AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್​ ಸೇರಿದಂತೆ 4 ಕೋ ಆಪರೇಟಿವ್ ಬ್ಯಾಂಕ್​ ಗ್ರಾಹಕರಿಗೆ ವಿಥ್​ ಡ್ರಾ ಮಿತಿ ಹೇರಿದ ಆರ್​ಬಿಐ

ನಾಲ್ಕು ಕೋ ಆಪರೇಟಿವ್​ ಬ್ಯಾಂಕ್​ಗಳ ಗ್ರಾಹಕರಿಗೆ ಹಣ ವಿಥ್​ಡ್ರಾ ಮಾಡುವುದಕ್ಕೆ ಮಿತಿ ವಿಧಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶ ಹೊರಡಿಸಿದೆ.

ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್​ ಸೇರಿದಂತೆ 4 ಕೋ ಆಪರೇಟಿವ್ ಬ್ಯಾಂಕ್​ ಗ್ರಾಹಕರಿಗೆ ವಿಥ್​ ಡ್ರಾ ಮಿತಿ ಹೇರಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 09, 2022 | 5:56 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಾಲ್ಕು ಸಹಕಾರಿ ಬ್ಯಾಂಕ್​ಗಳ ಮೇಲೆ ವಿವಿಧ ನಿರ್ಬಂಧಗಳನ್ನು ಹೇರಿದೆ. ನವದೆಹಲಿಯ ರಾಮ್‌ಗರ್ಹಿಯಾ ಸಹಕಾರಿ ಬ್ಯಾಂಕ್, ಮುಂಬೈನ ಸಾಹೇಬರಾವ್ ದೇಶಮುಖ ಸಹಕಾರಿ ಬ್ಯಾಂಕ್, ಮುಂಬೈನ ಸಾಂಗ್ಲಿ ಸಹಕಾರಿ ಬ್ಯಾಂಕ್, ಕರ್ನಾಟಕದ ತುಮಕೂರಿನಲ್ಲಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ ಮೇಲೆ ನಿರ್ಬಂಧ ಹೇರಲಾಗಿದೆ. ಆರ್‌ಬಿಐನಿಂದ ಆರು ತಿಂಗಳವರೆಗೆ ಈ ನಿರ್ಬಂಧಗಳನ್ನು ವಿಧಿಸಲಾಗಿದೆ. ಇದರಲ್ಲಿ ಠೇವಣಿದಾರರಿಗೆ ಹಿಂಪಡೆಯುವ ಮಿತಿ ಸಹ ಒಳಗೊಂಡಿದೆ. ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಹದಗೆಡುತ್ತಿರುವ ಹಣಕಾಸಿನ ಸ್ಥಿತಿಗತಿಗಳನ್ನು ಗಮನಿಸಿ ಕೇಂದ್ರೀಯ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಅಡಿಯಲ್ಲಿ ನಿರ್ಬಂಧಗಳನ್ನು ಹಾಕಿದೆ.

ಆರ್‌ಬಿಐ ಶುಕ್ರವಾರ ಹೊರಡಿಸಿದ ನಿರ್ದೇಶನದ ಪ್ರಕಾರ, ಜುಲೈ 8, 2022ರಂದು ವ್ಯವಹಾರದ ಅವಧಿಯು ಮುಗಿದ ನಂತರದಲ್ಲಿ ಈ ನಿರ್ಬಂಧವು ಜಾರಿಗೆ ಬಂದಿದೆ. ಆರ್‌ಬಿಐನ ಪೂರ್ವಾನುಮತಿ ಇಲ್ಲದೆ, ಈ ನಾಲ್ಕು ಬ್ಯಾಂಕ್‌ಗಳು ಯಾವುದೇ ಸಾಲವನ್ನು ನೀಡಲು ಅಥವಾ ರಿನೀವಲ್ ಮಾಡಲು, ಹೂಡಿಕೆ ಮಾಡಲು ಅಥವಾ ಹೊಸ ಠೇವಣಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಅಲ್ಲದೆ, ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಠೇವಣಿದಾರರ ಹಿಂಪಡೆಯುವುದಕ್ಕೆ ಮಿತಿಯನ್ನು ವಿಧಿಸಲಾಗಿದೆ.

ರಾಮಗರ್ಹಿಯಾ ಸಹಕಾರಿ ಬ್ಯಾಂಕ್ – ಠೇವಣಿದಾರರು ಗರಿಷ್ಠ 50,000 ರೂ. ವಿಥ್​ಡ್ರಾ ಮಾಡಬಹುದು

ಸಾಹೇಬರಾವ್ ದೇಶಮುಖ್ ಸಹಕಾರಿ ಬ್ಯಾಂಕ್ – ಠೇವಣಿದಾರರಿಗೆ 50,000 ರೂ. ಮಿತಿ ಇದೆ

ಸಾಂಗ್ಲಿ ಸಹಕಾರಿ ಬ್ಯಾಂಕ್- ಪ್ರತಿ ಠೇವಣಿದಾರರಿಗೆ 45,000 ರೂ. ಮಿತಿ ಹಾಕಲಾಗಿದೆ

ಶಾರದಾ ಮಹಿಳಾ ಸಹಕಾರಿ ಬ್ಯಾಂಕ್ – ಠೇವಣಿದಾರರು ಗರಿಷ್ಠ 7,000 ರೂ. ವಿಥ್​ಡ್ರಾ ಮಾಡಬಹುದು

ಪ್ರತ್ಯೇಕ ಹೇಳಿಕೆಗಳಲ್ಲಿ ಈ ಬಗ್ಗೆ ತಿಳಿಸಿರುವ ಕೇಂದ್ರ ಬ್ಯಾಂಕ್​, ಆರ್‌ಬಿಐ ನಿರ್ದೇಶನಗಳನ್ನು ಸೆಂಟ್ರಲ್ ಬ್ಯಾಂಕ್‌ನಿಂದ “ಬ್ಯಾಂಕಿಂಗ್ ಪರವಾನಗಿಯ ರದ್ದತಿ ಎಂದು ಅರ್ಥೈಸಿಕೊಳ್ಳಬಾರದು” ಎಂಬುದಾಗಿ ಹೇಳಿದೆ. ಪ್ರತಿಯೊಂದು ಪ್ರಕರಣದಲ್ಲಿ, ಸಂದರ್ಭಗಳಿಗೆ ಅನುಗುಣವಾಗಿ ನಿರ್ದೇಶನಗಳ ಮಾರ್ಪಾಡುಗಳನ್ನು ಪರಿಗಣಿಸಬಹುದು ಎಂದು ಆರ್‌ಬಿಐ ಹೇಳಿದೆ.

Published On - 5:56 pm, Sat, 9 July 22

Follow Us
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಜಿಗಣಿ ಪೊಲೀಸರ ಭರ್ಜರಿ ಬೇಟೆ: ಕೋಟ್ಯಂತರ ರೂ ಮೌಲ್ಯದ 250 ಕೆಜಿ ಗಾಂಜಾ ಜಪ್ತಿ
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಸಂಚಲನ ಮೂಡಿಸಿದ ಬಿಎಲ್ ಸಂತೋಷ್ ಪೋಸ್ಟ್
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಬಿಎಸ್​ವೈ ಅಭಿಮಾನೋತ್ಸವದಲ್ಲಿ ಮಾಜಿ ಸಿಎಂಗೆ ಅದೃಷ್ಟ ತಂದ ಕಾರಿನ ಪ್ರದರ್ಶನ
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ಜಿಬಿಎ ಚುನಾವಣೆಗೆ ಕೊನೆಗೂ ಮುಹೂರ್ತ: ಎಲೆಕ್ಷನ್​​ ಯಾವಾಗ ಗೊತ್ತಾ?
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ವಿಜಯ್​​ರನ್ನು ದೇವರೇ ಕಾಪಾಡಬೇಕು ಎಂದ ಹೆಚ್​​ಡಿಕೆ: ಕಾರಣ ಇಲ್ಲಿದೆ
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಅಂಜನಾದ್ರಿ ಹನುಮನಿಗೆ 2.5 ಕೋಟಿ ರೂ. ಮೌಲ್ಯದ ಚಿನ್ನದ ಕಿರೀಟ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಸಲೂನ್‌ನಲ್ಲಿ ಶಿಸ್ತಿನಿಂದ ಕೇಶ ವಿನ್ಯಾಸ ಮಾಡಿಸಿಕೊಂಡ ಮಂಗ!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಲಕ್ಷಾಂತರ ರೂ. ಮೌಲ್ಯದ ಚಿನ್ನ, ನಗದು ಕದ್ದು ಮನೆಗೆ ಬೆಂಕಿ ಹಚ್ಚಿದ ಕಳ್ಳರು!
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ
ಬಿಎಸ್​ವೈ ಅಭಿಮಾನೋತ್ಸವಕ್ಕೆ ಸಜ್ಜಾದ ಚಿತ್ರದುರ್ಗ: ಕೇಸರಿಮಯವಾದ ನಗರ