AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್​ ಸೇರಿದಂತೆ 4 ಕೋ ಆಪರೇಟಿವ್ ಬ್ಯಾಂಕ್​ ಗ್ರಾಹಕರಿಗೆ ವಿಥ್​ ಡ್ರಾ ಮಿತಿ ಹೇರಿದ ಆರ್​ಬಿಐ

ನಾಲ್ಕು ಕೋ ಆಪರೇಟಿವ್​ ಬ್ಯಾಂಕ್​ಗಳ ಗ್ರಾಹಕರಿಗೆ ಹಣ ವಿಥ್​ಡ್ರಾ ಮಾಡುವುದಕ್ಕೆ ಮಿತಿ ವಿಧಿಸಿ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಆದೇಶ ಹೊರಡಿಸಿದೆ.

ತುಮಕೂರಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್​ ಸೇರಿದಂತೆ 4 ಕೋ ಆಪರೇಟಿವ್ ಬ್ಯಾಂಕ್​ ಗ್ರಾಹಕರಿಗೆ ವಿಥ್​ ಡ್ರಾ ಮಿತಿ ಹೇರಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 09, 2022 | 5:56 PM

Share

ಭಾರತೀಯ ರಿಸರ್ವ್ ಬ್ಯಾಂಕ್ (RBI) ನಾಲ್ಕು ಸಹಕಾರಿ ಬ್ಯಾಂಕ್​ಗಳ ಮೇಲೆ ವಿವಿಧ ನಿರ್ಬಂಧಗಳನ್ನು ಹೇರಿದೆ. ನವದೆಹಲಿಯ ರಾಮ್‌ಗರ್ಹಿಯಾ ಸಹಕಾರಿ ಬ್ಯಾಂಕ್, ಮುಂಬೈನ ಸಾಹೇಬರಾವ್ ದೇಶಮುಖ ಸಹಕಾರಿ ಬ್ಯಾಂಕ್, ಮುಂಬೈನ ಸಾಂಗ್ಲಿ ಸಹಕಾರಿ ಬ್ಯಾಂಕ್, ಕರ್ನಾಟಕದ ತುಮಕೂರಿನಲ್ಲಿನ ಶಾರದಾ ಮಹಿಳಾ ಸಹಕಾರಿ ಬ್ಯಾಂಕ್ ಲಿಮಿಟೆಡ್ ಮೇಲೆ ನಿರ್ಬಂಧ ಹೇರಲಾಗಿದೆ. ಆರ್‌ಬಿಐನಿಂದ ಆರು ತಿಂಗಳವರೆಗೆ ಈ ನಿರ್ಬಂಧಗಳನ್ನು ವಿಧಿಸಲಾಗಿದೆ. ಇದರಲ್ಲಿ ಠೇವಣಿದಾರರಿಗೆ ಹಿಂಪಡೆಯುವ ಮಿತಿ ಸಹ ಒಳಗೊಂಡಿದೆ. ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಹದಗೆಡುತ್ತಿರುವ ಹಣಕಾಸಿನ ಸ್ಥಿತಿಗತಿಗಳನ್ನು ಗಮನಿಸಿ ಕೇಂದ್ರೀಯ ಬ್ಯಾಂಕ್ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆ, 1949ರ ಅಡಿಯಲ್ಲಿ ನಿರ್ಬಂಧಗಳನ್ನು ಹಾಕಿದೆ.

ಆರ್‌ಬಿಐ ಶುಕ್ರವಾರ ಹೊರಡಿಸಿದ ನಿರ್ದೇಶನದ ಪ್ರಕಾರ, ಜುಲೈ 8, 2022ರಂದು ವ್ಯವಹಾರದ ಅವಧಿಯು ಮುಗಿದ ನಂತರದಲ್ಲಿ ಈ ನಿರ್ಬಂಧವು ಜಾರಿಗೆ ಬಂದಿದೆ. ಆರ್‌ಬಿಐನ ಪೂರ್ವಾನುಮತಿ ಇಲ್ಲದೆ, ಈ ನಾಲ್ಕು ಬ್ಯಾಂಕ್‌ಗಳು ಯಾವುದೇ ಸಾಲವನ್ನು ನೀಡಲು ಅಥವಾ ರಿನೀವಲ್ ಮಾಡಲು, ಹೂಡಿಕೆ ಮಾಡಲು ಅಥವಾ ಹೊಸ ಠೇವಣಿ ಸ್ವೀಕರಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಬ್ಯಾಂಕ್ ಹೇಳಿದೆ. ಅಲ್ಲದೆ, ಈ ನಾಲ್ಕು ಸಹಕಾರಿ ಬ್ಯಾಂಕ್‌ಗಳ ಠೇವಣಿದಾರರ ಹಿಂಪಡೆಯುವುದಕ್ಕೆ ಮಿತಿಯನ್ನು ವಿಧಿಸಲಾಗಿದೆ.

ರಾಮಗರ್ಹಿಯಾ ಸಹಕಾರಿ ಬ್ಯಾಂಕ್ – ಠೇವಣಿದಾರರು ಗರಿಷ್ಠ 50,000 ರೂ. ವಿಥ್​ಡ್ರಾ ಮಾಡಬಹುದು

ಸಾಹೇಬರಾವ್ ದೇಶಮುಖ್ ಸಹಕಾರಿ ಬ್ಯಾಂಕ್ – ಠೇವಣಿದಾರರಿಗೆ 50,000 ರೂ. ಮಿತಿ ಇದೆ

ಸಾಂಗ್ಲಿ ಸಹಕಾರಿ ಬ್ಯಾಂಕ್- ಪ್ರತಿ ಠೇವಣಿದಾರರಿಗೆ 45,000 ರೂ. ಮಿತಿ ಹಾಕಲಾಗಿದೆ

ಶಾರದಾ ಮಹಿಳಾ ಸಹಕಾರಿ ಬ್ಯಾಂಕ್ – ಠೇವಣಿದಾರರು ಗರಿಷ್ಠ 7,000 ರೂ. ವಿಥ್​ಡ್ರಾ ಮಾಡಬಹುದು

ಪ್ರತ್ಯೇಕ ಹೇಳಿಕೆಗಳಲ್ಲಿ ಈ ಬಗ್ಗೆ ತಿಳಿಸಿರುವ ಕೇಂದ್ರ ಬ್ಯಾಂಕ್​, ಆರ್‌ಬಿಐ ನಿರ್ದೇಶನಗಳನ್ನು ಸೆಂಟ್ರಲ್ ಬ್ಯಾಂಕ್‌ನಿಂದ “ಬ್ಯಾಂಕಿಂಗ್ ಪರವಾನಗಿಯ ರದ್ದತಿ ಎಂದು ಅರ್ಥೈಸಿಕೊಳ್ಳಬಾರದು” ಎಂಬುದಾಗಿ ಹೇಳಿದೆ. ಪ್ರತಿಯೊಂದು ಪ್ರಕರಣದಲ್ಲಿ, ಸಂದರ್ಭಗಳಿಗೆ ಅನುಗುಣವಾಗಿ ನಿರ್ದೇಶನಗಳ ಮಾರ್ಪಾಡುಗಳನ್ನು ಪರಿಗಣಿಸಬಹುದು ಎಂದು ಆರ್‌ಬಿಐ ಹೇಳಿದೆ.

Published On - 5:56 pm, Sat, 9 July 22

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಬಸ್​​ನಲ್ಲಿ 240 ಗ್ರಾಂ ಚಿನ್ನ ಕದ್ದಾಕೆ ಸಿಕ್ಕಿಬಿದ್ದಿದ್ಹೇಗೆ ಗೊತ್ತಾ?
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ