AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೆಡಿಟ್ ಕಾರ್ಡ್ ವಿತರಣೆಯ ಮೂರು ನಿಬಂಧನೆ ಜಾರಿಗೆ ಗಡುವನ್ನು ವಿಸ್ತರಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ಕ್ರೆಡಿಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ 3 ನಿಯಮಾವಳಿಗಳ ಅನುಷ್ಠಾನಕ್ಕಾಗಿ ಗಡುವು ವಿಸ್ತರಿಸಿ ಆರ್​ಬಿಐ ಅಧಿಸೂಚನೆ ಹೊರಡಿಸಿದೆ.

ಕ್ರೆಡಿಟ್ ಕಾರ್ಡ್ ವಿತರಣೆಯ ಮೂರು ನಿಬಂಧನೆ ಜಾರಿಗೆ ಗಡುವನ್ನು ವಿಸ್ತರಿಸಿದ ಭಾರತೀಯ ರಿಸರ್ವ್ ಬ್ಯಾಂಕ್
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on: Jun 21, 2022 | 8:25 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಂಗಳವಾರದಂದು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ವಿತರಿಸಲು ಹೊಸ ನಿಯಂತ್ರಕ ಮಾರ್ಗಸೂಚಿಗಳ ಭಾಗವಾಗಿ ಮೂರು ನಿಬಂಧನೆಗಳನ್ನು ಜಾರಿಗೆ ತರುವ ಗಡುವನ್ನು ಅಕ್ಟೋಬರ್ 1, 2022ಕ್ಕೆ ವಿಸ್ತರಿಸಿದೆ. “ಉದ್ಯಮಕ್ಕೆ ಸಂಬಂಧಪಟ್ಟವರಿಂದ ಸ್ವೀಕರಿಸಲಾದ ವಿವಿಧ ಮನವಿಗಳನ್ನು ಪರಿಗಣಿಸಿ, ಮಾಸ್ಟರ್ ನಿರ್ದೇಶನದ ನಿಬಂಧನೆಗಳ ಅನುಷ್ಠಾನಕ್ಕಾಗಿ ಸಮಯವನ್ನು 1 ಅಕ್ಟೋಬರ್ 2022 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ,” ಎಂದು ಆರ್​ಬಿಐ ತನ್ನ ವೆಬ್‌ಸೈಟ್‌ನ ಅಧಿಸೂಚನೆಯಲ್ಲಿ ತಿಳಿಸಿದೆ.

ಮೊದಲ ನಿಬಂಧನೆಯು ವಿತರಿಸಿದ ದಿನಾಂಕದಿಂದ 30 ದಿನಗಳಿಗಿಂತ ಹೆಚ್ಚು ಕಾಲ ಗ್ರಾಹಕರು ಸಕ್ರಿಯಗೊಳಿಸದಿದ್ದರೆ ಕಾರ್ಡ್ ವಿತರಕರು ಕ್ರೆಡಿಟ್ ಕಾರ್ಡ್ ಅನ್ನು ಸಕ್ರಿಯಗೊಳಿಸಲು ಕಾರ್ಡ್ ಹೋಲ್ಡರ್‌ನಿಂದ ಒಂದು-ಬಾರಿ ಪಾಸ್‌ವರ್ಡ್ (OTP- ಒನ್​ ಟೈಮ್ ಪಾಸ್​ವರ್ಡ್) ಆಧಾರಿತ ಒಪ್ಪಿಗೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸುವುದು. ಕಾರ್ಡ್ ಅನ್ನು ಸಕ್ರಿಯಗೊಳಿಸಲು ಯಾವುದೇ ಒಪ್ಪಿಗೆಯನ್ನು ಪಡೆಯದಿದ್ದರೆ, ಕಾರ್ಡ್-ವಿತರಕರು ಗ್ರಾಹಕರಿಂದ ದೃಢೀಕರಣವನ್ನು ಕೋರಿದ ದಿನಾಂಕದಿಂದ ಏಳು ಕೆಲಸದ ದಿನಗಳಲ್ಲಿ ಗ್ರಾಹಕರಿಗೆ ಯಾವುದೇ ವೆಚ್ಚವಿಲ್ಲದೆ ಕ್ರೆಡಿಟ್ ಕಾರ್ಡ್ ಖಾತೆಯನ್ನು ಕ್ಲೋಸ್ ಮಾಡಬೇಕಾಗುತ್ತದೆ ಎಂದು ಆರ್‌ಬಿಐ ಹೇಳಿದೆ.

ಎರಡನೇ ನಿಬಂಧನೆಯು ಕಾರ್ಡ್ ವಿತರಕರು ಕಾರ್ಡ್​ದಾರರಿಂದ ಸ್ಪಷ್ಟವಾದ ಒಪ್ಪಿಗೆಯನ್ನು ಪಡೆಯದೆ ಯಾವುದೇ ಸಮಯದಲ್ಲಿ ಮಂಜೂರಾದ ಮತ್ತು ಕಾರ್ಡ್​ದಾರರಿಗೆ ಸೂಚಿಸಲಾದ ಕ್ರೆಡಿಟ್ ಮಿತಿಯನ್ನು ಉಲ್ಲಂಘಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಮೂರನೇ ನಿಯಂತ್ರಣವು ಬಡ್ಡಿಯ ಸಂಯೋಜನೆಗಾಗಿ ಪಾವತಿಸದ ಶುಲ್ಕಗಳನ್ನು ವಿತರಕರು ಪರಿಗಣಿಸಲು ಆಗುವುದಿಲ್ಲ ಎಂದು ಹೇಳಿದೆ. “ಮಾಸ್ಟರ್ ಡೈರೆಕ್ಷನ್‌ನ ಉಳಿದ ನಿಬಂಧನೆಗಳ ಅನುಷ್ಠಾನಕ್ಕೆ ನಿಗದಿತ ಟೈಮ್‌ಲೈನ್ ಬದಲಾಗದೆ ಉಳಿಯುತ್ತದೆ,” ಎಂದು ಆರ್‌ಬಿಐ ಮಂಗಳವಾರ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!