AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Adani Row: ಅದಾನಿ ಪ್ರಕರಣದ ಬಗ್ಗೆ ಏನಂದ್ರು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್? ಇಲ್ಲಿದೆ ನೋಡಿ

ಆರ್​ಬಿಐ ಹಣಕಾಸು ನೀತಿ ಪ್ರಕಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಬ್ಯಾಂಕ್​​ಗಳು ಯಾವುದೇ ಕಂಪನಿಗೆ ಸಾಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

Adani Row: ಅದಾನಿ ಪ್ರಕರಣದ ಬಗ್ಗೆ ಏನಂದ್ರು ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್? ಇಲ್ಲಿದೆ ನೋಡಿ
ಆರ್​​ಬಿಐ ಗವರ್ನರ್ ಶಕ್ತಿಕಾಂತ ದಾಸ್Image Credit source: PTI
Follow us
Ganapathi Sharma
|

Updated on: Feb 08, 2023 | 3:38 PM

ಮುಂಬೈ: ಬ್ಯಾಂಕೇತರ ಹಣಕಾಸು ಸಂಸ್ಥೆಗಳೂ (NBFCs) ಸೇರಿದಂತೆ ದೇಶದ ಬ್ಯಾಂಕಿಂಗ್ ವಲಯ (Indian banking sector) ಬಲಿಷ್ಠವಾಗಿದೆ. ಯಾವುದೋ ಒಂದು ಘಟನೆ ಅಥವಾ ಪ್ರಕರಣದಿಂದ ಬ್ಯಾಂಕಿಂಗ್ ಕ್ಷೇತ್ರದ ಮೇಲೆ ಪರಿಣಾಮವಾಗದು ಎಂದು ಆರ್​​ಬಿಐ (RBI) ಗವರ್ನರ್ ಶಕ್ತಿಕಾಂತ ದಾಸ್ ಹೇಳಿದ್ದಾರೆ. ಉದ್ಯಮಿ ಗೌತಮ್ ಅದಾನಿ ನೇತೃತ್ವದ ಅದಾನಿ ಸಮೂಹ ಸದ್ಯ ಎದುರಿಸುತ್ತಿರುವ ವಿವಾದಕ್ಕೆ ಸಂಬಂಧಿಸಿ ಅವರು ಈ ಹೇಳಿಕೆ ನೀಡಿದ್ದಾರೆ ಎನ್ನಲಾಗಿದೆ. ಆದರೆ, ಶಕ್ತಿಕಾಂತ ದಾಸ್ ಅವರು ಎಲ್ಲಿಯೂ ಅದಾನಿ ಸಮೂಹದ ಹೆಸರನ್ನು ಪ್ರಸ್ತಾಪಿಸಿಲ್ಲ. ಅದಾನಿ ಸಮೂಹಕ್ಕೆ ಬ್ಯಾಂಕ್​ಗಳು ನೀಡಿರುವ ಸಾಲದ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಅವರು, ಈ ವಿಚಾರವಾಗಿ ಆರ್​​ಬಿಐ ಮೌಲ್ಯಮಾಪನ ನಡೆಸಿದೆ. ದೊಡ್ಡ ಪ್ರಮಾಣದ ಸಾಲ ನೀಡಿಕೆ ವಿಚಾರವಾಗಿ ಆರ್​​ಬಿಐ ಮಾರ್ಗಸೂಚಿಯನ್ನು ಎಲ್ಲ ಬ್ಯಾಂಕ್​​ಗಳು ಅನುಸರಿಸಿವೆ ಎಂದು ತಿಳಿಸಿದ್ದಾರೆ.

ಆರ್​ಬಿಐ ಹಣಕಾಸು ನೀತಿ ಪ್ರಕಟಿಸಿದ ಬಳಿಕ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಬ್ಯಾಂಕ್​​ಗಳು ಯಾವುದೇ ಕಂಪನಿಗೆ ಸಾಲ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. ಬ್ಯಾಂಕ್​​​ಗಳು ಯಾವುದೇ ಕಂಪನಿಯ ಮಾರುಕಟ್ಟೆ ಬಂಡವಾಳದ ಆಧಾರದಲ್ಲಿ ಸಾಲ ನೀಡುವುದಿಲ್ಲ. ಕಂಪನಿಯ ಸಾಮರ್ಥ್ಯ, ಮೂಲಭೂತ ಅಂಶಗಳು, ನಗದು ಹರಿವು ಹಾಗೂ ಇತರ ಅಂಶಗಳನ್ನು ಗಮನದಲ್ಲಿಟ್ಟುಕೊಂಡು ಸಾಲ ನೀಡಲಾಗುತ್ತದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: Repo Rate Hike; ಆರ್​ಬಿಐ ರೆಪೊ ದರ ಮತ್ತೆ 25 ಮೂಲಾಂಶ ಹೆಚ್ಚಳ; ಹೆಚ್ಚಾಗಲಿದೆ ಇಎಂಐ ಮೊತ್ತ

ಅಮೆರಿಕದ ಹಿಂಡನ್​​​ಬರ್ಗ್​ ರಿಸರ್ಚ್ ಆರೋಪ ಮಾಡಿದ ಬಳಿಕ ಅದಾನಿ ಸಮೂಹದ ಕಂಪನಿಗಳು ಷೇರು ಮಾರುಕಟ್ಟೆಯಲ್ಲಿ ಗಣನೀಯ ಕುಸಿತ ದಾಖಲಿಸಿದ್ದವು. ಕಂಪನಿಯ ಸಂಪತ್ತು ವೇಗವಾಗಿ ಕರಗಲು ಆರಂಭವಾಗಿತ್ತು. ಇದು ದೇಶದಲ್ಲಿ ರಾಜಕೀಯ ಕೋಲಾಹಲಕ್ಕೂ ಕಾರಣವಾಗಿತ್ತು. ಸರ್ಕಾರಿ ಸ್ವಾಮ್ಯದ ಎಲ್​​ಐಸಿ ಹೂಡಿಕೆ ಮಾಡಿರುವ ಹಾಗೂ ಸಾಲ ನೀಡಿರುವ ಕಾರಣಕ್ಕೆ ಅದಾನಿ ಪ್ರಕರಣ ಮತ್ತಷ್ಟು ಹೆಚ್ಚಿನ ಚರ್ಚೆಗೆ ಕಾರಣವಾಗಿತ್ತು. ಇದರ ಬೆನ್ನಲ್ಲೇ ಅದಾನಿ ಸಮೂಹಕ್ಕೆ ನೀಡಿರುವ ಸಾಲದ ಬಗ್ಗೆ ಬ್ಯಾಂಕ್​​ಗಳಿಂದ ಆರ್​ಬಿಐ ವಿವರ ಕೋರಿತ್ತು. ಅದಾನಿ ಸಮೂಹಕ್ಕೆ ನೀಡಿರುವ ಸಾಲ ಆರ್​ಬಿಐ ಮಾರ್ಗಸೂಚಿಯಲ್ಲಿ ಹೇಳಿರುವ ಮಿತಿಯಲ್ಲಿಯೇ ಇದೆ ಎಂದು ಎಸ್​ಬಿಐ ಸ್ಪಷ್ಟನೆ ನೀಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಮದ್ವೆಯಾಗ್ತೀನಿ ಎಂದು ಕರೆದೊಯ್ದ..ಪ್ರೇಮಿಗಳ ಗೋವಾ ರಹಸ್ಯ ಬಿಚ್ಚಿಟ್ಟ ಆಯುಕ್ತ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ಜೂನ್ 21ರಂದು ಕಾರ್ಯಕ್ರಮ, ಅಭಿನಂದನಾ ಗ್ರಂಥವೂ ಅಂದೇ ಬಿಡುಗಡೆ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ರಶ್ಮಿಕಾ ಕೂಡ ಪ್ರಚಾರಕ್ಕೆ ಬರ್ತಾರೆ, ಆದರೆ ರಚಿತಾ ಬರಲಿಲ್ಲ: ನಾಗಶೇಖರ್ ಗರಂ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಮುಂದಿನ ಅಸೆಂಬ್ಲಿ ಚುನಾವಣೆಯಲ್ಲೂ ಟಿಕೆಟ್ ಪಡೆಯುವ ವಿಶ್ವಾಸ ಪ್ರೀತಂ ಗೌಡಗೆ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಅದೃಷ್ಟವಶಾತ್ ಮರ ಉರುಳಿಬಿದ್ದಾಗ ಕಾರೊಳಗೆ ಯಾರೂ ಇರಲಿಲ್ಲ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ಹಣ ಪಡೆದು ನಿರ್ಮಾಪಕಿಯ ಸತಾಯಿಸಿದರೇ ರಚಿತಾ ರಾಮ್, ವಿವರ ಇಲ್ಲಿದೆ
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ನಂದಿನಿ ಉತ್ಪನ್ನಗಳ ಕಿಯಾಸ್ಕ್​ಗಳು 8 ನಿಲ್ದಾಣಗಳಲ್ಲಿ ಬರಲಿವೆ: ಶಿವಕುಮಾರ್
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಥಗ್ ಲೈಫ್ ರಿಲೀಸ್ ಆದರೆ ನಾವೇ ಟಿಕೆಟ್ ಖರೀದಿಸಿ ನೋಡ್ತಿವಿ: ಪ್ರವೀಣ್ ಶೆಟ್ಟಿ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಇರಾನ್‌ನಿಂದ 110 ಭಾರತದ ವಿದ್ಯಾರ್ಥಿಗಳಿರುವ ವಿಮಾನ ಇಂದು ರಾತ್ರಿ ದೆಹಲಿಗೆ
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?
ಮಿನಿಸ್ಟರ್ ಜಮೀರ್ ಅಹ್ಮದ್ ಖಾನ್ ಸಾಹಬ್​ ಕೋ ಗುಸ್ಸಾ ಕ್ಯೋಂ ಆತಾ ಹೈ?