AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೆಚ್ಚುತ್ತಿಲ್ಲ ಬ್ಯಾಂಕ್ ಠೇವಣಿ; ನಾಳೆ ಬ್ಯಾಂಕ್​ ಸಿಇಒಗಳ ಜತೆ ಆರ್​ಬಿಐ ಗವರ್ನರ್ ಸಭೆ

ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಠೇವಣಿ ಬೆಳವಣಿಗೆ ಕುಂಠಿತಗೊಂಡಿರುವ ಬಗ್ಗೆ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಬ್ಯಾಂಕ್​ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜತೆ ಸಭೆ ನಡೆಸಲಿದ್ದಾರೆ. ಡಿಜಿಟಲ್ ಬ್ಯಾಂಕಿಂಗ್ ಘಟಕಗಳ ಕಾರ್ಯನಿರ್ಬಹಣೆ ಬಗ್ಗೆಯೂ ಮಾತುಕತೆ ನಡೆಯಲಿದೆ.

ಹೆಚ್ಚುತ್ತಿಲ್ಲ ಬ್ಯಾಂಕ್ ಠೇವಣಿ; ನಾಳೆ ಬ್ಯಾಂಕ್​ ಸಿಇಒಗಳ ಜತೆ ಆರ್​ಬಿಐ ಗವರ್ನರ್ ಸಭೆ
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
TV9 Web
| Edited By: |

Updated on: Nov 15, 2022 | 6:51 PM

Share

ನವದೆಹಲಿ: ಸರ್ಕಾರಿ ಸ್ವಾಮ್ಯದ ಬ್ಯಾಂಕ್​ಗಳ ಠೇವಣಿ ಬೆಳವಣಿಗೆ ಕುಂಠಿತಗೊಂಡಿರುವ ಬಗ್ಗೆ ಆರ್​ಬಿಐ (RBI) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಬುಧವಾರ ಬ್ಯಾಂಕ್​ಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ (ಸಿಇಒ) ಜತೆ ಸಭೆ ನಡೆಸಲಿದ್ದಾರೆ. ಸಾಲದ ಬೇಡಿಕೆ ಹೆಚ್ಚುತ್ತಿರುವುದು ಮತ್ತು ಠೇವಣಿ ಬೆಳವಣಿಗೆ ಗಣನೀಯವಾಗಿ ಕುಂಠಿತಗೊಂಡಿರುವ ಬಗ್ಗೆ ಅವರು ಸಿಇಒಗಳ ಜತೆ ಮಾತುಕತೆ ನಡೆಸಲಿದ್ದಾರೆ. ಆರ್​ಬಿಐ ದತ್ತಾಂಶಗಳ ಪ್ರಕಾರ, ಠೇವಣಿ ಬೆಳವಣಿಗೆ ಪ್ರಮಾಣ ಈ ವರ್ಷ ಶೇಕಡಾ 9.6ರಷ್ಟಿದೆ. ಕಳೆದ ವರ್ಷ ಇದು ಶೇಕಡಾ 10.2ರಷ್ಟಿತ್ತು. ಆದರೆ ಸಾಲ ಪಡೆಯುವಿಕೆ ಪ್ರಮಾಣ ಶೇಕಡಾ 17.9ಕ್ಕೆ ಜಿಗಿದಿದೆ. ಕಳೆದ ವರ್ಷ ಇದು ಶೇಕಡಾ 6.5ರಷ್ಟಿತ್ತು.

ಸುಸ್ಥಿರತೆ, ದರ ನಿಗದಿ ಹಾಗೂ ಠೇವಣಿ ಬೆಳವಣಿಗೆ ಪ್ರಮಾಣದಲ್ಲಿ ಇಳಿಕೆ ಸಭೆಯಲ್ಲಿ ಚರ್ಚೆಗೆ ಬರಲಿರುವ ಮುಖ್ಯ ಅಂಶಗಳು ಎಂದು ಆರ್​ಬಿಐ ಪ್ರಕಟಣೆ ತಿಳಿಸಿದೆ. ಚಿಲ್ಲರೆ ಮತ್ತು ಎಂಎಸ್ಎಂಇಗಳ (ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಗಾತ್ರದ ಉದ್ದಿಮೆಗಳು) ಸ್ವತ್ತು ಗುಣಮಟ್ಟಗಳ ಬಗ್ಗೆಯೂ ಚರ್ಚೆ ನಡೆಯಲಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: eRupee: ಬಂತು ಇ-ರೂಪಾಯಿ; ಕ್ರಿಪ್ಟೋ ಕರೆನ್ಸಿ ಮೇಲೆ ತೂಗುಗತ್ತಿ

ಇದಲ್ಲದೆ, ಡಿಜಿಟಲ್ ಬ್ಯಾಂಕಿಂಗ್ ಘಟಕಗಳ ಕಾರ್ಯನಿರ್ಬಹಣೆ ಬಗ್ಗೆಯೂ ಮಾತುಕತೆ ನಡೆಯಲಿದೆ. ಕಳೆದ ತಿಂಗಳು ಪ್ರಧಾನಿ ನರೇಂದ್ರ ಮೋದಿಯವರು ಡಿಜಿಟಲ್ ಬ್ಯಾಂಕಿಂಗ್ ಘಟಕಗಳನ್ನು ಲೋಕಾರ್ಪಣೆಗೊಳಿಸಿದ್ದರು.

ಪ್ರಸಕ್ತ ಹಣಕಾಸು ವರ್ಷದ ಮೊದಲಾರ್ಧದಲ್ಲಿ ದೇಶದಲ್ಲಿ ದೃಢವಾದ ಬೆಳವಣಿಗೆ ದಾಖಲಾಗಿತ್ತು. ಇದಕ್ಕೆ ಉತ್ತಮ ಬಂಡವಾಳದ ಬ್ಯಾಂಕಿಂಗ್ ವ್ಯವಸ್ಥೆಯಿಂದ ಸಮರ್ಥವಾಗಿ ಬೆಂಬಲ ನೀಡಿತ್ತು. ಇದು ಚಿಲ್ಲರೆ, ಉದ್ಯಮ ಮತ್ತು ಸೇವಾ ವಿಭಾಗಗಳಿಗೆ ಸಾಲ ವಿತರಣೆಯಲ್ಲಿ ಏರಿಕೆಗೆ ಕಾರಣವಾಗಿತ್ತು.

ಆಹಾರೇತರ ಸಾಲದ ಪ್ರಮಾಣ 2022ರ ಮಾರ್ಚ್​ನಿಂದ ಸೆಪ್ಟೆಂಬರ್ ಅವಧಿಯಲ್ಲಿ ದ್ವಿಗುಣಗೊಂಡು ಶೇಕಡಾ 8.7ರಿಂದ ಶೇಕಡಾ 16.4ಕ್ಕೆ ತಲುಪಿತ್ತು. ಇದು ಪ್ರಸ್ತುತ ಆರ್ಥಿಕ ಚಟುವಟಿಕೆಗಳ ಬೆಳವಣಿಗೆಯಲ್ಲಿನ ವೇಗವರ್ಧನೆಯನ್ನು ಪ್ರತಿಬಿಂಬಿಸಿದ್ದರ ಜತೆಗೆ ಭವಿಷ್ಯದಲ್ಲಿ ಇನ್ನಷ್ಟು ವೇಗವರ್ಧನೆಯ ನಿರೀಕ್ಷೆಯನ್ನು ಪ್ರತಿಬಿಂಬಿಸಿದೆ ಎಂದು ಮೂಲಗಳು ಹೇಳಿವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಓಡಿಹೋಗುತ್ತಾಳೆಂದು ಹೆಂಡತಿಯನ್ನು ಕಟ್ಟಿಹಾಕಿದ ಗಂಡ!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಬುಡಸಮೇತ ರಸ್ತೆ ಮೇಲೆ ಉರುಳಿಬಿದ್ದ ಬೃಹತ್​ ಮರ: ಶಂಕರಮಠ ರಸ್ತೆ ಬಂದ್!
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಎಲೆಕ್ಟ್ರಿಕ್ ಕಾರಿನ ಭೀಕರ ಅಪಘಾತದ ವಿಡಿಯೋ ವೈರಲ್
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಶುಭ್​ಮನ್ ಗಿಲ್ ಸುನಾಮಿಗೆ ಸೃಷ್ಟಿಯಾದ ದಾಖಲೆಗಳಿವು
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
ಬೆಂಗಳೂರಿನಲ್ಲಿ ಆಲಿಕಲ್ಲು ಮಳೆ ಆರ್ಭಟ: ಹತ್ತಾರು ಅವಾಂತರ; ಮರಗಳು ಧರೆಗೆ!
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಡ್ರ್ಯಾಗನ್’ ಟೀಸರ್: ಚಿತ್ರಮಂದಿರದಲ್ಲಿ ಸಂಭ್ರಮಿಸಿದ ಪ್ರಶಾಂತ್ ನೀಲ್ ಪತ್ನಿ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
‘ಧುರಂಧರ್’ ಸಿನಿಮಾಕ್ಕೆ ಎದುರಾಗಿರುವ ಕಾನೂನು ಸಂಕಷ್ಟ ಏನು: ವಿಡಿಯೋ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಮೆಡಿಕಲ್ ಸೀಟ್ ಪರೀಕ್ಷೆ ನಡೆಸಲು ರಾಜ್ಯ ಸರ್ಕಾರಗಳಿಗೆ ಕೊಡಿ: ಸಿಎಂ ಆಗ್ರಹ
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ಯುವ ಕಾರ್ಯಕರ್ತರು ಪೊಲೀಸ್ ವಶಕ್ಕೆ, ನಾಯಕರು ಹೋಟೆಲ್​​ಗೆ​
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ
ಕಾಂಗ್ರೆಸ್ ನಾಯಕರಿಂದ ಐ ಆ್ಯಮ್ ಕೊಕ್ರೋಚ್ ಟೀ ಶರ್ಟ್ ಬಿಡುಗಡೆ