AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Digital Banking Units: ಡಿಜಿಟಲ್ ಮೂಲಸೌಕರ್ಯ ವೃದ್ಧಿಗೆ ನೆರವಾಗಲಿವೆ ಡಿಬಿಯು; ಆರ್​ಬಿಐ ಗವರ್ನರ್

ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ದೇಶದಲ್ಲಿ ಡಿಜಿಟಲ್ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ನೆರವು ನೀಡಲಿವೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ಹೇಳಿದ್ದಾರೆ.

Digital Banking Units: ಡಿಜಿಟಲ್ ಮೂಲಸೌಕರ್ಯ ವೃದ್ಧಿಗೆ ನೆರವಾಗಲಿವೆ ಡಿಬಿಯು; ಆರ್​ಬಿಐ ಗವರ್ನರ್
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
TV9 Web
| Edited By: |

Updated on:Oct 16, 2022 | 4:14 PM

Share

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ (Narendra Modi) ಚಾಲನೆ ನೀಡಿರುವ ಡಿಜಿಟಲ್ ಬ್ಯಾಂಕಿಂಗ್ ಘಟಕಗಳು (Digital Banking Units) ದೇಶದಲ್ಲಿ ಡಿಜಿಟಲ್ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ನೆರವು ನೀಡಲಿವೆ ಎಂದು ಆರ್​ಬಿಐ (Reserve Bank of India) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಹೇಳಿದ್ದಾರೆ. ಡಿಜಿಟಲ್ ಬ್ಯಾಂಕಿಂಗ್ ಘಟಕಗಳು ಡಿಜಿಟಲ್ ವ್ಯವಸ್ಥೆಯಲ್ಲಿ ಸಶಕ್ತವಾಗಿ ಕಾರ್ಯನಿರ್ವಹಿಸಲಿವೆ ಮತ್ತು ತಡೆರಹಿತ ಬ್ಯಾಂಕಿಂಗ್ ವಹಿವಾಟುಗಳನ್ನು ಸುಗಮಗೊಳಿಸುವ ಮೂಲಕ ಗ್ರಾಹಕರ ಅನುಭವವನ್ನು ಸುಧಾರಿಸಲಿವೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಕಾಗದರಹಿತ, ಸಮರ್ಥ, ಸುರಕ್ಷತೆಯಿಂದ ಕೂಡಿದ ಹಾಗೂ ಭದ್ರತೆಯ ವಾತಾವರಣದೊಂದಿಗೆ ಡಿಬಿಯುಗಳು ಹಣಕಾಸು ಹರಿವನ್ನು ಹೆಚ್ಚಿಸುವ ನಮ್ಮ ಪ್ರಯತ್ನಗಳಿಗೆ ನೆರವಾಗಲಿವೆ ಎಂದು ಅವರು ಹೇಳಿದ್ದಾರೆ. ಡಿಬಿಯುಗಳಲ್ಲಿ ಉಳಿತಾಯ, ಸಾಲ, ಹೂಡಿಕೆ ಮತ್ತು ವಿಮೆಗೆ ಸಂಬಂಧಿಸಿದ ಸೇವೆಗಳೂ ದೊರೆಯಲಿವೆ.

ಚಿಲ್ಲರೆ ಮತ್ತು ಸೂಕ್ಷ್ಮ, ಸಣ್ಣ ಹಾಗೂ ಮಧ್ಯಮ ಗಾತ್ರದ ಉದ್ದಿಮೆಗಳ ಸಾಲಕ್ಕೆ ಸಂಬಂಧಿಸಿದ ಸೇವೆಗಳು ಡಿಬಿಯುಗಳಲ್ಲಿ ಸಿಗಲಿವೆ. ಆನ್​ಲೈನ್ ಅರ್ಜಿ ವಿತರಣೆ ಮತ್ತು ಸಲ್ಲಿಕೆಗೆ ಅವಕಾಶವಿದೆ. ಆಯ್ದ ಸರ್ಕಾರಿ ಪ್ರಾಯೋಜಿತ ಯೋಜನೆಗಳಿಗೆ ಸಂಬಂಧಿಸಿದ ಸೇವೆಗಳೂ ಲಭ್ಯವಾಗಲಿವೆ. ಡಿಬಿಯುಗಳಲ್ಲಿ ಸೆಲ್ಫ್ ಸರ್ವೀಸ್ ಹಾಗೂ ಅಸಿಸ್ಟೆಡ್ ಝೋನ್ ಮಾದರಿಯಲ್ಲಿ ಸೇವೆಗಳು ಸಿಗಲಿವೆ ಎಂದು ದಾಸ್ ಹೇಳಿದ್ದಾರೆ.

ಇದನ್ನೂ ಓದಿ
Image
Global Recession: ಆರ್ಥಿಕ ಹಿಂಜರಿತದಿಂದ ಭಾರತಕ್ಕೆ ಹೆಚ್ಚಿನ ತೊಂದರೆಯಾಗದೆಂದ ಎಸ್​ಬಿಐ ಅಧ್ಯಕ್ಷ, ಕಾರಣವೇನು?
Image
Gold Price Today: ಬೆಂಗಳೂರು, ದೆಹಲಿ, ಮುಂಬೈ ಸೇರಿ ಹಲವೆಡೆ ಇಂದಿನ ಚಿನ್ನದ ಬೆಲೆ ಹೀಗಿದೆ; ಬೆಳ್ಳಿ ದರವೆಷ್ಟು?
Image
E-Passbook ಸೌಲಭ್ಯ ಬಿಡುಗಡೆ: ಆನ್​ಲೈನ್​ನಲ್ಲಿ ನಿಮ್ಮ ಪಾಸ್‌ಬುಕ್ ಅನ್ನು ಹೀಗೆ ಪರಿಶೀಲಿಸಿ
Image
HDFC Bank: ನಿಮ್ಮ ಖಾತೆಗೆ 13 ಕೋಟಿ ಜಮೆ ಆಗಿದೆ; ಎಚ್​ಡಿಎಫ್​ಸಿ ಬ್ಯಾಂಕ್​​ನಿಂದ 100 ಖಾತೆಗೆ ತಪ್ಪಾಗಿ ಹೋಗಿದ್ದು 1300 ಕೋಟಿ ರೂ.

ಇದನ್ನೂ ಓದಿ: Digital Banking Units: ಡಿಜಿಟಲ್ ಬ್ಯಾಂಕಿಂಗ್ ಘಟಕದಲ್ಲಿ ನೀವು ಏನೇನು ವ್ಯವಹಾರ ಮಾಡಬಹುದು?

ದೇಶಾದ್ಯಂತ ಪ್ರಸಕ್ತ ಆರ್ಥಿಕ ವರ್ಷದಲ್ಲಿ ಡಿಬಿಯುಗಳನ್ನು ಆರಂಭಿಸುವ ಬಗ್ಗೆ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಬಜೆಟ್ ಭಾಷಣದಲ್ಲಿ ಘೋಷಿಸಿದ್ದರು. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕೇಂದ್ರ ಸರ್ಕಾರ ಈ ಯೋಜನೆಯನ್ನು ಹಮ್ಮಿಕೊಂಡಿತ್ತು. ಬಜೆಟ್​ನಲ್ಲಿ ಘೋಷಣೆಯಾದ ಬಳಿಕ ಭಾರತೀಯ ಬ್ಯಾಂಕ್​ಗಳ ಸಂಘಟನೆ ಮತ್ತು ತಜ್ಞರ ಜತೆ ಸಮಾಲೋಚನೆ ನಡೆಸಿದ್ದ ಆರ್​ಬಿಐ ಡಿಬಿಯು ಸ್ಥಾಪನೆಗೆ ಸಂಬಂಧಿಸಿ ಮಾರ್ಗಸೂಚಿಯನ್ನು ಸಿದ್ಧಪಡಿಸಿತ್ತು.

ಡಿಬಿಯು ಸ್ಥಾಪನೆ ಕೇಂದ್ರ ಸರ್ಕಾರ, ಆರ್​ಬಿಐ ಹಾಗೂ ಭಾರತೀಯ ಬ್ಯಾಂಕ್​ಗಳ ಸಂಘಟನೆಯ ಜಂಟಿ ಯೋಜನೆಯಾಗಿದೆ. ಡಿಬಿಯುಗಳ ಅಸ್ತಿತ್ವವನ್ನು ವಿಸ್ತರಿಸಲು ಡಿಜಿಟಲ್ ವ್ಯವಹಾರ ಸುಗಮಗೊಳಿಸುವವರು ಮತ್ತು ಬ್ಯುಸಿನೆಸ್ ಕರೆಸ್ಪಾಂಡೆಂಟ್​ಗಳನ್ನು ಸೇವೆಗಳಲ್ಲಿ ತೊಡಗಿಸಿಕೊಳ್ಳಲು ಬ್ಯಾಂಕುಗಳು ಮುಕ್ತವಾಗಿವೆ ಎಂದು ದಾಸ್ ಹೇಳಿದ್ದಾರೆ.

ದೇಶದ ಖಾಸಗಿ ಕ್ಷೇತ್ರದ ಅತಿದೊಡ್ಡ ಬ್ಯಾಂಕ್​ಗಳಾದ ಐಸಿಐಸಿಐ, ಎಚ್​ಡಿಎಫ್​ಸಿ ಬ್ಯಾಂಕ್​ ಸಹ ಡಿಬಿಯುಗಳನ್ನು ತೆರೆದಿವೆ. ಐಸಿಐಸಿಐ ಬ್ಯಾಂಕ್ ಉತ್ತರಾಖಂಡದ ಡೆಹ್ರಾಡೂನ್, ತಮಿಳುನಾಡಿನ ಕರೂರ್, ನಾಗಾಲ್ಯಾಂಡ್​ನ ಕೊಹಿಮಾ, ಪುದುಚೇರಿಗಳಲ್ಲಿ ಡಿಬಿಯುಗಳನ್ನು ತೆರೆದಿದೆ. ಎಚ್​ಡಿಎಫ್​ಸಿ ಬ್ಯಾಂಕ್ ಹರಿದ್ವಾರ, ಚಂಡೀಗಢ, ಫರೀದಾಬಾದ್ ಹಾಗೂ ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಗಳಲ್ಲಿ ಡಿಬಿಯುಗಳನ್ನು ಆರಂಭಿಸಿದೆ.

Published On - 4:12 pm, Sun, 16 October 22

Follow Us
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ