AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್​ ಸೇರಿದಂತೆ 4 ಕೋ ಆಪರೇಟಿವ್ ಬ್ಯಾಂಕ್​ ಗ್ರಾಹಕರಿಗೆ ವಿಥ್​ ಡ್ರಾ ಮಿತಿ ಹೇರಿದ ಆರ್​ಬಿಐ

ನಾಲ್ಕು ಕೋ ಆಪರೇಟಿವ್​ ಬ್ಯಾಂಕ್​ಗಳ ಗ್ರಾಹಕರಿಗೆ ಹಣ ವಿಥ್​ಡ್ರಾ ಮಾಡುವುದಕ್ಕೆ ಮಿತಿ ವಿಧಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶ ಹೊರಡಿಸಿದೆ.

ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್​ ಸೇರಿದಂತೆ 4 ಕೋ ಆಪರೇಟಿವ್ ಬ್ಯಾಂಕ್​ ಗ್ರಾಹಕರಿಗೆ ವಿಥ್​ ಡ್ರಾ ಮಿತಿ ಹೇರಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Updated By: Srinivas Mata|

Updated on:Jul 09, 2022 | 5:56 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಾಲ್ಕು ಸಹಕಾರಿ ಬ್ಯಾಂಕ್​ಗಳ ಮೇಲೆ ವಿವಿಧ ನಿರ್ಬಂಧಗಳನ್ನು ಹೇರಿದೆ. ನವದೆಹಲಿಯ ರಾಮ್‌ಗರ್ಹಿಯಾ ಸಹಕಾರಿ ಬ್ಯಾಂಕ್, ಮುಂಬೈನ ಸಾಹೇಬರಾವ್ ದೇಶಮುಖ ಸಹಕಾರಿ ಬ್ಯಾಂಕ್, ಮುಂಬೈನ ಸಾಂಗ್ಲಿ ಸಹಕಾರಿ ಬ್ಯಾಂಕ್, ಕರ್ನಾಟಕದ ತುಮಕೂರಿನಲ್ಲಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ ಮೇಲೆ ನಿರ್ಬಂಧ ಹೇರಲಾಗಿದೆ. ಆರ್‌ಬಿಐನಿಂದ ಆರು ತಿಂಗಳವರೆಗೆ ಈ ನಿರ್ಬಂಧಗಳನ್ನು ವಿಧಿಸಲಾಗಿದೆ. ಇದರಲ್ಲಿ ಠೇವಣಿದಾರರಿಗೆ ಹಿಂಪಡೆಯುವ ಮಿತಿ ಸಹ ಒಳಗೊಂಡಿದೆ. ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಹದಗೆಡುತ್ತಿರುವ ಹಣಕಾಸಿನ ಸ್ಥಿತಿಗತಿಗಳನ್ನು ಗಮನಿಸಿ ಕೇಂದ್ರೀಯ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಅಡಿಯಲ್ಲಿ ನಿರ್ಬಂಧಗಳನ್ನು ಹಾಕಿದೆ.

ಆರ್‌ಬಿಐ ಶುಕ್ರವಾರ ಹೊರಡಿಸಿದ ನಿರ್ದೇಶನದ ಪ್ರಕಾರ, ಜುಲೈ 8, 2022ರಂದು ವ್ಯವಹಾರದ ಅವಧಿಯು ಮುಗಿದ ನಂತರದಲ್ಲಿ ಈ ನಿರ್ಬಂಧವು ಜಾರಿಗೆ ಬಂದಿದೆ. ಆರ್‌ಬಿಐನ ಪೂರ್ವಾನುಮತಿ ಇಲ್ಲದೆ, ಈ ನಾಲ್ಕು ಬ್ಯಾಂಕ್‌ಗಳು ಯಾವುದೇ ಸಾಲವನ್ನು ನೀಡಲು ಅಥವಾ ರಿನೀವಲ್ ಮಾಡಲು, ಹೂಡಿಕೆ ಮಾಡಲು ಅಥವಾ ಹೊಸ ಠೇವಣಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಅಲ್ಲದೆ, ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಠೇವಣಿದಾರರ ಹಿಂಪಡೆಯುವುದಕ್ಕೆ ಮಿತಿಯನ್ನು ವಿಧಿಸಲಾಗಿದೆ.

ರಾಮಗರ್ಹಿಯಾ ಸಹಕಾರಿ ಬ್ಯಾಂಕ್ – ಠೇವಣಿದಾರರು ಗರಿಷ್ಠ 50,000 ರೂ. ವಿಥ್​ಡ್ರಾ ಮಾಡಬಹುದು

ಸಾಹೇಬರಾವ್ ದೇಶಮುಖ್ ಸಹಕಾರಿ ಬ್ಯಾಂಕ್ – ಠೇವಣಿದಾರರಿಗೆ 50,000 ರೂ. ಮಿತಿ ಇದೆ

ಸಾಂಗ್ಲಿ ಸಹಕಾರಿ ಬ್ಯಾಂಕ್- ಪ್ರತಿ ಠೇವಣಿದಾರರಿಗೆ 45,000 ರೂ. ಮಿತಿ ಹಾಕಲಾಗಿದೆ

ಶಾರದಾ ಮಹಿಳಾ ಸಹಕಾರಿ ಬ್ಯಾಂಕ್ – ಠೇವಣಿದಾರರು ಗರಿಷ್ಠ 7,000 ರೂ. ವಿಥ್​ಡ್ರಾ ಮಾಡಬಹುದು

ಪ್ರತ್ಯೇಕ ಹೇಳಿಕೆಗಳಲ್ಲಿ ಈ ಬಗ್ಗೆ ತಿಳಿಸಿರುವ ಕೇಂದ್ರ ಬ್ಯಾಂಕ್​, ಆರ್‌ಬಿಐ ನಿರ್ದೇಶನಗಳನ್ನು ಸೆಂಟ್ರಲ್ ಬ್ಯಾಂಕ್‌ನಿಂದ “ಬ್ಯಾಂಕಿಂಗ್ ಪರವಾನಗಿಯ ರದ್ದತಿ ಎಂದು ಅರ್ಥೈಸಿಕೊಳ್ಳಬಾರದು” ಎಂಬುದಾಗಿ ಹೇಳಿದೆ. ಪ್ರತಿಯೊಂದು ಪ್ರಕರಣದಲ್ಲಿ, ಸಂದರ್ಭಗಳಿಗೆ ಅನುಗುಣವಾಗಿ ನಿರ್ದೇಶನಗಳ ಮಾರ್ಪಾಡುಗಳನ್ನು ಪರಿಗಣಿಸಬಹುದು ಎಂದು ಆರ್‌ಬಿಐ ಹೇಳಿದೆ.

Published On - 5:56 pm, Sat, 9 July 22

ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್