಒಂದು ಘಟನೆ ಅಥವಾ ಪ್ರಕರಣದಿಂದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಪರಿಣಾಮವಾಗದು ಎಂದು ಆರ್​​ಬಿಐ (RBI) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ಸದ್ಯ ಎದುರಿಸುತ್ತಿರುವ ವಿವಾದಕ್ಕೆ ಸಂಬಂಧಿಸಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಶಕ್ತಿಕಾಂತ ದಾಸ್ ಅವರು ಎಲ್ಲಿಯೂ ಅದಾನಿ ಸಮೂಹದ ಹೆಸರನ್ನು ಪ್ರಸ್ತಾಪಿಸಿಲ್ಲ. ಅದಾನಿ ಸಮೂಹಕ್ಕೆ ಬ್ಯಾಂಕ್​ಗಳು ನೀಡಿರುವ ಸಾಲದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಆರ್​​ಬಿಐ ಮೌಲ್ಯಮಾಪನ ನಡೆಸಿದೆ. ದೊಡ್ಡ ಪ್ರಮಾಣದ ಸಾಲ ನೀಡಿಕೆ ವಿಚಾರವಾಗಿ ಆರ್​​ಬಿಐ ಮಾರ್ಗಸೂಚಿಯನ್ನು ಎಲ್ಲ ಬ್ಯಾಂಕ್​​ಗಳು ಅನುಸರಿಸಿವೆ ಎಂದು ತಿಳಿಸಿದ್ದಾರೆ.

ಆರ್​ಬಿಐ ಹಣಕಾಸು ನೀತಿ ಪ್ರಕಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಬ್ಯಾಂಕ್​​ಗಳು ಯಾವುದೇ ಕಂಪನಿಗೆ ಸಾಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬ್ಯಾಂಕ್​​​ಗಳು ಯಾವುದೇ ಕಂಪನಿಯ ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಸಾಲ ನೀಡುವುದಿಲ್ಲ. ಕಂಪನಿಯ ಸಾಮರ್ಥ್ಯ, ಮೂಲಭೂತ ಅಂಶಗಳು, ನಗದು ಹರಿವು ಹಾಗೂ ಇತರ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Repo Rate Hike; ಆರ್​ಬಿಐ ರೆಪೊ ದರ ಮತ್ತೆ 25 ಮೂಲಾಂಶ ಹೆಚ್ಚಳ; ಹೆಚ್ಚಾಗಲಿದೆ ಇಎಂಐ ಮೊತ್ತ

ಅಮೆರಿಕದ ಹಿಂಡನ್​​​ಬರ್ಗ್​ ರಿಸರ್ಚ್ ಆರೋಪ ಮಾಡಿದ ಬಳಿಕ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ ಗಣನೀಯ ಕುಸಿತ ದಾಖಲಿಸಿದ್ದವು. ಕಂಪನಿಯ ಸಂಪತ್ತು ವೇಗವಾಗಿ ಕರಗಲು ಆರಂಭವಾಗಿತ್ತು. ಇದು ದೇಶದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಸರ್ಕಾರಿ ಸ್ವಾಮ್ಯದ ಎಲ್​​ಐಸಿ ಹೂಡಿಕೆ ಮಾಡಿರುವ ಹಾಗೂ ಸಾಲ ನೀಡಿರುವ ಕಾರಣಕ್ಕೆ ಅದಾನಿ ಪ್ರಕರಣ ಮತ್ತಷ್ಟು ಹೆಚ್ಚಿನ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹಕ್ಕೆ ನೀಡಿರುವ ಸಾಲದ ಬಗ್ಗೆ ಬ್ಯಾಂಕ್​​ಗಳಿಂದ ಆರ್​ಬಿಐ ವಿವರ ಕೋರಿತ್ತು. ಅದಾನಿ ಸಮೂಹಕ್ಕೆ ನೀಡಿರುವ ಸಾಲ ಆರ್​ಬಿಐ ಮಾರ್ಗಸೂಚಿಯಲ್ಲಿ ಹೇಳಿರುವ ಮಿತಿಯಲ್ಲಿಯೇ ಇದೆ ಎಂದು ಎಸ್​ಬಿಐ ಸ್ಪಷ್ಟನೆ ನೀಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು