AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ಕೊಟಕ್ ಮಹೀಂದ್ರಾ ಬ್ಯಾಂಕ್, ಇಂಡಸ್​​ಇಂಡ್ ಬ್ಯಾಂಕ್​ಗೆ ತಲಾ 1 ಕೋಟಿ ರೂಪಾಯಿ ದಂಡ

ಬ್ಯಾಂಕಿಂಗ್ ನಿಯಮಾವಳಿಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಕೊಟಕ್​ ಮಹೀಂದ್ರಾ ಬ್ಯಾಂಕ್ ಹಾಗೂ ಇಂಡಸ್​​ಇಂಡ್ ಬ್ಯಾಂಕ್​ಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದೆ.

RBI: ಕೊಟಕ್ ಮಹೀಂದ್ರಾ ಬ್ಯಾಂಕ್, ಇಂಡಸ್​​ಇಂಡ್ ಬ್ಯಾಂಕ್​ಗೆ ತಲಾ 1 ಕೋಟಿ ರೂಪಾಯಿ ದಂಡ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Jul 04, 2022 | 9:49 PM

Share

ಕೆಲವು ನಿಯಂತ್ರಕ (ಆರ್​ಬಿಐ) ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದ ಖಾಸಗಿ ವಲಯದ ಬ್ಯಾಂಕ್​​ಗಳಾದ ಕೊಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಇಂಡಸ್‌ಇಂಡ್ ಬ್ಯಾಂಕ್‌ಗೆ ದಂಡ ವಿಧಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೋಮವಾರ ಹೇಳಿದೆ. ಕೊಟಕ್ ಮಹೀಂದ್ರಾ ಬ್ಯಾಂಕ್‌ನಲ್ಲಿ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿ ಯೋಜನೆಯ ಪ್ಯಾರಾಗ್ರಾಫ್ 3ರೊಂದಿಗೆ ಓದಿದ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 26Aನ ಸಬ್​ ಸೆಕ್ಷನ್​ (2)ರ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರ್​ಬಿಐ ರೂ. 1.05 ಕೋಟಿ ದಂಡವನ್ನು ವಿಧಿಸಿದೆ. 31 ಮಾರ್ಚ್ 2018 ಮತ್ತು 31 ಮಾರ್ಚ್ 2019ರಂತೆ ಅದರ ಹಣಕಾಸಿನ ಸ್ಥಿತಿಗಳನ್ನು ಉಲ್ಲೇಖಿಸಿ ಬ್ಯಾಂಕ್‌ನ ಮೇಲ್ವಿಚಾರಣಾ ಮೌಲ್ಯಮಾಪನಕ್ಕಾಗಿ ಶಾಸನಬದ್ಧ ತಪಾಸಣೆ ನಡೆಸಲಾಗಿದೆ ಎಂದು ಆರ್‌ಬಿಐ ಹೇಳಿದೆ.

ಆರ್‌ಬಿಐ ಹೇಳಿರುವಂತೆ, ಕೊಟಕ್ ಮಹೀಂದ್ರಾ ಬ್ಯಾಂಕ್ ನಿಗದಿತ ಅವಧಿಯೊಳಗೆ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಗೆ ಅರ್ಹ ಮೊತ್ತವನ್ನು ಕ್ರೆಡಿಟ್ ಮಾಡಲು ವಿಫಲವಾಗಿದೆ; ಅನಧಿಕೃತ ಎಲೆಕ್ಟ್ರಾನಿಕ್ ವಹಿವಾಟುಗಳಲ್ಲಿ ಒಳಗೊಂಡಿರುವ ಮೊತ್ತವನ್ನು ಅಧಿಸೂಚನೆಯ ದಿನಾಂಕದಿಂದ 10 ಕೆಲಸದ ದಿನಗಳಲ್ಲಿ ಗ್ರಾಹಕರ ಖಾತೆಗೆ ಜಮಾ ಮಾಡಬೇಕು.

ಇಂಡಸ್​ಇಂಡ್ ಬ್ಯಾಂಕ್‌ಗೆ ರೂ. 1 ಕೋಟಿ ದಂಡ ವಿಧಿಸಲಾಗಿದ್ದು, ನಿಯಂತ್ರಕರು 31 ಮಾರ್ಚ್ 2020ರಂತೆ ಅದರ ಹಣಕಾಸು ಸ್ಥಿತಿಯನ್ನು ಉಲ್ಲೇಖಿಸಿ, ಮೇಲ್ವಿಚಾರಣಾ ಮೌಲ್ಯಮಾಪನಕ್ಕಾಗಿ ಶಾಸನಬದ್ಧ ತಪಾಸಣೆ ನಡೆಸಲಾಗಿದೆ ಎಂದು ಆರ್‌ಬಿಐ ಆದೇಶ ಹೊರಡಿಸಿದೆ.

ಒಟಿಪಿ ಆಧಾರಿತ e-KYC ಬಳಸಿ ತೆರೆಯಲಾದ ಖಾತೆಗಳಲ್ಲಿ ಕಸ್ಟಮರ್ ಡ್ಯು ಡೆಲಿಗೆನ್ಸ್ (CDD) ಕಾರ್ಯವಿಧಾನವನ್ನು ಅನುಸರಿಸಲು ಬ್ಯಾಂಕ್ ವಿಫಲವಾಗಿದೆ ಎಂದು ಆರ್​ಬಿಐ ಹೇಳಿದೆ. ಕೆಲವು ಖಾತೆಗಳಂತೆ, ಹಣಕಾಸಿನ ಎಲ್ಲ ಕ್ರೆಡಿಟ್‌ಗಳ ಒಟ್ಟು ಮೊತ್ತ ಹಣಕಾಸು ವರ್ಷದಲ್ಲಿ ಎಲ್ಲ ಠೇವಣಿಗಳಲ್ಲಿ ಒಟ್ಟಿಗೆ ತೆಗೆದುಕೊಂಡಿದ್ದು ರೂ. 2 ಲಕ್ಷದ ನಿಗದಿತ ಮಿತಿಯನ್ನು ಮೀರಿದೆ.

ಇದನ್ನೂ ಓದಿ: Reserve Bank Of India: ಕೋ-ಆಪರೇಟಿವ್ ಬ್ಯಾಂಕ್​ಗಳ ಸಾಲ ನೀಡುವ ಮೊತ್ತದ ಮಿತಿ ದುಪ್ಪಟ್ಟು ಮಾಡಿದ ಆರ್​ಬಿಐ

Published On - 9:49 pm, Mon, 4 July 22

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ