AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೆಡಿಟ್ ಕಾರ್ಡ್ ವಿತರಣೆಯ ಮೂರು ನಿಬಂಧನೆ ಜಾರಿಗೆ ಗಡುವನ್ನು ವಿಸ್ತರಿಸಿದ ಭಾರತೀಯ ರಿಸರ್ವ್ ಬ್ಯಾಂಕ್

ಕ್ರೆಡಿಟ್ ಕಾರ್ಡ್ ವಿತರಣೆಗೆ ಸಂಬಂಧಿಸಿದಂತೆ 3 ನಿಯಮಾವಳಿಗಳ ಅನುಷ್ಠಾನಕ್ಕಾಗಿ ಗಡುವು ವಿಸ್ತರಿಸಿ ಆರ್​ಬಿಐ ಅಧಿಸೂಚನೆ ಹೊರಡಿಸಿದೆ.

ಕ್ರೆಡಿಟ್ ಕಾರ್ಡ್ ವಿತರಣೆಯ ಮೂರು ನಿಬಂಧನೆ ಜಾರಿಗೆ ಗಡುವನ್ನು ವಿಸ್ತರಿಸಿದ ಭಾರತೀಯ ರಿಸರ್ವ್ ಬ್ಯಾಂಕ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Jun 21, 2022 | 8:25 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಂಗಳವಾರದಂದು ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್‌ಗಳನ್ನು ವಿತರಿಸಲು ಹೊಸ ನಿಯಂತ್ರಕ ಮಾರ್ಗಸೂಚಿಗಳ ಭಾಗವಾಗಿ ಮೂರು ನಿಬಂಧನೆಗಳನ್ನು ಜಾರಿಗೆ ತರುವ ಗಡುವನ್ನು ಅಕ್ಟೋಬರ್ 1, 2022ಕ್ಕೆ ವಿಸ್ತರಿಸಿದೆ. “ಉದ್ಯಮಕ್ಕೆ ಸಂಬಂಧಪಟ್ಟವರಿಂದ ಸ್ವೀಕರಿಸಲಾದ ವಿವಿಧ ಮನವಿಗಳನ್ನು ಪರಿಗಣಿಸಿ, ಮಾಸ್ಟರ್ ನಿರ್ದೇಶನದ ನಿಬಂಧನೆಗಳ ಅನುಷ್ಠಾನಕ್ಕಾಗಿ ಸಮಯವನ್ನು 1 ಅಕ್ಟೋಬರ್ 2022 ರವರೆಗೆ ವಿಸ್ತರಿಸಲು ನಿರ್ಧರಿಸಲಾಗಿದೆ,” ಎಂದು ಆರ್​ಬಿಐ ತನ್ನ ವೆಬ್‌ಸೈಟ್‌ನ ಅಧಿಸೂಚನೆಯಲ್ಲಿ ತಿಳಿಸಿದೆ.

ಮೊದಲ ನಿಬಂಧನೆಯು ವಿತರಿಸಿದ ದಿನಾಂಕದಿಂದ 30 ದಿನಗಳಿಗಿಂತ ಹೆಚ್ಚು ಕಾಲ ಗ್ರಾಹಕರು ಸಕ್ರಿಯಗೊಳಿಸದಿದ್ದರೆ ಕಾರ್ಡ್ ವಿತರಕರು ಕ್ರೆಡಿಟ್ ಕಾರ್ಡ್ ಅನ್ನು ಸಕ್ರಿಯಗೊಳಿಸಲು ಕಾರ್ಡ್ ಹೋಲ್ಡರ್‌ನಿಂದ ಒಂದು-ಬಾರಿ ಪಾಸ್‌ವರ್ಡ್ (OTP- ಒನ್​ ಟೈಮ್ ಪಾಸ್​ವರ್ಡ್) ಆಧಾರಿತ ಒಪ್ಪಿಗೆಯನ್ನು ಪಡೆಯುವುದನ್ನು ಕಡ್ಡಾಯಗೊಳಿಸುವುದು. ಕಾರ್ಡ್ ಅನ್ನು ಸಕ್ರಿಯಗೊಳಿಸಲು ಯಾವುದೇ ಒಪ್ಪಿಗೆಯನ್ನು ಪಡೆಯದಿದ್ದರೆ, ಕಾರ್ಡ್-ವಿತರಕರು ಗ್ರಾಹಕರಿಂದ ದೃಢೀಕರಣವನ್ನು ಕೋರಿದ ದಿನಾಂಕದಿಂದ ಏಳು ಕೆಲಸದ ದಿನಗಳಲ್ಲಿ ಗ್ರಾಹಕರಿಗೆ ಯಾವುದೇ ವೆಚ್ಚವಿಲ್ಲದೆ ಕ್ರೆಡಿಟ್ ಕಾರ್ಡ್ ಖಾತೆಯನ್ನು ಕ್ಲೋಸ್ ಮಾಡಬೇಕಾಗುತ್ತದೆ ಎಂದು ಆರ್‌ಬಿಐ ಹೇಳಿದೆ.

ಎರಡನೇ ನಿಬಂಧನೆಯು ಕಾರ್ಡ್ ವಿತರಕರು ಕಾರ್ಡ್​ದಾರರಿಂದ ಸ್ಪಷ್ಟವಾದ ಒಪ್ಪಿಗೆಯನ್ನು ಪಡೆಯದೆ ಯಾವುದೇ ಸಮಯದಲ್ಲಿ ಮಂಜೂರಾದ ಮತ್ತು ಕಾರ್ಡ್​ದಾರರಿಗೆ ಸೂಚಿಸಲಾದ ಕ್ರೆಡಿಟ್ ಮಿತಿಯನ್ನು ಉಲ್ಲಂಘಿಸುವುದಿಲ್ಲ ಎಂದು ಖಚಿತಪಡಿಸಿಕೊಳ್ಳಬೇಕು. ಮೂರನೇ ನಿಯಂತ್ರಣವು ಬಡ್ಡಿಯ ಸಂಯೋಜನೆಗಾಗಿ ಪಾವತಿಸದ ಶುಲ್ಕಗಳನ್ನು ವಿತರಕರು ಪರಿಗಣಿಸಲು ಆಗುವುದಿಲ್ಲ ಎಂದು ಹೇಳಿದೆ. “ಮಾಸ್ಟರ್ ಡೈರೆಕ್ಷನ್‌ನ ಉಳಿದ ನಿಬಂಧನೆಗಳ ಅನುಷ್ಠಾನಕ್ಕೆ ನಿಗದಿತ ಟೈಮ್‌ಲೈನ್ ಬದಲಾಗದೆ ಉಳಿಯುತ್ತದೆ,” ಎಂದು ಆರ್‌ಬಿಐ ಮಂಗಳವಾರ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ