AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ಕೊಟಕ್ ಮಹೀಂದ್ರಾ ಬ್ಯಾಂಕ್, ಇಂಡಸ್​​ಇಂಡ್ ಬ್ಯಾಂಕ್​ಗೆ ತಲಾ 1 ಕೋಟಿ ರೂಪಾಯಿ ದಂಡ

ಬ್ಯಾಂಕಿಂಗ್ ನಿಯಮಾವಳಿಗಳನ್ನು ಅನುಸರಿಸದ ಹಿನ್ನೆಲೆಯಲ್ಲಿ ಕೊಟಕ್​ ಮಹೀಂದ್ರಾ ಬ್ಯಾಂಕ್ ಹಾಗೂ ಇಂಡಸ್​​ಇಂಡ್ ಬ್ಯಾಂಕ್​ಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದೆ.

RBI: ಕೊಟಕ್ ಮಹೀಂದ್ರಾ ಬ್ಯಾಂಕ್, ಇಂಡಸ್​​ಇಂಡ್ ಬ್ಯಾಂಕ್​ಗೆ ತಲಾ 1 ಕೋಟಿ ರೂಪಾಯಿ ದಂಡ
ಸಾಂದರ್ಭಿಕ ಚಿತ್ರ
Follow us
TV9 Web
| Updated By: Srinivas Mata

Updated on:Jul 04, 2022 | 9:49 PM

ಕೆಲವು ನಿಯಂತ್ರಕ (ಆರ್​ಬಿಐ) ಮಾರ್ಗಸೂಚಿಗಳನ್ನು ಅನುಸರಿಸಲು ವಿಫಲವಾದ ಖಾಸಗಿ ವಲಯದ ಬ್ಯಾಂಕ್​​ಗಳಾದ ಕೊಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಇಂಡಸ್‌ಇಂಡ್ ಬ್ಯಾಂಕ್‌ಗೆ ದಂಡ ವಿಧಿಸಲಾಗಿದೆ ಎಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಸೋಮವಾರ ಹೇಳಿದೆ. ಕೊಟಕ್ ಮಹೀಂದ್ರಾ ಬ್ಯಾಂಕ್‌ನಲ್ಲಿ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿ ಯೋಜನೆಯ ಪ್ಯಾರಾಗ್ರಾಫ್ 3ರೊಂದಿಗೆ ಓದಿದ ಬ್ಯಾಂಕಿಂಗ್ ನಿಯಂತ್ರಣ ಕಾಯ್ದೆಯ ಸೆಕ್ಷನ್ 26Aನ ಸಬ್​ ಸೆಕ್ಷನ್​ (2)ರ ನಿಬಂಧನೆಗಳನ್ನು ಉಲ್ಲಂಘಿಸಿದ್ದಕ್ಕಾಗಿ ಆರ್​ಬಿಐ ರೂ. 1.05 ಕೋಟಿ ದಂಡವನ್ನು ವಿಧಿಸಿದೆ. 31 ಮಾರ್ಚ್ 2018 ಮತ್ತು 31 ಮಾರ್ಚ್ 2019ರಂತೆ ಅದರ ಹಣಕಾಸಿನ ಸ್ಥಿತಿಗಳನ್ನು ಉಲ್ಲೇಖಿಸಿ ಬ್ಯಾಂಕ್‌ನ ಮೇಲ್ವಿಚಾರಣಾ ಮೌಲ್ಯಮಾಪನಕ್ಕಾಗಿ ಶಾಸನಬದ್ಧ ತಪಾಸಣೆ ನಡೆಸಲಾಗಿದೆ ಎಂದು ಆರ್‌ಬಿಐ ಹೇಳಿದೆ.

ಆರ್‌ಬಿಐ ಹೇಳಿರುವಂತೆ, ಕೊಟಕ್ ಮಹೀಂದ್ರಾ ಬ್ಯಾಂಕ್ ನಿಗದಿತ ಅವಧಿಯೊಳಗೆ ಠೇವಣಿದಾರರ ಶಿಕ್ಷಣ ಮತ್ತು ಜಾಗೃತಿ ನಿಧಿಗೆ ಅರ್ಹ ಮೊತ್ತವನ್ನು ಕ್ರೆಡಿಟ್ ಮಾಡಲು ವಿಫಲವಾಗಿದೆ; ಅನಧಿಕೃತ ಎಲೆಕ್ಟ್ರಾನಿಕ್ ವಹಿವಾಟುಗಳಲ್ಲಿ ಒಳಗೊಂಡಿರುವ ಮೊತ್ತವನ್ನು ಅಧಿಸೂಚನೆಯ ದಿನಾಂಕದಿಂದ 10 ಕೆಲಸದ ದಿನಗಳಲ್ಲಿ ಗ್ರಾಹಕರ ಖಾತೆಗೆ ಜಮಾ ಮಾಡಬೇಕು.

ಇಂಡಸ್​ಇಂಡ್ ಬ್ಯಾಂಕ್‌ಗೆ ರೂ. 1 ಕೋಟಿ ದಂಡ ವಿಧಿಸಲಾಗಿದ್ದು, ನಿಯಂತ್ರಕರು 31 ಮಾರ್ಚ್ 2020ರಂತೆ ಅದರ ಹಣಕಾಸು ಸ್ಥಿತಿಯನ್ನು ಉಲ್ಲೇಖಿಸಿ, ಮೇಲ್ವಿಚಾರಣಾ ಮೌಲ್ಯಮಾಪನಕ್ಕಾಗಿ ಶಾಸನಬದ್ಧ ತಪಾಸಣೆ ನಡೆಸಲಾಗಿದೆ ಎಂದು ಆರ್‌ಬಿಐ ಆದೇಶ ಹೊರಡಿಸಿದೆ.

ಒಟಿಪಿ ಆಧಾರಿತ e-KYC ಬಳಸಿ ತೆರೆಯಲಾದ ಖಾತೆಗಳಲ್ಲಿ ಕಸ್ಟಮರ್ ಡ್ಯು ಡೆಲಿಗೆನ್ಸ್ (CDD) ಕಾರ್ಯವಿಧಾನವನ್ನು ಅನುಸರಿಸಲು ಬ್ಯಾಂಕ್ ವಿಫಲವಾಗಿದೆ ಎಂದು ಆರ್​ಬಿಐ ಹೇಳಿದೆ. ಕೆಲವು ಖಾತೆಗಳಂತೆ, ಹಣಕಾಸಿನ ಎಲ್ಲ ಕ್ರೆಡಿಟ್‌ಗಳ ಒಟ್ಟು ಮೊತ್ತ ಹಣಕಾಸು ವರ್ಷದಲ್ಲಿ ಎಲ್ಲ ಠೇವಣಿಗಳಲ್ಲಿ ಒಟ್ಟಿಗೆ ತೆಗೆದುಕೊಂಡಿದ್ದು ರೂ. 2 ಲಕ್ಷದ ನಿಗದಿತ ಮಿತಿಯನ್ನು ಮೀರಿದೆ.

ಇದನ್ನೂ ಓದಿ: Reserve Bank Of India: ಕೋ-ಆಪರೇಟಿವ್ ಬ್ಯಾಂಕ್​ಗಳ ಸಾಲ ನೀಡುವ ಮೊತ್ತದ ಮಿತಿ ದುಪ್ಪಟ್ಟು ಮಾಡಿದ ಆರ್​ಬಿಐ

Published On - 9:49 pm, Mon, 4 July 22

ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ನಿಮಗೆ ಇಂಗ್ಲಿಷ್ ಬರದಿದ್ದರೆ ಸುಮ್ಮನಿರಿ, ಪಾಕ್​ ರಕ್ಷಣಾ ಸಚಿವಗೆ ತರಾಟೆ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ರಾಜ್ಯ ಬಿಜೆಪಿ ನಾಯಕತ್ವದಿಂದ ಅಂತರ ಕಾಯ್ದುಕೊಂಡಿರುವ ಸಿದ್ದೇಶ್ವರ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ಹಿಂದೂಗಳು ದುರ್ಬಲರು, ಆತ್ಮಹತ್ಯಾ ಬಾಂಬರ್​ಗಳನ್ನು ಕಳುಹಿಸುತ್ತೇನೆ
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ರಾಕೇಶ್ ಪೂಜಾರಿ ತಂಗಿ ವಿಚಾರದಲ್ಲಿ ದೊಡ್ಡ ನಿರ್ಧಾರ ತೆಗೆದುಕೊಂಡ ಆನಂದ್
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ಡಿಜಿಎಂಒಗಳ ಸಭೆಯಲ್ಲೂ ಪಾಕಿಸ್ತಾನಕ್ಕೆ ತಪರಾಕಿ, ತಂಟೆಗೆ ಬಂದರೆ ಜೋಕೆ!
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ರಕ್ಷಣಾ ಸಚಿವಾಲಯಕ್ಕೆ 25 ಲಕ್ಷ‌ ರೂ: ಸುಬುಧೇಂದ್ರ ತೀರ್ಥರಿಂದ ಘೋಷಣೆ
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ಶಾಲೆಗೆ ಬರಲು ನಮಗೆ ಯಾವ ಭಯವೂ ಇಲ್ಲ ಎನ್ನುತ್ತಿರುವ ಮಕ್ಕಳು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ನೆಲಮಂಗಲ: ಆಯಿಲ್ ಗೋಡೌನ್​ಗೆ ಬೆಂಕಿ, ಧಗಧಗಿಸಿದ ಗೋದಾಮು
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಮನೆಯ ದ್ವಾರಕ್ಕೆ ತೆಂಗಿನ ಕಾಯಿ ಕಟ್ಟುವುದರ ಹಿಂದಿನ ಅಧ್ಯಾತ್ಮಿಕ ರಹಸ್ಯ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ
ಚಂದ್ರ ವೃಶ್ಚಿಕ ರಾಶಿಯಲ್ಲಿ ಸಂಚಾರ: ದ್ವಾದಶ ರಾಶಿಗಳ ಫಲಾಫಲ ಹೇಗಿದೆ ನೋಡಿ